ಪೊನ್ನಂಪೇಟೆ NEWS DESK ಫೆ.15 : ಪೊನ್ನಂಪೇಟೆ ತಾಲ್ಲೂಕು ಬಿರುನಾಣಿಯ ಪರಕಟಗೇರಿ ಶ್ರೀ ಧಾರಮಹೇಶ್ವರ ದೇವಾಲಯಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಭೇಟಿ ನೀಡಿದರು. ಶಾಸಕರ ಅನುದಾನ ರೂ.5 ಲಕ್ಷಗಳಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಕ್ಕೆ ತೆರಳುವ ರಸ್ತೆಯನ್ನು ಉದ್ಘಾಟಿಸಿದರು. ಬ್ಲಾಕ್ ಅಧ್ಯಕ್ಷ ಮಿದೇರೀರ ನವೀನ್, ವಲಯ ಅಧ್ಯಕ್ಷ ಕುಪ್ಪಣ್ಣಮಾಡ ಪ್ರೀತಮ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ದೇವಸ್ಥಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಮೊಟ್ಟಯ್ಯ, ಬುಟಿಯಂಡ ತಂಬಿ ನಾಣಯ್ಯ, ಗಣಪತಿ, ಬೊಳೇರ ಅಪ್ಪುಟು, ಕಳಕಂಡ ಜಿತ್ತು, ಚೇತು, ಅಣ್ಣಳ್ಳಮಾಡ ಶನ್ನಿ,ಕಾಳಿಮಾಡ ರಾಶಿಕ, ಕರ್ತಮಾಡ ಸುನಂದ, ನೆಲ್ಲಿರ ಸೋಮಣ್ಣ, ಬೊಟ್ಟಂಗಡ ಜಗದೀಶ್, ಅಣ್ಣಳ್ಳಮಾಡ ಅಮನ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಲೇಖಕ: admin
*Beware of digital arrest : Report to 1930 immediately*
ವಿರಾಜಪೇಟೆ NEWS DESK ಫೆ.15 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ ಶೆಟ್ಟಿಗೇರಿಯಲ್ಲಿರುವ ಸಿದ್ಧಾರೂಢ ಆಶ್ರಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಪತ್ನಿ ಕಾಂಚನ್ ಪೊನ್ನಣ್ಣ ಅವರು ಭೇಟಿ ನೀಡಿದರು. ಮಹಾಶಿವರಾತ್ರಿ ಪ್ರಯುಕ್ತ ಆಶ್ರಮದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಶಾಸಕರು ಮಹಾಶಿವರಾತ್ರಿಯ ಶುಭಾಶಯಗಳನ್ನು ಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಲಯ ಅಧ್ಯಕ್ಷ ತೀತಿರ ಪ್ರಭು, ಪ್ರಮುಖರಾದ ಮೋಟಯ್ಯ, ಸೋಮಣ್ಣ, ಉದಯ, ಪರ್ಮಲೆ ಗಣೇಶ್, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಫೆ.15 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡಲಾಗುವ ಪತ್ರಿಕಾರಂಗದ ಭೀಷ್ಮ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೊಡಗು ಪತ್ರಕತ೯ರ ಸಂಘದ ಸಹಯೋಗದಲ್ಲಿ ಫೆ.19 ರಂದು ಸಂಜೆ 6 ಗಂಟೆಗೆ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ. ಮಡಿಕೇರಿಯ ವೈದ್ಯ, ಸಾಹಿತಿ ಡಾ.