ಲೇಖಕ: admin

ಪೊನ್ನಂಪೇಟೆ NEWS DESK ಮಾ.2 : ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿ ಪುರಸ್ಕೃತರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ  ಕೆದಮುಳ್ಳೂರು ಗ್ರಾ. ಪಂ. ಸದಸ್ಯರಾದ ಮೀತಲತಂಡ ಎಂ. ಇಸ್ಮಾಯಿಲ್ ಅವರನ್ನು ಕೆದಮುಳ್ಳೂರು ಗ್ರಾ.ಪಂ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೆದಮುಳ್ಳೂರು ಗ್ರಾ. ಪಂ. ಅಧ್ಯಕ್ಷರಾದ  ಮಾಳೇಟಿರ ಜಫ್ರಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಸಾಧನೆಗಾಗಿ ಇಸ್ಮಾಯಿಲ್ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಅಲ್ಲದೆ ತಾಲೂಕು ಮಟ್ಟದ ಅತ್ಯುತ್ತಮ ಕಂಪ್ಯೂಟರ್ ಆಪರೇಟರ್ ಎಂಬ ವಿಶೇಷ ಪುರಸ್ಕಾರಕ್ಕೆ ಭಾಜನರಾದ ಕೆದಮುಳ್ಳೂರು ಗ್ರಾ.ಪಂ. ಯ ಡಾಟಾ ಎಂಟ್ರಿ ಆಪರೇಟರ್ ಬಿ.ಜಿ.ಕಾವ್ಯ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಳೇಟಿರ ಜಫ್ರಿ ಉತ್ತಪ್ಪ, ಸತತವಾಗಿ 3ನೇ ಬಾರಿಗೆ…

Read More

ಮಡಿಕೇರಿ NEWS DESK ಮಾ.2 : ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರೊಂದಿಗೆ ಇತರರ ಪ್ರೋತ್ಸಾಹ ಕೂಡ ಅತ್ಯಗತ್ಯ. ಕ್ರೀಡಾಕ್ಷೇತ್ರದಲ್ಲಿಯೂ ವಿನೂತನ ಪ್ರಯತ್ನಗಳು ಆದಾಗ ಮತ್ತಷ್ಟು ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ ಎಂದು ಕೊಡಗಿನ ಹೆಸರಾಂತ ಬಾಸ್ಕೆಟ್ ಬಾಲ್ ಆಟಗಾತಿ೯  ಮಂಡೆಪಂಡ ಡಾ. ಪುಪ್ಪಾ ಕುಟ್ಟಣ್ಣ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ 55 ಲಕ್ಷ ರು. ವೆಚ್ಚದಲ್ಲಿ ಸ್ಫಾಪನೆಯಾದ ತನ್ನದೇ ಹೆಸರಿನ ಡಾ. ಪುಪ್ಪಾ ಕುಟ್ಟಣ್ಣ ಬಾಸ್ಕೆಟ್ ಬಾಲ್ ಕೋಟ್೯ ಉದ್ಘಾಟಿಸಿ ಮಾತನಾಡಿದ  ಅಂತರರಾಷ್ಟ್ರೀಯ  ಬಾಸ್ಕೆಟ್ ಬಾಲ್  ಮಾಜಿ   ಆಟಗಾತಿ೯ಯೂ ಆಗಿರುವ ಪುಪ್ಪಾಕುಟ್ಟಣ್ಮ , ಅನೇಕ ಸ್ಥಳಗಳಲ್ಲಿ ನಿಮಾ೯ಣವಾಗಿರುವ ಬಾಸ್ಕೆಟ್ ಬಾಲ್ ಕೋಟ್೯ಗಿಂತ ಕೊಡಗು ವಿದ್ಯಾಲಯದಲ್ಲಿ ನಿಮಾ೯ಣವಾದ ಕ್ರೀಡಾಂಗಣ ವಿನೂತನವಾಗಿದೆ. ಕೊಡಗಿನಲ್ಲಿ ಇಂಥ ಹೊಸತನದ ಪ್ರಯತ್ನಕ್ಕೆ ಕೊಡಗು ವಿದ್ಯಾಲಯ ಮುಂದಾಗಿರುವುದು ಶ್ಲಾಘನೀಯ ಎಂದರು. ತನ್ನ ಹೆಸರಿನಲ್ಲಿಯೇ ಬಾಸ್ಕೆಟ್ ಬಾಲ್  ಕೋಟ್೯  ನಿಮಾ೯ಣವಾಗಿರುವುದು ತನ್ನ ಕ್ರೀಡಾಜೀವನದಲ್ಲಿಯೇ ಸ್ಮರಣೀಯವಾಗಿದೆ ಎಂದೂ ಅವರು ಧನ್ಯತಾ ಭಾವದಿಂದ ಹೇಳಿದರು. ಪ್ರತೀ ಕ್ರೀಡಾಸಾಧಕರಿಗೆ ಮುಖ್ಯವಾಗಿ ಛಲ,…

