ಮಡಿಕೇರಿ, NEWS DESK ಏ.6 : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್, 17 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬoಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಲೈನ್ಮನೆಗಳಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಕ್ಕುಪತ್ರ ವಿತರಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಲೈನ್ಮನೆಗಳಲ್ಲಿ ವಾಸಿಸುವ ನಿವೇಶನ ರಹಿತ ಕುಟುಂಬದವರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಆದರೂ ಸಹ ಕೆಲವು ಕುಟುಂಬದವರ ಸಮರ್ಪಕ ಮಾಹಿತಿ ಲಭ್ಯ ಇಲ್ಲದಿರುವ ಹಿನ್ನೆಲೆ ಸಂಬAಧಪಟ್ಟ ಗ್ರಾಮಕ್ಕೆ ತೆರಳಿ ಆಧಾರ್ ಕಾರ್ಡ್ ಮಾಡಿಸುವುದು ಹಾಗೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ…
ಲೇಖಕ: admin
ಮಡಿಕೇರಿ, NEWS DESK ಏ 6- ಬೆಂಗಳೂರಿನಲ್ಲಿ ನೆಲಸಿರುವ ಬೊಪ್ಪಂಡ ರಶ್ಮಿ ಅಯ್ಯಪ್ಪ ಅವರಿಗೆ ಜೀವಮಾನ ಸಾಧನೆಗಾಗಿ ಪ್ರತಿಷ್ಟಿತ ಉದ್ಯೋಗ್ ಯೋಗ್ ಧಾನ್ – 2026 ಪ್ರಶಸ್ತಿ ಲಭಿಸಿದ್ದು, ಬೆಂಗಳೂರಿನಲ್ಲಿ ಆಯೋಜಿತ ಸಮಾರಂಭದಲ್ಲಿ ಖ್ಯಾತ ಚಿತ್ರ ನಟಿ ಶಿಲ್ಪಾ ಶೆಟ್ಟಿ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಯೋಗ ಕ್ಷೇಮ, ಆರೋಗ್ಯ ಸ್ವಾಸ್ತ್ಯ, ಜೀವನೋಲ್ಲಾಸ ಕ್ಷೇತ್ರದಲ್ಲಿ ಹೆಸರಾಗಿರುವ ಆಶ್ವಾಸನ್ ಸಂಸ್ಥೆಯ ಸಂಸ್ಥಾಪಕಿಯಾಗಿ ಮತ್ತು ಕಾಯ೯ನಿವಾ೯ಹಕಿ ಅಧ್ಯಕ್ಷೆಯಾಗಿರುವ ರಶ್ಮಿ ಅಯ್ಯಪ್ಪ ಎರಡು ದಶಕಗಳಿಂದ 30 ದೇಶಗಳಲ್ಲಿ ಆರೋಗ್ಯ ಸ್ವಾಸ್ತ್ಯ ಸಂಬಂಧಿತ 100 ಕ್ಕೂ ಹೆಚ್ಚು ಅಭೂತಪೂರ್ವ ಫಲಿತಾಂಶಗಳು ತಂದಿದ್ದು, ಆರೋಗ್ಯ ಸ್ವಾಸ್ತ್ಯ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಯೋಗ ಕ್ಷೇಮ, ಆಧ್ಯಾತ್ಮದ ಮೂಲಕ ಜೀವನೊಲ್ಲಾಸ ಕುರಿತಾದ ರಶ್ಮಿ ಅಯ್ಯಪ್ಪ ಅವರ ಕಾಯ೯ಕ್ರಮಗಳು ಜಗತ್ತಿನಾದ್ಯಂತ ಮನ್ನಣೆ ಪಡೆದಿದೆ. 2005 ರ ಮೇ 23 ರಂದು ಆರೋಗ್ಯ ಸುರಕ್ಷತೆ ಮತ್ತು ಯೋಗ ಕ್ಷೇಮ ವಿಚಾರವನ್ನೇ ಆದ್ಯತೆಯಾಗಿರಿಸಿಕೊಂಡು ಆಶ್ವಾಸನ್ ಎಂಬ ಸಂಸ್ಥೆಯನ್ನು ರಶ್ಮಿ ಅಯ್ಯಪ್ಪ ಪ್ರಾರಂಭಿಸಿದ್ದರು.…
