ಲೇಖಕ: admin

ಮಡಿಕೇರಿ, NEWS DESK ಫೆ.14 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಇತ್ತೀಚೆಗೆ ಆನೆ ದಾಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮದೆನಾಡು ಗ್ರಾಮದ ಪಟ್ಟಡ ಭರತ್ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಗಾಯಾಳು ಭರತ್ ಗೆ ಧೈರ್ಯ ತುಂಬಿದ ಶಾಸಕರು ವೈಯುಕ್ತಿಕ ಧನ ಸಹಾಯ ನೀಡಿದರು. ನಂತರ ಚಿಕಿತ್ಸೆಯ ಕುರಿತು ವೈದ್ಯರಲ್ಲಿ ಚರ್ಚಿಸಿದರು. ಈ ಸಂದರ್ಭ ಪ್ರಮುಖರಾದ ಇಸ್ಮಾಯಿಲ್, ಕೊಲ್ಯದ ಗಿರೀಶ್, ಸೂರಜ್ ಹೊಸೂರು, ಪಟ್ಟಡ ದೀಪಕ್, ಕೊಡಗನ ತೀರ್ಥ ಪ್ರಸಾದ್, ಪಟ್ಟಡ ಕುಮಾರ್ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ, NEWS DESK ಫೆ.14 : ಕೊಡವ ಸಾಹಿತ್ಯ, ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸಲು ‘ಕೊಡವ ಭವನ’ದಂತಹ ಯೋಜನೆಗಳು ಸಹಕಾರಿಯಾಗಲಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಮಡಿಕೇರಿ ತಾಲ್ಲೂಕು ಅರೆಕಾಡು ಹೊಸ್ಕೇರಿ ಗ್ರಾಮದಲ್ಲಿ ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್ ವತಿಯಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡ ‘ಕೊಡವ ಭವನ’ ವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಒಂದು ಭವನವು ಸ್ಥಳೀಯ ಕೊಡವ ಜನಾಂಗದವರ ಸಮ್ಮಿಲನಕ್ಕೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಾಗೂ ಪರಸ್ಪರ ವಿಚಾರ ವಿನಿಮಯಕ್ಕೆ ಸಹಕಾರಿಯಾಗಲಿದೆ. ಇದನ್ನು ಸಮಾಜದ ಬಂಧುಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್ ನ ಅಧ್ಯಕ್ಷ ಕುಕ್ಕೆರ ಜಯ ಚಿಣ್ಣಪ್ಪ ಅವರು ಎಲ್ಲರ ಸಹಕಾರದಿಂದ ‘ಕೊಡವ ಭವನ’ ನಿರ್ಮಾಣಗೊಂಡಿದೆ. ಈ ‘ಕೊಡವ ಭವನ’ ದಲ್ಲಿ…

Read More

ಕುಶಾಲನಗರ, NEWS DESK ಫೆ.14 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಒಕ್ಕೂಟದ ವತಿಯಿಂದ ಪುಲ್ವಾಮದಲ್ಲಿ ಹುತಾತ್ಮ ರಾದ ಸೈನಿಕರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಎಪಿಸಿಎಂಎಸ್ ಸುವರ್ಣ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಉಗ್ರರ ಸಂಚಿಗೆ ಬಲಿಯಾದ 44 ಮಂದಿ ಯೋಧರ ಭಾವ ಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಸಚಿವ ಅಪ್ಪಚ್ಚು ರಂಜನ್  ಮಾತನಾಡಿ, ಪುಲ್ವಾಮದ ಘಟನೆಯಲ್ಲಿ ಅಸುನೀಗಿದ ವೀರ ಸೇನಾನಿಗಳ ಕುಟುಂಬದೊಂದಿಗೆ ದೇಶದ ಜನರು ಇದ್ದಾರೆ. ಘಟನೆಯ ಬಳಿಕ ದೇಶದ ಸೈನಿಕರು ಉಗ್ರರಿಗೆ ತಕ್ಕಪಾಠ ಕಲಿಸುವ ಮೂಲಕ 250 ಮಂದಿ ಉಗ್ರರನ್ನು ಸದೆಬಡಿಯುವ ಮೂಲಕ ಭಾರತೀಯ ಸೈನಿಕರ ಪರಾಕ್ರಮ ತೋರಿಸಿರುವುದು ಶತ್ರು ರಾಷ್ಟ್ರಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ  ಎಂದರು. ಕುಶಾಲನಗರ ತಾಲ್ಲೂಕಿನ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ದೇಶದ ಭದ್ರತೆ ಹಾಗು ಸುರಕ್ಷತೆಯ ವಿಚಾರದಲ್ಲಿ ದೇಶದ ಗಡಿಗಳನ್ನು ಕಾಯುವ   ಸೈನಿಕರ ಸೇವೆ ಹಾಗೂ ತ್ಯಾಗ ಅನನ್ಯವಾದುದು. ಹುತಾತ್ಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮ  ಸಾರ್ವಜನಿಕರಿಂದ ನಡೆಯುವಂತಾಗಬೇಕು…

