ಉಂಚಳ್ಳಿ ಜಲಪಾತ ಅಥವಾ ಲುಷಿಂಗ್ಟನ್ ಜಲಪಾತ ಅಘನನಾಶಿನಿ ನದಿಯಿಂದ ಸೃಷ್ಟಿಯಾಗುವ ಜಲಪಾತ. ಇದರ ಎತ್ತರ ಸುಮಾರು 116ಮೀಟರ್. ಈ ಜಲಪಾತವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಸಿರ್ಸಿಯಿಂದ 30 ಕಿಮಿ ದೂರದಲ್ಲಿದೆ. 1845ರಲ್ಲಿ ಈ ಜಲಪಾತವನ್ನು ಪತ್ತೆಹಚ್ಚಿದ ಬ್ರಿಟಿಷ್ ಅಧಿಕಾರಿ ಜೆ.ಡಿ. ಲುಷಿಂಗ್ಟನ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಈ ಜಲಪಾತವು ನೀರು ಬೀಳುವಾಗ ಮಾಡುವ ಶಬ್ದದಿಂದ, ಸ್ಥಳೀಯರು ಇದನ್ನು ಕೆಪ್ಪ ಜೋಗ ಎಂದೂ ಕೂಡ ಕರೆಯುತ್ತಾರೆ. ಉಂಚಳ್ಳಿ ಜಲಪಾತ- ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ವಾಯವ್ಯಕ್ಕೆ ಸು.19ಕಿಮೀ ದೂರದಲ್ಲಿ ಉಂಚಳ್ಳಿ ಗ್ರಾಮದ ಬಳಿ ಇರುವ ಒಂದು ಸುಂದರ ಜಲಪಾತ. ಅಘನಾಶಿನಿ ನದಿ ಇಲ್ಲಿ ಅಡಿ ಕೆಳಗೆ ದುಮುಕುತ್ತದೆ. ಕರಿಬಂಡೆಗಳ ಮೇಲೆ ಹಾಲುನೊರೆ ಯಂತೆ ಇಳಿದು ಬರುವ ನೀರಿನ ಧಾರೆಯ ಸೊಬಗು ಚೇತೋಹಾರಿಯಾದುದು. ಜಲಪಾತದ ಸುತ್ತಲಿನ ಕಂದರ, ಅಡಕೆ ತೋಟಗಳು, ಸಮೃದ್ಧ ಅಡವಿಗಳು, ಇಕ್ಕೆಲಗಳಲ್ಲಿಯೂ ಎದ್ದಿರುವ ಕರಿಕಲ್ಲಿನ ಅಖಂಡ ಗೋಡೆಗಳು, ಈ ಜಲಪಾತಕ್ಕೆ ವಿಶೇಷ ಶೋಭೆಯನ್ನು ಕೊಟ್ಟಿವೆ. ಧೈರ್ಯಶಾಲಿಗಳು ಮಾತ್ರ ಜಲಪಾತದ…
ಲೇಖಕ: admin
ಸಿದ್ದಾಪುರ ಜ.3 NEWS DESK : ಪೊನ್ನಂಪೇಟೆ ತಾಲ್ಲೂಕಿನ ಕೋಣನಕಟ್ಟೆ- ಮರಪಾಲ ಗ್ರಾಮದಲ್ಲಿರುವ ಸಂತ ಅಂತೋಣಿ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.5 ರಂದು ನಡೆಯಲಿದೆ. ಸರ್ವಧರ್ಮ ಸಮನ್ವಯತೆ ಹೊಂದಿರುವ ಗ್ರಾಮದ ಸಂತ ಅಂತೋಣಿಯವರ ದೇವಾಲಯದಲ್ಲಿ ಅಂದು ಸಂಜೆ 4 ಗಂಟೆಗೆ ಗಾಯನ ಬಲಿಪೂಜೆ ನಡೆಯಲಿದ್ದು, ಮೈಸೂರು ಪ್ರಾಂತ್ಯ ದ ಕೌನ್ಸಿಲರ್ ಫಾರ್ ಸೋಶಿಯಲ್ ಅಪೋಸಿಲೇಟ್, ಸೇಂಟ್ ಪಾಲ್ಸ್ ನ ಫಾದರ್ ಜೆ.ಬಿ.ಪನಚಿಕಲ್ ಸಿ.ಎಂ.ಐ . ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ. ವಾಜನ ಪ್ರಭೋಧನೆಯನ್ನು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಮದಲೈ ಮುತ್ತು ನಡೆಸಿಕೊಡಲಿದ್ದಾರೆ. ನಂತರ ಭವ್ಯ ಮೆರವಣಿಗೆ, ಅನ್ನ ಸಂತರ್ಪಣೆ ನಡೆಯಲಿದೆ. ಜಿಲ್ಲೆಯ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾಲಿಬೆಟ್ಟದಿಂದ ಬರುವ ಭಕ್ತಾದಿಗಳಿಗೆ ಮಧ್ಯಾಹ್ನ 3 ಗಂಟೆಗೆ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ದೇವಾಲಯದ ಫಾದರ್ ಹರ್ಷಿತ್ ದೇವ್ ಸಿ.ಎಂ.ಐ ತಿಳಿಸಿದ್ದಾರೆ.
