ಮಡಿಕೇರಿ ಜ.1 NEWS DESK : ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಸೇವಾ ಘಟಕದ ವತಿಯಿಂದ ಅಧಿವಕ್ತಾ ಪರಿಷತ್, ದಕ್ಷಿಣ ಪ್ರಾಂತ, ಕೊಡಗು ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಗಾಳಿಬೀಡು ಪಿಎಂ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಹಾಗೂ ಕಾನೂನು ಸೇವಾ ಘಟಕದ ವಿದ್ಯಾರ್ಥಿ ಸಂಯೋಜಕ ಸೂರ್ಯನಾರಾಯಣ ಹೆಗ್ದೆ ‘ಪೋಕ್ಸೋಕಾಯ್ದೆ’ ಮತ್ತು ‘ಸೈಬರ್ಅಪರಾಧಗಳು’ ಕುರಿತು ಉಪನ್ಯಾಸ ನೀಡಿದರು. ಅಂತಿಮ ವರ್ಷದ ವಿದ್ಯಾರ್ಥಿ ಜ್ಞಾನೇಶ್ ಪಿ.ಎಸ್ ‘ಮೋಟಾರು ವಾಹನಗಳ ಕಾಯ್ದೆ’ ವಿಷಯಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಗಾಳಿಬೀಡು ಪಿಎಂ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ದಿನೇಶ್, ಅಧಿವಕ್ತಾ ಪರಿಷತ್, ದಕ್ಷಿಣ ಪ್ರಾಂತದ ಕೊಡಗು ಜಿಲ್ಲಾಧ್ಯಕ್ಷ ಮೋಹನ ಕುಮಾರ್ ಜಿಲ್ಲಾ ಕಾರ್ಯದರ್ಶಿ ಶಶಿಕುಮಾರ್ ಕಲ್ಲೂರಾಯ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಜೆ.ಬಾಳಿಗ ಹಾಗೂ ಗೆಸ್ಟ್ ಲೆಕ್ಚರ್ಸ್ ಘಟಕದ ವಿದ್ಯಾರ್ಥಿ ಸಂಯೋಜಕಿ ದೀಪ್ತಿ…
ಲೇಖಕ: admin
ಮಡಿಕೇರಿ ಜ.1 NEWS DESK : ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಸೇವಾ ಘಟಕದ ವತಿಯಿಂದ ಅಧಿವಕ್ತಾ ಪರಿಷತ್, ದಕ್ಷಿಣ ಪ್ರಾಂತ, ಕೊಡಗು ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಗೋಣಿಕೊಪ್ಪಲಿನ ಲಯನ್ಸ್ ಪಿಯು ಕಾಲೇಜ್ ನಲ್ಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಜೆ.ಬಾಳಿಗ ಅವರು ‘ಪೋಕ್ಸೋಕಾಯ್ದೆ’ ಮತ್ತು ‘ಸೈಬರ್ಅಪರಾಧಗಳ’ ಕುರಿತು ಉಪನ್ಯಾಸ ನೀಡಿದರು. ಕಾನೂನು ವೃತ್ತಿಯಲ್ಲಿನ ಉದ್ಯೋಗಾವಕಾಶಗಳ ಕುರಿತು ಅಂತಿಮ ವರ್ಷದ ವಿದ್ಯಾರ್ಥಿ ಹಾಗೂ ಗೆಸ್ಟ್ ಲೆಕ್ಚರ್ಸ್ ಘಟಕದ ವಿದ್ಯಾರ್ಥಿ ಸಂಯೋಜಕಿ ದೀಪ್ತಿ ದೇವಯ್ಯ ಅವರು ಉಪನ್ಯಾಸ ನೀಡಿ ಮಾತನಾಡಿದರು. ವೇದಿಕೆಯಲ್ಲಿ ಅಧಿವಕ್ತಾ ಪರಿಷತ್, ದಕ್ಷಿಣ ಪ್ರಾಂತದ ಕೊಡಗು ಜಿಲ್ಲಾ ಕಾರ್ಯದರ್ಶಿ ಶಶಿಕುಮಾರ್ ಕಲ್ಲೂರಾಯ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸೂರ್ಯನಾರಾಯಣ ಹೆಗ್ದೆ ಹಾಗೂ ವಿದ್ಯಾರ್ಥಿ ಸಂಯೋಜಕ ಜ್ಞಾನೇಶ್ ಪಿ.ಎಸ್ ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜ.1 : ದೇಶದ ಹಲವು ರಾಜ್ಯ ಮತ್ತು ಅನೇಕ ಜಿಲ್ಲೆಯಲ್ಲಿರುವ ತುಳು ಭಾಷಿಕ ಸಂಘಗಳ ಮಾತೃ ಸಂಘ ಅಖಿಲ ಭಾರತ ತುಳು ಒಕ್ಕೂಟಕ್ಕೆ ಕೊಡಗು ಜಿಲ್ಲೆಯ ಮೂವರನ್ನು ಕಾರ್ಯಕಾರಿ ಸಮಿತಿಯ ಪ್ರತಿನಿಧಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಅಧ್ಯಕ್ಷ ಬಿ.ಬಿ.