ಮಡಿಕೇರಿ ಜ.16 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರಕಾರದ ವಿಶೇಷ ಅತಿಥಿಯಾಗಿ ಆಯ್ಕೆಯಾಗಿರುವ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ.ಮೊಣ್ಣಪ್ಪ, ಸದಸ್ಯರಾದ ಚೌರೀರ ಅನಿತಾ, ಗ್ರಾ.ಪಂ ಪಿಡಿಓ ಎ.ಎ.ಅಬ್ದುಲ್ಲ, ಕಾರ್ಯದರ್ಶಿ ಚಂದ್ರಶೇಖರ್, ವಿ ಎ ಒ ಸಂತೋಷ್ ಪಾಟೀಲ್ ಸಿಬ್ಬಂದಿವರ್ಗ, ಆಡಳಿತ ಮಂಡಳಿ, ಗ್ರಾಮಸ್ಥರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹೊದ್ದೂರು ಗ್ರಾ.ಪಂ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹೆಚ್.ಎ.ಹಂಸ ಎಲ್ಲರ ಒಗ್ಗಟ್ಟಿನ ಪರಿಶ್ರಮದಿಂದ ಹೊದ್ದೂರು ಗ್ರಾಮ ಪಂಚಾಯಿತಿ ರಾಷ್ಟ್ರ ಮಟ್ಟದಲ್ಲಿ ಹೆಸರುಗಳಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮತ್ತಷ್ಟು ಅಭಿವೃದ್ಧಿಯಾಗಬೇಕಿದ್ದು, ತಮ್ಮೆಲ್ಲರ ಸಹಕಾರ ಅತೀ ಮುಖ್ಯ ಎಂದು ಹೇಳಿದರು.
ಲೇಖಕ: admin
ಮಡಿಕೇರಿ ಜ.16 NEWS DESK : ಗೋ ಸಂರಕ್ಷಣಾ ಸಂವರ್ಧನಾ ಸಮಿತಿ ವತಿಯಿಂದ ಜ.17 ರಂದು ಜನಜಾಗೃತಿ ಸಭೆ ನಡೆಯಲಿದೆ. ಬೆಳಿಗ್ಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಜಾಗೃತಿ ನಡೆಯಲಿದ್ದು, ನಂತರ ಸಭೆ ನಡೆಯಲಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ. ಪ್ರತಿಭಟನೆ :: ಚಾಮರಾಜಪೇಟೆಯಲ್ಲಿ ಹಾಲು ಕೊಡುವ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಪ್ರಕರಣವನ್ನು ಖಂಡಿಸಿ, ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ 10.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.
ಮಡಿಕೇರಿ ಜ.16 NEWS DESK : ಸುಂಟಿಕೊಪ್ಪ ಸರಕಾರಿ ಆಸ್ಪತ್ರೆಯಲ್ಲಿ ಹಗಲು ಮತ್ತು ರಾತ್ರಿ ಕರ್ತವ್ಯ ನಿರ್ವಹಣೆಗೆ ಖಾಯಂ ವೈದ್ಯರುಗಳನ್ನು ನೇಮಿಸಬೇಕು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಕೊಡಗು ಜಿಲ್ಲಾ ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಸ್.ಮುತ್ತಪ್ಪ, ಕೊಡಗು ಜಿಲ್ಲೆಯ ಸುಂಟಿಕೊಪ್ಪ ಪಟ್ಟಣ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಟೀಕಿಸಿದರು. ಸುಂಟಿಕೊಪ್ಪ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳೀಯ ಸರಕಾರಿ ಆಸ್ಪತ್ರೆಯನ್ನೇ ಅವಲಂಭಿಸಿದ್ದಾರೆ. ಆದರೆ ಆಸ್ಪತ್ರೆಯನ್ನು ಖಾಯಂ ವೈದ್ಯರ ಕೊರತೆ ಕಾಡುತ್ತಿದೆ, ರಾತ್ರಿ ವೇಳೆ ಯಾವುದೇ ವೈದ್ಯರು ಲಭ್ಯವಿಲ್ಲ. ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಪ್ರವಾಸಿಗರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿರುತ್ತವೆ. ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆ ತಂದರೆ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಶುಶ್ರೂಷಕಿಯರು ಇಲ್ಲದ ಪರಿಸ್ಥಿತಿ ಇದೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ವ್ಯವಸ್ಥೆ ಇಲ್ಲದೇ ಇರುವುದರಿಂದ ಸಾಮಾನ್ಯ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಹೋಬಳಿ ಹಂತದ ಆಸ್ಪತ್ರೆಗಳಲ್ಲಿ…
ಮಡಿಕೇರಿ ಜ.16 NEWS DESK : ಅರೆಭಾಷಿಕ ಗೌಡ ಜನಾಂಗವನ್ನು ತೇಜೋವಧೆ ಮಾಡಿದವರ ವಿರುದ್ಧ ದೂರು ನೀಡಿದ್ದರೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದನ್ನು ಖಂಡಿಸಿ ವಿವಿಧ ಗೌಡ ಸಂಘಟನೆಗಳಿಂದ ಜ.20 ರಂದು ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ಮಾತನಾಡಿ ನಗರದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಯಾವುದೇ ಘೋಷಣೆಗಳನ್ನು ಕೂಗದೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಪ್ರಚೋದನೆಯ ಹೇಳಿಕೆಗಳನ್ನು ನೀಡಿ ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು. ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಜನಾಂಗದವರು ಕಳೆದ ಅನೇಕ ವರ್ಷಗಳಿಂದ ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಾ ಬಂದಿದ್ದಾರೆ. ಪ್ರಮುಖ ಜನಾಂಗಗಳಾದ ಅರೆಭಾಷಿಕ ಗೌಡ ಹಾಗೂ ಕೊಡವ ಜನಾಂಗದ ಮಂದಿ ಅತ್ಯಂತ…
ಮಡಿಕೇರಿ ಜ.16 NEWS DESK : ಬೆಳಗಾವಿ ಜಿಲ್ಲೆಯ ಅಜೂರ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಗೆ ಕೃಪಾ ದೇವರಾಜ್ ಅವರ ಮರ್ಮರ ಕಥಾ ಸಂಕಲನ ಆಯ್ಕೆಯಾಗಿದೆ. ರಾಜ್ಯದ 8 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕೃಪಾ ದೇವರಾಜ್ ಕೂಡಾ ಒಬ್ಬರಾಗಿದ್ದು, ಜ.26 ರಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಂ.ಕಾಂ ಪದವಿಯ ನಂತರ ಮಡಿಕೇರಿಯ ಖಾಸಗಿ ಕಂಪನಿಯ ಉದ್ಯೋಗಿ ಆಗಿರುವ ಕೃಪ ದೇವರಾಜ್ ಕಥಾಸಂಕಲನ, ಕವನ ಸಂಕಲನ, ಲೇಖನಗಳು ಇತ್ಯಾದಿ ಕನ್ನಡ ಸಾಹಿತ್ಯದಲ್ಲಿ ಈಗಾಗಲೇ ಗುರುತಿಸಿಕೊಂಡಿದ್ದಾರೆ. ಪತ್ರಿಕೆಗಳಲ್ಲಿ ಕಥೆ, ಕವನ, ಲೇಖನ, ಲಲಿತ ಪ್ರಬಂಧ ಚುಟುಕುಗಳು ಪ್ರಕಟವಾಗಿರುವುದರ ಜೊತೆಗೆ ಭಾವದ ಕದ ತಟ್ಟಿ(ಕವನ ಸಂಕಲನ), ಮರ್ಮರ(ಕಥಾ ಸಂಕಲನ), ಚೌಚೌ ಬಾತ್(ಲಲಿತ ಪ್ರಬಂಧಗಳು), ಕಾರ್ಪಣ್ಯದ ಹೂವು (ಕವನ ಸಂಕಲನ) ಎಂಬ ಕೃತಿಗಳನ್ನು ಪ್ರಕಟಿಸಿದ್ದಾರೆ. ಕೃಪಾ ದೇವರಾಜ್ ಮಡಿಕೇರಿ ತಾಲ್ಲೂಕು ಕಚೇರಿಯ ಶಿರಸ್ತೆದಾರ ಪಿ.ಎಲ್.ದೇವರಾಜ್ ಅವರ ಪತ್ನಿ.
