ಮಡಿಕೇರಿ ಜ.15 NEWS DESK : ಚಾಮರಾಜಪೇಟೆಯಲ್ಲಿ ದುರುಳರು ಹಾಲು ಕೊಡುವ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದು, ಈ ರಾಕ್ಷಸ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿರಿಯ ಸಹಕಾರಿ, ಕೃಷಿಕ ಹಾಗೂ ಗೋವು ಪ್ರಿಯ ಸೂದನ ಎಸ್.ಈರಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಂಧನಕ್ಕೊಳಗಾದ ಆರೋಪಿಯ ವಿರುದ್ಧ ಮತ್ತು ಒಟ್ಟು ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಮಗುವಿಗೆ ಹಾಲುಣಿಸುವ ತಾಯಿಯ ಸ್ಥಾನದಲ್ಲಿರುವ ಗೋಮಾತೆಯ ಮೇಲೆ ನಡೆದಿರುವ ಈ ದಾಳಿ ಇಡೀ ಮಾನವ ಸಮಾಜ ತಲೆ ತಗ್ಗಿಸುವಂತ್ತಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಸರಕಾರ ಮುಂದಿನ ದಿನಗಳಲ್ಲಿ ಜನ ಸಾಮಾನ್ಯರಿಂದ ಭಾರೀ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಹಿಂದೂಗಳು ಅಮೃತ ಸಮಾನವಾದ ಹಾಲನ್ನು ನೀಡುವ ಗೋವುಗಳನ್ನು ಪೂಜಿಸುವ ಮೂಲಕ ಅವುಗಳಿಗೆ ಸಮಾಜದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ನೀಡಿದ್ದಾರೆ. ಹಸುಗಳ ಮೇಲೆ ಈ…
ಲೇಖಕ: admin
ಚೆಟ್ಟಳ್ಳಿ ಜ.15 NEWS DESK : ಇತಿಹಾಸ ಪ್ರಸಿದ್ಧ ಚೆಟ್ಟಳ್ಳಿ ಗ್ರಾಮದ ಈರಳೆ ಶ್ರೀ ಭಗವತಿ( ಪೊವ್ವೊದಿ) ದೇವಾಲಯದ ಬಳಿ ನೂತನವಾಗಿ ನಿರ್ಮಿಸಿದ ಅರ್ಚಕರ ವಸತಿ ಗೃಹವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಮೊದಲಿಗೆ ಈರಳೆ ಶ್ರೀ ಭಗವತಿ ದೇವಿಗೆ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪೊರಿಮಂಡ ದಿನಮಣಿ ಪೂವಯ್ಯ ಸ್ವಾಗತಿಸಿ, ದೇವಾಲಯದ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ದೇವಾಲಯ ಸಮಿತಿ ವತಿಯಿಂದ ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಡಾ.ಮಂತರ್ ಗೌಡ ಮಾತನಾಡಿ ದೇವಾಲಯದ ಅಭಿವೃದ್ಧಿ ಕಾರ್ಯದ ಬಗ್ಗೆ ಶ್ಲಾಘಿಸಿದರು. ಗ್ರಾಮದ ರಸ್ತೆ, ಸೇತುವೆ, ವಿದ್ಯುತ್ ಹಾಗೂ ವಿವಿಧ ಕಾಮಗಾರಿ ಕೈಗೊಳ್ಳುವ ಬಗ್ಗೆ, ಜನರ ಸಮಸ್ಯೆ ಪರಿಹಾರಕ್ಕೆ ಸದಾ ಸಿದ್ಧನಿರುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪೊರಿಮಂಡ ದಿನಮಣಿ ಪೂವಯ್ಯ ಶಾಸಕ ಡಾ.ಮಂತರ್ ಗೌಡ , ದೇವಾಲಯದ ಅಭಿವೃದ್ಧಿಗೆ ಶ್ರಮಿಸಿದ ಪೊರಿಮಂಡ ದಿನಮಣಿ ಪೂವಯ್ಯ,…