Read More

ಮಡಿಕೇರಿ NEWS DESK ಮಾ.2 : ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಮತ್ತು ಜನಪರ ಅಂಶಗಳನ್ನು ಅಳವಡಿಸುವಂತೆ ಒತ್ತಾಯಿಸಿರುವ ವಿವಿಧ ಬೇಡಿಕೆಗಳ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ರಚಿಸಿರುವ “ಜನತಾ ಬಜೆಟ್” ಪ್ರತಿಯನ್ನು ಪಕ್ಷದ ಪ್ರಮುಖರು ಶಾಸಕದ್ವಯರಿಗೆ ಸಲ್ಲಿಸಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಸಿನ್ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ನಗರದಲ್ಲಿ ಭೇಟಿಯಾಗಿ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಮನವಿ ಮಾಡಿದರು. 2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುವ ಸಂದರ್ಭ ವನ್ಯಜೀವಿಗಳ ಸಮಸ್ಯೆ, ರೈತರ ಹಾಗೂ ಕಾರ್ಮಿಕ ಸಂಕಷ್ಟಗಳಿಗೆ ಪರಿಹಾರ, ಶಿಕ್ಷಣಕ್ಕೆ ಒತ್ತು ನೀಡಿ ಕಾನೂನು ಕಾಲೇಜು ಸ್ಥಾಪನೆ, ಉನ್ನತ ಶಿಕ್ಷಣದ ತರಬೇತಿ ಕೇಂದ್ರಗಳ ಆರಂಭ, ಕೊಡಗು ವಿವಿಯನ್ನು ಜಿಲ್ಲೆಯಲ್ಲೇ ಉಳಿಸುವುದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಮಲ್ಟಿ ಸ್ಪೆಷಾಲಿಟಿ…

