ಲೇಖಕ: admin

ಮಡಿಕೇರಿ ಡಿ.31 NEWS DESK : ವಿರಾಜಪೇಟೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಹಲಸಿನ ಮರವೇರಿದ ಕಾರ್ಮಿಕ ಪಣಿಎರವರ ಪೊನ್ನು ಅವರನ್ನು ಗುಂಡು ಹೊಡೆದು ಕೊಲೆಗೈದಿರುವುದು ಖಂಡನೀಯ. ಪ್ರಕರಣದ ಕುರಿತು ಶಾಸಕರು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಖಂಡನೀಯವೆಂದು ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮೈಸೂರು ಜಿಲ್ಲಾ ಪ್ರಮುಖ ಶೈಲೇಂದ್ರ ಕುಮಾರ್ ಕಾರ್ಮಿಕ ಪೊನ್ನು ಅವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಶಾಸಕರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಸರಕಾರ ತಕ್ಷಣ ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕೊಡಗು ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದವರಿಗೆ ಯಾವುದೇ ರಕ್ಷಣೆ ಇಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಕಾಫಿ ತೋಟದ ಲೈನ್‍ಮನೆಗಳಲ್ಲಿ ಜೀತದಾಳುಗಳಾಗಿ ದುಡಿಯುತ್ತಿರುವ ಬುಡಕಟ್ಟು ಕುಟುಂಬಗಳ ಸಂಕಷ್ಟಕ್ಕೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಆರೋಪಿಯ…

Read More

ಮಡಿಕೇರಿ ಡಿ.31 NEWS DESK : ಸಿದ್ದಾಪುರದ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಜ.3 ರಿಂದ 6ರ ವರೆಗೆ ತಿರು ಮಹೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಈಡವಲತ್ ಪುಡಯೂರ್‍ಮನ ಕುಬೇರನ್ ನಂಬೂದಿರಿಪಾಡ್ ತಂತ್ರಿಗಳು ರಾಜರಾಜೇಶ್ವರ ದೇವಸ್ಥಾನದ ತಲೋರ ತಳಿಪರಂಬ್ ನೇತೃತ್ವದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜ.3 ರಂದು ಸಂಜೆ 5.30 ಗಂಟೆಯಿಂದ ಪುಣ್ಯಾಹ ಪ್ರಾಸಶುದ್ಧಿ, ವಾಸ್ತುಬಲಿ, ದೀಪಾರಾಧನೆ, ತ್ರಿಕೊಡಿಯೆಟಂ, ಅತ್ತಾಯ ಪೂಜಾ, ಮಹಾಪೂಜೆ, ಅನ್ನಸಂತರ್ಪಣೆ ಜರುಗಲಿದೆ. ಜ.4 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಉಷಾಪೂಜೆ, ಮಹಾಸುದರ್ಶನ ಹೋಮ, ಮಹಾಮೃತ್ಯುಂಜಯ ಹೋಮ, ನವಕಂ ಪಂಚಗವ್ಯಂ, ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ ಭಗವತಿಸೇವೆ, ದೀಪಾರಾಧನೆ, ಸಹಸ್ರದೀಪಾ, ಮಹಾಪೂಜೆ, ಅನ್ನಸಂರ್ಪಣೆ ನಡೆಯಲಿದೆ. ಜ.5 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಉಷಾಪೂಜೆ, ಗುಳಿಗ, ನಾಗದೇವರಿಗೆ ಪೂಜೆ, ನವಗಂ, ಪಂಚಗವ್ಯಂ, ಕಲಶಭಿಷೇಕ (ಬೆಳಿಗ್ಗೆ 9 ಗಂಟೆಗೆ ದೇವಿಗೆ ಪೊಂಗಾಲ) ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ ದೀಪಾರಾಧನೆ, ತ್‍ಡಂಬ್‍ನೃತ್ಯ, ಅನ್ನದಾನ ನೆರವೇರಲಿದೆ. ಜ.6…