ಕುಶಾಲನಗರ ಜ.15 NEWS DESK : ಚಿಕ್ಕತ್ತೂರು ಹಾಗೂ ದೊಡ್ಡತ್ತೂರು ಪ್ರೆಂಡ್ಸ್ ಬಳಗದ ವತಿಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ಎರಡನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಚಿಕ್ಕತ್ತೂರಿನ ಆನೆಕೆರೆ ಕ್ರೀಡಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಿತು. ಪಂದ್ಯಾವಳಿಯಲ್ಲಿ ಕೂಡಿಗೆ ಸುತ್ತಮುತ್ತಲಿನ ವಿವಿಧೆಡೆಗಳಿಂದ ಆಗಮಿಸಿದ್ದ ಹತ್ತು ಕ್ರೀಡಾ ತಂಡಗಳು ಭಾಗವಹಿಸಿದ್ದವು. ಅಂತಿಮವಾಗಿ ಸುಂದರನಗರದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಹುಮಾನ ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಎರಡನೇ ಸ್ಥಾನಕ್ಕೆ ಚಿಕ್ಕತ್ತೂರಿನ ಆರ್.ಸಿ.ಬಿ ತಂಡ, ಮೂರನೇ ಸ್ಥಾನಕ್ಕೆ ಎಸ್.ವಿ.ಕೆ ತಂಡ, ನಾಲ್ಕನೇ ಬಹುಮಾನವನ್ನು ವೀರಭದ್ರ ಕ್ರಿಕೆಟರ್ಸ್ ತಂಡ ಗಳಿಸಿತು. ಮೂರು ದಿನಗಳ ಕಾಲ ನಡೆದ ಕ್ರೀಡಾಕೂಟವನ್ನು ಚಿಕ್ಕತ್ತೂರು ಹಾಗೂ ದೊಡ್ಡತ್ತೂರು ಅವಳಿ ಗ್ರಾಮಗಳ ಸಮಾನ ಮನಸ್ಕರಾದ ಸಂತೋಷ್ ಗೌಡ, ಸುನಿಲ್ ಗೌಡ, ಕೃಷ್ಣೇಗೌಡ, ಪ್ರವೀಣ್, ಚೇತನ್ ಕುಮಾರ್, ಪುಟ್ಟೇಗೌಡ ಆಯೋಜಿಸಿದ್ದರು. ಪಂದ್ಯಾವಳಿಯ ತೀರ್ಪುಗಾರರಾಗಿ ಗುಮ್ಮನಕೊಲ್ಲಿ ಗ್ರಾಮದ ಮಣಿ, ವಸಂತ ಹಾಗೂ ಖಾದರ್ ಕಾರ್ಯನಿರ್ವಹಿಸಿದರು. ಪಂದ್ಯ ವಿಜೇತರಿಗೆ ನಗದು ಬಹುಮಾನ…
ಸುಂಟಿಕೊಪ್ಪ ಜ.15 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಡ್ಡೆಹೊಸೂರು ವಲಯದ ಕೊಡಗರಹಳ್ಳಿ ಕಾರ್ಯಕ್ಷೇತ್ರದ ಸ್ವ ಸಹಾಯ ಸಂಘಗಳ ಸದಸ್ಯರು ಸ್ವಚ್ಛತಾ ಶ್ರಮದಾನ ನಡೆಸಿದರು. ಗುಡ್ಡೆಹೊಸೂರು ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗರಹಳ್ಳಿ ಕಾರ್ಯಕ್ಷೇತ್ರದ ವತಿಯಿಂದ ಶೃದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಡಂಡೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಬೆಳೆದಿದ್ದ ಗಿಡ ಗಂಟಿಗಳನ್ನು ಕಡಿದು ಇನ್ನಿತರರ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಿದರು. ದೇವಾಲಯ ಸಮಿತಿಯ ಕಾರ್ಯದರ್ಶಿ ಶಿವನ್, ವಲಯ ಮೇಲ್ವಿಚಾರಕ ಯತೀಶ್, ಒಕ್ಕೂಟದ ಅಧ್ಯಕ್ಷೆ ಸುಜಾತ, ಜೊತೆ ಕಾರ್ಯದರ್ಶಿ ಶೋಭಾ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗರಹಳ್ಳಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹೇಮಾವತಿ, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಇದ್ದರು.