ಪೊನ್ನಂಪೇಟೆ: ಜ.3 NEWS DESK : ಸುಮಾರು ಎರಡು ಶತಮಾನಗಳಷ್ಟು ಹಳೆಯ ಪೊನ್ನಂಪೇಟೆ ಶಾಫಿ ಜುಮಾ ಮಸೀದಿ ಇದೀಗ ಆಧುನಿಕ ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಯ ಮಸೀದಿಯಾಗಿ ಪುನರ್ ನಿರ್ಮಾಣಗೊಂಡಿದ್ದು, ಜ.4 ರಂದು ಲೋಕಾರ್ಪಣೆಗೊಳ್ಳಲಿದೆ. ನೂತನ ಮಸೀದಿಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಜ.4ರಿಂದ ಜ.6ರವರಿಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಲೋಕಾರ್ಪಣೆಗೆ ಮುನ್ನುಡಿಯಾಗಿ ನಡೆದ ನೂತನ ಮಸೀದಿಗೆ ಸಾರ್ವಜನಿಕ ಮಹಿಳೆಯರ ಸಂದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪೊನ್ನಂಪೇಟೆ ತಾಲ್ಲೂಕಿನಲ್ಲೆ ಸುವಿಶಾಲವಾದ ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಪೊನ್ನಂಪೇಟೆಯ ತ್ಯಾಗರಾಜ ರಸ್ತೆಯಲ್ಲಿರುವ ನೂತನ ಶಾಫಿ ಜುಮಾ ಮಸೀದಿ ಆಧುನಿಕ ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಯ ಮಿನಾರ್ ರಹಿತ ವಿಭಿನ್ನವಾದ ಆರಾಧನಾಲಯವಾಗಿ ಮೂಡಿಬಂದಿದೆ. ಇದು ನೆಲ ಮತ್ತು ಪ್ರಥಮ ಅಂತಸ್ತುಗಳನ್ನು ಹೊಂದಿದೆ. ನೂತನ ಮಸೀದಿಯ ನೆಲ ಮತ್ತು ಪ್ರಥಮ ಅಂತಸ್ತು ತಲಾ 4300 ಚ.ಅ. ವಿಸ್ತೀರ್ಣ ಹೊಂದಿದ್ದು, ಒಟ್ಟು 8,600 ಚ.ಅ. ಅಗಲದ ಈ ಮಸೀದಿಯನ್ನು 600 ಮಂದಿ ಏಕಕಾಲದಲ್ಲಿ ನಮಾಜು ಮಾಡಲು ಸಾಧ್ಯವಾಗುವಂತೆ…
ರು NEWS DESK ಜ.3 : ಬಸ್ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಜೆಪಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಕ್ಷದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಎನ್.ರವಿಕುಮಾರ್, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರು ಜ.3 NEWS DESK : ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ’’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ ಮತ್ತು ನರರೋಗಗಳ ರಾಷ್ಟ್ರೀಯ ಸಂಸ್ಥೆ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ಬಂದಿದ್ದು, ದೇಶದ ಪ್ರಮುಖ ಸಂಸ್ಥೆಯಾಗಿ ತನ್ನ ಛಾಪು ಮೂಡಿಸಿದೆ. ಮೈಸೂರು ಸರ್ಕಾರದ ಮಾನಸಿಕ ಆಸ್ಪತ್ರೆ ಮತ್ತು ಭಾರತೀಯ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಒಗ್ಗೂಡಿಸುವ ಮೂಲಕ ಪ್ರಾರಂಭವಾದ ನಿಮ್ಹಾನ್ಸ್, ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ…
ಮಡಿಕೇರಿ ಜ.3 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ನಾಟಕ19 ಬೆಟಾಲಿಯನ್ ಆರ್ಮಿ ವಿಂಗ್ ಗೆ ಕೊಡಗಿನ ಎಂ.ಆರ್.ಹೇಮಂತ್ ಆಯ್ಕೆಯಾಗಿದ್ದಾನೆ. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿರುವ ಹೇಮಂತ್ ಕಾಟಕೇರಿ ಗ್ರಾಮದ ಮಜ್ಜೇಗೌಡನ ರಾಜೇಶ್ ಮತ್ತು ಪ್ರಮೀಳಾ ದಂಪತಿಯ ಪುತ್ರ.
