ಲೇಖಕ: admin

ಮಡಿಕೇರಿ NEWS DESK ಜ.17 : ಸ್ವಂತ ನೆಲೆ ಇಲ್ಲದೆ ಸಂಕಷ್ಟದ ಬದುಕು ನಡೆಸುತ್ತಿರುವ ಶೋಷಿತ ಸಮಾಜವನ್ನು ಕಡೆಗಣಿಸಿ, ಉಳ್ಳವರಿಗೆ ಅನುಕೂಲ ಕಲ್ಪಿಸಲು ಜಾರಿಗೆ ತಂದಿರುವ ‘ಭೂ ಗುತ್ತಿಗೆ ಆದೇಶ’ವನ್ನು ರಾಜ್ಯ ಸರಕಾರ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.ಸರಕಾರದ ಆದೇಶವನ್ನು ವಿರೋಧಿಸಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ನಿವೇಶನ ರಹಿತರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಭೂ ಗುತ್ತಿಗೆ ಆದೇಶವನ್ನು ಸರಕಾರ ಹಿಂತೆಗೆದುಕೊಳ್ಳದಿದ್ದಲ್ಲಿ ಮುಖ್ಯಮಂತ್ರಿಗಳ ಮನೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುವುದು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಕಳೆದ ಹಲವು ದಶಕಗಳಿಂದ ನಿವೇಶನ ರಹಿತರು ತಮಗೆ ಭೂಮಿ ನೀಡುವಂತೆ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದ ಸರಕಾರ, ಭೂ ಗುತ್ತಿಗೆ ಆದೇಶದಂತೆ ಉಳ್ಳವರಿಗೆ ಕೇವಲ 1 ಸಾವಿರ ರೂ.ಗಳಂತೆೆ…

Read More

ಮಡಿಕೇರಿ ಜ.17 NEWS DESK : ಸೋಮವಾರಪೇಟೆ ತಾಲ್ಲೂಕಿನ ಐಗೂರು ಗ್ರಾ.ಪಂ ವ್ಯಾಪ್ತಿಯ ಯಡವನಾಡು ಗ್ರಾಮದಲ್ಲಿ ರೂ.40 ಲಕ್ಷ  ವೆಚ್ಚದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 2021ರಲ್ಲಿ ಮುಂಗಾರು ಮಳೆಯ ಸಂದರ್ಭ ಕುಸಿದಿದ್ದ ಸೇತುವೆಯನ್ನು ಮರು ನಿರ್ಮಾಣ ಮಾಡುವ ಭರವಸೆಯನ್ನು ನಾನೇ ನೀಡಿದ್ದೆ,ಕೆಆರ್‌ಡಿಎಲ್ ಇಲಾಖೆ ಮುಖಾಂತರ ಅನುದಾನ ನೀಡಲಾಗಿದೆ. ಸೇತುವೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡರೆ ಅನುದಾನ ತಂದಿದಕ್ಕೂ ಸಾರ್ಥಕತೆ ಇರುತ್ತದೆ. ಗುತ್ತಿಗೆದಾರರು ಈ ಬಗ್ಗೆ ಗಮನಹರಿಸಬೇಕು. ಕಳಪೆ ಕಾಮಗಾರಿಯ ಬಗ್ಗೆ ಗ್ರಾಮಸ್ಥರಿಗೆ ಅನುಮಾನ ಬಂದರೆ ದೂರು ನೀಡಬಹುದು ಎಂದು ಹೇಳಿದರು. ಸೇತುವೆಯ ಎರಡೂ ಬದಿಯಲ್ಲಿ ತಡೆಗೋಡೆ ನಿರ್ಮಿಸಲು ಅಕ್ಕಪಕ್ಕದ ಜಾಗದ ಮಾಲೀಕರು ಸಹಕರಿಸಬೇಕೆಂದರು. ಐಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೌರಮ್ಮ, ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಗಣೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ವಲಯಾಧ್ಯಕ್ಷ ಕೆ.ಎಲ್. ಹೊನ್ನಪ್ಪ, ಪ್ರಮುಖರಾದ ರಮೇಶ್, ಮಚ್ಚಂಡ ಅಶೋಕ್, ಕೆ.ಪಿ. ದಿನೇಶ್, ಎಸ್.ಎನ್.…