ಚೆಟ್ಟಳ್ಳಿ NEWS DESK ಜ.14 :ರಾಜಸ್ಥಾನದ ಸುತ್ತಲಿನ ಮರಳಿನ ಗುಡ್ಡಾಗಾಡಿನ ಪ್ರದೇಶದಲ್ಲಿ ಅತೀ ವೇಗದ 4×4 ರ್ಯಾಲಿ ವಾಹನಗಳ ಸಾಹಸಮಯ ರ್ಯಾಲಿ ಕ್ರೀಡೆಯ ಸ್ಪೆಷಲ್ ಬಿಲ್ಡ್ ವೆಹಿಕಲ್ ಕ್ಯಾಟಗರಿಯಲ್ಲಿ ಕೊಡಗಿನ ಅಮ್ಮತ್ತಿಯ ಉದ್ದಪಂಡ ಚೇತನ್ ಚಂಗಪ್ಪ ಪ್ರಥಮ ಸ್ಥಾನದ ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಬಿಕಾನೆಲ್ ನಲ್ಲಿ ರಾಜ್ಯಸ್ಥಾನ ಮೋಟಾರ್ ಸ್ಪೋಟ್ಸ್ ಕಬ್ಲ್ ಮೂರು ದಿನಗಳ ಕಾಲ ಅಯೋಜಿಸಿದ ಡ್ಯೂನ್ ಕ್ರಾಸ್ 5.0 ರ್ಯಾಲಿಯಲ್ಲಿ C1 C2 C3 ಹಾಗು C4 ಕ್ಯಾಟಗರಿಯನ್ನು ಆಯೋಜಿಸಲಾಗಿತ್ತು. 2.0 ಲೀಟರ್ ನ ವಾಹನದಲ್ಲಿ ಅಮ್ಮತ್ತಿಯ ಉದ್ದಪಂಡ ಚೇತನ್ ಚಂಗಪ್ಪ ಹಾಗೂ ಅರುಣಾಚಲ್ ಪ್ರದೇಶದ ಉಜ್ವಲ್ ನಮ್ಯೂಮ್ ಸ್ಪೆಷಲ್ ಬಿಲ್ಡ್ ವೆಹಿಕಲ್ ಕ್ಯಾಟಗರಿಯಲ್ಲಿ ಭಾಗವಹಿಸಿದರು. ಹೆಚ್ಚಿನ ಚಳಿಗಾಳಿಯಲ್ಲಿ ಮರಳಿನ ಧೂಳಿನ ನಡುವೆ ಅತೀ ವೇಗದಲ್ಲಿ ಧೈರ್ಯ ಹಾಗೂ ಅತ್ಯುತ್ತಮ ಸಾಹಸ ಪ್ರದರ್ಶನದ ಮೂಲಕ 10 ಹಂತಗಳಲ್ಲಿ ಡ್ರೈವರ್ ಹಾಗೂ ಕೊ-ಡ್ರೈವರಾಗಿದ್ದ ಚೇತನ್ ಚಂಗಪ್ಪ ಜೋಡಿ ಅತೀ ಕಡಿಮೆ ಸಮಯದಲ್ಲಿ ಅಂತರವನ್ನು ಮುಗಿಸುವ ಮೂಲಕ ಪ್ರಥಮ ಸ್ಥಾನದ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.…
ಮಡಿಕೇರಿ NEWS DESK ಜ.14 : ಶೋಷಿತ ಸಮೂಹಕ್ಕೆ ಸೇರಿದ ವಿದ್ಯಾರ್ಥಿಗಳು ಸಮಾಜದ ವಿವಿಧ ಸ್ತರಗಳಲ್ಲಿ ಅಧಿಕಾರವನ್ನು ಪಡೆಯಲು ಮತ್ತು ಸರಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಲು ಆಸಕ್ತರಾಗಬೇಕು. ಅಂತಹ ಹುದ್ದೆಗಳ ಮೂಲಕ ನೂರಾರು ಮಂದಿಗೆ ನೆರವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆಸ್ಪತ್ರೆಯ ಉಪಮುಖ್ಯ ವೈದ್ಯಾಧಿಕಾರಿ ಡಾ.ಹೆಚ್.ವಿ.ದೇವದಾಸ್ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಮೈತ್ರಿ ಭವನದಲ್ಲಿ ನಡೆದ 35ನೇ ವರ್ಷದ ಕಾರ್ಯಕ್ರಮ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಮತ್ತು ಸಂಸ್ಕಾರದ ಮೂಲಕ ಉತ್ತಮ ಬದುಕನ್ನು ರೂಪಿಸಿಕೊಂಡು ಈ ಸಮಾಜಕ್ಕೆ ತಮ್ಮಿಂದಾದ ಕೊಡುಗೆಯನ್ನು ನೀಡಲು ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು. ವಿದ್ಯಾರ್ಥಿಗಳು ಶಿಕ್ಷಣದ ಬಳಿಕ ಹುದ್ದೆಗಳನ್ನು ಪಡೆದುಕೊಂಡು ತಮ್ಮ ಗಳಿಕೆಯ ಒಂದಂಶವನ್ನು ಶಿಕ್ಷಣ ಪಡೆಯಲು ನೆರವು ಬಯಸುವವರಿಗೆ ನೀಡುವಂತಾಗಬೇಕು ಕರೆ ನೀಡಿದರು. ಕಳೆದ ಹಲವಾರು ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮಹತ್ತರ ಕಾರ್ಯ ಮಾಡುತ್ತಿದೆ.…
