ಮಡಿಕೇರಿ ಜ.10 NEWS DESK : ವಿವಿಧ ಕಾರ್ಮಿಕ ಕಾಯ್ದೆಗಳದಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ನೀಡಬೇಕು ಮತ್ತು ಮಹಿಳಾ ನೌಕರರು ಪಡೆಯಬೇಕು ಎಂದು ಮಡಿಕೇರಿ ವೃತ್ತ, ಮಡಿಕೇರಿಯ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ಅವರು ತಿಳಿಸಿದ್ದಾರೆ. ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ತೋಟ ಕಾರ್ಮಿಕರ ಕಾಯ್ದೆ 1951, ಬೀಡಿ ಮತ್ತು ಸಿಗಾರ ಕಾರ್ಮಿಕರ ಕಾಯ್ದೆ 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ ಮತ್ತು ಹೊರಗುತ್ತಿಗೆ ಮಹಿಳಾ ಕಾರ್ಮಿಕರುಗಳಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು…
ಲೇಖಕ: admin
ಮಡಿಕೇರಿ ಜ.10 NEWS DESK : ಕೊಡಗು ಜಿಲ್ಲೆಯ 2026-27ನೇ ಸಾಲಿಗೆ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಆಸಕ್ತಿಯುಳ್ಳ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ (ಎನ್.ಜಿ.ಓ) ಆಸಕ್ತ ಅಭಿವ್ಯಕ್ತಿ ಸ್ವ-ಇಚ್ಛೆ (ಎಕ್ಸ್ಪ್ರೆಸನ್ ಆಪ್ ಇಂಟ್ರೆಸ್ಟ್) ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ‘ಎಕ್ಸ್ಪ್ರೆಸನ್ ಆಪ್ ಇಂಟ್ರೆಸ್ಟ್’ ಅನ್ನು ಜ.30 ರವರೆಗೆ ಕರೆಯಲಾಗಿದ್ದು, ಹೆಚ್ಚಿನ ಮಾಹಿತಿಗೆ https://kppp.karnataka.gov.in/ ಅಲ್ಲಿ ನೋಡಬಹುದಾಗಿದೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ , ಕೊಡಗು ಜಿಲ್ಲೆ ವಿಳಾಸ: dbcskodagu@gmail.com ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.10 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. :: ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ :: ಯುಜಿಸಿ ನಿಯಮಗಳ ಪ್ರಕಾರ ಎರಡು ಶೈಕ್ಷಣಿಕ ಕಾರ್ಯಕ್ರಮಗಳನ್ನು (ಪೆÇ್ರೀಗ್ರಾಂಗಳನ್ನು) ಏಕ ಕಾಲದಲ್ಲಿ ಓದಲು ಅವಕಾಶವಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೇದುಕೊಳ್ಳುವುದು. ಯುಜಿಸಿ ಮಾನ್ಯತೆ ಹೊಂದಿದ ಶೈಕ್ಷಣಕ್ರಮಗಳಿಗೆ 2025-26 ಜನವರಿ ಆವೃತ್ತಿಗೆ ನೇರ ಪ್ರವೇಶಾತಿಯನ್ನು ಒಳಗೊಂಡಂತೆ ಪ್ರಥಮ ವರ್ಷದ ಒಡಿಎಲ್ ಶೈಕ್ಷಣಿಕ…
ಮಡಿಕೇರಿ ಜ.10 NEWS DESK : ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ನಿವೃತ್ತ ಶಿಕ್ಷಕ ಎಲ್.ಕೃಷ್ಣೇಗೌಡ ಅವರ ತೃತೀಯ ಪುತ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ಇಂದು (ಜ.10) ಅಪರಾಹ್ನ 3 ಗಂಟೆಗೆ ಸ್ವಗ್ರಾಮದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರ ಸಹೋದರ.