Read More

ಮಡಿಕೇರಿ ಜ.17 NEWS DESK : ಬಾಳೆಲೆ ಆರೋಗ್ಯ ಕೇಂದ್ರದ ವಿಷಯವಾಗಿ ಮಹತ್ವದ ಸಭೆಯು ಬಾಳೆಲೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವೈದ್ಯಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಿ, ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಆರೋಗ್ಯ ಕೇಂದ್ರದಲ್ಲಿನ ಹಲವು ನ್ಯೂನ್ಯತೆಗಳ ಬಗ್ಗೆ ಗಂಭೀರವಾಗಿ ಮಾತನಾಡಿದ ಶಾಸಕರು, ರೋಗಿಗಳಿಗೆ ಆಗುತ್ತಿರುವ ಅನಾನುಕೂಲಗಳ ಬಗ್ಗೆ ತಮಗೆ ಬಂದ ದೂರಿನ ವಿಷಯಗಳ ಕುರಿತು ಹೇಳಿದರು.  ಇವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆರೋಗ್ಯ ಕೇಂದ್ರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸಾರ್ವಜನಿಕರ ಆರೋಗ್ಯ ಸಂಬಂಧಿತ ವಿಷಯದಲ್ಲಿ ಅತ್ಯಂತ ಗಂಭೀರವಾಗಿ ಕೆಲಸ ಮಾಡಬೇಕು. ರೋಗಿಗಳಿಗೆ ಸ್ಪಂದನೆ ನೀಡುವ ವಿಷಯದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ಇರಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯವನ್ಯ ಜೀವಿ ಮಂಡಳಿ…

Read More

ಮಡಿಕೇರಿ NEWS DESK ಜ.17 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಿಚಾರದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಶಾಸಕರ ಮಧ್ಯಸ್ಥಿಕೆಯಲ್ಲಿ ಸಧ್ಯದಲ್ಲಿಯೇ ಸೌಹಾರ್ದಯುತ ಪರಿಹಾರ ದೊರೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲಾಧಿಕಾರಿಗಳು ಫೆ.10 ರವರೆಗೆ ಗೊಂದಲ ನಿವಾರಣೆಗೆ ಕಾಲಾವಕಾಶ ನೀಡಿದ್ದಾರೆ. ಇದಕ್ಕೂ ಮೊದಲು ಅಥವಾ ನಂತರ ಎಲ್ಲಾ ಸಮುದಾಯಗಳ ನಾಯಕರುಗಳನ್ನು ಒಗ್ಗೂಡಿಸಿ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕರುಗಳು ಮುಂದಾಗಲಿದ್ದಾರೆ. ಈಗಾಗಲೇ ವಿವಿಧ ಸಂಘಟನೆಗಳು ಶಾಸಕರುಗಳನ್ನು ಭೇಟಿಯಾಗಿ ಭಿನ್ನಾಭಿಪ್ರಾಯ ಶಮನಕ್ಕೆ ಮನವಿ ಮಾಡಿಕೊಂಡಿದ್ದಾರೆ ಎಂದರು. ಇದೊಂದು ಸೂಕ್ಷ್ಮ ವಿಚಾರವಾಗಿರುವ ಕಾರಣ ಜಿಲ್ಲಾಡಳಿತದ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಶಾಂತಿಯುತ ಪರಿಹಾರ ದೊರೆಯಬೇಕು ಎನ್ನುವ ನಿರೀಕ್ಷೆ ನಮ್ಮದಾಗಿತ್ತು. ಸಧ್ಯದಲ್ಲೇ ಶಾಸಕರುಗಳು ಈ ಕುರಿತು ಸೂಕ್ತ ನಿರ್ಧಾರ ಕೈಗೊಂಡು ಉತ್ತಮ ರೀತಿಯ ಪರಿಹಾರ ದೊರೆಯುವಂತೆ ನೋಡಿಕೊಳ್ಳಲಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾ ಸಮುದಾಯದವರು ಶಾಂತಿ ಮತ್ತು ಒಗ್ಗಟ್ಟಿನಿಂದ ಜೀವನ…