Read More

ಮಡಿಕೇರಿ ಡಿ.31 NEWS DESK : ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟ ಕುಂಜಿಲ ಗ್ರಾಮದಲ್ಲಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಈ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದಾರೆ.  ಈ ಸಂದರ್ಭ ಮಾತನಾಡಿದ ಅಧಿಕಾರಿಗಳು, ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಶೀಘ್ರದಲ್ಲಿ ಕಾಮಗಾರಿಯನ್ನು ಮುಗಿಸಿಕೊಡುವುದಾಗಿ ಭರವಸೆ ನೀಡಿದರು. ಶಾಸಕರ ಕಾಳಜಿಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಸೋಮವಾರಪೇಟೆ ಡಿ.31 NEWS DESK : ಕಸ್ತೂರಿ ರಂಗನ್ ವರದಿ ಅನುಷ್ಠಾನವಾದರೆ ಕೊಡಗಿನ ರೈತರಿಗೆ ಉಳಿಗಾಲವಿಲ್ಲ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಆತಂಕ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ರಾಜ್ಯದ ನಿರ್ಧಾರವನ್ನು ಕೇಂದ್ರ ಸರ್ಕಾರ ಪುರಸ್ಕರಿಸಬೇಕು ಎಂದು ಮನವಿ ಮಾಡಿದರು. ಕಸ್ತೂರಿ ರಂಗನ್ ವರದಿಯಂತೆ ಕೊಡಗಿನಲ್ಲಿರುವ ಪಶ್ಚಿಮಘಟ್ಟ ಸುತ್ತಮುತ್ತಲ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯ ಎಂದು ಗುರುತಿಸಿದರೆ, ಕೊಡಗಿನ ಬಹುತೇಕ ಗ್ರಾಮಗಳು ವಲಯಕ್ಕೆ ಸೇರ್ಪಡೆಗೊಂಡು ಗ್ರಾಮೀಣ ಜನರು ಬೀದಿಪಾಲಾಗಬೇಕಾಗುತ್ತದೆ. ಪುಷ್ಪಗಿರಿ ತಪ್ಪಲಿನ ಸನಿಹವೆ ಗ್ರಾಮಗಳಿದ್ದು, ಸಿ ಆ್ಯಂಡ್ ಡಿ ಕೃಷಿ ಭೂಮಿಯಲ್ಲೆ ಬದುಕು ಕಟ್ಟಿಕೊಂಡಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ ಸಿ ಆ್ಯಂಡ್ ಡಿ ಭೂಮಿ ಸೂಕ್ಷ್ಮ ಪರಿಸರ ವಲಯಕ್ಕೆ ಸೇರ್ಪಡೆಯಾಗುತ್ತದೆ. ನಂತರ ರೈತರು ಗುಳೆ ಹೋಗಬೇಕಾದ ಅನಿವಾರ್ಯ ಒದಗುತ್ತದೆ ಎಂದು ಹೇಳಿದರು. ಈಗಾಗಲೇ ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯಕ್ಕೆ ಸೇರಿಸಲು ಪ್ರಕ್ರಿಯೆಗಳು…

Read More

ಕುಶಾಲನಗರ ಡಿ.31 NEWS DESK  : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಮೂಲಕ ನಾಡಿನಲ್ಲಿ ವೈಚಾರಿಕತೆಯನ್ನು ಭಿತ್ತಿದ ಸಾಹಿತ್ಯದ ಮೇರು ಪರ್ವತ ಕುವೆಂಪು ಎಂದು ಕೊಡಗಿನ ಹಿರಿಯ ಸಾಹಿತಿ ಕಣಿವೆ ಭಾರಧ್ವಜ್ ಆನಂದ ತೀರ್ಥ ಪ್ರತಿಪಾದಿಸಿದರು. ಕುಶಾಲನಗರದ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಸ್ಥಳೀಯ ಕನ್ನಡ ಭಾರತಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕುವೆಂಪು ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥಗಳನ್ನು ಮೆಟ್ಟಿನಿಂತು ಸಂಘರ್ಷಗಳನ್ನು ಎದುರಿಸಿ ಮಾನವತೆಯ ಮೇರು ಗಿರಿಯಾದ ಕುವೆಂಪು ಪರಿಸರವನ್ನೇ ದೇವರೆಂದರು. ಪರಿಸರವನ್ನು ಆಹ್ಲಾದಿಸಿ ಆಸ್ವಾದಿಸಿದ ರಸ ಕವಿ ತಮ್ಮ ಬಹುಪಾಲು ಕಥೆ, ಕವನ, ಕಾದಂಬರಿ, ನಾಟಕ ಮೊದಲಾದ ಮಹಾಗ್ರಂಥಗಳನ್ನು ಬರೆದು ನಾಡಿನ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದರು. ಆದ್ದರಿಂದ ಇಂದಿನ ವಿದ್ಯಾರ್ಥಿ ಸಮೂಹ ಕನ್ನಡ ನಾಡಿಗೆ ರಸ ಋಷಿ ಕುವೆಂಪು ಕೊಟ್ಟಿರುವ ಸಾಹಿತ್ಯವನ್ನು ಉಳಿಸಿಕೊಂಡು ಹೋದರೆ ಅದು ಆ ವಿಶ್ವಮಾನವನಿಗೆ ಕೊಡುವ ಗೌರವವಾಗಲಿದೆ ಎಂದರು. ಕುವೆಂಪು ವಿಚಾರಧಾರೆಗಳ ಕುರಿತು ಮಾತನಾಡಿದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಂದ್ರಸ್ವಾಮಿ,…