ಮಡಿಕೇರಿ NEWS DESK ಜ.14 : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಗ್ರಾಮದ ಕೂಪಾಡಿ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ. ಹಾಡಿಯ ನಿವಾಸಿ ಜೇನುಕುರುಬರ ತಮ್ಮು (64) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಅವಿವಾಹಿತರಾಗಿರುವ ಇವರು ಕುರಿ ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಭಾನುವಾರ ಎಂದಿನಂತೆ ಕುರಿ ಮೇಯಿಸಲೆಂದು ಹೋದವರು ಮರಳಿ ಹಾಡಿಗೆ ಬಂದಿರಲಿಲ್ಲ. ಸುತ್ತಮುತ್ತಲೆಲ್ಲ ಹುಡುಕಾಟ ನಡೆಸಿದರೂ ತಮ್ಮು ಅವರ ಸುಳಿವು ದೊರೆತ್ತಿರಲಿಲ್ಲ. ಇಂದು ಕೂಪಾಡಿ ಹಾಡಿಯಿಂದ ಸ್ವಲ್ಪ ದೂರದ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಕಾಡಾನೆ ದಾಳಿಯಿಂದ ಆದ ಸಾವು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಂಜೆ ಸ್ಥಳ ಪರಿಶೀಲನೆ ನಡೆಸಿ ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುಂಟಿಕೊಪ್ಪ ಜ.14 NEWS DESK : ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಪೊಂಗಲ್ (ಮಕರಸಂಕ್ರಾಂತಿ) ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಮುಂಜಾನೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು ಪೂರ್ಣಕುಂಭ ಕಳಸಕ್ಕೆ ವಿಶೇಷ ಪೂಜೆಯನ್ನು ನೇರವೇರಿಸಿದರು. ದೆವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ನಾದಸ್ವರದೊಂದಿಗೆ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆಯನ್ನು ಸಲ್ಲಿಸಿ ನಂತರ ಶ್ರೀ ಚಾಮುಂಡೇಶ್ವರಿ, ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಕ್ತರು ಪೊಂಗಲ್ಮಾಡಿ ಹಬ್ಬವನ್ನು ಸಂಭ್ರಮಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಪೊಂಗಲ್ ಆಚರಣೆಯಲ್ಲಿ ಸದಸ್ಯರಾದ ಎಸ್.ಸುರೇಶ್, ಎಸ್.ಸುಂದರೇಶ, ಎಂ.ರಾಜಾ, ಎಂ.ಗಣೇಶ, ರಾಜ, ಜಗದೀಶ, ವೆಂಕಟೇಶ, ಗಣೇಶ, ಸುಭ್ರಮಣಿ, ಮುರುಗೇಶ, ಗುಣಶೇಖರ, ಏಳುಮಲೈ ಹಾಗೂ ಶರವಣ ಇತರರು ಹಾಜರಿದ್ದರು.
