ಮಡಿಕೇರಿ NEWS DESK ಡಿ.30 : ಸಾಂಪ್ರದಾಯಿಕ ‘ಕೊಡವ ಉಡುಪು’ ವಿಷಯದ ಕುರಿತು ಎರಡು ಸಮುದಾಯಗಳ ನಡುವೆ ಉದ್ಭವಿಸಿರುವ ಸೂಕ್ಷ್ಮ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಎಎಸ್ಪಿ ಸುಂದರರಾಜ್ ಅವರು ಖುದ್ದು ಕಟ್ಟೆಮಾಡು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಕ್ರಮ ಕೈಗೊಂಡರು. ದೇವಸ್ಥಾನದ 5 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಒಬ್ಬರು ಎಎಸ್ಪಿ, ಇಬ್ಬರು ಡಿವೈಎಸ್ಪಿ, 5 ವೃತ್ತ ನಿರೀಕ್ಷಕರು, 10 ಮಂದಿ ಪಿಎಸ್ಐ ಸೇರಿದಂತೆ 300 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ದೇವಸ್ಥಾನ ವ್ಯಾಪ್ತಿಯಲ್ಲಿ ನಿಯೋಜಿಸಲಾಗಿದೆ. ಇದರೊಂದಿಗೆ ಮೂರು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಲೇಖಕ: admin
ಮಡಿಕೇರಿ NEWS DESK ಡಿ.30 : ಕೊಡಗು ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯ ನಂತರ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು, ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ಸ್ವಾಮಿ ದೇವಾಲಯ ಆಡಳಿತ ಮಂಡಳಿಯ ಕೋರಿಕೆಯಂತೆ ಜಿಲ್ಲಾಡಳಿತ ಒಂದು ವಾರದ ಕಾಲಾವಕಾಶ ನೀಡಿದೆ. ನಂತರ ನಡೆಯುವ ಸಭೆಯಲ್ಲಿ ಒಮ್ಮತದ ನಿರ್ಧಾರವಾದರೆ ಸ್ವಾಗತಾರ್ಹ. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದು ಅಥವಾ ದೇವಾಲಯಕ್ಕೆ ನುಗ್ಗಲು ಮುಂದಾಗುವುದಕ್ಕೆ ಪೊಲೀಸ್ ಇಲಾಖೆ ಅವಕಾಶ ನಿಡುವುದಿಲ್ಲ. ಉದ್ದೇಶ ಪೂರ್ವಕವಾಗಿ ಶಾಂತಿಭಂಗ ಮಾಡಲು ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದರು. ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಒಪ್ಪಿಗೆಯಾಗದಿದ್ದಲ್ಲಿ ನ್ಯಾಯಾಲಯಕ್ಕೆ ಹೋಗಲು ಅವಕಾಶವಿದೆ, ಅಲ್ಲಿ ನ್ಯಾಯವನ್ನು ಪಡೆಯಬಹುದಾಗಿದೆ. ಅದನ್ನು ಬಿಟ್ಟು ಶಾಂತಿಭಂಗ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸೂಕ್ತ ನಿರ್ಧಾರ ಕೈಗೊಳ್ಳಲು ಒಂದು ವಾರದ ಕಾಲಾವಕಾಶವನ್ನು ಜಿಲ್ಲಾಡಳಿತ ನೀಡಿರುವುದರಿಂದ ಮತ್ತು ಸಭೆಯಲ್ಲಿ ಇದ್ದವರು ಇದಕ್ಕೆ ಸಮ್ಮತಿ ಸೂಚಿಸಿರುವುದರಿಂದ ಪ್ರತಿಭಟನೆಗಳನ್ನು ವಾಪಾಸು ಪಡೆಯಲಿದ್ದಾರೆ ಎನ್ನುವ ವಿಶ್ವಾಸವಿದೆಯೆಂದು ಎಸ್ಪಿ ತಿಳಿಸಿದರು.
ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಐದು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜಾಥಾ ನಡೆಸುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಕೊಡವ ಮತ್ತು ಗೌಡ ಎರಡು ಜನಾಂಗಗಳ ನಡುವಿನ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿದ್ದು, ಉಭಯ ಗುಂಪು ಸೋಮವಾರ ಕಟ್ಟೆಮಾಡಿಗೆ ಜಾಥಾ ನಡೆಸುವ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ನೂರಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ::: ಎಸ್ಪಿ ಎಚ್ಚರಿಕೆ ::: ಈಗಾಗಲೇ ದೇವಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಯಾರಾದರು ಶಾಂತಿಭಂಗ ಮಾಡಲು ಯತ್ನಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಯಿಸಲು ಅವಕಾಶವಿದ್ದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಜನಾಂಗಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವವರ ಪರ ಯಾರೂ…
ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಜಾತ್ರೋತ್ಸವದ ಸಂದರ್ಭ ಸಾಂಪ್ರದಾಯಿಕ “ಕೊಡವ ಉಡುಪು” ಕುಪ್ಯಚೇಲೆ ತೊಟ್ಟವರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡದಿರುವುದನ್ನು ಖಂಡಿಸಿ ಜಿಲ್ಲೆಯ ವಿವಿಧೆಡೆ ಕೊಡವ ಸಮುದಾಯದವರು ರಸ್ತೆತಡೆ ಪ್ರತಿಭಟನೆ ನಡೆದರು. ದೇವಸ್ಥಾನ ಸಮಿತಿಯ ನಿಲುವಿನ ವಿರುದ್ಧ ಕೊಡವ ಸಮುದಾಯದ ವಿವಿಧ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದವು. ದಕ್ಷಿಣ ಕೊಡಗಿನ ವಿರಾಜಪೇಟೆ, ಗೋಣಿಕೊಪ್ಪಲು, ಪೊನ್ನಂಪೇಟೆ, ಶ್ರೀಮಂಗಲ, ಟಿ.ಶೆಟ್ಟಿಗೇರಿ, ಮಡಿಕೇರಿ ತಾಲ್ಲೂಕಿನ ಮೂರ್ನಾಡು, ನಾಪೋಕ್ಲುವಿನಲ್ಲಿ ತೀವ್ರ ಪ್ರತಿಭಟನೆ ನಡೆಯಿತು. ಕಟ್ಟೆಮಾಡು ಭಾಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊನ್ನಂಪೇಟೆಯಿಂದ ಕಟ್ಟೆಮಾಡು ದೇವಾಲಯಕ್ಕೆ ಬೈಕ್ ಜಾಥ ನಡೆಸಲು ಮುಂದಾದವರನ್ನು ಪೊಲೀಸರು ವಶಕ್ಕೆ ಪಡೆದರು. ಬೈಕ್ ಜಾಥಕ್ಕೆ ಸಜ್ಜಾಗಿದ್ದ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ, ಚಮ್ಮಟಿರ ಪ್ರವೀಣ್ ಉತ್ತಪ್ಪ ಹಾಗೂ ಸಣ್ಣುವಂಡ ದರ್ಶನ್ ಕಾವೇರಪ್ಪ ಅವರನ್ನು ಠಾಣೆಗೆ ಕರೆಸಿಕೊಂಡ ಪೊಲೀಸರು, ಅವರನ್ನು ಕೆಲ ಕಾಲ ಅಲ್ಲ್ಲಿರಿಸಿಕೊಂಡು ಜಾಥ ಹೊರಡದಂತೆ ಮನವೊಲಿಸುವ ಪ್ರಯತ್ನಗಳನ್ನು…
ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡು ಜನಾಂಗಗಳ ನಡುವೆ ನಡೆದ ಸಂಘರ್ಷವನ್ನು ಶಮನ ಮಾಡಲು ಕೊಡಗು ಜಿಲ್ಲಾಡಳಿತ ಇಂದು ಉಭಯ ಕಡೆಗಳ ಶಾಂತಿ ಸಭೆ ನಡೆಸಿತು. ಸುಮಾರು ಮೂರು ಗಂಟೆಗಳ ಸಭೆಯಲ್ಲಿ ಕೊಡವ ಸಮಾಜಗಳ ಒಕ್ಕೂಟ, ಗೌಡ ಸಮಾಜಗಳ ಒಕ್ಕೂಟ ಹಾಗೂ ಶ್ರೀ ಮಹಾ ಮೃತ್ಯಂಜಯ ದೇವಾಲಯ ಆಡಳಿತ ಮಂಡಳಿಯ ಅಭಿಪ್ರಾಯಗಳನ್ನು ಜಿಲ್ಲಾಡಳಿತ ಆಲಿಸಿತು. ಸಭೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ದೇವಸ್ಥಾನದ ಬೈಲಾದಲ್ಲಿರುವ ಗೊಂದಲ ನಿವಾರಣೆಗಾಗಿ ದೇವಾಲಯದ ಆಡಳಿತ ಮಂಡಳಿಯ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಮುಂದಿನ ಸೋಮವಾರದವರೆಗೆ ಕಾಲಾವಕಾಶ ಬೇಕೆಂದು ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಕೋರಿಕೊಂಡಿದ್ದಾರೆ. ಈ ಹಿನ್ನೆಲೆ ಅಂತಿಮ ನಿರ್ಧಾರಕ್ಕೆ ಬರಲು ಏಳು ದಿನಗಳ ಕಾಲಾವಕಾಶ ನಿಡಲಾಗಿದೆ ಎಂದರು. ಆಡಳಿತ ಮಂಡಳಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಏಳು ದಿನಗಳ ಕಾಲಾವಕಾಶ ಕೋರಿಕೊಂಡ ಹಿನ್ನೆಲೆಯಲ್ಲಿ ಎಲ್ಲರು…
ಸುಂಟಿಕೊಪ್ಪ ಡಿ.30 NEWS DESK : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾ 13ನೇ ವಾರ್ಷಿಕ ಮಹೋತ್ಸವವು ಜ.4ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ, 8 ಗಂಟೆಗೆ ಶ್ರೀ ಏಕಾದಶ ರುದ್ರಾಭಿಷೇಕ, 9 ಗಂಟೆಗೆ ಶ್ರೀದೇವಿಗೆ ನವಕಲಶಾಭಿಷೇಕ ಪೂಜೆ, 11 ಗಂಟೆಗೆ ನವಗ್ರಹಗಳಿಗೆ ವಿಶೇಷ ಕಲಶಾಭಿಷೇಕ ಪೂಜೆ, 11.30 ಗಂಟೆಗೆ ನಾಗದೇವರಿಗೆ ವಿಶೇಷ ಪೂಜೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಸಿ.ದಿನೇಶ್ ತಿಳಿಸಿದ್ದಾರೆ.
ಮಡಿಕೇರಿ ಡಿ.30 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯಕ್ಕೆ ಕುಪ್ಯಚೇಲೆ ಧರಿಸಿ ಹೋದ ಕೊಡವರನ್ನು ತಡೆದ ಪ್ರಕರಣ ಖಂಡನೀಯವೆಂದು ನಾಪೋಕ್ಲು ಕೊಡವ ಸಮಾಜದ ಮಹಾಸಭೆ ಖಂಡನಾ ನಿರ್ಣಯ ಕೈಗೊಂಡಿದೆ. ಅನಾದಿಕಾಲದಿಂದಲೂ ಕೊಡವರು ಕೊಡವ ಸಾಂಪ್ರದಾಯಿಕ ಉಡುಗೆಯಾದ ಕುಪ್ಯಚೇಲೆ ಧರಿಸಿ ದೇವಾಯಗಳಿಗೆ ತೆರಳಿ ಪೂಜೆ ಸಲ್ಲಿಸುವುದು ವಾಡಿಕೆಯಾಗಿದೆ. ಆದರೆ ಕಟ್ಟೆಮಾಡಿನಲ್ಲಿ ಕುಪ್ಯಚೇಲೆಯನ್ನು ಕಳಚಿ ದೇವಾಯವನ್ನು ಪ್ರವೇಶಿಸುವಂತೆ ಒತ್ತಡ ಹೇರಿರುವುದು ಮತ್ತು ಹಲ್ಲೆಗೆ ಮುಂದಾಗಿರುವುದು ಖಂಡನೀಯ ಎಂದು ಸಭೆ ಅಸಮಾಧಾನ ವ್ಯಕ್ತಪಡಿಸಿತು. ಕುಪ್ಯಚೇಲೆ ಧರಿಸಿ ದೇವಾಲಯಕ್ಕೆ ತೆರಳುವುದು ಕೊಡವರ ಹಕ್ಕಾಗಿದ್ದು, ಇದನ್ನು ತಡೆಯಲು ಸಾಧ್ಯವಿಲ್ಲ. ಕಟ್ಟೆಮಾಡಿನ ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಒತ್ತಾಯಿಸಿದರು. ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬದ ಸಮಾರಂಭದಲ್ಲೂ ಕಟ್ಟೆಮಾಡು ಘಟನೆಯ ಕುರಿತು ಚರ್ಚೆ ನಡೆಯಿತು. ಪ್ರಕರಣವನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು.