Read More

ನಾಪೋಕ್ಲು ಡಿ.31 NEWS DESK : ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಪೋಕ್ಲುವಿನಲ್ಲಿ ಕ್ರೈಸ್ತ ಭಕ್ತಾಧಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ಸಂತ ಮೇರಿಮಾತೆಯ ದೇವಾಲಯದಲ್ಲಿ ದಿವ್ಯ ಬಲಿ ಪೂಜೆ ನಂತರ ಸಾಮೂಹಿಕವಾಗಿ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್, ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸಬಾರದು. ತಪ್ಪಿತಸ್ಥರನ್ನು ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ವರದಿ : ದುಗ್ಗಳ ಸದಾನಂದ.

Read More

ಸೋಮವಾರಪೇಟೆ ಡಿ.31 NEWS DESK : ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು  ರೈತ ಹೋರಾಟ ಸಮಿತಿ ಹಾಗೂ ರೈತಸಂಘದ ಒತ್ತಾಯಿಸಿದೆ. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಅರ್ಜಿ ಸ್ವೀಕರಿಸುವ ಕಾಲಾವಕಾಶ 31.12.2024ರಂದು ಮುಕ್ತಾಯಗೊಳ್ಳಲಿದ್ದು, ಮುಂದಿನ 3 ತಿಂಗಳ ವರಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭ ತಾಲ್ಲೂಕು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ದಿನೇಶ್, ಪ್ರಮುಖರಾದ ಅಶೋಕ್, ಆದಿತ್ಯ ಹರಗ, ಎಸ್.ಬಿ.ಭರತ್ ಕುಮಾರ್, ಯಡೂರು ಜಗದೀಶ್, ಲಿಂಗೇರಿ ರಾಜೇಶ್ ಇದ್ದರು.

Read More

ವಿರಾಜಪೇಟೆ ಡಿ.31 NEWS DESK : ಹೆಗ್ಗಳ ಗ್ರಾಮದ ಎಡಮಕ್ಕಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವವು ಎರಡು ದಿನಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.ಮುಂಜಾನೆಯಿಂದಲೇ ಶ್ರೀ ಗಣಪತಿ ಹೋಮ, ಧ್ವಜಾರೋಹಣ ಹಾಗೂ ದೀಪಾರಾಧನೆ ನಡೆಯಿತು. ಸಂಜೆ ಸಭಾ ಕಾರ್ಯಕ್ರಮ ನಡೆದು ಮಹಾಪೂಜೆಯ ಬಳಿಕ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉತ್ಸವದ ಎರಡನೆಯ ದಿವಸವು ಕೂಡ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಮುಂಜಾನೆಯಿಂದಲೇ ನಡೆದವು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಂತರ ಸಂಜೆ ದೀಪಾರಾಧನೆಯು ನಡೆದು ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಬೇಟೋಳಿ ಯಿಂದ ತಲಿಪೋಲಿ ಮೆರವಣಿಗೆಯು ಎಡಮಕ್ಕಿ ಸಾರ್ವಜನಿಕ ಮೈದಾನವರೆಗೆ ಸಾಗಿ ದೇವಸ್ಥಾನವನ್ನು ಪ್ರವೇಸಿಸಿತು. ಮಹಿಳೆಯರು ಹಾಗೂ ಮಕ್ಕಳು ದೀಪವನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ನಂತರ ಮಹಾಪೂಜೆ ನಡೆದು ತಾಯಂಭಗಂ ಸೇವೆಯು ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಸೇವೆ ಜರುಗಿತು. ಅಯ್ಯಪ್ಪ ಮಾಲಾ ವೃತಾಧಾರಿಗಳಿಂದ ಭಜನೆ ನಡೆಯಿತು.…