ಕೆ.ಬಿ.ಸೂಯ೯ಕುಮಾರ್ ಅವರಿಗೆ ಅಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಹಿರಿಯ ಸಾಹಿತಿ ಬಿ.ಎ.ಷಂಶುದ್ದೀನ್ ಉದ್ಘಾಟಿಸಲಿದ್ದಾರೆ. ದಿ.ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಬಾಲಸುಬ್ರ್ರಹ್ಮಣ್ಯ ಕಂಜಪ೯ಣೆ ಅವರು ಡಾ.ಕೆ.ಬಿ.ಸೂಯ೯ಕುಮಾರ್ ಅವರಿಗೆ ಪ್ರದಾನ ಮಾಡಲಿದ್ದಾರೆ. ಕೊಡಗು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್ ಅಧ್ಯಕ್ಷತೆಯಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಹಿರಿಯ ಪತ್ರಕತ೯ರಾದ ಜಿ.ರಾಜೇಂದ್ರ, ಬಿ.ಜಿ. ಅನಂತಶಯನ, ಟಿ.ಪಿ. ರಮೇಶ್, ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಪ್ರಕಟಣೆ…
ಮಡಿಕೇರಿ, NEWS DESK ಫೆ.15 – ನಗರದ : ಕೊಡಗು ವಿದ್ಯಾಲಯದ ಪ್ಲೇ ಹೋಂ, ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳ ವತಿಯಿಂದ ಅಜ್ಜ-ಅಜ್ಜಿಯರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶನಿವಾರ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೊಂತಿ ಗಣೇಶ್ ಪಾಲ್ಗೊಂಡು ಮಾತನಾಡಿ, , ಅಜ್ಜ-ಅಜ್ಜಿಯರ ಮಹತ್ವವನ್ನು ಮಕ್ಕಳ ಜೀವನದಲ್ಲಿ ವಿವರಿಸಿದರು. ಕುಟುಂಬ ಮೌಲ್ಯಗಳನ್ನು ಬೆಳೆಸುವಲ್ಲಿ ಹಿರಿಯರ ಪಾತ್ರ ಅತ್ಯಂತ ಮುಖ್ಯವೆಂದು ಅವರು ತಮ್ಮ ಮೌಲ್ಯಯುತ ಮಾತುಗಳಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಮನಮುಟ್ಟುವ ನೃತ್ಯ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿದರು. ವಿಶೇಷ ಆಕರ್ಷಣೆಯಾಗಿ ಮೊಮ್ಮಕ್ಕಳು ತಮ್ಮ ಅಜ್ಜ-ಅಜ್ಜಿಯರೊಂದಿಗೆ ಸೇರಿ ಕೈ ಗುರುತು ಚಟುವಟಿಕೆಯಲ್ಲಿ ಭಾಗವಹಿಸಿ ಸ್ಮರಣೀಯ ಕ್ಷಣಗಳನ್ನು ರೂಪಿಸಿದರು. ನಂತರ ಅಜ್ಜ-ಅಜ್ಜಿಯರಿಗಾಗಿ ವಿಶೇಷ ಆಟವನ್ನು ಆಯೋಜಿಸಲಾಗಿದ್ದು, ಅವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಯ೯ಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಶಿಕ್ಷಕರೂ ಸಂಭ್ರಮದಿಂದ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರ ಕೆ ಎಸ್, ಆಡಳಿತ ನಿರ್ವಹಣಾಧಿಕಾರಿ ರವಿ…
