ಲೇಖಕ: admin

ಕಣಿವೆ ಫೆ.10 NEWS DESK : ಮಡಿಕೇರಿ ಅರಣ್ಯದ ಮೇಲೆ ನಗರೀಕರಣದ ಪರಿಣಾಮ ಎಂಬ ಪ್ರಬಂಧಕ್ಕೆ ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹೆಚ್.ಎ.ಚಿಂತನಾ ಗೆ ಹರಿಯಾಣದ ಅಮೇಥಿ ವಿಶ್ವವಿದ್ಯಾಲಯ ಒಂದು ಲಕ್ಷ ರೂಗಳ ನಗದು ನೀಡಿ ಗೌರವಿಸಿದೆ. ಕುಶಾಲನಗರದ ಉದ್ಯಮಿ ಹೆಚ್.ಎಸ್.ಅಶೋಕ್ ಹಾಗೂ ಸುಮಾ ದಂಪತಿಗಳ ಪುತ್ರಿಯಾಗಿರುವ ಚಿಂತನಾ ಹರಿಯಾಣದ ಅಮೇಥಿಯ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪ್ಲಾನಿಂಗ್ ಅರ್ಬನ್ ಹಾಗೂ ರೀಜನಲ್ ಎಂಬ ಕೋರ್ಸ್ ಪೂರ್ಣಗೊಳಿಸಿದ್ದು, ಇಡೀ ವಿಶ್ವವಿದ್ಯಾಲಯಕ್ಕೆ ಮೊದಲ ಸ್ಥಾನದಲ್ಲಿ ಸಾಧನೆ ತೋರಿದ ಕಾರಣ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗಾಳಿಬೀಡು ನವೋದಯ ಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದ ಚಿಂತನಾ, ಮಂಗಳೂರಿನ ನಿಟ್ಟೆ ಕಾಲೇಜಿನಲ್ಲಿ ಬಿಇ ಆರ್ಟಿಟೆಕ್ಚರ್ ಪದವಿ ಪೂರೈಸಿದ್ದರು. ಬಳಿಕ ಹರಿಯಾಣದ ಅಮೇಥಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳ ಉನ್ನತ ಶಿಕ್ಷಣದಲ್ಲಿ ಪ್ರಥಮ ಹಂತದಲ್ಲಿ ತೇರ್ಗಡೆಯಾದ ಕಾರಣ ದೆಹಲಿಯ ಮನೇಕ್ಷಾ ಸೆಂಟರ್ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರ ಸಾಧನೆಗೆ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.

Read More

ನಾಪೋಕ್ಲು ಫೆ.10 NEWS DESK : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹೊದ್ದೂರು ಗ್ರಾ.ಪಂಯ ಹೊದವಾಡ ಗ್ರಾಮದ ರಾಫಲ್ಸ್ ಇಂಟನ್ರ್ಯಾಷನಲ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿಗಳು ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಮುಖ್ಯ ಕಾರ್ಯದರ್ಶಿ ರಫೀಕಲಿ ಕುಂಡಂಡ ಕುಂಜಿಲ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ, ಪಾರಿತೋಷಕ ಮತ್ತು ನಗದು ನೀಡಿ ಗೌರವಿಸಿದರು. ಅಲ್ಲದೇ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಂಸನಾ ಪತ್ರ ಹಸ್ತಾಂತರಿಸಿದರು. ಕಾರ್ಯಕ್ರಮಕ್ಕೆ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಕೆಡುಕುಗಳ ಬಗ್ಗೆ ಮತ್ತು ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕುಂಜಿಲ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಉಪಾಧ್ಯಾಯರಾದ ಗಂಗಮ್ಮ,…

