ಮಡಿಕೇರಿ ಫೆ.8 NEWS DESK : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಚಿಲ್ ಬಾಯ್ಸ್ ಮಡಿಕೇರಿ ಇವರ ವತಿಯಿಂದ 20ನೇ ವರ್ಷದ “ಮುಸ್ಲಿಂ ಕಪ್” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ.10ರಿಂದ 16ರ ವರೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಚಿಲ್ ಬಾಯ್ಸ್ ಸಂಸ್ಥೆಯ ಅಧ್ಯಕ್ಷ ಎಂ.ಎ.ಉನೈಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೇ ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಅಬ್ದುಲ್ ರಶೀದ್ ಎಡಪಾಲ, ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಕತ್ತೂರು, ಪ್ರಧಾನ ಕಾರ್ಯದರ್ಶಿ ಆದಂ ಎಸ್, ಉದ್ಯಮಿಗಳಾದ ಟಿ.ಪಿ.ಮಂಜೇಶ್, ಮಕ್ಬೂಲ್, ಸುಂಟಿಕೊಪ್ಪ ಯುವ ಕಾಂಗ್ರೆಸ್ ಮುಖಂಡ ಹರ್ಷದ್ ಲತೀಫ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸಮಾರೋಪ ಸಮಾರಂಭ ಫೆ.16 ರಂದು ನಡೆಯಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು…
ಲೇಖಕ: admin
ಮೈಸೂರು ಫೆ.8 NEWS DESK : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಇದರೊಂದಿಗೆ ಎರಡೂವರೆ ದಶಕಗಳ ಬಳಿಕ ದಿಲ್ಲಿ ಗದ್ದುಗೆ ಮೇಲೆ ಕಮಲ ಅರಳಿದೆ. ಈ ಬಾರಿಯ ನವದೆಹಲಿ ಚುನಾವಣೆಗೂ ಮತ್ತು ಮೈಸೂರಿಗೂ ಅವಿನಾಭಾವ ಸಂಬಂಧ ಕೂಡ ಇದೆ. ಏಕೆಂದರೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಡೆಸಿದ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಯದುವೀರ್ ಒಡೆಯರ್ ಅವರು ಕಳೆದ ವಾರ ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ತೆರಳಿದ ಸಂದರ್ಭದಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದರು. ಫೆಬ್ರವರಿ ಎರಡರಂದು ಪ್ರಚಾರ :: ನವದೆಹಲಿಯ ಪ್ರತಿಷ್ಠಿತ ರೊಹ್ತಾಸ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಜಿತೇಂದ್ರ ಮಹಾಜನ್ ಅವರ ಪರ ಪ್ರಚಾರ ನಡೆಸಿದ್ದರು. ಈ ವಿಧಾನಸಭೆ ಮತಕ್ಷೇತ್ರದ ಅಶೋಕ ಮಂಡಲದಲ್ಲಿ ಯದುವೀರ್ ಕಳೆದ ಫೆಬ್ರವರಿ ಎರಡರಂದು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದರು. ಈ ಮತ…
ಮಡಿಕೇರಿ ಫೆ.8 NEWS DESK : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕ ಮತ್ತು ಕೊಡಗು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಫೆ.9 ರಂದು ಕುಶಾಲನಗರದಲ್ಲಿ ಶ್ರೀ ಅಲ್ಲಮಪ್ರಭುಗಳ ವಿಚಾರಧಾರೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಜೆ 4.30 ಗಂಟೆಗೆ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಮಠ ಶ್ರೀ ಮಹಾಂತ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆಧ್ಯಾತ್ಮ ಚಿಂತಕರಾದ ಡಾ.ವೀಣಾ ಬನ್ನಂಜೆ ಉಪನ್ಯಾಸ ನೀಡಲಿದ್ದಾರೆ.
ಕುಶಾಲನಗರ ಫೆ.8 NEWS DESK : ಕೂಡುಮಂಗಳೂರು ಗ್ರಾ.ಪಂ ನ ಬಸವೇಶ್ವರ ಬಡಾವಣೆಯಲ್ಲಿ ಐದು ಲಕ್ಷ ರೂ.ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ಕಾಮಗಾರಿಯನ್ನು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಪರಿಶೀಲನೆ ನಡೆಸಿದರು. ಬಸವೇಶ್ವರ ಬಡಾವಣೆಯ ಕುಬೇರ ಮಣಿಮಾಲ ಅವರ ಮನೆಯಿಂದ ಜಗದೀಶ್ ಅವರ ಜಾಗದವರೆಗೆ ಐದು ಲಕ್ಷ ರೂ ವೆಚ್ಚದಲ್ಲಿ 80 ಮೀಟರ್ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದೆ. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ವಾರ್ಡ್ ಅಭಿವೃದ್ಧಿ ವಿಚಾರವಾಗಿ ಶಾಸಕರ ಬಳಿ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಶಾಸಕರು ಅನುದಾನವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ನೀಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದರು. ಈ ಸಂದರ್ಭ ಬಸವೇಶ್ವರ ಬಡಾವಣೆಯ ನಿವಾಸಿಗಳಾದ ಅಕ್ಕಮ್ಮ, ಚನ್ನಮ್ಮ, ಜೈನಾಬಿ, ಹಸೀನಾ, ಮಂಗಳ, ಶಕೀಲಾ, ಅದ್ನಾನ್ ಹಾಗೂ ಇನ್ನಿತರರು ಇದ್ದರು.
ಸುಂಟಿಕೊಪ್ಪ ಫೆ.8 NEWS DESK : ಹುಚ್ಚು ನಾಯಿಯೊಂದು ಹಸುವಿಗೆ ಕಚ್ಚಿದ ಪರಿಣಾಮ ಹಸು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ವಿಕ್ರಂ ಬಡಾವಣೆಯಲ್ಲಿ ನಡೆದಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7ನೇ ಮೈಲ್ ಗ್ರಾಮದ ವಿಕ್ರಂ ಬಡಾವಣೆಯಲ್ಲಿ ಹುಚ್ಚು ನಾಯಿಯೊಂದು ಸೇರಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಸಾಕು ನಾಯಿಗಳು ಸೇರಿದಂತೆ ಇತರೆ ಪ್ರಾಣಿಗಳನ್ನು ಕಚ್ಚಿರುವ ಸಂಶಯ ವ್ಯಕ್ತಪಡಿಸಿರುವ ನಿವಾಸಿಗಳು, ನಾಯಿಗಳ ನಿಯಂತ್ರಣಕ್ಕೆ ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮಡಿಕೇರಿ ಫೆ.8 NEWS DESK : ಮಡಿಕೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ಸಮಿತಿ ನಿಯಮಾನುಸಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲವರು ಸಮಿತಿಯ ವಿರುದ್ಧ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪ್ರೊ.ಬಿ.ಕೃಷ್ಣಪ್ಪ ಅವರು ಸ್ಥಾಪಿಸಿದ ರಾಜ್ಯಾಧ್ಯಕ್ಷ ಎಂ.ಗುರುಮೂರ್ತಿ ಶಿವಮೊಗ್ಗ ನೇತೃತ್ವದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಿ.47/1974-75 52ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಅಧಿಕೃತ ಸಂಘಟನೆಯಾಗಿದೆ. ಈ ಸಂಘಟನೆಯ ಕೊಡಗು ಜಿಲ್ಲಾ ಸಂಚಾಲಕಿಯಾಗಿ ನಾನು ಆಯ್ಕೆಯಾದಾಗಿನಿಂದ ಪ್ರತಿ ತಿಂಗಳು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಉಚಿತವಾಗಿ ಸಭೆ ಹಾಗೂ ಕಾರ್ಯಕ್ರಮಗಳನ್ನು ನಡೆಸಲು ಡಾ.ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ ಎಂದರು. ಮಡಿಕೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯ ನೇತೃತ್ವ ವಹಿಸಿರುವ ಹೆಚ್.ಎಂ.ನಂದಕುಮಾರ್ ಹಾಗೂ ಸಮಿತಿ ಸದಸ್ಯರು ನಿಯಮಾನುಸಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಹೆಚ್.ಎಲ್.ದಿವಾಕರ್ ಅವರು ವೈಯುಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು…
ಬೆಂಗಳೂರು ಫೆ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಇಂದು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಿ, ಶುಭ ಕೋರಿದರು.
ವಿರಾಜಪೇಟೆ ಫೆ.8 NEWS DESK : ನಗರದ ಮೂಲಸೌಲಭ್ಯಕ್ಕೆ ಒತ್ತು ನಿಡುವುದಕ್ಕೆ ಬದಲಾಗಿ ಕೆರೆಗಳ ಅಭಿವೃದ್ಧಿ ಹೆಸರಿನಲ್ಲಿ ಹಣವನ್ನು ವಿನಾಕಾರಣ ಪೋಲು ಮಾಡಲಾಗುತ್ತಿದೆಯೆಂದು ವಿರಾಜಪೇಟೆ ನಾಗರಿಕ ಸಮಿತಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಿಕ ಸಮಿತಿ ವಿರಾಜಪೇಟೆ ಸಂಚಾಲಕ ಡಾ.ಇ.ಆರ್.ದುರ್ಗಾಪ್ರಸಾದ್, ಸರ್ಕಾರಿ ಕೆರೆಗಳ ಸುತ್ತಮುತ್ತಲಿನ 30ಮೀ. ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ಕಾಮಗಾರಿಗಳು ಮತ್ತು ಇನ್ನಿತರ ಚಟುವಟಿಕೆಗಳಿಗೆ ಅವಕಾಶ ಇಲ್ಲದಿರುವಾಗ, ಪುರಸಭಾ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿರುವುದಾಗಿ ಅವರು ತಿಳಿಸಿದರು. ಸರ್ಕಾರವು ಸಾರ್ವಜನಿಕರ ತೆರಿಗೆ ಹಣದಿಂದ ಜನೋಪಯೋಗಿ ಕಾರ್ಯಕ್ರಮಗಳನ್ನು ರೂಪಿಸುತ್ತದೆ, ಆದರೆ ಸ್ಥಳೀಯವಾಗಿ ನಾಗರಿಕರಿಗೆ ಅನುಕೂಲವಾದ ರಸ್ತೆ, ಕುಡಿಯುವ ನೀರು, ವಿದ್ಯುತ್ ಮತ್ತು ಇನ್ನಿತರ ಮೂಲಭೂತ ಸಮಸ್ಯೆಗಳಿದ್ದರು, ಕೆರೆಗಳ ಅಭಿವೃದ್ಧಿ ಹೆಸರಿನಲ್ಲಿ ಸಾರ್ವಜನಿಕರ ಹಣ ಬಳಸುವುದು ಎಷ್ಟು ಸರಿಯೆಂದು ಪ್ರಶ್ನಿಸಿದರು. ವಿರಾಜಪೇಟೆ ನಗರದಲ್ಲಿ ಸರ್ಕಾರದ ವ್ಯಾಪ್ತಿಗೆ ಒಳಪಡುವ ಗೌರಿ ಕೆರೆ ಮತ್ತು ಛತ್ರಕೆರೆಗಳಿವೆ. ಇವುಗಳನ್ನು ಸುಂದರಗೊಳಿಸಲು ಮತ್ತು ಜೈನರಬೀದಿಯಲ್ಲಿ ಉದ್ಯಾನವನ ನಿರ್ಮಾಣಕ್ಕೆ ಒಟ್ಟು 5.79 ಕೋಟಿ ಕ್ರಿಯಾಯೋಜನೆ ತಯಾರಿಸಿ ಇದೀಗ ಕಾಮಗಾರಿಗಳು ಪ್ರಗತಿಯಲ್ಲಿದೆ.…
ಮಡಿಕೇರಿ ಫೆ.8 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕು ಕುಂದಚೇರಿ ಗ್ರಾಮದ ಅಲ್ಲಂಗಡ, ಪೊನ್ನೆಟ್ಟಿ ಹಾಗೂ ಬಾರಿಕೆ ಕುಟುಂಬಸ್ಥರ ಮನೆಗಳಿಗೆ ತೆರಳುವ ರಸ್ತೆಯನ್ನು ಪೂರ್ಣಗೊಳಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಲ್ಲಿ ಅನುದಾನದಲ್ಲಿ ಮಂಜೂರಾದ ಕಾಮಗಾರಿಯನ್ನು ಕೆ.ಆರ್.ಡಿ.ಸಿ.ಎಲ್ ಮೂಲಕ ಪೂರ್ಣಗೊಳಿಸಲಾಯಿತು. ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಸಲುವಾಗಿ ಅಲ್ಲಂಗಡ, ಪೊನ್ನೆಟ್ಟಿ ಹಾಗೂ ಬಾರಿಕೆ ಕುಟುಂಬಸ್ಥರು ಶಾಸಕರಿಗೆ ಹಾಗೂ ಅನುದಾನಕೊಡಿಸುವಲ್ಲಿ ಸಹಕರಿಸಿದ ಪಂಚಾಯಿತಿಯ ಪ್ರಮುಖರಿಗೆ ಹಾಗೂ ಪಕ್ಷದ ಪ್ರಮುಖರಿಗೆ ಕೃತಜ್ಞತೆ ಸಲ್ಲಿಸಿದರು. ನಂತರ ಮಾತನಾಡಿದ ಕುಟುಂಬಸ್ಥರು ಮಳೆಗಾಲದಲ್ಲಿ ತಮ್ಮ ಭಾಗದ ಹಿರಿಯರಿಗೆ ಹಾಗೂ ಶಾಲಾ ಮಕ್ಕಳಿಗೆ ಓಡಾಡಲು ಈ ರಸ್ತೆ ಅತ್ಯಂತ ಕಠಿಣವಾಗಿತ್ತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಪೊನ್ನಣ್ಣ ಅವರಲ್ಲಿ ತಾವು ಮಾಡಿದ ಮನವಿಯನ್ನೇ ಪರಿಗಣಿಸಿ ತಕ್ಷಣವೇ ಕಾಮಗಾರಿಗೆ ಅನುದಾನ ಮಂಜೂರು ಮಾಡಿರುವುದು ಶ್ಲಾಘನೀಯ ಎಂದರು.
ನವದೆಹಲಿ NEWS DESK ಫೆ.8 : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಲು ಅನುಭವಿಸಿದ್ದಾರೆ. ಇವರ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ಸೋಲು ದೊಡ್ಡ ಆಘಾತವನ್ನೇ ನೀಡಿದೆ. 2013 ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಅವರು ಆದೇ ಕ್ಷೇತ್ರದಲ್ಲಿ 10 ವರ್ಷಗಳ ನಂತರ ಸೋಲಿನ ರುಚಿ ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಿಂಗ್ 28448 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು 24583 ಮತಗಳನ್ನು ಪಡೆದಿದ್ದಾರೆ.