ಐತ್ತಪ್ಪ ರೈ, ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ ಮತ್ತು ಕೂಟದ ಖಜಾಂಚಿ ಪ್ರಭು ರೈ ಅವರನ್ನು ಅಖಿಲ ಭಾರತ ತುಳು ಒಕ್ಕೂಟದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ನಾಪೋಕ್ಲು ಜ.1 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದ ಜೊತೆಗೆ ಉತ್ತಮ ಗುಣನಡತೆಗಳನ್ನು ರೂಢಿಸಿಕೊಂಡು ಸಮಾಜದ ಉತ್ತಮ ಪ್ರಜೆಗಳಾಗಬೇಕು ಎಂದು ಸೋಮವಾರಪೇಟೆ ಗ್ರೀನ್ ಲ್ಯಾಂಡ್ ಎಸ್ಟೇಟ್ ನ ಮಾಲೀಕ ಬಿದ್ದಾಟಂಡ ಪವನ್ ಮುತ್ತಪ್ಪ ಹೇಳಿದರು. ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವ್ಯಾವಹಾರಿಕ ಜ್ಞಾನ ಬೆಳೆಸಿಕೊಳ್ಳಬೇಕು ಎಂದ ಅವರು ಇಂಗ್ಲೀಷ್ ಭಾಷೆ ಕಲಿಕೆಗೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಗಮನ ಹರಿಸಬೇಕು ಎಂದರು. ನಿವೃತ್ತ ಪ್ರಾಂಶುಪಾಲ, ಶಾಲೆಯ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಪ್ರೌಢ ಶಿಕ್ಷಣವನ್ನು ಹೊಂದಿದ ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಹೊಂದುವಲ್ಲಿ ಪೋಷಕರ ಪಾತ್ರ ಮುಖ್ಯ. ಪೋಷಕರ ಸಹಕಾರದಿಂದ ವಿದ್ಯಾಸಂಸ್ಥೆಯಲ್ಲಿ ಉತ್ತಮ ವಿದ್ಯಾರ್ಥಿಗಳು ರೂಪಗೊಂಡು ಶಾಲೆಗೆ ಕೀರ್ತಿ ಬರುವಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಹಲವು ವರ್ಷಗಳಿಂದ…
ಮಡಿಕೇರಿ ಜ.1 NEWS DESK : ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಹಾಗೂ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಎನ್.ಎ.ರವಿ ಬಸಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನಗರದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಹಕಾರ ಭವನದ ಸಭಾಂಗಣದಲ್ಲಿ ನಡೆದಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ, ಗ್ರಾಹಕರ ಮತ್ತು ವಿವಿಧೊದ್ಧೇಶ ಸಹಕಾರ ಸಂಘ, ಜೇನು ಮಾರಾಟ ಸಹಕಾರ ಸಂಘ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯನಿರ್ವಾಹಕರಿಗೆ ವಿವಿಧ ರೀತಿಯ ತೆರಿಗೆಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಸೈಬರ್ ಭದ್ರತೆ ಮತ್ತು ವ್ಯಾವಹಾರಿಕ ಸಂವಹನೆ ಕುರಿತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರು ಕಾಯ್ದೆ, ಕಾನೂನು, ತೆರಿಗೆ, ಲೆಕ್ಕಪರಿಶೋಧನೆ ಇತ್ಯಾದಿ ಮಾಹಿತಿ ಇಲ್ಲದೆ ಆಡಳಿತ ನಡೆಸುವುದರಿಂದ ಸಂಘವು ನಷ್ಟವನ್ನು ಅನುಭವಿಸುತ್ತದೆ.…
*ಹೊಸ ವರ್ಷ ಹರ್ಷ ತರಲಿ, ಶಾಂತಿ, ಸಮೃದ್ಧಿ ನಿಮ್ಮದಾಗಲಿ*
*ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಸರ್ವರಿಗೂ ಸಮೃದ್ಧಿ ಸಿಗಲಿ*
*ಹೊಸ ಚಿಂತನೆ ಅಭ್ಯುದಯದ ಪರಿಕಲ್ಪನೆ ನಮ್ಮದಾಗಲಿ*
*ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು*
*ಸರ್ವರಲ್ಲಿ ಹೊಸ ವರ್ಷ ಹೊಸ ಭರವಸೆಗಳನ್ನು ಮೂಡಿಸಲಿ*