ಸುಂಟಿಕೊಪ್ಪ ಜ.10 NEWS DESK : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ 2026-27ನೇ ಸಾಲಿನ ಅಧ್ಯಕ್ಷರಾಗಿ ಶಂಕರನಾರಾಯಣ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೆಚ್.ಕೆ.ಧರ್ಮ, ಸಹ ಕಾರ್ಯದರ್ಶಿಯಾಗಿ ದಯಾನಂದ ರೈ, ಖಜಾಂಚಿಯಾಗಿ ಕೆ.ಎಸ್.ವಿನೋದ್, ಕ್ರೀಡಾಕಾರ್ಯದರ್ಶಿಯಾಗಿ ಟಿ.ಕೆ.ಚಂದ್ರು, ಆಶೋಕ(ದೇವೆಂದ್ರ), ಪಿ.ಎಂ.ರವಿ, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಎಸ್.ಬಿ.ಪ್ರವೀಣ್ಕುಮಾರ್, ಗೌರವಧ್ಯಕ್ಷರಾಗಿ ಬಿ.ಎ.ವಸಂತ, ಸಲಹೆಗಾರರಾಗಿ ಕೆ.ಎಸ್.ಜಗದೀಶ್, ಬಿ.ಜಿ.ರಮೇಶ್, ಪಿ.ಟಿ.ಪೌಲಸ್, ಪಿ.ಎಸ್.ಅನಿಲ್ಕುಮಾರ್, ಪಿ.ಕೆ.ದಿನೇಶ್, ಕೆ.ಕೆ.ವಿಜೇಶ್, ಸಮಿತಿ ಸದಸ್ಯರುಗಳಾಗಿ ಎ.ಎಸ್.ಸಂದೀಪ್, ಪಿ.ಎಸ್.ಅಜಿತ್ಕುಮಾರ್ ಅವರುಗಳನ್ನು ಆಯ್ಕೆಗೊಳಿಸಲಾಯಿತು.
ಮಡಿಕೇರಿ ಜ.10 NEWS DESK : ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೂ.10.77 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಮೈಸೂರು -ಗೋಣಿಕೊಪ್ಪ ಮುಖ್ಯರಸ್ತೆಯ, ಆಯ್ದ ಭಾಗಗಳಲ್ಲಿ ರೂ. 3.80 ಕೋಟಿ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ತಿತಿಮತಿ ಪಟ್ಟಣ ವ್ಯಾಪ್ತಿಯಲ್ಲಿ ತಿತಿಮತಿ ಸೇತುವೆಯಿಂದ ದೇವರಪುರದವರೆಗಿನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಈ ಕಾಮಗಾರಿ ಅತಿ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಂಡು ಮುಗಿಸಬೇಕೆಂದು ಗುತ್ತಿಗೆದಾರರಿಗೆ ಹೇಳಿದರು. ಅತ್ಯಂತ ಹೆಚ್ಚು ವಾಹನ ದಟ್ಟಣೆ ಇರುವ ಪ್ರಮುಖ ರಸ್ತೆ ಇದಾಗಿರುವುದರಿಂದ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಿ ಎಂದು ಸೂಚನೆ ನೀಡಿದರು. ಬಳಿಕ, ಮೈಸೂರು-ಪೊನ್ನಂಪೇಟೆ ಮುಖ್ಯರಸ್ತೆಯ, ದೇವರಪುರದಿಂದ ಸೀಗೆತೋಡು ಸೇತುವೆ ತನಕ, ರೂ. 3.50 ಕೋಟಿ ಅನುದಾನದಲ್ಲಿ, ಸುಮಾರು 4.34 ಕಿ.ಮೀ ಉದ್ದದ ರಸ್ತೆಯ ಉದ್ಘಾಟನೆ ನೆರವೇರಿಸಿದರು. ದೇವರಪುರ ಪಟ್ಟಣದಲ್ಲಿ ಈ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ನೆರವೇರಿಸಿದರು. ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯ…
ನಾಪೋಕ್ಲು ಜ.10 NEWS DESK : ಚಳ್ಳಕೆರೆಯ ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ವತಿಯಿಂದ ನಡೆಸಲಾಗಿದ್ದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯ 87 ವಿದ್ಯಾರ್ಥಿಗಳು ಭಾಗವಹಿಸಿದ್ದು, ಕೆಲವು ವಿದ್ಯಾರ್ಥಿಗಳು ರಾಷ್ಟ್ರಮಟ್ಟ, ರಾಜ್ಯಮಟ್ಟ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾಸಂಸ್ಥೆಯ ಎರಡನೇ ತರಗತಿಯ ವಿದ್ಯಾರ್ಥಿ ಟಿ.ಆರ್.ಅಭಿನವ ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನವನ್ನು 9ನೇ ತರಗತಿಯ ವಿದ್ಯಾರ್ಥಿನಿ ಎಂ.ಎಸ್.ಲಿಪಿಕಾ ಎಂಟನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳಾದ ಮೂರನೇ ತರಗತಿಯ ವಿದ್ಯಾರ್ಥಿ ಪಿ.ಬಿ.ಅಲೋಕ್ ಎರಡನೇ ಸ್ಥಾನವನ್ನು, 5ನೇ ತರಗತಿ ವಿದ್ಯಾರ್ಥಿನಿ ಕೃತಿಕಾ ನಾಲ್ಕನೇ ಸ್ಥಾನವನ್ನು, ನಾಲ್ಕನೇ ತರಗತಿಯ ವಿದ್ಯಾರ್ಥಿನಿ ತಂಗಮ್ಮ ಸಿ.ಎನ್ ಆರನೆಯ ಸ್ಥಾನವನ್ನು, 5ನೇ ತರಗತಿಯ ವಿದ್ಯಾರ್ಥಿನಿ ಸಿ.ಎಸ್.ದ್ವಿತಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ 5ನೇ ತರಗತಿಯ ವಿದ್ಯಾರ್ಥಿನಿ ಪುಣ್ಯ ಕೀರ್ತನ ಹಾಗೂ ಒಂದನೇ ತರಗತಿಯ ವಿದ್ಯಾರ್ಥಿನಿ ಆದ್ಯಚಂದಮ್ಮ ಕ್ರಮವಾಗಿ ಏಳನೇ ಮತ್ತು 8ನೇ ಸ್ಥಾನವನ್ನು ಗಳಿಸಿದ್ದಾರೆ. ಮೂರನೇ ತರಗತಿ ವಿದ್ಯಾರ್ಥಿ…