ಮನೆಹಳ್ಳಿ(ಆಲೂರುಸಿದ್ದಾಪುರ), NEWS DESK ಏ.06:- ಈ ಜಗತ್ತಿನಲ್ಲಿ ಸನಾತನ ಧರ್ಮ ಉಳಿಯಬೇಕಾದರೆ ಮಠಮಾನ್ಯಗಳು ಇರಬೇಕೆಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ.ಭಾರತಿ ಶೆಟ್ಟಿ ತಿಳಿದರು. ತಾಲೂಕಿನ ಶನಿವಾರಸಂತೆ ಸಮೀಪದ ಆಲೂರುಸಿದ್ದಾಪುರಬಳಿಯ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ೧೪ ನೇ ವರ್ಷದ ಶ್ರೀ ಗುರುಸಿದ್ಧವೀರೇಶ್ವರ ಮಹಾರಥೋತ್ಸವದ ಧಾರ್ಮಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸದಾ ಅಸ್ತಿತ್ವದಲ್ಲಿರುವ ಜೀವನ ಮಾರ್ಗ ಇದು ಹಿಂದೂ ಧರ್ಮದ ಮೂಲಭೂತ ಮತ್ತು ಪ್ರಾಚೀನ ಹೆಸರಾಗಿದ್ದು, ಯಾವುದೇ ನಿರ್ದಿಷ್ಟ ಆರಂಭ ಅಥವಾ ಅಂತ್ಯವಿಲ್ಲದ, ನೈಸರ್ಗಿಕ ಕಾನೂನುಗಳು, ಕರ್ಮ, ಜ್ಞಾನ ಮತ್ತು ಭಕ್ತಿಯ ಮೇಲೆ ಆಧಾರಿತವಾದ ಸಾರ್ವತ್ರಿಕ ತತ್ವಗಳನ್ನು ಒಳಗೊಂಡಿದೆ. ಪ್ರಸ್ತುತ ಸಂದರ್ಭದಲ್ಲಿ ಮಠ ಮಾನ್ಯಗಳು ಧಾರ್ಮಿಕ ಚಿಂತನೆಯ ಜೊತೆಗೆ ಸಮಾಜ ಮುಖಿ ಚಿಂತನೆ ಹಾಗೂ ಶಿಕ್ಷಣ ಸಂಸ್ಥೆಗಳನ್ನ ಕಟ್ಟಿ ಬೆಳಸುತ್ತಿರುವುದು ಅತ್ಯಂತ ಸಂತಸದ ವಿಷಯ. ಆ ನಿಟ್ಟಿನಲ್ಲಿ ಮಠ ಮಾನ್ಯಗಳು ಆಧ್ಯಾತ್ಮಕ ಕೇಂದ್ರಗಳಷ್ಟೆ ಅಲ್ಲ ಅವು ನೆಮ್ಮದಿಯ ತಾಣಗಳು ಕೂಡ ಆಗಿವೆ ಎಂದು ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ ಹೇಳಿದರು.…
ಕುಶಾಲನಗರ, NEWS DESK ಏ.06 : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮುಂಬರುವ ಜೂನ್ 23 ರಂದು ಮಂಗಳವಾರ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು ಕುಶಾಲನಗರದ ಸರ್ವರೂ ಸಮ್ಮೇಳನದ ಭಾಗವಾಗಬೇಕೆಂದು ಪರಿಷತ್ತಿನ ಗೌರವ ಅಧ್ಯಕ್ಷರೂ ಆದ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕರೆಕೊಟ್ಟರು. ಕುಶಾಲನಗರದ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶರಣ ಸಾಹಿತ್ಯ ಸಮ್ಮೇಳನ ಕೇವಲ ಸಮುದಾಯವೊಂದಕ್ಕೆ ಸೀಮಿತವಾದುದಲ್ಲ. ಇದು ಜನಪರವಾದ ಜೀವಪರವಾದ ಅಭಿವ್ಯಕ್ತಿ. ಸಮ ಸಮಾಜ ನಿರ್ಮಾಣದ ಪರಿಕಲ್ಪನೆ. ಹನ್ನೆರಡನೆ ಶತಮಾನದಲ್ಲಿ ಸಮಾಜದಲ್ಲಿದ್ದ ಅಂಕು ಡೊಂಕುಗಳು – ಮೇಲು ಕೀಳು ಬೇಧಗಳನ್ನು ಬುಡಸಹಿತ ಕಿತ್ತೊಗೆಯಲು ರಚನೆಯಾದ ವಚನಗಳು ಹಾಗೂ ಶರಣ ಸಾಹಿತ್ಯವನ್ನು ಹಳ್ಳಿ – ಪೇಟೆ, ನಗರಗಳ ಪ್ರತಿ ಮನೆ ಮನೆಗಳಿಗೆ ಜನಸಾಮಾನ್ಯರ ಮನ ಮನಕ್ಕೆ ತಲುಪಿಸುವ ಉದ್ದೇಶವೇ ಶರಣ ಸಾಹಿತ್ಯ ಸಮ್ಮೇಳನದ ಮೂಲ ಧ್ಯೆಯ ಎಂದು ಶ್ರೀ…
ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಟ್ಟಣದ ಲೇಖಕಿ ಹಾಗೂ ಕವಯತ್ರಿ ಎನ್.ಎಂ.ಗೀತಾಂಜಲಿ ಮಹೇಶ್ ರವರ ಮಾನಿನಿಯ ಮಾರ್ದನಿ,ಜ್ಞಾನ ಮಂಥನ ಹಾಗೂ ನಿನಾದ ಕೃತಿಗಳು ಅನಾವರಣಗೊಂಡವು. ಶಕ್ತಿ ದಿನ ಪತ್ರಿಕೆಯ ಪ್ರಧಾನ ಸಂಪಾದಕ ಅನಂತ ಶಯನ “ಮಾನಿನಿಯ ಮಾರ್ದನಿ” ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾನವನು ಸೃಷ್ಟಿಯ ಅದ್ಭುತ ಸಂಕೇತ ಅವನು ತನ್ನೊಳಗೆ ಒಂದು ಪುಟ್ಟ ಬ್ರಹ್ಮಾಂಡವಿದ್ದಂತೆ. ಸೃಷ್ಟಿಕರ್ತನು ಮನುಷ್ಯನನ್ನು ಮಣ್ಣಿನಿಂದ ಸೃಷ್ಟಿಸಿ, ಅವನ ದೇಹವನ್ನು ರೂಪಿಸಿದ್ದಾನೆ. ಆ ದೇಹದ ರಕ್ಷಣೆ ಮತ್ತು ಪೋಷಣೆಗಾಗಿ ಸಹಜವಾದ ಆಸೆಗಳನ್ನು ಇರಿಸಿದ್ದಾನೆ. ಅದು ಜೀವಶಕ್ತಿ, ಪ್ರಜ್ಞೆ ಮತ್ತು ಅರಿವನ್ನು ಹೊತ್ತಿದೆ. ಸೃಷ್ಟಿಕರ್ತನೊಂದಿಗೆ ದೈವಿಕ ಪ್ರೇರಣೆಯಾದಾಗ ತನ್ನಲ್ಲಿ ಅಡಕವಾಗಿರುವ ಕಲೆ ಚೈತನ್ನ ಜಾಗೃತಗೊಂಡು ವಿವಿಧ ಆಯಾಮಗಳಲ್ಲಿ ಹೊರತರಲು ಆರಂಬಿಸಿರುತ್ತಾನೆ. ಅದೇ ರೀತಿ ಲೇಖಕಿ ಗೀತಾಂಜಲಿ ಮಹೇಶ್ ರವರು ಈ ಕ್ಷೇತ್ರದಲ್ಲಿ ಗುರುಗಳ ಅನುಗ್ರಹದಿಂದ ತಮಗೇ ಅರಿವಿಲ್ಲದಂತೆ ಬರಹಗಳ ರೂಪದಲ್ಲಿ ಮಾನಿನಿಯ ಮಾರ್ದನಿ,ಜ್ಞಾನ ಮಂಥನ,…
ಮಡಿಕೇರಿ, NEWS DESK ಏ. 6 – ಭಾರತದ ಹಾಕಿ ತಂಡದ 2024 ರ ಪ್ಯಾರಿಸ್ ಒಲಂಪಿಕ್ ಹಾಕಿ ಕ್ರೀಡಾಕೂಟದಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ಪದ್ಮಭೂಷಣ, ಪದ್ಮಶ್ರೀ, ಅರ್ಜುನ ಹಾಗೂ ಕ್ರೀಡಾಪಟುಗಳಿಗೆ ನೀಡುವ ಅತ್ಯುನ್ನತ ಧ್ಯಾನ್ ಚಂದ್ ಖೇಲ್ ಪ್ರಶಸ್ತಿಗೆ ಭಾಜನರಾದ ,ಭಾರತದ ಹಾಕಿ ತಂಡದ ಮಾಜಿ ಗೋಲ್ ಕೀಪರ್ ಶ್ರೀಜೇಶ್ ಮಡಿಕೇರಿ ಸಾಯಿ ಹಾಕಿ ಕೇಂದ್ರಕ್ಕೆ ಭೇಟಿ ನೀಡಿ, ಕ್ರೀಡಾಥಿ೯ಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸ್ಪಷ್ಟ ಗುರಿ ಇದ್ದಲ್ಲಿ ಹಾಗೂ ತಾವು ಮಾಡುವ ಕೆಲಸದ ಮೇಲೆ ನಿಷ್ಠೆ ಬದ್ಧತೆ ಇದ್ದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದ ಶ್ರೀಜೇಶ್, ತಮ್ಮ ಕ್ರೀಡಾ ಜೀವನದ ಅನುಭವ ಹಾಗೂ ಸಾಧನೆಗಳನ್ನು ಉದಾಹರಣೆ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಸ್ಫೂರ್ತಿಯನ್ನು ತುಂಬಿದರು. ಮಡಿಕೇರಿ ಸಾಯಿ ಕೇಂದ್ರದ ಮುಖ್ಯ ಕೋಚ್ ಮಿನಿ ಉನ್ನಿರಾಜ್ ಹಾಜರಿದ್ದರು.
