ಲೇಖಕ: admin

ನಾಪೋಕ್ಲು ಜ.16 NEWS DESK : ಚಂಡೀರ ದೀಪ್ತಿ ಜನಾರ್ದನ ಪಿ.ಹೆಚ್.ಡಿ ಪದವಿಗೆ ಭಾಜನರಾಗಿದ್ದಾರೆ. ರಶ್ಮಿ ಅವರ ಸಂಶೋಧನಾ ಪ್ರಬಂಧ “ಅನುವಾದ ಸಂಸ್ಕೃತಿಯಲ್ಲಿನ ಸವಾಲುಗಳು” (ಚಾಲೆಂಜರ್ಸ್ ಇನ್ ಟ್ರಾನ್ಸ್ಲೇಟಿಂಗ್ ಕಲ್ಚರ್) ಗೆ ಮೈಸೂರಿನ ಅಮೃತ ವಿಶ್ವವಿದ್ಯಾಪೀಠವೂ ಪಿ.ಹೆಚ್‍ಡಿ ಪ್ರದಾನ ಮಾಡಿದೆ. ದೀಪ್ತಿ ಪ್ರಸ್ತುತ ಬೆಂಗಳೂರಿನ ಅಮೃತ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿ ಸಹಾಯಕ ಪೆÇ್ರಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಪರ್ಲಕೋಟಿ ಹರಿಣಿ ಮತ್ತು ಜನಾರ್ದನ ದಂಪತಿಗಳ ಪುತ್ರಿ. ಕಕ್ಕಬೆ ಗ್ರಾಮ ಪಂಚಾಯಿತಿಯ ಮರಂದೋಡ ಗ್ರಾಮದ ಚಂಡೀರ ರವಿ (ಇಂಜಿನಿಯರ್) ಅವರ ಪತ್ನಿ. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಜ.16 NEWS DESK : ಮಡಿಕೇರಿ-ಭಾಗಮಂಡಲ ಮುಖ್ಯ ರಸ್ತೆಯ ದುರಸ್ತಿ ಕಾಮಗಾರಿಯು ಆರಂಭಗೊಂಡಿದೆ. ಸ್ಥಳೀಯ ನಿವಾಸಿಗಳಲ್ಲದೆ ದಿನಕ್ಕೆ ಸಾವಿರಾರು ಪ್ರವಾಸಿಗರು ಓಡಾಡುವ ಈ ರಸ್ತೆಯು ತೀವ್ರ ಮಳೆಯಿಂದ ಹಾನಿಗೀಡಾಗಿದ್ದು, ಶ್ರೀ ಕಾವೇರಿ  ಜಾತ್ರೆ ಸಂದರ್ಭ ಇದರ ದುರಸ್ತಿ ಕಾರ್ಯ ಕೈಗೊಂಡಿದ್ದರೂ, ಆ ಸಂದರ್ಭದಲ್ಲಿ ಸುರಿದ ಮಳೆಯ ಕಾರಣ ಅದು ಪರಿಪೂರ್ಣವಾಗಿರಲಿಲ್ಲ. ಇದನ್ನು ಮನಗಂಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಳೆ ಕಡಿಮೆ ಆಗಿರುವುದರಿಂದ ದುರಸ್ತಿ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ.  ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಶೀಘ್ರದಲ್ಲಿ ಮುಗಿಸಿ ಕೊಡುವುದಾಗಿ ಅಧಿಕಾರಿಗಳು ಸ್ಥಳೀಯರಿಗೆ ತಿಳಿಸಿದ್ದಾರೆ.  

Read More

ಮಡಿಕೇರಿ ಜ.16 NEWS DESK : ಭಾಗಮಂಡಲ ನಾಡು ಐಯಂಗೇರಿ ಗ್ರಾಮದ ಶ್ರೀ ಚಿನ್ನತಪ್ಪ ದೇವಾಲಯದ ವಾರ್ಷಿಕ ಉತ್ಸವವು ಫೆ.21 ರಿಂದ 23ರ ವರೆಗೆ ನಡೆಯಲಿದೆ. ದೇವಾಲಯದ ತಕ್ಕಮುಖ್ಯಸ್ಥ ಮತ್ತು ಆಡಳಿತಮಂಡಳಿಯ ಜಂಟಿ ಸಭೆಯಲ್ಲಿ ಉತ್ಸವದ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು ಎಂದು ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಜ.16 NEWS DESK : ಗರಗಂದೂರಿನ ಮಲ್ಲಿಕಾರ್ಜುನ ನಗರದ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಮಕರಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಸಂಜೆ ಶ್ರೀ ಮಲಿಕಾರ್ಜುನ ಮತ್ತು ಶ್ರೀಚಾಮುಂಡೇಶ್ವರಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ನೆರವೇರಿತು. ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಮಕರ ಸಂಕ್ರಾತಿಯ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂಗಳಿಂದ ಸಿಂಗಾರಿಸಲಾಗಿತ್ತು.

Read More

ಸೋಮವಾರಪೇಟೆ NEWS DESK ಜ.15 : ಸೋಮವಾರಪೇಟೆಯ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು 13 ಮಂದಿ ಜಯಗಳಿಸಿದರು. ಸಾಮಾನ್ಯ ಕ್ಷೇತ್ರದಿಂದ ಲೋಕೇಶ್ವರಿ ಗೋಪಾಲ್, ಜಲಜಾ ಶೇಖರ್, ಕವಿತಾ ವಿರೂಪಾಕ್ಷ, ಬಿ.ಕೆ. ವಿದ್ಯಾ, ಉಮಾ, ಕೆ.ಎಸ್. ಚಂದ್ರಾವತಿ, ವರಲಕ್ಷ್ಮಿ ಸಿದ್ದೇಶ್ವರ್, ಕೆ.ಎ. ಮಂಜುಳಾ, ಜೀತಾಶ್ರೀ ಅವರುಗಳು ಗೆಲುವು ಸಾಧಿಸಿದರು. ಹಿಂದುಳಿದ ವರ್ಗ ಎ. ವಿಭಾಗದಿಂದ ಬೇಬಿ ಚಂದ್ರಹಾಸ್, ಹಿಂದುಳಿದ ವರ್ಗ ಬಿ. ವಿಭಾಗದಿಂದ ಎಸ್.ಬಿ. ಗೀತಾ, ಪರಿಶಿಷ್ಟ ಜಾತಿ ವಿಭಾಗದಿಂದ ಎಸ್.ಬಿ. ಮೀನಾಕ್ಷಿ, ಪರಿಶಿಷ್ಟ ಪಂಗಡ ವಿಭಾಗದಿಂದ ಎಚ್.ಎಂ. ರಂಜಿತ ಅವರುಗಳು ಆಯ್ಕೆಯಾದರು.

Read More

ಸೋಮವಾರಪೇಟೆ NEWS DESK ಜ.15 : ಸಂಕ್ರಾಂತಿ ಹಬ್ಬದಂದು ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಕೂತಿ ಗ್ರಾಮದ ಶ್ರೀ ಸಬ್ಬಮ್ಮ ದೇವರ ಚಾವಡಿ ಕಟ್ಟೆಯಲ್ಲಿ ಬುಧವಾರ ವಿಶೇಷ ಪೂಜೆ ನಡೆಯಿತು. ಅನಾದಿಕಾಲದಿಂದಲು ನಡೆದುಕೊಂಡು ಬಂದಂತೆ ದೇವರ ಕಟ್ಟೆಯಲ್ಲಿ ಗ್ರಾಮದ ಒಕ್ಕಲಿಗ ಮನೆತನದ ಹೇಣಿಗೆ ತಂದಿಟ್ಟು ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ಹೇಣಿಗೆ ಹೊತ್ತ ಮಹಿಳೆಯರು, ಗ್ರಾಮಸ್ತರು ದೇವರ ಕಟ್ಟೆಯ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಸಮೀಪದ ಶಾಂತಳ್ಳಿಯ ಕುಮಾರಲಿಂಗೇಶ್ವರ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದರು. ಈ ಸಂದರ್ಭ ಗ್ರಾಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಂ.ಜಯರಾಮ್, ಕಾರ್ಯದರ್ಶಿ ಯಾದವ್ ಕುಮಾರ್, ಉಪಾಧ್ಯಕ್ಷ ಕೆ. ಡಿ. ಗಿರೀಶ್, ಖಜಾಂಚಿ ಲಕ್ಷ್ಮಯ್ಯ, ಭಾನುಪ್ರಸಾದ್, ಭರತ್, ಜಿತೇಂದ್ರ, ಅರ್ಚಕ ಅನಂತರಾಮ್ ಹಾಗು ಗ್ರಾಮಸ್ಥರು ಇದ್ದರು.