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ಭಾನುವಾರ ಉದ್ಘಾಟಿಸಿದರು. ಸುಂಟಿಕೊಪ್ಪದಲ್ಲಿ ವಸತಿ ಗೃಹ ಉದ್ಘಾಟಿಸಿ ಮಾತನಾಡಿದ ಸಚಿವರು ಪೊಲೀಸರಿಗಾಗಿ ರಾಜ್ಯದಲ್ಲಿ ಸುಮಾರು 40 ಸಾವಿರ ವಸತಿ ಗೃಹ ನಿರ್ಮಿಸಲಾಗಿದ್ದು, ಇನ್ನೂ 60 ಸಾವಿರ ವಸತಿ ಗೃಹ ನಿರ್ಮಿಸಬೇಕಿದೆ ಎಂದು ತಿಳಿಸಿದರು. ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕೆಳಸ್ತರದಲ್ಲಿ ಕೆಲಸ ನಿರ್ವಹಿಸುವ ಕಾನ್ಸ್ಟೇಬಲ್ ಗಳಿಗೆ ವೇತನ ಹೆಚ್ಚಿಸಲಾಗಿದೆ. ಸಣ್ಣ ಸಣ್ಣ ಮನೆಯಲ್ಲಿ ವಾಸ ಮಾಡುವುದನ್ನು ಮನಗಂಡು ಪೊಲೀಸರಿಗೆ ವಸತಿ ಸೌಕರ್ಯ ಒದಗಿಸಲಾಗುತ್ತಿದೆ. ಅದರಂತೆ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದಿಂದ 2030 ರ ವರೆಗೂ ಹಂತ ಹಂತವಾಗಿ ವಸತಿ ಕಲ್ಪಿಸಲಾಗುತ್ತದೆ ಎಂದು ಜಿ.ಪರಮೇಶ್ವರ ಅವರು ವಿವರಿಸಿದರು. ಹಿಂದೆ 18 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿತ್ತು, ಈಗ 33 ಲಕ್ಷ ರೂ ವೆಚ್ಚ ಆಗಲಿದೆ. ಪೊಲೀಸರು…
ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಯಶಸ್ವಿ ಗ್ಯಾರಂಟಿ ಯೋಜನೆಯಾದ ‘ಶಕ್ತಿ ಯೋಜನೆ’ಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ಆಡಳಿತಾತ್ಮಕ ಬದಲಾವಣೆ ತರಲು ಮುಂದಾಗಿದೆ. ಇನ್ನು ಮುಂದೆ ಮಹಿಳೆಯರು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ‘ಶಕ್ತಿ ಸ್ಮಾರ್ಟ್ ಕಾರ್ಡ್’ ಹೊಂದುವುದು ಕಡ್ಡಾಯವಾಗಲಿದೆ. ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ನಿಖರ ದತ್ತಾಂಶ ಸಂಗ್ರಹಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಏಕೆ? ಕಳೆದ ಎರಡೂವರೆ ವರ್ಷಗಳಲ್ಲಿ (ಜನವರಿ 2026ರವರೆಗೆ) ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಸುಮಾರು 660 ಕೋಟಿಗೂ ಅಧಿಕ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಸ್ತುತ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳನ್ನು ತೋರಿಸಿ ಟಿಕೆಟ್ ಪಡೆಯಲಾಗುತ್ತಿದೆ. ಆದರೆ, ಇದರಲ್ಲಿ ನಕಲಿ ದಾಖಲೆಗಳ ಬಳಕೆ ಮತ್ತು ಲೆಕ್ಕಾಚಾರದಲ್ಲಿ ವ್ಯತ್ಯಯವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಹೈಟೆಕ್ ಸ್ಮಾರ್ಟ್ ಕಾರ್ಡ್ ಜಾರಿಗೆ ತರಲಾಗುತ್ತಿದೆ. ಕಾರ್ಡ್ ಹೇಗಿರುತ್ತದೆ ಮತ್ತು ವಿತರಣೆ ಹೇಗೆ? ರೂಪರೇಷೆ: ಈ ಕಾರ್ಡ್ಗಳು ಆಯುಷ್ಮಾನ್ ಕಾರ್ಡ್ ಮಾದರಿಯಲ್ಲಿದ್ದು, ಫಲಾನುಭವಿಯ ಹೆಸರು,…
ಬೆಳಗಿನ ತಿಂಡಿಗೆ ಬಿಸಿಬಿಸಿ ರೈಸ್ ಬಾತ್ ಅಥವಾ ಪಲಾವ್ ಮಾಡಿದಾಗ, ಅದರ ಪಕ್ಕದಲ್ಲಿ ನಂಚಿಕೊಳ್ಳಲು ರುಚಿಕರವಾದ ಮೊಸರು ಬಜ್ಜಿ ಇಲ್ಲದಿದ್ದರೆ ಆ ತಿಂಡಿಯೇ ಅಪೂರ್ಣ ಎನಿಸುತ್ತದೆ. ಸಾಮಾನ್ಯವಾಗಿ ನಾವು ಈರುಳ್ಳಿ ಅಥವಾ ಸೌತೆಕಾಯಿ ಬಳಸಿ ಮೊಸರು ಬಜ್ಜಿ ಮಾಡುತ್ತೇವೆ. ಆದರೆ ಇವತ್ತು ನಾವು ನಿಮಗೆ ಸ್ವಲ್ಪ ವಿಭಿನ್ನವಾಗಿ, ಆರೋಗ್ಯಕ್ಕೆ ವರದಾನವಾಗಿರುವ ಮೂಲಂಗಿ ಬಳಸಿ ‘ಮೊಸರು ರಾಯತ’ ಅಥವಾ ಬಜ್ಜಿ ಮಾಡುವುದು ಹೇಗೆ ಎಂದು ತಿಳಿಸಿಕೊಡುತ್ತೇವೆ. ಮೂಲಂಗಿ ಅಂದ್ರೆ ಮೂಗು ಮುರಿಯುವವರೂ ಕೂಡ ಈ ರೀತಿ ಮಾಡಿದರೆ ಇಷ್ಟಪಟ್ಟು ತಿನ್ನುತ್ತಾರೆ. ಹಾಗಾದ್ರೆ ತಡಮಾಡದೆ ಈ ಸಿಂಪಲ್ ರೆಸಿಪಿ ನೋಡೋಣ ಬನ್ನಿ. ಅಗತ್ಯವಿರುವ ಸಾಮಗ್ರಿಗಳು (Ingredients): ಮೂಲಂಗಿ: 3 ಸಂಖ್ಯೆ ಗಟ್ಟಿ ಮೊಸರು: 3/4 ಕಪ್ ಕಾಯಿತುರಿ: 1/2 ಕಪ್ ಹಸಿಮೆಣಸಿನಕಾಯಿ: 1 (ಖಾರಕ್ಕೆ ತಕ್ಕಂತೆ) ಕೊತ್ತಂಬರಿ ಸೊಪ್ಪು: 1 ಹಿಡಿ (ಸಣ್ಣಗೆ ಹೆಚ್ಚಿದ್ದು) ಉಪ್ಪು: ರುಚಿಗೆ ತಕ್ಕಷ್ಟು ಎಣ್ಣೆ: 3 ಟೀ ಚಮಚ (ಒಗ್ಗರಣೆಗೆ) ಸಾಸಿವೆ: 1 ಟೀ ಚಮಚ ಜೀರಿಗೆ: 1…
ಇಂದು ದೇಶಾದ್ಯಂತ ಭಕ್ತಿ-ಭಾವದ ‘ಮಹಾಶಿವರಾತ್ರಿ’ ಹಬ್ಬದ ಸಂಭ್ರಮ ಮನೆಮಾಡಿದೆ. ಈ ಪವಿತ್ರ ದಿನದಂದು ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರವೂ ಅತ್ಯಂತ ಅಪರೂಪದ ‘ಶುಭ ಯೋಗ’ಗಳು ಸೃಷ್ಟಿಯಾಗುತ್ತಿವೆ. ಆಕಾಶದಲ್ಲಿ ಸಂಭವಿಸುತ್ತಿರುವ ಈ ಗ್ರಹಗತಿಗಳ ಬದಲಾವಣೆಯು ಆರು ರಾಶಿಯವರ ಬದುಕಿನಲ್ಲಿ ಹೊಸ ಬೆಳಕು ತರಲಿದ್ದು, ಶಿವನ ವಿಶೇಷ ಅನುಗ್ರಹ ಇವರ ಮೇಲಿರಲಿದೆ ಎಂದು ಜ್ಯೋತಿಷಿಗಳು ತಿಳಿಸಿದ್ದಾರೆ. ಆರು ರಾಶಿಗಳಿಗೆ ಆರ್ಥಿಕ ಸುಯೋಗ: ಈ ಬಾರಿಯ ಶಿವರಾತ್ರಿಯು ಆಯ್ದ ಆರು ರಾಶಿಚಕ್ರದವರಿಗೆ ಸಕಲ ಸುಖ-ಶಾಂತಿ ಮತ್ತು ಆರ್ಥಿಕ ಸಬಲತೆಯನ್ನು ತರಲಿದೆ. ಆ ಅದೃಷ್ಟವಂತ ರಾಶಿಗಳ ವಿವರ ಇಲ್ಲಿದೆ: 1. ಮೇಷ ರಾಶಿ (Aries): ಮೇಷ ರಾಶಿಯವರಿಗೆ ಈ ಬಾರಿಯ ಶಿವರಾತ್ರಿ ಹಬ್ಬವು ಆರ್ಥಿಕವಾಗಿ ಹೊಸ ಚೈತನ್ಯ ನೀಡಲಿದೆ. ಕಾರ್ಯಸಿದ್ಧಿ: ದೀರ್ಘಕಾಲದಿಂದ ನಿಂತುಹೋಗಿದ್ದ ಕೆಲಸಗಳು ಶಿವನ ಕೃಪೆಯಿಂದ ಮತ್ತೆ ಚಾಲನೆ ಪಡೆಯಲಿವೆ. ಆರ್ಥಿಕತೆ: ಸಾಲದ ಬಾಧೆಗಳು ಕಡಿಮೆಯಾಗುವ ಯೋಗವಿದ್ದು, ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ಉದ್ಯೋಗ: ಉದ್ಯೋಗಿಗಳಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಪ್ರಶಂಸೆ ಹಾಗೂ ಬಡ್ತಿ…
ಬೆಂಗಳೂರು: ಹೊಸಕೋಟೆ ಬಳಿ ನಡೆದಿದ್ದ ಭೀಕರ ಅಪಘಾತದ ಕರಾಳ ನೆನಪು ಮಾಸುವ ಮುನ್ನವೇ, ಬೆಂಗಳೂರಿನ ಹೊರವಲಯದ ನೆಲಮಂಗಲ ಹೆದ್ದಾರಿಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಜಿಂದಾಲ್ ಮೇಲ್ಸೇತುವೆಯ ಮೇಲೆ ಕೆಎಸ್ಆರ್ಟಿಸಿ (KSRTC) ಬಸ್ ಮತ್ತು ಇಂಡಿಕಾ ಕಾರಿನ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಐವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯ ವಿವರ: ಶನಿವಾರ ರಾತ್ರಿ ಸುಮಾರು 11:30ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ದೊಡ್ಡಬಳ್ಳಾಪುರ ಮೂಲದ ಐವರು ಸ್ನೇಹಿತರು ಇಂಡಿಕಾ ಕಾರಿನಲ್ಲಿ ಜಾಲಿ ರೈಡ್ಗೆ ತೆರಳಿದ್ದರು. ತುಮಕೂರಿನಿಂದ ಬೆಂಗಳೂರಿನತ್ತ ಅತಿ ವೇಗವಾಗಿ ಬರುತ್ತಿದ್ದ ಕಾರು, ಜಿಂದಾಲ್ ಫ್ಲೈ ಓವರ್ ಮೇಲೆ ನಿಯಂತ್ರಣ ತಪ್ಪಿ ಡಿವೈಡರ್ ಜಂಪ್ ಮಾಡಿದೆ. ಈ ವೇಳೆ ಬೆಂಗಳೂರಿನಿಂದ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಗೆ ಸಿನಿಮೀಯ ಶೈಲಿಯಲ್ಲಿ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಾಲ್ವರ ಸಾವು: ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರೂ…