ಬೇಕಾಗುವ ಸಾಮಾಗ್ರಿಗಳು :: ಮೊಟ್ಟೆ- 5, ಬ್ರೆಡ್ ತುಂಡು- 5, ಟೊಮೆಟೊ- 1, ಈರುಳ್ಳಿ- 2, ಹಸಿ ಮೆಣಸಿನಕಾಯಿ- 3, ಕೊತ್ತಂಬರಿ ಸೊಪ್ಪು- ಸ್ವಲ್ಪ, ಹಾಲು- 3 ಚಮಚ, ಎಣ್ಣೆ- 3 ಚಮಚ, ಬೆಣ್ಣೆ- 2 ಚಮಚ, ಉಪ್ಪು- ರುಚಿಗೆ ತಕ್ಕಷ್ಟು. ಮಾಡುವ ವಿಧಾನ :: ಮೊಟ್ಟೆಯನ್ನು ಒಡೆದು ಒಂದು ಬಟ್ಟಲಿನಲ್ಲಿ ಹಾಕಿ ಚೆನ್ನಾಗಿ ಕಲಸಬೇಕು. ಅದಕ್ಕೆ ಹಾಲು ಹಾಕಿ ಚೆನ್ನಾಗಿ ಮಿಕ್ಸ್ ಮಾಡಬೇಕು. ನಂತರ ಸಣ್ಣದಾಗಿ ಕತ್ತರಿಸಿದ ಹಸಿ ಮಣಸಿನಕಾಯಿ, ಟೊಮೆಟೊ ಮತ್ತು ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕ ಉಪ್ಪು ಹಾಕಿ ಮತ್ತೊಮ್ಮೆ ಚೆನ್ನಾಗಿ ಕಲಸಬೇಕು. ಒಂದು ಪ್ಯಾನ್ನಲ್ಲಿ ಎಣ್ಣೆ ಹಾಕಿ ಬಿಸಿಯಾದಾಗ ಸಣ್ಣದಾಗಿ ಕತ್ತರಿಸಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಅದಕ್ಕೆ ಮೊಟ್ಟೆಯ ಮಿಶ್ರಣವನ್ನು ಹಾಕಿ ಕಮ್ಮಿ ಉರಿಯಲ್ಲಿ ಫ್ರೈ ಮಾಡಬೇಕು. ಮೊಟ್ಟೆ ಫ್ರೈ ಆದ ನಂತರ ಉರಿಯಿಂದ ತೆಗೆದು ಬದಿಯಲ್ಲಿಡಿ. ಎರಡು ಬ್ರೆಡ್ ತುಂಡುಗಳ ಒಂದೊಂದು ಬದಿಯಲ್ಲಿ ಬೆಣ್ಣೆ ಸವರಿ ಅದರ ಮಧ್ಯದಲ್ಲಿ ಮೊಟ್ಟೆ…
ಶ್ರೀ ಕಾಂತೇಶ್ವರ ದೇವಸ್ಠಾನ, ಕಾಂತಾವರ ಶಿಲ್ಪ ಕಲೆಗಳ ಬೀಡಾದ ಕರ್ನಾಟಕವು ಅನೇಕ ಪುಣ್ಯ ಕ್ಷೇತ್ರಗಳಿಗೆ ಸಾಕ್ಷಿಯಾಗಿದೆ. ಅಂತಹವುಗಳಲ್ಲಿ ಕರಾವಳಿಯ ಪಶ್ಚಿಮ ಘಟ್ಟದ ತಪ್ಪಲ್ಲಿನಲ್ಲಿರುವ ಶಿವನ ದೇಗುಲವಾದ ಕಾಂತಾವರದ ಕಾಂತೇಶ್ವರ ದೇವಾಲಯವೂ ಒಂದಾಗಿದೆ. ಕಾಂತೇಶ್ವರ ದೇವಸ್ಥಾನವು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿದೆ. ಇದು ಉಡುಪಿಯಿಂದ ೪೦ ಕಿ.