Read More

ಸೋಮವಾರಪೇಟೆ NEWS DESK ಜ.15 : ವೈಕುಂಠ ಏಕಾದಶಿಯ ಪ್ರಯುಕ್ತ ಪಟ್ಟಣದ ಶ್ರೀರಾಮ ಮಂದಿರದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸೂರ್ಯಪಾದಜೀ ಸತ್ಸಂಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ದೇವರ ಸಂಕೀರ್ತನೆಯೊಂದಿಗೆ, ವೈಕುಂಠ ಏಕಾದಶಿಯ ಮಹತ್ವ, ನಾರಾಯಣ ನಾಮ ಸ್ಮರಣೆಯಿಂದ ಆಗುವ ಪ್ರಯೋಜನ, ಆಧ್ಯಾತ್ಮಿಕ ಮಾರ್ಗದಲ್ಲಿರುವ ಸುಖ ಶಾಂತಿಯ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನ ಗಾಯಕರಾದ ರಂಜನಿ ರಘು ಮತ್ತು ಅಪೆಕ್ಸ್ ಸದಸ್ಯರಾದ ರಮಾನಂದ, ಕೊಡಗು ಜಿಲ್ಲೆ ಆರ್ಟ್ ಆಫ್ ಲಿವಿಂಗ್ ಶಿಕ್ಷಕ ಸಂಯೋಜ ಕಾರ್ಯಪ್ಪ, ಮಡಿಕೇರಿಯ ಕೆ.ಡಬ್ಲೂ. ಬೋಪಯ್ಯ, ಕೃಷ್ಣ ಬೋಪಯ್ಯ, ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ ಇದ್ದರು.

Read More

ಮಡಿಕೇರಿ ಜ.15 NEWS DESK : ಮಡಿಕೇರಿಯ ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ನಡೆದ ಎಸ್.ಆರ್.ವಿ ಫುಟ್ಬಾಲ್ ಕಪ್  ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಭಗವತಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ , ಕೂರ್ಗ್ ಚಾರ್ಮಾರ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ತೃತೀಯ ಹಾಗೂ ನಾಲ್ಕನೇ ಸ್ಥಾನವನ್ನು ಫಿನಿಕ್ಸ್ ಎಫ್ ಸಿ ಮತ್ತು ಆರ್ ಆರ್ ಎಫ್ ಸಿ ತಂಡ ಪಡೆದು ಕೊಂಡಿತು.  ನಗರದ ಗಾಂಧಿ ಮೈದಾನದಲ್ಲಿ ನಡೆದ ಎಸ್.ಆರ್.ವಿ ಚಾಂಪಿಯನ್ ಲೀಗ್ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಒಟ್ಟು ಹನ್ನೆರಡು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಕೂರ್ಗ್ ಚಾರ್ಮಾರ್ಸ್ ತಂಡವು ಟೀಮ್ ಭಗವತಿ ವಿರುದ್ಧ ಪೆನಲ್ಟಿಯಲ್ಲಿ 3-1 ರ ಜಯ ಸಾದಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು. ಎಲಿಮಿನೇಟರ್ ಪಂದ್ಯವು ಫಿನಿಕ್ಸ್ ಎಫ್ ಸಿ ಹಾಗೂ ಆರ್ ಆರ್ ಎಫ್ ಸಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಫಿನಿಕ್ಸ್…