Read More

ಮಡಿಕೇರಿ ಜ.17 NEWS DESK :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಉತ್ತಮ ಸಾಧನೆ ಮಾಡಿರುವ ರಾಜ್ಯಮಟ್ಟದ  ತಾಲ್ಲೂಕು ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯ್ಕೆಯಾಗಿದೆ. ರಾಜ್ಯ ಸಂಘ ಮೂಲಕ ನೀಡಲಾಗುವ ಉತ್ತಮ ಸಾಧನೆ ಮಾಡಿರುವ ತಾಲ್ಲೂಕು ಹಾಗೂ ಜಿಲ್ಲಾ ಸಂಘಗಳಿಗೆ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿದ್ದು, ಈ ತಿಂಗಳ 18 ಮತ್ತು 19ರಂದು ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮತ್ತು ರಾಜ್ಯಉಪಾಧ್ಯಕ್ಷರು  ಹಾಗೂ ಸಂಘದ ಜಿಲ್ಲಾ ಉಸ್ತುವಾರಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.  ರಾಜ್ಯದಲ್ಲಿ ಅತ್ಯುತ್ತಮ ಸಾಧನೆಗೈದ ಜಿಲ್ಲೆಗಳಾದ ಉಡುಪಿ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಂಘಗಳು ಪ್ರಶಸ್ತಿಗೆ ಭಾಜನವಾಗಿದೆ. ಉತ್ತಮ ಸಾಧನೆಗೈದ ತಾಲೂಕು ಸಂಘಗಳಾದ ಜಿಲ್ಲೆಯ ಕುಶಾಲನಗರ ಸೇರಿದಂತೆ  ನಾಗಮಂಗಲ, ಸೇಡಂ ಮತ್ತು ಜಗಳೂರು ಪತ್ರಕರ್ತರ ಸಂಘಗಳಿಗೆ…

Read More

ಮಡಿಕೇರಿ NEWS DESK ಜ.17 : ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಿತಿಯ ಪ್ರಮುಖರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಗೋವುಗಳ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸಿದರು.

Read More

ವಿರಾಜಪೇಟೆ ಜ.17 NEWS DESK :  ಕೊಡಗಿನ ಏಕೈಕ ದಂತ ವೈದ್ಯ ಸಂಸ್ಥೆಯು ಈ ಭಾಗಕ್ಕೆ ಹೆಮ್ಮೆ ನೀಡಿರುವುದು ಮಾತ್ರವಲ್ಲದೆ ಅಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ರೂಪಿಸುವುದರಲ್ಲಿ ಉತ್ತಮ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ವಿರಾಜಪೇಟೆಯ ಮಗ್ಗುಲದ ಬಳಿಯಿರುವ ಕೊಡಗು ದಂತ ಮಹಾವಿದ್ಯಾಲಯದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದ ಶಾಸಕ ಪೊನ್ನಣ್ಣ ಅವರು ಸಂಸ್ಥೆಯು ಉತ್ತಮ ರೀತಿಯಲ್ಲಿ ಮುಂದುವರೆದು ಸಮಾಜಕ್ಕೆ  ಉತ್ತಮ ವೈದ್ಯರನ್ನು ನೀಡುವುದೊಂದಿಗೆ ತಮ್ಮ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸುವಂತಾಗಲಿ ಎಂದು ಶುಭ ಹಾರೈಸಿದರು. ದಂತ ವೈಧ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಮುಂದೆಯೂ ಸ್ವಯಂ ಕಲಿಕೆ ವೃತ್ತಿಯಲ್ಲಿ ನಿರಂತರವಾಗಿ ವೈದ್ಯಕೀಯ ಲೋಕದ ಕುರಿತು ಜ್ಞಾನವನ್ನು ಹೆಚ್ಚಿಸಿಕೊಳ್ಳುವಂತಾಗಲಿ. ಯುವ ಪದವಿಧರರು ವೈಧ್ಯಕೀಯ ವೃತ್ತಿಯಲ್ಲಿ ಹೊಸ ಆವಿಷ್ಕಾರ, ಆಧುನಿಕ ಚಿಕಿತ್ಸಾ ಪದ್ದತಿಯನ್ನು ಅಳವಡಿಸಿಕೊಂಡು ಉತ್ತಮ ವೈದ್ಯರಾಗಿ…