ಮಡಿಕೇರಿ, NEWS DESK ಏ.06 : ನಗರದ ಮುನೀಶ್ವರ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ʼಮುನೀಶ್ವರ ಕ್ರಿಕೆಟ್ ಲೀಗ್ 2026ʼ ಪ್ರಥಮ ವರ್ಷದ ಲೆದರ್ ಬಾಲ್ ಟೂರ್ನಮೆಂಟ್ ಚಾಂಪಿಯನ್ ಆಗಿ ಟೀಂ ಸ್ಟ್ರೈಕರ್ಸ್ ಹೊರಹೊಮ್ಮಿದೆ. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 08 ದಿನ ಕಾಲ ನಡೆದ ಟೂರ್ನಮೆಂಟ್ನಲ್ಲಿ ಜಿಲ್ಲೆಯ ಪ್ರತಿಷ್ಠಿತ 08 ತಂಡಗಳು ಪಾಲ್ಗೊಂಡಿದ್ದವು. ಶನಿವಾರ ಅಪರಾಹ್ನ ನಡೆದ ಫೈನಲ್ ಪಂದ್ಯದಲ್ಲಿ ಎಂವೈಸಿಸಿ ಮಡಿಕೇರಿ ತಂಡದ ಎದುರು ಟೀಂ ಸ್ಟ್ರೈಕರ್ಸ್ ಸುಲಭ ಜಯ ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ ಎಂವೈಸಿಸಿ 99 ರನ್ಗೆ ಆಲೌಟ್ ಆಯಿತು. ಗುರಿ ಬೆನ್ನತ್ತಿದ ಸ್ಟ್ರೈಕರ್ಸ್ ತಂಡ 14.2 ಓವರ್ನಲ್ಲಿ 04 ವಿಕೆಟ್ ಕಳೆದುಕೊಂಡು ಸುಲಭವಾಗಿ ಜಯಗಳಿಸಿತು. ಬಹುಮಾನ ಬಹುಮಾನ ವಿತರಣೆ : ಸಂಘದ ಅಧ್ಯಕ್ಷ ಟಿ.ಕೆ. ನಾಗರಾಜ್ ಅಧ್ಯಕ್ಷತೆಯಲ್ಲಿ ಸಂಜೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು. ವಿಜೇತ ತಂಡಕ್ಕೆ 50 ಸಾವಿರ ರೂ. ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30 ಸಾವಿರ…
*ಮೈದಾನ 1* ಬೆಳಿಗ್ಗೆ 9 ಗಂಟೆಗೆ ಕಂಚೇರಿರ ಮತ್ತು ಕಲಿಯಂಡ, 10ಕ್ಕೆ ಮೇದೂರು ಮತ್ತು ಬಾಳೆಯಡ, 11ಕ್ಕೆ ಮಲ್ಲಂಗಡ ಮತ್ತು ಅಚ್ಚಕಾಳೇರ, 12ಕ್ಕೆ ಮಂಡೀರ (ಮಾದಾಪುರ) ಮತ್ತು ಚಿಯನಮಾಡ, 1ಕ್ಕೆ ಕಲ್ಲೇಂಗಡ ಮತ್ತು ಮಾಚಿಮಂಡ, 2ಕ್ಕೆ ಮುಕ್ಕಾಟಿರ (ಅರಪಟ್ಟು) ಮತ್ತು ಕಲಿಯಾಟಂಡ ಹಾಗೂ 3 ಗಂಟೆಗೆ ಮರುವಂಡ ಮತ್ತು ಕೈಪಟ್ಟೀರ *ಮೈದಾನ 2* 9 ಗಂಟೆಗೆ ಗೀಜಿಗಂಡ ಮತ್ತು ದೇಯಂಡ 10ಕ್ಕೆ ಚಿಮ್ಮುಣಿರ (ಹರಿಹರ) ಮತ್ತು ಕೇತಿರ 11ಕ್ಕೆ ಬಾಚಿರ ಮತ್ತು ಐಪುಮಾಡ 12ಕ್ಕೆ ಪೆಮ್ಮನಮಾಡ (ಹರಿಹರ) ಮತ್ತು ಕೊಟ್ಟುಕತೀರ 1ಕ್ಕೆ ನಾಯಕಂಡ ಮತ್ತು ತೀತಿರ (ಹರಿಹರ) 2ಕ್ಕೆ ಕೊಂಗoಡ ಮತ್ತು ಪೊನ್ನಿಮಾಡ 3ಕ್ಕೆ ಚೆಂಬoಡ ಮತ್ತು ಮಾತ್ರಮಾಡ 4 ಗಂಟೆಗೆ ಬಲ್ಯಂಡ ಮತ್ತು ಕುಪ್ಪಂಡ (ನಾಂಗಾಲ)