Read More

ವಿರಾಜಪೇಟೆ ಜ.15 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್, ವಿರಾಜಪೇಟೆ ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ನಡೆಯಿತು. ಮೂರ್ನಾಡು ವಲಯದ ಪಾರಣೆ ಕಾರ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ.ನಂದಿನಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಸರ ನಾಶದಿಂದ ಪ್ರಾಣಿಗಳು ನಾಶವಾಗುತ್ತಿದೆ. ಮಣ್ಣಿನ ಸವಕಳಿ ಸಮಸ್ಯೆಯಾಗಿ ಮಳೆಯ ಸಂದರ್ಭದಲ್ಲಿ ಗುಡ್ಡ ಕುಸಿತ ಮುಂತಾದ ಪ್ರವಾಹಗಳಿಗೆ ಇದು ಎಡೆ ಮಾಡಿಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ಕಾಡು ಬೆಳೆಸಿ, ನಾಡು ಉಳಿಸುವಂತಾಗಬೇಕು ಎಂದು ಕರೆ ನೀಡಿದರು. ಪಾರಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ವೇದ ಪ್ರಸಾದ್ ಪರಿಸರವನ್ನು ಹೇಗೆ ಉಳಿಸಬೇಕು, ಗಿಡಗಳನ್ನು ಬೆಳೆಸುವುದರಿಂದ ನಮ್ಮ ಪರಿಸರವನ್ನು ಹೇಗೆ ಸಮೃದ್ಧಿಗೊಳಿಸಬಹುದು ಎಂಬ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಕಿಶೋರ್, ಪದಾಧಿಕಾರಿಗಳಾದ ವನಿತಾ, ಅನಿತಾ, ಕೃಷಿ ಮೇಲ್ವಿಚಾರಕರಾದ ವಸಂತ್, ಸೇವಾ ಪ್ರತಿನಿಧಿಗಳಾದ ಸಾವಿತ್ರಿ ಮತ್ತು ದಿವ್ಯ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಜ.15 NEWS DESK : ನಗರದ ಸಂತ ಮೈಕಲರ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಕಳೆದ 3 ದಿನಗಳಿಂದ ನವೇನ ಪ್ರಾರ್ಥನೆಗಳ ಮೂಲಕ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮಂಗಳವಾರ ಸಂಜೆ ದಿವ್ಯ ಬಲಿಪೂಜೆ ನಡೆಯಿತು. ಪ್ರಧಾನಯಾಜಕರಾದ ಫಾ.ಮೈಕಲ್ ಮರಿ ಹಬ್ಬದ ಬಲಿಪೂಜೆ ನೆರವೇರಿಸಿದರು. ಕುಶಾಲನಗರ, ಅಬ್ಬೂರುಕಟ್ಟೆ, ಸೋಮವಾರಪೇಟೆ, ಮಾದಾಪುರ, ಹಟ್ಟಿಹೊಳೆ, ತಾಳತ್‌ಮನೆ ಸೇರಿದಂತೆ ವಿವಿಧ ದೇವಾಲಯಗಳ ಧರ್ಮಗುರುಗಳು ಪಾಲ್ಗೊಂಡಿದ್ದರು. ನೂರಾರು ಭಕ್ತರು ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾತ್ರಿ ವಿದ್ಯುತ್ ಅಲಂಕೃತ ಮಂಟಪದಲ್ಲಿ ಸಂತ ಮೈಕಲರ ಪ್ರತಿಮೆಯ ಮೆರವಣಿಗೆ ನಡೆಯಿತು. ಭಕ್ತರು ಉರಿಯುತ್ತಿದ್ದ ಮೇಣದ ಬತ್ತಿ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ದೇವಾಲಯದಿಂದ ಹೊರಟ ಮೆರವಣಿಗೆ ಮಂಗೇರೀರ ಮುತ್ತಣ್ಣ ವೃತ್ತ, ಸ್ಕ್ವಾಡರ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಚೌಕಿವರೆಗೆ ಸಾಗಿ ಮತ್ತೆ ಅದೇ ರಸ್ತೆ ಮೂಲಕ ದೇವಾಲಯಕ್ಕೆ ಹಿಂತಿರುಗಿತು. ಬಳಿಕ ದೇವಾಲಯದಲ್ಲಿ ಆರಾಧನೆ ನಡೆಯಿತು. ನಂತರ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು.…

Read More