Read More

ಮಡಿಕೇರಿ, NEWS DESK ಫೆ.14 : ಮಡಿಕೇರಿ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸಲು ಈ ಹಿಂದೆ ಅಧಿಕಾರದಲ್ಲಿದ್ದವರ ನಿರ್ಲಕ್ಷ್ಯವೇ ಕಾರಣವೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಟೀಕಿಸಿದ್ದಾರೆ. ನಗರದ ಕಾಲೇಜು ರಸ್ತೆಯ ಸಿಪಿಸಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ನಾನು ಇತಿಹಾಸ ಕೆಣಕಲು ಇಷ್ಟಪಡುವವನಲ್ಲ, ಆದರೂ ಕೆಲವೊಮ್ಮೆ ಹೇಳಲೇ ಬೇಕಾಗುತ್ತದೆ. ಕಳೆದ ಅಧಿಕಾರವಧಿಯಲ್ಲಿ ಮಡಿಕೇರಿ ನಗರದಲ್ಲಿ ವಿಶೇಷ ಅನುದಾನದಲ್ಲಿ ಯಾವುದೇ ಕಾಮಗಾರಿಗಳು ನಡೆದಿಲ್ಲ. ಕೇವಲ ನಗರಸಭೆಯ ಅನುದಾನವನ್ನು ಬಳಸಿಕೊಳ್ಳಲಾಗಿದೆ, ಇತರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಗಮನಹರಿಸಿಲ್ಲ. ಈ ಹಿಂದೆಯೇ ಕಸ ವಿಲೇವಾರಿ ಬಗ್ಗೆ ಗಮನಹರಿಸಿದ್ದರೆ ಇಂದು ಸಮಸ್ಯೆ ಬಿಗಡಾಯಿಸುತ್ತಿರಲಿಲ್ಲ, ಮೂಲಭೂತ ಸಮಸ್ಯೆಗಳನ್ನು ಕಡೆಗಣಿಸಿರುವುದು ದುರಂತ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು ವಿಶೇಷವಾಗಿ ಬಿಡುಗಡೆ ಮಾಡಿರುವ ಅನುದಾನದಲ್ಲಿ 3.50 ಕೋಟಿ ರೂ.ಗಳನ್ನು ನಗರದ ರಸ್ತೆಗಳ ಅಭಿವೃದ್ಧಿಗಾಗಿ ವಿನಿಯೋಗಿಸಲಾಗಿದೆ. ನಗರದ ನಿವಾಸಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು, ನೀರಿನ ಬಾಟಲ್ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಇವುಗಳ…

Read More

ಕುಶಾಲನಗರ, NEWS DESK ಫೆಬ್ರವರಿ 14: ಪ್ರೇಮಿಗಳ ದಿನಾಚರಣೆಯನ್ನು ಕುಶಾಲನಗರದಲ್ಲಿ ನದಿ ಸ್ವಚ್ಛತೆ ಮಾಡುವ ಮೂಲಕ ಐ ಲವ್ ಕಾವೇರಿ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು. ಕುಶಾಲನಗರ ಗಡಿ ಭಾಗದಲ್ಲಿ ರೋಟರಿ ಕುಶಾಲನಗರ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕೊಪ್ಪ ಭಾರತ ಮಾತಾ ಪದವಿ ಕಾಲೇಜು, ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತು ಜಂಟಿ ಆಶ್ರಯದಲ್ಲಿ ಐ ಲವ್ ಕಾವೇರಿ ಘೋಷ ವಾಕ್ಯದೊಂದಿಗೆ ನಡೆದ ಮೂರನೇ ವರ್ಷದ ಕಾವೇರಿ ನದಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಉದ್ಯಮಿ ಎಸ್ ಎಲ್ ಎಲ್ ವಿಶ್ವನಾಥನ್ ಮಾತನಾಡಿ ಸ್ವಚ್ಛ ಕಾವೇರಿ ಸಂಬಂಧ ಪ್ರತಿಯೊಬ್ಬರು ಕಾಳಜಿ ವಹಿಸಬೇಕಾಗಿದೆ. ನೀರಿನ ಮಹತ್ವದ ಬಗ್ಗೆ ಅರಿವು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು. ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛ ಕುಶಾಲನಗರ ಸ್ವಚ್ಛ ಕಾವೇರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ರೋಟರಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ನಿರಂತರವಾಗಿ ಕಾರ್ಯಕ್ರಮ ಚಟುವಟಿಕೆಗಳ ಮೂಲಕ ನದಿ ಸಂರಕ್ಷಣೆಯ ಬಗ್ಗೆ ಮುತುವರ್ಜಿ ವಹಿಸಿರುವ…