ಮೀ ದೂರದಲ್ಲಿದೆ. ಇದು ಪಡುಬಿದ್ರಿಯಿಂದ ಕಾರ್ಕಳಕ್ಕೆ ಹೋಗುವ ರಸ್ತೆಯಲ್ಲಿನ ಬೆಳವಾಯಿಯಿಂದ ಸ್ವಲ್ಪವೇ ದೂರದಲ್ಲಿದೆ. ಇತಿಹಾಸ :: ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾದ ಈ ದೇವಸ್ಥಾನ 7ನೇ ಶತಮಾನಕ್ಕೆ ಸೇರಿದ್ದು ಎನ್ನಲಾಗುತ್ತದೆ. ಇಲ್ಲಿನ ಮೂಲದೈವ ಕಾಂತೇಶ್ವರ. ಇಲ್ಲಿ ಗಣೇಶ, ಅಣ್ಣಪ್ಪ ಹಾಗೂ ಅರ್ಧನಾರೀಶ್ವರ ಗುಡಿಯೂ ಇದೆ. ಕಾಂತಾರ ಎಂದರೆ ಅರಣ್ಯ. ಈ ಕ್ಷೇತ್ರವು ಹಿಂದೆ ಅರಣ್ಯದಿಂದ ಕೂಡಿತ್ತು ಈ ಕಾರಣದಿಂದಾಗಿ ಈ ಊರಿಗೆ ಕಾಂತವರ ಎಂಬ ಹೆಸರು ಬಂದಿದೆ ಎಂಬ ಪ್ರತೀತಿಯಿದೆ. ಹಾಗೆಯೇ ಜಂಜವಾತ ಎನ್ನುವ ಅಸುರನ ಕುಟುಂಬ ಇಲ್ಲಿ ನೆಲೆಸಿದ್ದರಂತೆ. ಅವರ ಕುಟುಂಬ ಇಲ್ಲಿ ತಪಸ್ಸು ಮಾಡುತ್ತಿದ್ದ ಮುನಿಗಳಿಗೆ ಕಾಟ ನೀಡುತ್ತಿದ್ದರಂತೆ. ಅವರಲ್ಲಿ…
ಮಡಿಕೇರಿ ಜ.3 NEWS DESK : ಸದೃಢ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯವೆಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ ಅಭಿಪ್ರಾಯಟ್ಟರು. ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ರಾಫೆಲ್ಸ್ ಇಂಟರ್ನ್ಯಾಷನಲ್ ಇಂಗ್ಲಿಷ್ ಸ್ಕೂಲ್ ಮತ್ತು ಪಿ.ಯು ಕಾಲೇಜು ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿರು. ಜೀವನದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಮಾರ್ಗದರ್ಶಕರಾಗಿಸಿ, ಇಂದಿನ ವಿದ್ಯಾರ್ಥಿಗಳು ಹಲವು ವಿಷಯವನ್ನು ಕಲಿಯಬೇಕಾಗಿದೆ. ಮೊಬೈಲ್ ನಲ್ಲಿ ರೀಲ್ಸ್ ನೋಡಿ ಸಮಯ ವ್ಯರ್ಥ ಮಾಡದೆ ಉತ್ತಮ ರೀತಿಯಲ್ಲಿ ಸಮಯನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬಹುದು ಎಂಬುವುದನ್ನು ವಿದ್ಯಾರ್ಥಿಗಳು ಮನದಟ್ಟು ಮಾಡಿಕೊಳ್ಳಬೇಕು ಎಂದರು. ಸ್ವಾಮಿ ವಿವೇಕಾನಂದರಿಗಿದ್ದ ಏಕಾಗ್ರತೆ ಇದ್ದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ಮಾದಕ ದ್ರವ್ಯಗಳಿಗೆ ಬಲಿಯಾಗದೆ, ಹೇಗೆ ಜೀವನದಲ್ಲಿ ಗುರಿ ಸಾಧಿಸಬಹುದು ಎಂಬುವುದರ ಬಗ್ಗೆ ಯುವ ಸಮೂಹ ಚಿಂತಿಸಬೇಕಾಗಿದೆ. ತೋರ್ಪಡಿಸುವಿಕೆಯ ಜೀವನ ನಿಲ್ಲಿಸಿ ಸ್ವಪ್ರಯತ್ನದಿಂದ ಹೇಗೆ ಜೀವನದಲ್ಲಿ ಮುಂದೆ ಬರಬಹುದೆಂದು ಯೋಚಿಸಬೇಕೆಂದು ಅವರು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪದ್ಮಶ್ರೀ…
ಪ್ರತಿಯೊಬ್ಬರೂ ತಮ್ಮ ಚರ್ಮವು ಕಲೆರಹಿತವಾಗಿ ಕಾಂತಿಯುತಾಗಿರಬೇಕೆಂದು ಬಯಸುತ್ತಾರೆ. ತ್ವಚೆಯ ಅಂದವನ್ನು ಹೆಚ್ಚಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ಫೇಶಿಯಲ್, ಸ್ಕಿನ್ ಕೇರ್ ಪ್ಯಾಕ್, ಬ್ಯೂಟಿ ಉತ್ಪನ್ನಗಳನ್ನು ಬಳಸುತ್ತಾರೆ. ಈ ವಸ್ತುಗಳು ಚರ್ಮವನ್ನು ಸುಂದರವಾಗಿಸುತ್ತದೆ, ಆದರೆ ಮೂಗಿನ ಮೇಲಿನ ಕಪ್ಪು ಚುಕ್ಕೆಗಳಂತೆ ಕಾಣುವ ಬ್ಯಾಕ್ಹೆಡ್ಸ್ಗಳು ನಿಮ್ಮ ಮುಖದ ಅಂದವನ್ನು ಹಾಳುಮಾಡುತ್ತದೆ. ಮೂಗಿನ ಮೇಲೆ ಕಾಣಿಸಿಕೊಳ್ಳುವ ಈ ಕಪ್ಪು ಚುಕ್ಕೆಗಳ ಸಮಸ್ಯೆಗಳು ಚಳಿಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ನೀವು ಮೂಗಿನ ತುದಿಯಲ್ಲಿ ಬ್ಲ್ಯಾಕ್ಹೆಡ್ ಸಮಸ್ಯೆಯನ್ನು ಹೊಂದಿದ್ದರೆ ಮೊಟ್ಟೆಗಳನ್ನು ಬಳಸುವ ಮೂಲಕ ಬ್ಲ್ಯಾಕ್ಹೆಡ್ಸ್ಗಳನ್ನು ನಿವಾರಿಸಬಹುದು. ತಯಾರಿಸುವುದು ಹೇಗೆ? ಅಕ್ಕಿ ಹಿಟ್ಟು – 1/2 ಟೀಸ್ಪೂನ್ ಟಿಶ್ಯೂ ಪೇಪರ್ – 1 ಮೊಟ್ಟೆ – 1 ಮುಲ್ತಾನಿ ಮಿಟ್ಟಿ – 1/2 ಟೀಸ್ಪೂನ್ ಇದನ್ನು ತಯಾರಿಸಲು ಒಂದು ಬಟ್ಟಲಿನಲ್ಲಿ ಮೊಟ್ಟೆಯ ಬಿಳಿಭಾಗ ಮತ್ತು ಹಳದಿ ಭಾಗಗಳನ್ನು ಪ್ರತ್ಯೇಕಿಸಿ. ಈಗ ಇನ್ನೊಂದು ಬಟ್ಟಲಿನಲ್ಲಿ ಮೊಟ್ಟೆಯ ಬಿಳಿಭಾಗವನ್ನು ಹಾಕಿ. ಇದಕ್ಕೆ ಅಕ್ಕಿ ಹಿಟ್ಟು ಮತ್ತು ಮುಲ್ತಾನಿ ಮಿಟ್ಟಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್…