ಸುಂಟಿಕೊಪ್ಪ ಡಿ.30 NEWS DESK : ಕಾವೇರಿ ನದಿಯ ಒಡಲಿಗೆ ಕಲುಷಿತ ನೀರನ್ನು ಬಿಡುವುದನ್ನು ತಡೆಗಟ್ಟಬೇಕೆಂದು ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಬಾಲ ವಿಜ್ಞಾನಿ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಮನವಿ ಮಾಡಿದರು. ಕೊಡಗು ಮೈಸೂರು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿನಿ ಕಾವೇರಿ ನದಿಯು ಇತ್ತೀಚಿನ ಮಾಲಿನತೆಯಿಂದ ಕಲುಷಿತಗೊಳಿಸುತ್ತಿದ್ದು, ನದಿಯ ಶುದ್ಧತೆಯನ್ನು ಕಾಯುವ ದಿಸೆಯಲ್ಲಿ ನದಿಗೆ ಕಲುಷಿತ ನೀರು ಬಿಡುವುದನ್ನು ತಡೆಗಟ್ಟುವಂತೆ ಪತ್ರದ ಮೂಲಕ ಮನವಿ ಮಾಡಿಕೊಂಡರು.
ಮಡಿಕೇರಿ ಡಿ.30 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜ.5 ರಂದು ಮೊಣಕಾಲು ಮತ್ತು ಹಿಪ್ ಬದಲಿ ಉಚಿತ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್ನಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಫೋರ್ಟಿಸ್ ಆಸ್ಪತ್ರೆಯ ಅರ್ಥೋಪೆಡಿಕ್ಸ್, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜನ್ ಡಾ.ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಶಿಬಿರದಲ್ಲಿ ಸಿ.ಜಿ.ಹೆಚ್.ಎಸ್., ಬಿಎಸ್ಎನ್ಎಲ್, ಕೆಇಬಿ, ರೈಲ್ವೆ ಸಿಬ್ಬಂದಿ ಮತ್ತು ಎಬಿವೈ (ಪೊಲೀಸ್), ಎಸ್ಬಿಐ, ಎಲ್ಲಾ ಖಾಸಗಿ ಬ್ಯಾಂಕಿಂಗ್ ಉಚಿತ ಸಮಾಲೋಚನೆ ನಡೆಯಲಿದೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಡಿ.30 NEWS DESK : ಓರೆ-ಕೋರೆಗಳನ್ನು ತಿದ್ದಿ ಸದೃಢ ಹಾಗೂ ಸುಭದ್ರ ಸಮಾಜ ನಿರ್ಮಾಣವಾಗಬೇಕಾದರೆ ಪತ್ರಕರ್ತರ ಪಾತ್ರ ಮಹತ್ತರವಾಗಿರುತ್ತದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ಕೊಡಗು ಪ್ರೆಸ್ ಕ್ಲಬ್ 26ನೇ ವಾರ್ಷಿಕೋತ್ಸವ ಅಂಗವಾಗಿ ಪ್ರೆಸ್ ಕ್ಲಬ್ ಡೇ ಕಾರ್ಯಕ್ರಮದಲ್ಲಿ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಒತ್ತಡದ ಬದುಕಿಗೆ ವಿರಾಮ ನೀಡಿ ಮನೋಲ್ಲಾಸ ಪಡೆಯವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಒಂದಾಗಿ ನಡೆಯುತ್ತಿದೆ. ಇದರಿಂದ ಪತ್ರಕರ್ತರಲ್ಲಿ ಒಗ್ಗಟ್ಟು ಮತ್ತಷ್ಟು ಹೆಚ್ಚಾಗಿದೆ ಎಂದರು. ಯುವ ಕಾಂಗ್ರೆಸ್ ನಾಯಕ ಮೈಸಿ ಕತ್ತಣಿರ ಮಾತನಾಡಿ, ಜಿಲ್ಲೆಯ ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ. ದೇಶದ ಆಧಾರಸ್ತಂಭಗಳ ಪೈಕಿ ಮಾಧ್ಯಮ ಪ್ರಮುಖವಾಗಿದ್ದು, ಸದೃಢ, ಸುಭದ್ರ ಸಮಾಜಕ್ಕೆ ಪತ್ರಕರ್ತರ ಪಾತ್ರ ಮಹತ್ತರವಾಗಿದೆ. ಸಮಾಜದ ಸಕಾರತ್ಮಕ ಬದಲಾವಣೆಯಾಗಬೇಕಾದರೆ ಮಾಧ್ಯಮ ಕ್ಷೇತ್ರದ ಅಗತ್ಯ ಹೆಚ್ಚಿದೆ…






