ಕುಶಾಲನಗರ ಜ.14 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ, ಕುಶಾಲನಗರ ಪುರಸಭೆ, ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಟ್ರಸ್ಟ್, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಉದ್ಘಾಟಿಸಿ ಶುಭ ಕೋರಿದರು. 9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರ ಡಿ ವೈ.ಎಸ್.ಪಿ.ಆರ್.ವಿ ಗಂಗಾಧರಪ್ಪ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಗಂಗಾಧರಪ್ಪ, ಸ್ವಚ್ಛತೆ ಪ್ರತಿಯೊಬ್ಬರ ಮನಸ್ಸು ಹಾಗೂ ಮನೆಮನೆಗಳಿಂದ ಆರಂಭವಾಗಬೇಕು ಪ್ರತಿಯೊಬ್ಬರಿಗೂ ಸ್ವಚ್ಛತೆಯ ಅರಿವು ಇರಬೇಕು. ಆ ಮೂಲಕ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.…
ಲೇಖಕ: admin
ಮಡಿಕೇರಿ ಜ.14 NEWS DESK : ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಗ್ರಾಮೀಣ ಕ್ರೀಡೆಗಳಿಗೆ ಸಂಬಂಧಿಸಿದ ಇಲಾಖೆ ವತಿಯಿಂದ ಅನುದಾನ ಮತ್ತು ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೆಗೋಟೆಯ ಶ್ರೀ ಬಸವೇಶ್ವರ ಯುವಕರ ಬಳಗದ ವತಿಯಿಂದ ಹಳೆಗೋಟೆ ಗ್ರಾಮದಲ್ಲಿ ನಡೆದ ಪ್ರಥಮ ವರ್ಷದ ರಾಜ್ಯ ಮಟ್ಟದ ಕರುಗಳ ಚಕ್ಕಡಿಯ ಚಕ್ರದ ಪಾಯಿಂಟ್ ಗಾಡಿ ಓಟದ ಸ್ಪರ್ಧೆಯನ್ನು ಉದ್ಘಾಟಿಸಿ ಮಾತಾನಾಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತಾನಾಡಿ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಹೆಬ್ಬಾಲೆ, ತೊರೆನೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಹೈನುಗಾರಿಕೆಗೆ ಒತ್ತು ನೀಡುವುದರ ಜೊತೆಯಲ್ಲಿ ಇಂತಹ ಗ್ರಾಮೀಣ ಪ್ರದೇಶದ ಪ್ರಮುಖ ಕ್ರೀಡೆಯಾದ ಗಾಡಿ ಓಟದ ಸ್ಪರ್ಧೆ ಗ್ರಾಮೀಣ ಯುವಕರಿಗೆ ಕ್ರೀಡಾ ಪ್ರೋತ್ಸಾಹ ನೀಡಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ…
ಮಡಿಕೇರಿ ಜ.14 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 35ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಜ.13ರ ಮುಂಜಾನೆಯಿಂದಲೇ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಶೇಕ ಇತ್ಯಾದಿ ಸೇವೆ ನಡೆಯಿತು. ಇಂದು ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಉಷಾಪೂಜೆ, ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರ ಪೂಜೆ, ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ಜರುಗಿತು. ನಂತರ ಶ್ರೀ ಕುಟ್ಟಿಚಾತನ್ ವೆಳ್ಳಾಟಂ, ಮುತ್ತಪ್ಪ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಹಾಗೂ ಶ್ರೀ ಅಯ್ಯಪ್ಪ ದೇವರ ಅಲಂಕಾರ ಪೂಜೆ, ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಸಂಜೆ 6ರಿಂದ ಭಜನೆ, 7ರಿಂದ ಅಲಂಕಾರ ಪೂಜೆ ಮತ್ತು…