ಮಡಿಕೇರಿ ಜ.10 NEWS DESK : ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೈಬಲ್ ಹೆಲ್ತ್ ನ್ಯಾವಿಗೇಟರ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಸಂಬಂಧ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಂದ ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು (1 ಹುದ್ದೆ) ಹಾಗೂ ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ(03 ಹುದ್ದೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕವು ತಾತ್ಕಾಲಿಕವಾಗಿದೆ. ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾಸಿಕ ವೇತನ ರೂ.25 ಸಾವಿರ ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಮಾಸಿಕ ವೇತನ ರೂ.20 ಸಾವಿರ ಆಗಿರುತ್ತದೆ. ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ನೀಡಲಾಗುವುದು. ಆರೋಗ್ಯ…
ನಾಪೋಕ್ಲು ಜ.10 NEWS DESK : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಟಾಧಿಕಾರಿಗಿ ಅಧಿಕಾರ ಸ್ವೀಕರಿಸಿರುವ ಆರ್.ಎನ್.ಬಿಂದುಮಣಿ ಅವರನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟ ಅಭಿನಂದಿಸಿದೆ. ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿಯಾಗೆ ಭೇಟಿ ನೀಡಿದ ಒಕ್ಕೂಟದ ಪ್ರಮುಖರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕೊಡಗಿನ ಮತ್ತು ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಪರಿಪಾಲನೆಗೆ ಇಲಾಖೆ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ಕೊಡಗಿನ ಗೌಡ ಸಮುದಾಯದವರು ಸಹಕರಿಸುವುದಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಸಿದ ಎಸ್ಪಿ ಬಿಂದುಮಣಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಜನಪರ ಕೆಲಸ ಕಾರ್ಯಗಳು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಹೆಚ್ಚುವರಿ ಎಸ್ಪಿ ಬಾರಿಕೆ ದಿನೇಶ್, ಇಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ, ಖಜಾಂಚಿ ಅಂಬೆಕಲ್ಲು ನವೀನ್, ಕುಶಾಲನಗರ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ನಡುವಟ್ಟಿರ ಶಿವ ಪ್ರಕಾಶ್, ಕೊಡಗು ಗೌಡ ಸಮಾಜದ ನಿರ್ದೇಶಕರಾದ ಪೊನ್ನಚ್ಚನ ಮಧು, ಪುದಿಯನೆರವನ ರೇವತಿ,…
ನಾಪೋಕ್ಲು ಜ.10 NEWS DESK : ಹುಣ್ಣಿಮೆ ಅಂಗವಾಗಿ ನಾಪೋಕ್ಲು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಾಗಮಂಡಲ ವತಿಯಿಂದ ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿಗೆ 181ನೇ ಮಹಾ ಆರತಿ ನಡೆಯಿತು. ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ನಾಪೋಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸುಭಾಷ್ ನಗರದ ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ ಪಾಲ್ಗೊಂಡಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೆಟಿರ ಅರುಣ್ ಬೇಬ, ಬಿ.ಎಮ್ ಪ್ರತಿಪ ಒಕ್ಕೂಟದ ಪ್ರತಿನಿಧಿಗಳು, ನವ ಜೀವನ ಸಮಿತಿ ಸದಸ್ಯರು, ಪಾಲ್ಗೊಂಡಿದ್ದರು. – ವರದಿ : ದುಗ್ಗಳ ಸದಾನಂದ.