Read More

ನ್ಯೂಯಾರ್ಕ್/ಬೆಂಗಳೂರು: ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ಕ್ಯಾಲಿಫೋರ್ನಿಯಾದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. 24 ವರ್ಷದ ಸಾಕೇತ್ ಶ್ರೀನಿವಾಸಯ್ಯ ನಾಪತ್ತೆಯಾದ ದುರ್ದೈವಿ ವಿದ್ಯಾರ್ಥಿಯಾಗಿದ್ದು, ಇವರ ಪತ್ತೆಗಾಗಿ ಅಮೆರಿಕ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯ ವಿವರ: ಸಾಕೇತ್ ಅವರು ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ (MS) ವ್ಯಾಸಂಗ ಮಾಡುತ್ತಿದ್ದರು. ಕಳೆದ ಫೆಬ್ರವರಿ 12 ರಿಂದ ಇವರು ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದಾರೆ. ಕೊನೆಯ ಬಾರಿಗೆ ಅವರು ಕ್ಯಾಲಿಫೋರ್ನಿಯಾದ ಟಿಲ್ಡೆನ್ ರೀಜನಲ್ ಪಾರ್ಕ್‌ನಲ್ಲಿರುವ ಕೆರೆಯ ಬಳಿ ಕಾಣಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ನಿಗೂಢವಾಗಿ ಪತ್ತೆಯಾದ ಬ್ಯಾಗ್ ಮತ್ತು ಪಾಸ್‌ಪೋರ್ಟ್: ಸಾಕೇತ್ ನಾಪತ್ತೆಯಾಗಿರುವ ಪ್ರಕರಣದಲ್ಲಿ ಕೆಲವು ಆತಂಕಕಾರಿ ಸುಳಿವುಗಳು ಲಭ್ಯವಾಗಿವೆ: ಪಾರ್ಕ್ ಹಿಲ್ಸ್ ನೆರೆಹೊರೆಯ ಮನೆಯೊಂದರ ಬಾಗಿಲ ಬಳಿ ಸಾಕೇತ್ ಅವರ ಬ್ಯಾಗ್ ಪತ್ತೆಯಾಗಿದೆ. ಆ ಬ್ಯಾಗ್‌ನಲ್ಲಿ ಅವರ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಇರುವುದು ಪತ್ತೆಯಾಗಿದೆ ಎಂದು ‘ದಿ ಬರ್ಕ್ಲಿ ಸ್ಕ್ಯಾನರ್’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅತ್ಯಂತ ಮುಖ್ಯವಾದ ದಾಖಲೆಗಳನ್ನು…

Read More

ಮಡಿಕೇರಿ NEWS DESK ಫೆ.14 : ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಮಡಿಕೇರಿಗೆ ಭೇಟಿ ನೀಡಿದರು. ಮಡಿಕೇರಿ ಸಮೀಪದ ಕರ್ಣಂಗೇರಿಗೆ ಖಾಸಗಿ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ಅವರನ್ನು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರುಗಳು ಸ್ವಾಗತಿಸಿದರು.