ಸೋಮವಾರಪೇಟೆ ಜ.16 NEWS DESK : ಆದಿಚುಂಚನಗಿರಿ ಬೃಹನ್ ಮಠ ಕೊಡಮಾಡುವ ಚುಂಚಾದ್ರಿ ಭೈರವಿ ಪ್ರಶಸ್ತಿಗೆ ಹಾನಗಲ್ಲು ನಿವಾಸಿ ಸಾಹಿತಿ ಜಲಕಾಲಪ್ಪ ಭಾಜನರಾಗಿದ್ದಾರೆ. ಜ.17 ರಂದು ನಡೆಯುವ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮಡಿಕೇರಿ ಜ.16 NEWS DESK : ವಿರಾಜಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸಂಸ್ಥೆಯು ಈ ಭಾಗಕ್ಕೆ ಹೆಮ್ಮೆ ನೀಡಿರುವುದು ಮಾತ್ರವಲ್ಲದೆ ಅಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ರೂಪಿಸುವುದರಲ್ಲಿ ಉತ್ತಮ ಕೊಡುಗೆ ನೀಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸ್ಮರಿಸಿದರು. ವಿರಾಜಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸಂಸ್ಥೆಯು ಇದೇ ರೀತಿ ಮುಂದುವರೆದು ಸಮಾಜಕ್ಕೆ ಉತ್ತಮ ವೈದ್ಯರನ್ನು ನೀಡುವುದೊಂದಿಗೆ ತಮ್ಮ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜ.16 NEWS DESK : ಸೌತ್ ಇಂಡಿಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಸೌತ್ ಏಷಿಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್ ಶಿಪ್ ನಲ್ಲಿ 5 ಕಿ.ಮೀ ದೂರದ ವಾಕ್ ರೇಸ್ ನಲ್ಲಿ 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಮಡಿಕೇರಿಯ ಎಡಿಕೇರಿ ಎನ್.ವಿಶಾಲಾಕ್ಷಿ ಅವರು ಪ್ರಥಮ ಬಹುಮಾನ ಗೆದ್ದಿದ್ದಾರೆ. ಇವರು ದಿ.ಎಡಿಕೇರಿ ನರೇಶ್ ಅವರ ಪತ್ನಿಯಾಗಿದ್ದು, ಬಾಲ್ಯದಿಂದಲೇ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿ ಹಲವು ಪದಕಗಳನ್ನು ಗೆದ್ದು ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಹಿಂದೆ ಎಡಿಕೇರಿ ವಿಶಾಲಾಕ್ಷಿ ಅವರು ಗೃಹ ರಕ್ಷಕ ದಳದಲ್ಲಿ ಕೂಡ ಕರ್ತವ್ಯ ನಿರ್ವಹಿಸಿದ್ದಾರೆ.
ಮಡಿಕೇರಿ ಜ.20 NEWS DESK : ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳು ಮತ್ತು…
ನಾಪೋಕ್ಲು ಜ.16 NEWS DESK : ಪ್ರತಿಯೊಬ್ಬ ವ್ಯಕ್ತಿಯೂ ಭಾರತೀಯ ಸೇನೆಯ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ಮೈಸೂರಿನ ಕೊಡಗು ಗೌಡ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ ಹೇಳಿದರು. ಮೈಸೂರಿನ ಕೊಡಗು ಗೌಡ ಮಾಜಿ ಸೈನಿಕರ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ನಡೆದ ಹೊಸ ವರ್ಷಾಚರಣೆ ಹಾಗೂ ಸಂತೋಷ ಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಅಗ್ನಿವೀರ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಸೈನಿಕರಾಗಿ ದೇಶ ಸೇವೆಯಲ್ಲಿ ತೊಡಗುವ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ದೇಶಭಕ್ತಿ ಮೂಡಿಸುವ, ಹಾಗೂ ಸೈನಿಕರ ತ್ಯಾಗ ಬಲಿದಾನಗಳಿಗೆ ಸಂಬಂಧಿಸಿದ ಹಾಡು ಮತ್ತು ನೃತ್ಯಗಳನ್ನು ಪ್ರಸ್ತುತ ಪಡಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅತಿ ಹಿರಿಯರನ್ನು ಹಾಗೂ ನಿವೃತ್ತಿ ಹೊಂದಿದ ಯೋಧರನ್ನು ಸನ್ಮಾನಿಸಲಾಯಿತು. ಅಲ್ಲದೇ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಯೋಧರ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು. ಸಂಘದ ಸ್ಥಾಪಕ…