Read More

https://www.youtube.com/watch?v=BYsC2nQ2Lpc&authuser=0 ಮಡಿಕೇರಿ NEWS DESK ಫೆ.9 : ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೂಚನೆ ನೀಡಿದ್ದಾರೆ. ಶಾಸಕರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಅವರು ಆಸ್ಪತ್ರೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಲಭಿಸಬೇಕು, ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಚಿಕಿತ್ಸೆಗಾಗಿ ಬಂದ ಸಾರ್ವಜನಿಕರ ಆರೋಗ್ಯ ವಿಚಾರಿಸಿದ ಶಾಸಕರು, ವೈದ್ಯ ಡಾ.ಜಮೀರ್ ಅಹಮ್ಮದ್ ಅವರೊಂದಿಗೆ ಆಸ್ಪತ್ರೆಯ ಪ್ರತಿ ವಿಭಾಗಗಳಿಗೆ ತೆರಳಿ ಮಾಹಿತಿ ಪಡೆದರು. ಒಳರೋಗಿಗಳ ಬಳಿಗೆ ಹೋದ ಅವರು ಚಿಕಿತ್ಸೆಯ ಕುರಿತು ವಿಚಾರಿಸಿದರು. ಸೋಮವಾರಪೇಟೆ ಪ.ಪಂ ನಾಮ ನಿರ್ದೇಶಿತ ಸದಸ್ಯ ಡಿ.ಯು.ಕಿರಣ್ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ NEWS DESK ಫೆ.9 : ಮಡಿಕೇರಿ ನಗರ ಪೋಲೀಸ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ಹುಲಗೂರು ಠಾಣೆಗೆ ವರ್ಗಾವಣೆಯಾಗಿರುವ ಲೋಕೇಶ್ ಅವರನ್ನು ನಗರದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ಆತ್ಮೀಯವಾಗಿ ಬೀಳ್ಕೊಟ್ಟರು. ನಗರ ಠಾಣೆಯಲ್ಲಿ ಲೋಕೇಶ್ ಅವರನ್ನು ಸನ್ಮಾನಿಸಿ ಗೌರವಿಸಿದ ಪ್ರಮುಖರು ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ ಲೋಕೇಶ್ ಅವರು 2023 ರಲ್ಲಿ ಮಡಿಕೇರಿ ನಗರ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡು ಜನಸ್ನೇಹಿ ಅಧಿಕಾರಿಯಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದರು. ವಿಶ್ವವಿಖ್ಯಾತ ಮಡಿಕೇರಿ ದಸರಾ ಸೇರಿದಂತೆ ಅನೇಕ ಜನದಟ್ಟಣೆಯ ಕಾರ್ಯಕ್ರಮಗಳ ಸಂದರ್ಭ ಲೋಕೇಶ್ ಹಾಗೂ ಅವರ ಸಿಬ್ಬಂದಿಗಳ ತಂಡ ಉತ್ತಮ ರೀತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಆದ್ದರಿಂದ ಅವರನ್ನು ಆತ್ಮೀಯವಾಗಿ ಬೀಳ್ಕೋಡುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.…

Read More

ಮೈಸೂರು NEWS DESK ಫೆ.9 : ಪ್ರಾಚೀನ ಕಲೆಯಾದ “ಯೋಗಕ್ಕೆ” ನಮ್ಮ ಮೈಸೂರು ಮಹಾರಾಜರು ಹೆಚ್ಚು ಆದ್ಯತೆ ನೀಡಿ, ಬೆಳವಣಿಗೆಗೆ ಕಾರಣಕರ್ತರಾಗಿದ್ದಾರೆ. ಮೈಸೂರು ಯೋಗದ ರಾಜಧಾನಿ ಎಂಬಂತಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯನ್ನು “ಯೋಗ ಮ್ಯೂಸಿಯಂ” ಆಗಿ ಪರಿವರ್ತಿಸಬೇಕು ಎಂಬ ಪ್ರಸ್ತಾವನೆ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌  ಅವರಿಗೆ ಮೈಸೂರು ಯೋಗ ಅಸೋಸಿಯೇಷನ್‌ ಪದಾಧಿಕಾರಿಗಳು ಧನ್ಯವಾದ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಯದುವೀರ್‌, ಮೈಸೂರು ಜಿಲ್ಲಾ ಯೋಗ ಅಸೋಸಿಯೇಷನ್ ಪ್ರತಿನಿಧಿಗಳು ನನ್ನನ್ನು ಭೇಟಿಯಾಗಿ ಯೋಗ ಸಂಬಂಧಿತ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಯೋಗ ವಿಶ್ವವಿದ್ಯಾನಿಲಯ ಸ್ಥಾಪನೆ, ಮೈಸೂರಿನ ಹಿರಿಯ ಯೋಗಾಚಾರ್ಯರಾದ ಕೃಷ್ಣಮಾಚಾರ್ಯ ಪುತ್ಥಳಿ ಸ್ಥಾಪನೆ, ಮೈಸೂರಿನ ಹಿರಿಯ ಯೋಗಾಚಾರ್ಯ ಪಟ್ಟಾಭಿ ಜೋಯಿಸರ ಪುತ್ಥಳಿ ಇಲ್ಲವೇ ರಸ್ತೆ ಅಥವಾ ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡುವುದು,…