Read More

ಮಡಿಕೇರಿ NEWS DESK ಮಾ.2 : ಅಮ್ಮತ್ತಿ ಫ್ರೆಂಡ್ಸ್ ಹಾಗೂ ಕೊಡಗು ಮುಸ್ಲಿಂ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ 6ನೇ ವರ್ಷದ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಕಾಲ್ಚೆಂಡು ಪಂದ್ಯಾವಳಿ ಏಪ್ರಿಲ್ 23 ರಿಂದ 27 ರವರೆಗೆ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅಮ್ಮತ್ತಿ ಫ್ರೆಂಡ್ಸ್ ಕ್ರೀಡಾಕೂಟದ ಆಯೋಜಕ ಶಮೀರ್ ಅಮ್ಮತ್ತಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ  ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಚಾಂಪಿಯನ್ ತಂಡಕ್ಕೆ ಕೊಡಗಿನ ಮುಸ್ಲಿಂ ಕಪ್ ಇತಿಹಾಸದಲ್ಲಿ ಅತಿ ಹೆಚ್ಚು ನಗದು ರೂ.101111 ಮತ್ತು ಟ್ರೋಫಿ, ದ್ವಿತೀಯ ರೂ.50555 ಮತ್ತು ಟ್ರೋಫಿ, ತೃತೀಯ ರೂ.20222 ಮತ್ತು ಟ್ರೋಫಿ, ನಾಲ್ಕನೇ ಬಹುಮಾನ ರೂ.10111 ಮತ್ತು ಟ್ರೋಫಿ ಹಾಗೂ ಹಲವಾರು ವೈಯುಕ್ತಿಕ ಟ್ರೋಫಿಗಳನ್ನು ನೀಡಲಾಗುವುದು. ಮೈದಾನ ಶುಲ್ಕ 3 ಸಾವಿರ ರೂ. ನಿಗಧಿ ಪಡಿಸಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚಿನ‌ ಮಾಹಿತಿಗಾಗಿ 8861775265 ನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ NEWS DESK ಮಾ.2 : ವಿಭಿನ್ನ ನಿರೂಪಣಾ ಶೈಲಿ, ಪಾತ್ರ ಪೋಷಣೆ ಮತ್ತು ಕೊಡಗಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಥಾ ವಸ್ತುವಿನ ಚಲನಚಿತ್ರಗಳನ್ನು ನಿರ್ದೇಶಿಸುವ ಮೂಲಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ವರೆಗೂ ಸಿನಿ ಹೆಜ್ಜೆಯನ್ನು ಬೆಳೆಸಿ ಸಿನಿಮಾರಂಗದಲ್ಲಿ ಕೊಡಗಿನ ಪ್ರತಿಭೆಗಳ ಇರುವಿಕೆಯನ್ನು ಸಾಕ್ಷೀಕರಿಸಿದ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ “ಕಾಂಗತ ಮೂಡ್ (ದಿ ಶ್ಯಾಡೋ)” ಕೊಡವ ಚಲನಚಿತ್ರ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ “ಕಾಂಗತ ಮೂಡ್”(“(The Shadow)  16ನೇ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಆಯ್ಕೆಯಾಗಿದೆ. ಬೆಂಗಳೂರಿನ ರಾಜಾಜಿನಗರದ ಒರೆಯನ್ ಮಾಲ್ ನಲ್ಲಿ ಮಾರ್ಚ್ 1 ರಿಂದ 8ರ ವರೆಗೆ ನಡೆಯುತ್ತಿರುವ ಚಲನಚಿತ್ರೋತ್ಸವದಲ್ಲಿ “ಕಾಂಗತ ಮೂಡ್” ಎರಡು ಪ್ರದರ್ಶನ ಕಾಣಲಿದೆ. ಮಾ.2 ರಂದು ಮಧ್ಯಾಹ್ನ 3 ಗಂಟೆಗೆ ರಾಜ್ ಕುಮಾರ್ ಭವನ್ ಮತ್ತು ಮಾ.6ರಂದು ಮಧ್ಯಾಹ್ನ…

Read More

ಮಡಿಕೇರಿ ಮಾ.1 NEWS DESK : ಮಡಿಕೇರಿ ಬ್ರಹ್ಮಕುಮಾರಿ ಲೈಟ್‍ಹೌಸ್‍ ನಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಶಿವ ದ್ವಜರೋಹಣ ಹಾಗೂ 89 ನೇ ತ್ರಿಮೂರ್ತಿ ಶಿವ ಜಯಂತಿ ಕಾರ್ಯಕ್ರಮ ನಡೆಯಿತು.  ಬ್ರಹ್ಮಕುಮಾರಿ ಲೈಟ್‍ಹೌಸ್‍ ನ ಜಿಲ್ಲಾ ಸಂಚಾಲಕಿ, ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿ ಜಿ, ಹಿರಿಯ ವಕೀಲರಾದ ಬಾಲ ಸುಬ್ರಮಣ್ಯ ಪಂಜರ್ಪಣೆ, ಇಎನ್‍ಟಿ ತಜ್ಞ ಡಾ.ಮೋಹನ್ ಅಪ್ಪಾಜಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಲೈಟ್‍ಹೌಸ್ ಮುಂಭಾಗ ಧ್ವಜಾರೋಹಣ ನೆರವೇರಿಸಿದರು. ನೆರೆದಿದ್ದ ಎಲ್ಲರು ವಿಶೇಷ ಜ್ಯೋತಿರ್ಲಿಂಗ ದರ್ಶನ ಪಡೆದರು. ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗೋಣಿಕೊಪ್ಪಲಿನ ಲೋಪಮುದ್ರೆ ಆಸ್ಪತ್ರೆಯ ಡಾ.ಅಮೃತ ನಾಣಯ್ಯ ಉದ್ಘಾಟಿಸಿ, ಆಸ್ಪತ್ರೆಯ ಸೇವಾ ಭಾವನೆಯ ಹಿನ್ನೆಲೆಯನ್ನು ತಿಳಿಸಿದರು. ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಶಿವ ಸ್ಮೃತಿ ಹಾಡಿ ಶುಭಹಾರೈಸಿದರು. ಕೊಡಗು ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ವಾತ್ಸಲ್ಯ ರಮೇಶ್, ಕುಮಾರಿ ಅಧಿತಿ, ಚಿನ್ಮಯಿ ಶಿವ ನೃತ್ಯ ಮಾಡಿದರು. ಕುಷಿ ನೃತ್ಯದ ಮೂಲಕ ಗಮನ ಸೆಳೆದರು. ಕಾರ್ಯಕ್ರಮದ ನಂತರ ನೆರೆದಿದ್ದವರಿಗೆ ಪ್ರಸಾದ ವಿತರಣೆ…