ಮಡಿಕೇರಿ ಜ.14 NEWS DESK : ಇತಿಹಾಸ ಪ್ರಸಿದ್ಧ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ 66ನೇ ವಾರ್ಷಿಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತ್ತಿದ್ದು, ಜ.16 ರಂದು ಮಹಾರಥೋತ್ಸವ ಜರುಗಲಿದೆ. ಬೆಳ್ಳಿ ಬಂಗಾರ ದಿನ ಆಚರಣೆಯೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿದೆ. ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಪ್ರಾರ್ಥನಾ ಪೂಜೆ ಮಾಡುವ ಮೂಲಕ ದೇವರ ಕೈಂಕರ್ಯಗಳಿಗೆ ಚಾಲನೆ ನೀಡಿದರು. ಮಕರ ಸಂಕ್ರಮಣ ಕರುವಿನ ಹಬ್ಬದ ಅಂಗವಾಗಿ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗಿಸಲಾಗುತ್ತದೆ. ಇದರೊಂದಿಗೆ ಅಂಕುರಾರ್ಪಣ ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ, ಪ್ರಸಾದ ಸ್ವೀಕಾರ ನೆರವೇರಲಿದೆ. ಜ.15 ರಂದು ಅರಸು ಬಲ ಸೇವೆ, ಸಂಜೆ 7.30 ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಲಿದೆ. ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಜ.15 ಹಾಗೂ 16 ರಂದು ಪುರುಷರ ಹಾಗೂ ಮಹಿಳೆಯರ ಅಂತರ್ ಜಿಲ್ಲಾ ಮಟ್ಟದ ಥ್ರೋಬಾಲ್, ಕಬ್ಬಡ್ಡಿ, ಹಗ್ಗಜಗ್ಗಾಟ ಮತ್ತು ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ.…
ನಾಪೋಕ್ಲು ಜ.14 NEWS DESK : ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್.ಪಿ.ಕೆ ನಂಬರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಪೊಲೀಸ್ ಮೈದಾನದಲ್ಲಿ ನಡೆದ ಎನ್.ಪಿ.ಕೆ ವಿತರಣಾ ಕಾರ್ಯಕ್ರಮದಲ್ಲಿ ಆಟೋಗೆ ನೂತನ ಎಂ ಪಿ ಕೆ ಸ್ಟಿಕ್ಕರ್ ಅನ್ನು ಅಳವಡಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಅವರು, ಆಟೋ ಗಳಿಗೆ ಈ ಹಿಂದೆ ಎನ್.ಪಿ.ಕೆ ನಂಬರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಅದು ದುರುಪಯೋಗ ವಾಗುತ್ತಿರುವುದನ್ನು ಮನಗಂಡು ನೂತನವಾಗಿ ಎನ್.ಪಿ.ಕೆ ನಂಬರ್ ಅಳವಡಿಸಲಾಗುತ್ತಿದೆ ಎಂದರು. ಇದರಲ್ಲಿ ಕೊಡಗು ಜಿಲ್ಲಾ ಪೊಲೀಸ್ ಎಂದು ನಮೂದಿಸಲಾಗಿದ್ದು, ಸಮಸ್ಯೆಗಳಾದಲ್ಲಿ ಪತ್ತೆಗೆ ನೆರವಾಗಲಿದೆ ಎಂದು ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ರಸ್ತೆ ಕಿರಿದಾಗಿದ್ದು, ಆಟೋ ನಿಲ್ದಾಣಕ್ಕೆ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು. ಪ್ರತಿದಿನ ಆಗುತ್ತಿರುವ ವಾಹನದಟ್ಟಣೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುಗುತ್ತಿದೆ ಎಂದರು. ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಎದುರು ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು ಸಮಸ್ಯೆ…
ನಾಪೋಕ್ಲು ಜ.14 NEWS DESK : ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಉರಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಾಪೋಕ್ಲು ಸಮೀಪದ ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ (ತಮ್ಮಣಿ) ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಅಪಾರ ಪ್ರಮಾಣದ ಭತ್ತ ಮತ್ತು ಹುಲ್ಲು ನಷ್ಟ ಸಂಭವಿಸಿದೆ. ಜೊತೆಗೆ ಶೆಡ್ನಲ್ಲಿದ್ದ ಕಾರು ಸಹ ಬೆಂಕಿಯಿಂದ ಹಾನಿಗೊಳಗಾಗಿದೆ. ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿ ಇನ್ನೂ ಹೆಚ್ಚಿನ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.14 NEWS DESK : ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ರಾಜ್ಯದ 12ಗ್ರಾ.ಪಂ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ನೀಡಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆದೇಶ ಹೊರಡಿಸಿದ್ದು, ಕೊಡಗು ಜಿಲ್ಲೆಯಿಂದ ಏಕೈಕ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ದೊರೆತಿದೆ. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಎ ಹಂಸ ಕೊಟ್ಟಮುಡಿ ಅವರನ್ನು ಭಾರತ, ಸರ್ಕಾರದ ಪಂಚಾಯತ್ ರಾಜ್ಯ ಸಚಿವಾಲಯದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರ ಹಂಸ ಕೊಟ್ಟಮುಡಿ ಅವರನ್ನು ದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಯ್ಕೆ ಮಾಡಿದ್ದು, ಹಂಸ ಅವರ ಪತ್ನಿ ಹೆಚ್.ಹೆಚ್ ಸಹೀರ ಅವರಿಗೆ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಕರ್ನಾಟಕದ ಹಾವೇರಿ,ಮೈಸೂರು, ಹಾಸನ,ಮಂಡ್ಯ,ಚಿತ್ರದುರ್ಗ, ಕೊಪ್ಪಳ,ಗದಗ,ಬೀದರ್, ಹಾಗೂ ಉಡುಪಿ ಜಿಲ್ಲೆಯಿಂದ ಇಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ಕುಶಾಲನಗರ, ಜ.14 NEWS DESK : ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ “ಸಚೇತನ” ಕಾರ್ಯಕ್ರಮದಡಿ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮಾಚರಣೆ ಮೂಲಕ “ಸುಗ್ಗಿ” ಹಬ್ಬದ ಆಚರಣೆ ಮತ್ತು ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಸಂಕ್ರಾಂತಿ ಹಬ್ಬದ ಮಹತ್ವ ತಿಳಿದುಕೊಟ್ಟರು. ಮಕ್ಕಳು “ಸಂಕ್ರಾಂತಿ” ಹಬ್ಬವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಿ ಪರಸ್ಪರ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕವಾಗಿ ಸುಗ್ಗಿ ಹಬ್ಬದ ಸಲಕರಣೆಗಳನ್ನು ಇಟ್ಟು ಅಭಿನಯ ಗೀತೆಯೊಂದಿಗೆ ಸಂಭ್ರಮಿಸಿದರು. ನಂತರ ಎಲ್ಲರೂ ಸೇರಿ ಶಾಲಾ ಅವರಣದ ಹೊರಾಂಗಣದಲ್ಲಿ ಸಹ ಪಂಕ್ತಿ ಭೋಜನ ಮಾಡಿದರು. ಶಾಲಾ ಮುಖ್ಯ ಶಿಕ್ಷಕ ಹೆಚ್ ಎಂ ವೆಂಕಟೇಶ್ ರವರ ಉಸ್ತುವಾರಿಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಿ.ಎಸ್. ಜಾನಕಿ, ಸಿ.ಎಂ. ಬಬಿತ. ಪುಷ್ಪಾವತಿ, ಕೆ.ಎಸ್.ರಮ್ಯ, ಶಿಕ್ಷಕರಾದ ಎಸ್.ಕೆ.ಶಿವಾನಂದ, ಪ್ರಶಿಕ್ಷಣಾರ್ಥಿ ಕೀರ್ತನ, ಆಂಗ್ಲ ಭಾಷೆ ಶಿಕ್ಷಕಿ ರಂಜನ ಅಡುಗೆ ಸಿಬ್ಬಂದಿಗಳಾದ ವಿನುತಾ, ಮಂಜುಳಾ, ಸೇರಿದಂತೆ ಶಾಲಾ ಮಕ್ಕಳು…
ಸೋಮವಾರಪೇಟೆ ಜ.14 NEWS DESK : ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜೀವನಾದರ್ಶಗಳು ಎಲ್ಲರಿಗೂ ಬದುಕಿನ ಮಾರ್ಗವಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಯುವಕರಿಗೆ ಸ್ಫೂರ್ತಿ ತುಂಬಿದ ವಿವೇಕಾನಂದರು, ಭಾರತದ ಸಂಸ್ಕøತಿ, ಆಚಾರ-ವಿಚಾರವನ್ನು ಹೊರ ದೇಶದಲ್ಲೂ ಪಸರಿಸಿದ ಮಹಾನ್ ಸಂತ ಎಂದು ಬಣ್ಣಿಸಿದರು. ತಾನು ಸಚಿವನಾಗಿದ್ದ ಸಂದರ್ಭ ವಿವೇಕಾನಂದರ 150ನೇ ಜಯಂತಿಯಂದು ರಾಜ್ಯಾದ್ಯಂತ ಪ್ರತಿ ತಾಲ್ಲೂಕು ಮಟ್ಟದಲ್ಲಿ ಯುವ ದಿನವನ್ನಾಗಿ ಆಚರಣೆ ಮಾಡಲು ನಿರ್ದೇಶನ ನೀಡಲಾಗಿತ್ತು. ಆ ಮೂಲಕ ವಿವೇಕಾನಂದರ ಬಗ್ಗೆ ಎಲ್ಲರಿಗೂ ಪ್ರೇರಣೆ ನೀಡುವ ಕೆಲಸ ಮಾಡಲಾಗಿತ್ತು ಎಂದು ಸ್ಮರಿಸಿದ ಅವರು, ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು, ಭಾರತದ ಆಚಾರ, ವಿಚಾರ ಸಂಸ್ಕøತಿಯನ್ನು ಉಳಿಸುವ ಕೆಲಸ ಮಾಡಬೇಕು. ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ…
ಸೋಮವಾರಪೇಟೆ ಜ.14 NEWS DESK : ಕಾಫಿ ಗುಣಮಟ್ಟದ ಆಧಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಫಿಯ ಬೇಡಿಕೆ ಮತ್ತು ಬೆಲೆ ನಿರ್ಧಾರವಾಗುತ್ತದೆ ಎಂದು ಭಾರತ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅಭಿಪ್ರಾಯಿಸಿದರು. ಕಾಫಿ ಮಂಡಳಿ ಮತ್ತು ಹೆಚ್ಐಎಲ್ ಇಂಡಿಯಾ ಸಹಯೋಗದಲ್ಲಿ ಸೋಮವಾರಪೇಟೆಯ ಸಾಕ್ಷಿ ಕನ್ವೆನ್ಷನ್ ಸಭಾಂಗಣದಲ್ಲಿ ನಡೆದ ಸಮಗ್ರ ಕೀಟ ನಿರ್ವಹಣೆ ಕುರಿತು ಬೆಳೆಗಾರರಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಫಿಯ ಗುಣಮಟ್ಟವನ್ನು ಬೆಳೆಗಾರರು ನಿರಂತರವಾಗಿ ಕಾಪಾಡಿಕೊಂಡು ಬಂದರೆ ಉತ್ತಮ ಬೆಲೆ ಮತ್ತು ಬೇಡಿಕೆ ಇದ್ದೇ ಇರುತ್ತದೆ. ಭಾರತದ ಕಾಫಿ ಇಂದಿಗೂ ಬೇಡಿಕೆ ಇದೆ. ಇದೀಗ ರೋಬಸ್ಟಾ ಕಾಫಿಗೆ ಬೆಲೆ ಹೆಚ್ಚಿದ ಹಿನ್ನೆಲೆಯಲ್ಲಿ ಬೆಳೆಗಾರರು ಬೆಳೆಯ ಉತ್ಪನ್ನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದರು.ಆಧುನಿಕ ತಂತ್ರಜ್ಞಾನದ ವೇಗದಿಂದಾಗಿ ಬೆಳೆ ನಿರ್ವಹಣೆಯೂ ಕೂಡ ಸುಲಭ.ಅಗತ್ಯ ಸಂದರ್ಭಗಳಲ್ಲಿ ರೈತರು ಕಾಫಿ ಮಂಡಳಿ ಮತ್ತು ವಿಜ್ಞಾನಿಗಳಿಂದ ಸೂಕ್ತ ಮಾರ್ಗದರ್ಶನ ಪಡೆಯುವುದು ಕೂಡ ಅಗತ್ಯ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಸರಕಾರದ ರಾಸಾಯನಿಕಗಳು ಮತ್ತು…