Read More

ನವದೆಹಲಿ ಜ.17 NEWS DESK : ಮೈಸೂರಿನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ವಿಮಾನ ನಿಲ್ದಾಣ ವಿಸ್ತರಣೆ ಅತಿ ಮುಖ್ಯ. ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರಿಗೆ ಮೈಸೂರು-ಕೊಡುಗೆ ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ  ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್‌, ವಿಮಾನ ನಿಲ್ದಾಣ ವಿಸ್ತರಣೆಗೆ ಇರುವ ಸಮಸ್ಯೆಗಳು ಹಾಗೂ ಮುಂದೆ ಆಗಬೇಕಾಗಿರುವ ಕೆಲಸಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಕೇಂದ್ರ ಸಚಿವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ್‌, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ವಿಷಯವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಒತ್ತಡ ಹೇರಿ, ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಭೂಮಿ ಹಸ್ತಾಂತರ ಮಾಡಿಸುವ ಸಂಬಂಧ ಕ್ರಮ ಕೈಗೊಳ್ಳಬೇಕು…

Read More

ಮಡಿಕೇರಿ NEWS DESK ಜ.16 : ಉತ್ತರ್ ಖಂಡ್ ನ ಹರಿದ್ವಾರದಲ್ಲಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಕೊಡಗು ಜಿಲ್ಲೆಯ ಕುಶಾಲನಗರದ ರಾಧಾಕೃಷ್ಣ ಬಡಾವಣೆಯ ಹೇಮಂತ್ ಪಿ.ಆಯ್ಕೆಯಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕಬಡ್ಡಿ ಅಸೋಸಿಷನ್ ನ ಅಧ್ಯಕ್ಷ ಕಪಿಲ್ ಕುಮಾರ್ ತಿಳಿಸಿದ್ದಾರೆ. ಜ.29 ರಿಂದ ಫೆ.3 ರವರೆಗೆ ಪಂದ್ಯಾವಳಿ ನಡೆಯಲಿದ್ದು, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಷನ್ ನ ಬೆಂಗಳೂರಿನ ತರಬೇತಿ ಶಿಬಿರದಲ್ಲಿ ಹೇಮಂತ್ ತರಬೇತಿ ಪಡೆಯುತ್ತಿದ್ದಾರೆ. ಪ್ರತಾಪ್ ಹಾಗೂ ಗೀತಾ ದಂಪತಿಯ ಪುತ್ರ ಹೇಮಂತ್ ಅವರು ವಿವಿಧ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಗಮನಾರ್ಹ ಸಾಧನೆ ಮಾಡಿದ್ದಾರೆ.

Read More

ಮಡಿಕೇರಿ NEWS DESK ಜ.16 : ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಕಾರೊಂದರ ಮೇಲೆ ಕಾಡಾನೆ ದಾಳಿ ನಡೆಸಿ ಕಾರನ್ನು ಜಖಂ ಗೊಳಿಸಿರುವ ಘಟನೆ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಕಾಡಾನೆ ದಾಳಿಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ತಾಲೂಕಿನ ಬಿಳುಗುಂದ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಅಶ್ವಕ್ ಎಂಬವರು ಕುಟುಂಬ ಸಹಿತರಾಗಿ ರಾತ್ರಿ ವೇಳೆ ಕಾರಿನಲ್ಲಿ ತಿತಿಮತಿ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದರು. ತಿತಿಮತಿ ಮಜ್ಜಿಗೆ ಹಳ್ಳ ಅರಣ್ಯ ಪ್ರದೇಶದ ಸಮೀಪ ರಸ್ತೆ ಉಬ್ಬು ಇದ್ದ ಹಿನ್ನೆಲೆಯಲ್ಲಿ ಕಾರು ಚಾಲಕ ಅರ್ಫತ್ ವಾಹನದ ವೇಗವನ್ನು ಸಂಪೂರ್ಣವಾಗಿ ಕಡಿಮೆ ಮಾಡಿದ್ದಾರೆ. ಈ ವೇಳೆ ಕಾಡಾನೆ ಏಕಾಏಕಿ ಕಾರಿನ ಮೇಲೆ ದಾಳಿ ನಡೆಸಿ ಸಂಪೂರ್ಣ ಜಖಂಗೊಳಿಸಿ ಕಾಡಿನಲ್ಲಿ ಮರೆಯಾಗಿದೆ. ಈ ಘಟನೆಯಿಂದ ಅಶ್ವಕ್ ಕುಟುಂಬದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು…

Read More