Read More

ಕುಶಾಲನಗರ NEWS DESK ಫೆ.9 : ಕುಶಾಲನಗರದ ರಥ ಬೀದಿಯಲ್ಲಿರುವ ಗೋಲ್ಡನ್ ಟೆಂಪಲ್ ಎಂದೇ ಖ್ಯಾತಿ ಗಳಿಸಿರುವ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಸ್ಥಾನದ 11 ನೇ ವಾರ್ಷಿಕೋತ್ಸವ ಫೆ.11 ರಂದು ನಡೆಯಲಿದೆ ಎಂದು ಶ್ರೀ ವಾಸವಿ ಕನ್ನಿಕಾಪರಮೇಶ್ವರಿ ಟ್ರಸ್ಟ್ ನ ಅಧ್ಯಕ್ಷ ಬಿ.ಎಲ್.ಉದಯ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 6.30 ಕ್ಕೆ ವಾಸವಿ ಸುಪ್ರಭಾತ, 7.30 ಕ್ಕೆ ದೇವತಾ ಪ್ರಾರ್ಥನೆ, ಮಹಾಸಂಕಲ್ಪ ಗಣಪತಿ ಪೂಜೆ, ಪುಣ್ಯಾಹ, ನಾಂದಿ, ಗೋ ಪೂಜೆ, ಧ್ವಜಾರೋಹಣ, ಕಳಸ ಸ್ಥಾಪನೆ, ಪಂಚಾಮೃತ ಅಭಿಷೇಕ, 9 ಗಂಟೆಗೆ ಚಂಡಿಕಾ ಹೋಮ, ಕಲಾತ್ವತ ಹೋಮ, ಕಳಸ ಪೂಜೆ, 1 ಗಂಟೆಗೆ ಪೂರ್ಣಾಹುತಿ, ಮಹಾ ಮಂಗಳಾರತಿ ದೇವಸ್ಥಾನದ ಅರ್ಚಕರಾದ ಗಿರೀಶ್ ಭಟ್ ಮತ್ತು ಯೋಗೀಶ್ ಭಟ್ ನೇತೃತ್ವದಲ್ಲಿ ನಡೆಯಲಿದೆ. ಸಂಜೆ 6 ಗಂಟೆಯಿಂದ 7 ಗಂಟೆ ವರೆಗೆ ಆರ್ಯವೈಶ್ಯ ಮಹಿಳಾ ಮಂಡಳಿ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್ ತಿಳಿಸಿದ್ದಾರೆ. 7 ಗಂಟೆಯ ನಂತರ ದೀಪಾರಾಧನೆ, ಪ್ರಾಕಾರೋತ್ಸವ, ಮಹಾಪೂಜೆ, ಅಷ್ಟಾವಧಾನ,…

Read More

ಮಡಿಕೇರಿ NEWS DESK ಫೆ.9 : ಆದಿಮಸಂಜಾತ ಕೊಡವ ಬುಡಕಟ್ಟು ಜನರ ಸಾಂಪ್ರದಾಯಿಕ ಉಡುಪಿನ ಮಹತ್ವದ ಕುರಿತು ಕಳೆದ 35 ವರ್ಷಗಳಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಾಗೃತಿ ಮೂಡಿಸುತ್ತಲೇ ಬಂದಿದ್ದು, ನಮ್ಮ ಪ್ರಯತ್ನ ಫಲ ನೀಡಿರುವುದಕ್ಕೆ ಕೊಡವರ ಬೃಹತ್ ಪಾದಯಾತ್ರೆಯಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ ಕೊಡವರು ರಾರಾಜಿಸಿರುವುದೇ ಸಾಕ್ಷಿಯಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಫೆ.7 ರಂದು ಮಡಿಕೇರಿಯಲ್ಲಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಹಸ್ರ ಸಹಸ್ರ ಕೊಡವರು ಕೆಂಪು ತಲೆವಸ್ತ್ರ, ಕುಪ್ಯಚೇಲೆ ಮತ್ತು ಕೊಡವ ಪೊಡೆಯ ಉಡುಪಿನಲ್ಲಿ ಸಾಗುವ ಮೂಲಕ ಧೀರ ಕೊಡವರ ಗಾಂಭೀರ್ಯವನ್ನು ಪ್ರದರ್ಶಿಸಿದ್ದಾರೆ. ಇದಕ್ಕಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ ಕೊಡವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ 35 ವರ್ಷಗಳಿಂದ ಆದಿಮಸಂಜಾತ ಕೊಡವ ಲೋಕದ ಅದಮನೀಯ ಧ್ವನಿ ಮತ್ತು ಸ್ಥಿತಿ ಸ್ಥಾಪಕತ್ವದ ಚಳುವಳಿಯ ಮೂಲಕ ಸಿಎನ್‌ಸಿ ಸಂಘಟನೆ ಶ್ರಮಿಸುತ್ತಿದೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕು ಹಾಗೂ ಎಸ್‌ಟಿ ಟ್ಯಾಗ್…