Read More

ಕಣಿವೆ ಮಾ.1 NEWS DESK : ಕುಶಾಲನಗರದ ಬೈಚನಹಳ್ಳಿಯ ಗ್ರಾಮದೇವತೆ ಮಾರಮ್ಮ ದೇವರ ವಾರ್ಷಿಕ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.  ದೇವಾಲಯದ ಪ್ರಧಾನ ಅರ್ಚಕ ಉಮೇಶ್ ಹೊಳ್ಳ ನೇತೃತ್ವದಲ್ಲಿ ಹರಿಶ್ಚಂದ್ರ ಭಟ್, ವೇದವ್ಯಾಸ ಭಟ್, ಸೋಮಶೇಖರ ಭಟ್, ಗಿರೀಶ್ ಭಟ್, ರಾಘವೇಂದ್ರ ಭಟ್ ಸುಬ್ರಮಣ್ಯ ಭಟ್ ಅರ್ಚಕರ ತಂಡ ಹೋಮ ಹವನಾದಿ ಧಾರ್ಮಿಕ ವಿಧಿಗಳನ್ನು ನಡೆಸಿತು. ದೇವತಾ ಸಮಿತಿ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಎಂ.ಎಂ.ಚರಣ್, ಕೋಶಾಧಿಕಾರಿ ಮುತ್ತಣ್ಣ, ನಿರ್ದೇಶಕರಾದ ಕೆ.ಎನ್.ಅಶೋಕ್, ಜಗದೀಶ್, ರಾಮಚಂದ್ರ ಸೇರಿದಂತೆ ಬೈಚನಹಳ್ಳಿಯ ಗೆಳೆಯರ ಬಳಗದ ಸದಸ್ಯರು ಇದ್ದರು. ದೇವಾಲಯದಲ್ಲಿ ಮಹಿಳಾ ತಂಡದಿಂದ ಭಜನೆ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ, ಅನ್ನಸಂತರ್ಪಣೆ ನೀಡಲಾಯಿತು. ಪೂಜಾ ಅಂಗವಾಗಿ  ಗುಡಿಯೊಳಗಿನ ಅಮ್ಮನವರನ್ನು ಬಗೆ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ದೇವಾಲಯವನ್ನು ತಳಿರು ತೋರಣಗಳಿಂದ ಅಕಂಕರಿಸಲಾಗಿತ್ತು.