ಮಡಿಕೇರಿ, NEWS DESK ಏ.05:- ರಾಷ್ಟ್ರದ ಅಪರೂಪದ ರಾಜಕೀಯ ಮುತ್ಸದ್ಧಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಅಧಿಕಾರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ಈಗಾಗಲೇ ಕುಶಾಲನಗರದಲ್ಲಿ ಬಾಬೂಜಿ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಮುಂದಾಗಲಾಗಿದೆ. ಹಾಗೆಯೇ ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಹಲವು ಸ್ಮರಣೀಯ ಕಾರ್ಯಗಳು ಆಗಬೇಕು ಎಂದು ಶಾಸಕರು ತಿಳಿಸಿದರು. ಆಹಾರ ಮತ್ತು ಕೃಷಿ ಸಚಿವರಾಗಿ ರಾಷ್ಟ್ರದಲ್ಲಿ ಹಸಿರು ಕ್ರಾಂತಿಯನ್ನು ನಿರ್ಮಿಸಿದ ಕೀರ್ತಿ ಬಾಬು ಜಗಜೀವನ್ ರಾಮ್ ಅವರಿಗೆ ಸಲ್ಲುತ್ತದೆ ಎಂದು ಶಾಸಕರು ನುಡಿದರು. ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳು ದಾಖಲೆಯಾಗಿದ್ದು, ಸ್ಮರಣೀಯವಾಗಿದೆ ಎಂದು ಡಾ.ಮಂತರ್ ಗೌಡ ಅವರು ವಿವರಿಸಿದರು.…
ಮಡಿಕೇರಿ NEWS DESK ಏ.5 : ಕೊಡಗಿನ ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬದ 26ನೇ ವರ್ಷದ “ಚೇನಂಡ ಕಪ್ ಹಾಕಿ ಉತ್ಸವ”ಕ್ಕೆ ನಾಪೋಕ್ಲುವಿನಲ್ಲಿ ವರ್ಣರಂಜಿತ ಚಾಲನೆಯನ್ನು ನೀಡಲಾಯಿತು. ಕೊಡವ ಸಮುದಾಯದ ಒಟ್ಟು 383 ತಂಡಗಳ ನಡುವೆ 28 ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಮೇ 2 ರಂದು ಅಂತಿಮ ಪಂದ್ಯವನ್ನು ಆಯೋಜಿಸಲಾಗಿದೆ. ಅತ್ಯಾಕರ್ಷಕವಾಗಿ ಸಜ್ಜುಗೊಂಡಿರುವ ನಾಪೋಕ್ಲು ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ “ಚೇನಂಡ ಕಪ್ ಹಾಕಿ ಉತ್ಸವ”ಕ್ಕೆ ಸಾಂಪ್ರದಾಯಿಕವಾಗಿ ಬೆಳ್ಳಿಯ ಚೆಂಡನ್ನು ಬೆಳ್ಳಿಯ ಸ್ಟಿಕ್ನಿಂದ ಹೊಡೆಯುವ ಮೂಲಕ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡoಡ ಬೋಪಣ್ಣ ಹಾಗೂ ಗಣ್ಯರು ವಿದ್ಯುಕ್ತ ಚಾಲನೆ ನೀಡಿದರು. ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ ದೇಶ ವಿದೇಶಗಳಲ್ಲಿ ಕೊಡವ ಕೌಟುಂಬಿಕ ಹಾಕಿ ಪ್ರಸಿದ್ಧಿಯನ್ನು ಪಡೆದಿದೆ, ಈ ಹಿಂದಿನ ಹಾಕಿ ಉತ್ಸವದ ಸಂದರ್ಭ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿರುವ…