Read More

ವಿರಾಜಪೇಟೆ ಡಿ.31 NEWS DESK : ಭರತನಾಟ್ಯ ಕ್ಷೇತ್ರದ ಸಾಧನೆಗಾಗಿ ಕರುನಾಡ ಭೂಷಣ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ವಿದ್ಯಾರ್ಥಿನಿ ಆಕಾಂಕ್ಷ ಭಾಜನಾಲಾಗಿದ್ದಾಳೆ.  ವಿರಾಜಪೇಟೆ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ವತಿಯಿಂದ ಬೆಂಗಳೂರಿನ ಕನ್ನಡ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಭರತನಾಟ್ಯದಲ್ಲಿ ಬಹುಮುಖ ಪ್ರತಿಭೆಯಾಗಿರುವ ಆಕಾಂಕ್ಷ ಮೂಲತಃ ಆರ್ಜಿ ಗ್ರಾಮದ ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ರತೀಶ್ ಆಚಾರ್ಯ ಹಾಗೂ ವಿನಾಯಕ ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಆಚಾರ್ಯ ದಂಪತಿಗಳ ಪುತ್ರಿ.

Read More

ಮಡಿಕೇರಿ NEWS DESK ಡಿ.30 : ಹೊಸ ವರ್ಷಾಚರಣೆಯ ಸಂದರ್ಭ ಯಾವುದೇ ರೇವ್ ಪಾರ್ಟಿ, ಮಾದಕ ವಸ್ತು ಮಾರಾಟ-ಸೇವನೆಗಳಿಗೆ ಅವಕಾಶವಿರುವುದಿಲ್ಲ. ಈ ರೀತಿಯ ಪ್ರಕರಣಗಳು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮಜರಾಜನ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆೆಗೆ ರಾತ್ರಿ 10 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಅದನ್ನು ಮೀರಿ ಸಾರ್ವಜನಿಕವಾಗಿ ಅಥವಾ ಅಕ್ಕ ಪಕ್ಕದ ಜನರಿಗೆ ತೊಂದರೆ ನೀಡಿ ಪಾರ್ಟಿ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಗುಪ್ತಚರ ಇಲಾಖೆ ಮತ್ತು ತಾಂತ್ರಿಕ ಗುಪ್ತಚರ ವಿಭಾಗದ ಸಭೆ ನಡೆಸಿ ಕಾನೂನು ಉಲ್ಲಂಘಿಸುವವರ ಮೇಲೆ ನಿಗಾ ವಹಿಸಲು ಸೂಚನೆ ನೀಡಲಾಗಿದೆ ಎಂದರು. ಕೆಲವೊಂದು ಹೋಂ ಸ್ಟೇ- ರೆಸಾರ್ಟ್ಗಳಿಗೆ ಅನಿರೀಕ್ಷಿತವಾಗಿ ಪೊಲೀಸರು ಭೇಟಿ ನೀಡುವ ಸಾಧ್ಯತೆಗಳಿದೆ. ಯಾವುದಾದರು ಹೋಂ ಸ್ಟೇ ಅಥವಾ ರೆಸಾರ್ಟ್ ಕಾನೂನು ಉಲ್ಲಂಘಿಸಿದರೆ ಬಂದ್ ಮಾಡಲಾಗುವುದು ಎಂದು ಎಸ್‌ಪಿ ತಿಳಿಸಿದರು. ಹೊಸ ವರ್ಷಾಚರಣೆ ಪಾರ್ಟಿಯಿಂದ ಸಾರ್ವಜನಿಕರಿಗೆ ತೊಂದರೆಯಾದರೆ…

Read More