Read More

ಮಡಿಕೇರಿ ಮಾ.1 NEWS DESK : ನಗರದಲ್ಲಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ ನೀಡಿ ವೀಕ್ಷಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗಿರುವ ಪುಸ್ತಕಗಳ ಬಗ್ಗೆ ಮಾಹಿತಿ ಪಡೆದರು. ಹಾಗೆಯೇ ಸುಳ್ಯ ಮತ್ತು ಮಡಿಕೇರಿ ತಾಲ್ಲೂಕಿನ ಸ್ಥಳನಾಮ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು. ಅಕಾಡೆಮಿ ಚಟುವಟಿಕೆ ಸಂಬಂಧಿಸಿಸಿದಂತೆ ದಾಖಲೆಗಳ ಪುಸ್ತಕ ಇರಬೇಕು. ಜೊತೆಗೆ ಇವುಗಳ ಬಗ್ಗೆ ಅಧ್ಯಯನ ಮಾಡುವಂತಾಗಬೇಕು. ಅರೆಭಾಷೆಯಲ್ಲಿ ಉತ್ತಮ ಪುಸ್ತಕಗಳನ್ನು ಪ್ರಕಟಿಸಿರುವುದು ಶ್ಘಾಘನೀಯ ಕಾರ್ಯವಾಗಿದೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕಳೆದ 12 ವರ್ಷದಲ್ಲಿ ಸಂಶೋಧನಾ ಹೊತ್ತಿಗೆ, ಪ್ರಬಂಧ, ಲೇಖನ, ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ 80 ಕ್ಕೂ ಹೆಚ್ಚು ಪುಸ್ತಕಗಳು ಪ್ರಕಟಗೊಂಡಿವೆ. ಹಾಗೆಯೇ ತ್ರೈಮಾಸಿಕ ಪತ್ರಿಕೆ ‘ಹಿಂಗಾರ’ 34 ಸಂಚಿಕೆ ಪ್ರಕಟಗೊಂಡಿದೆ ಎಂದು…

Read More

ಮಡಿಕೇರಿ ಮಾ.1 NEWS DESK : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಖಂಡಿಸಿ, ಕಾರ್ಮಿಕ ವರ್ಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.3 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯಲಿರುವ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ “ವಿಧಾನಸೌಧ ಚಲೋ” ಅಂಗವಾಗಿ ಮಡಿಕೇರಿಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಪ್ರಚಾರ ಆಂದೋಲನ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಾವೇಶಗೊಂಡ ಸಿಐಟಿಯು ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪ್ರಚಾರ ಆಂದೋಲನಕ್ಕೆ ಚಾಲನೆ ನೀಡಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು, ಕಾರ್ಮಿಕರ ಪರವಾದ ಕಾನೂನುಗಳನ್ನು ಜಾರಿ ಮಾಡಬೇಕು, ಬೆಲೆ ಏರಿಕೆಯ ಸೂಚ್ಯಾಂಕದಲ್ಲಿ ಹೆಚ್ಚಳವಾಗುವ ಪ್ರತಿ ಅಂಶಕ್ಕೂ ಪ್ರತಿದಿನಕ್ಕೆ 6 ಪೈಸೆ ತುಟ್ಟಿಭತ್ಯೆ (ಗಿಆಂ) ಯೊಂದಿಗೆ ಸಮಾನ ಕನಿಷ್ಟ ವೇತನ ಪರಿಷ್ಕರಿಸಿ ಜಾರಿ ಮಾಡಬೇಕು, ಪ್ರತಿ…

Read More

ಮಡಿಕೇರಿ ಮಾ.1 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮಾ.7 ರಂದು ಮಂಡಿಸುವ ಬಜೆಟ್ ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಬೇಕು ಹಾಗೂ ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ‘ಕೊಡಗು ಜಿಲ್ಲೆಯ ಜನತಾ ಬಜೆಟ್-2025’ ಎಂಬ ಎಸ್‍ಡಿಪಿಐಯ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ‘ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್-2025’ ಎನ್ನುವ ಬೇಡಿಕೆಗಳ ಕೈಪಿಡಿಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದೆ ಎಂದರು. :: ಕೊಡಗು ವಿವಿ ಉಳಿಸಿ ::  ಕೊಡಗು ವಿಶ್ವ ವಿದ್ಯಾಲಯ ಸೇರಿದಂತೆ ರಾಜ್ಯದ ಒಟ್ಟು 9 ನೂತನ ವಿವಿಗಳನ್ನು ಮುಚ್ಚುವ ದೂರದೃಷ್ಟಿ ರಹಿತವಾದ ಚಿಂತನೆಯನ್ನು ಸರ್ಕಾರ ಮಾಡಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಯ ಮೂಲಕ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದ…

Read More