ಮಡಿಕೇರಿ ಜ.14 NEWS DESK : ಕೊಡವರ ಹಕ್ಕುಗಳ ಪರ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಎಲ್ಲೂ ಶಾಂತಿಭಂಗವಾಗುವ ವರ್ತನೆಯನ್ನು ತೋರಿಲ್ಲ. ಆದ್ದರಿಂದ ವಿನಾಕಾರಣ ಹೂಡಲಾಗಿರುವ ಪ್ರಕರಣವನ್ನು ತಕ್ಷಣ ರದ್ದು ಮಾಡಬೇಕೆಂದು ಬೇಂಗ್ ನಾಡ್ ಕೊಡವ ಸಮಾಜ ಮತ್ತು ಬೇಂಗ್ನಾಡ್ ಸ್ಪೋರ್ಟ್ಸ್ ಐಂಡ್ ರಿಕ್ರಿಯೇಷನ್ ಕ್ಲಬ್ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಂಗ್ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ಬಿ.ಗಣಪತಿ ಪ್ರಕರಣ ದಾಖಲಿಸಿರುವುದು ಖಂಡನೀಯ, ಒಂದು ವೇಳೆ ನಾಚಪ್ಪ ಅವರನ್ನು ಬಂಧಿಸಿದರೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಅತ್ಯಂತ ಸೂಕ್ಷ್ಮ ಕೊಡವ ಜನಾಂಗ, ಕೊಡವರ ಭೂಮಿ, ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಮಂದ್, ಮಾನಿ, ದೇವನೆಲೆಯ ರಕ್ಷಣೆಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾನೂನಿನ ಚೌಕಟ್ಟಿನಡಿ ಎನ್.ಯು.ನಾಚಪ್ಪ ಅವರು ಶಾಂತಿಯುತವಾಗಿ ಹೋರಾಟವನ್ನು ನಡೆಸುತ್ತಾ ಬಂದಿದ್ದಾರೆ. ಕೊಡವರ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದಾರೆಯೇ ಹೊರತು ಬೇರೆ ಯಾವುದೇ ಜನಾಂಗವನ್ನು ವಿರೋಧಿಸಿಲ್ಲ, ನಿಂದಿಸಿಲ್ಲ ಮತ್ತು ಇತರರ ಆಚಾರ…
ಮಡಿಕೇರಿ ಜ.14 NEWS DESK : ಅತ್ಯಂತ ಸಂಪದ್ಭರಿತವಾದ ‘ಅರೆಭಾಷೆ’ ಮತ್ತು ಸಂಸ್ಕೃತಿಯ ಸಂರಕ್ಷಣೆಯೊಂದಿಗೆ, ಅದನ್ನು ಮತ್ತಷ್ಟು ಸುಪುಷ್ಟವಾಗಿ ಬೆಳೆಸುವ ನಿಟ್ಟಿನ ಕಾರ್ಯಗಳಿಗೆ ಸಮುದಾಯ ಬಾಂಧವರು ಹೆಚ್ಚಿನ ಸಹಕಾರ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕರೆ ನೀಡಿದರು. ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ‘ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಅರೆ ಭಾಷೆ’ ಸಂಸ್ಕೃತಿಯ ಬೆಳವಣಿಗೆಯ ನೆಲೆಯಲ್ಲಿ ಅರೆಭಾಷೆ ಅಕಾಡೆಮಿ ಕಾರ್ಯನಿರ್ವಹಿಸುವಂತದ್ದು. ಹೀಗಿದ್ದೂ ಅರೆಭಾಷೆಯನ್ನಾಡುವ ಹೆಚ್ಚ್ಚಿನವರು ಗೌಡ ಸಮೂಹಕ್ಕೆ ಸೇರಿದವರಾಗಿದ್ದಾರೆ. ಈ ನೆಲೆಯಲ್ಲಿ ಅಕಾಡೆಮಿಯು ಕೊಡಗು ಗೌಡ ಸಂಘದ ಅರೆಭಾಷಾ ಚಟುವಟಿಕೆಗಳಿಗೆ ತನ್ನ ಸಹಕಾರವನ್ನು ನೀಡುತ್ತಿದೆಯೆಂದು ತಿಳಿಸಿದರು. ಅರೆಭಾಷಾ ಅಭಿವೃದ್ಧಿಗೆ ಅಕಾಡೆಮಿ ರಚನೆಯಾಗುವುದಕ್ಕೆ ಎಷ್ಟೋ ವರ್ಷಗಳ ಹಿಂದೆಯೇ ಕೊಡಗು ಗೌಡ ವಿದ್ಯಾ ಸಂಘ ಸ್ಥಾಪನೆಯಾಗಿರುವುದಲ್ಲದೆ, ಮಕ್ಕಳ ಶಿಕ್ಷಣ…