Read More

ಸುಂಟಿಕೊಪ್ಪ NEWS DESK ಫೆ.8 : ದೆಹಲಿ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶನಿವಾರ ಸಂಜೆ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ಪ್ರಧಾನಿ ನರೇಂದ್ರಮೋದಿ ಪರ ಜಯಘೋಷ ಕೂಗಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿ ಸಂಭ್ರಮಿಸಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಧನು ಕಾವೇರಪ್ಪ, ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‌ ಕುಮಾರ್, ಪಕ್ಷದ ಹಿರಿಯ ಮುಖಂಡರುಗಳಾದ ಡಿ.ನರಸಿಂಹ, ಲೀಲಾವತಿ, ಶಕ್ತಿ ಕೇಂದ್ರದ ನಿಕಟಪೂರ್ವ ಅಧ್ಯಕ್ಷ ಬಿ.ಕೆ.ಪ್ರಶಾಂತ್, ಗ್ರಾ.ಪಂ.ಸದಸ್ಯೆ ವಸಂತಿ, ಪಟ್ಟೆಮನೆ ಉದಯಕುಮಾರ್, ವಿ.ಎ.ಸಂತೋಷ್, ಪ್ರಶಾಂತ್ (ಪ್ರಶು), ಕೆದಕಲ್ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

Read More

ಗೋಣೀಕೊಪ್ಪ NEWS DESK  ಫೆ.8 : ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆ ಗೋಣಿಕೊಪ್ಪ ನಗರ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟ್ಟೀರ ಕಿಲನ್ ಗಣಪತಿ, ಶಕ್ತಿ ಕೇಂದ್ರದ ಪ್ರಮುಖ ಸುರೇಶ್ ರೈ ಮುಂದಾಳತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ದೆಹಲಿ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ಮತ್ತು ತೆಲಂಗಾಣದ ಚುನಾವಣೆಗೆ ದಾರಿದೀಪವಾಗಿದೆ. ದೆಹಲಿಯಲ್ಲಿ ಬಿಜೆಪಿ 70 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 27 ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿದೆ ಎಂದು ಗುಮ್ಮಟ್ಟೀರ ಕಿಲನ್ ಗಣಪತಿ ಹೇಳಿದರು. ರಾಜ್ಯ ಬಿಜೆಪಿ ಕೃಷಿಮೋರ್ಚಾ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ಗೋಣಿಕೊಪ್ಪ ಗ್ರಾ.ಪಂ ಸದಸ್ಯರುಗಳಾದ ಕೊಣಿಯಂಡ ಬೋಜಮ್ಮ, ವಿವೇಕ್ ರಾಯ್ಕರ್, ನೂರೇರ ರತಿ ಅಚ್ಚಪ್ಪ, ಮನ್ನಕಮನೆ ಸೌಮ್ಯ ಬಾಲು, ರಾಮಕೃಷ್ಣ, ಪ್ರಮುಖರುಗಳಾದ ಚೇಂದಂಡ ಸುಮಿ ಸುಬ್ಬಯ್ಯ, ಸುಬ್ರಮಣಿ ಎಂ.ಎಸ್, ರಾಣಿ ನಾರಾಯಣ, ಪ್ರಭಾಕರ್ ನೆಲ್ಲಿತ್ತಾಯ, ಜ್ಯೋತಿ, ಮಂಜು ಮಾಯಮುಡಿ, ಸುದರ್ಶನ್ ಭಟ್,…

Read More

ಮಡಿಕೇರಿ ಫೆ.8 NEWS DESK : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಿಸಿದರು.  ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ  ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪಕ್ಷದ ಪ್ರಮುಖರಾದ ಮನು ಮಂಜುನಾಥ್, ಬೊಳ್ಳಜಿರ ಬಿ.ಅಯ್ಯಪ್ಪ ಸೇರಿದಂತೆ ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More