Read More

ಮಡಿಕೇರಿ NEWS DESK ಫೆ.14 : ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಾ.25, 26 ಮತ್ತು 27ರಂದು ಮಡಿಕೇರಿ ನಗರದಲ್ಲಿ ಶ್ರೀ ರಾಮನವಮಿ ಪ್ರಯುಕ್ತ 36ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರು “ಸರ್ವೇಜನಾ: ಸುಖಿನೋಭವಂತು” ಆದರ್ಶದಡಿ ಸರ್ವ ಸಮುದಾಯಗಳು ಒಗ್ಗೂಡಿ ಮೂರು ದಿನಗಳ ರಾಮೋತ್ಸವ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯಿಂದ ಯಶಸ್ವಿಗೊಳಿಸುವುದಾಗಿ ತಿಳಿಸಿದರು. ಕಳೆದ ವರ್ಷ ಶ್ರೀರಾಮನ ಆದರ್ಶಗಳನ್ನು ಪಾಲನೆ ಮಾಡುತ್ತಾ ಸಾವಿರಾರು ಭಕ್ತರು ರಾಮೋತ್ಸವವನ್ನು ಸಂಭ್ರಮಿಸಿದ್ದಾರೆ, ನಗರದಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದ್ದಾರೆ. ಈ ಬಾರಿ ಕೂಡ ದಾನಿಗಳು ಸೇರಿದಂತೆ ಸರ್ವರ ಸಹಕಾರದಿಂದ ರಾಮೋತ್ಸವ ಸಡಗರದಿಂದ ನಡೆಯಲಿದ್ದು, ಸುಮಾರು 30ಲಕ್ಷ ರೂ. ಖರ್ಚಾಗಲಿದೆ ಎಂದರು. ಮಾ.25 ರಂದು ಸಂಜೆ 6 ಗಂಟೆಗೆ ನಗರದಲ್ಲಿ ಶ್ರೀರಾಮನ ಪಲ್ಲಕ್ಕಿ ಮತ್ತು ಕಳಸದೊಂದಿಗೆ ಭಕ್ತರ ಬೃಹತ್ ಮೆರವಣಿಗೆ ನಡೆಯಲಿದೆ. ಶ್ರೀಕೋದಂಡರಾಮ ದೇವಾಲಯದಲ್ಲಿ ರಾತ್ರಿ ಭಕ್ತರಿಗೆ…

Read More

ಬೆಂಗಳೂರು: ಕನ್ನಡ ಕಿರುತೆರೆಯ ಇತಿಹಾಸದಲ್ಲಿ ಗಾಯನ ಲೋಕದ ಹೊಸ ಹೊಸ ನಕ್ಷತ್ರಗಳನ್ನು ಪರಿಚಯಿಸಿದ ಹೆಗ್ಗಳಿಕೆ ‘ಸರಿಗಮಪ’ ಕಾರ್ಯಕ್ರಮದ್ದು. ಈಗ ಜೀ ಕನ್ನಡ ವಾಹಿನಿಯು ಮಕ್ಕಳಿಗಾಗಿ **’ಸರಿಗಮಪ ಲಿಟಲ್ ಚಾಂಪ್ಸ್’**ನ ಹೊಸ ಆವೃತ್ತಿಯನ್ನು ಹೊತ್ತು ತರುತ್ತಿದೆ. ಸದ್ಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಪ್ರಸಾರವಾಗುತ್ತಿದ್ದು, ಅದು ಮುಗಿದ ತಕ್ಷಣ ಈ ಗಾಯನ ಹಬ್ಬಕ್ಕೆ ಚಾಲನೆ ಸಿಗಲಿದೆ. ಆಡಿಷನ್‌ನಲ್ಲಿ ಯಾರು ಭಾಗವಹಿಸಬಹುದು? ವಯೋಮಿತಿ: 3 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಅವಕಾಶ. ಸಿದ್ಧತೆ: ಸ್ಪರ್ಧಿಗಳು 3 ವಿಭಿನ್ನ ಶೈಲಿಯ ಹಾಡುಗಳನ್ನು ಕಲಿಯುವುದು ಕಡ್ಡಾಯ. ನಿಯಮ: ಆಡಿಷನ್ ವೇಳೆ ಯಾವುದೇ ರೀತಿಯ ಕರೋಕೆ (Karaoke) ಬಳಸುವಂತಿಲ್ಲ. ದಿನಾಂಕ ಮತ್ತು ಸ್ಥಳಗಳ ವಿವರ: ಫೆಬ್ರವರಿ 14 ರಿಂದ ಫೆಬ್ರವರಿ 25 ರವರೆಗೆ ರಾಜ್ಯದಾದ್ಯಂತ ಸರಣಿ ಆಡಿಷನ್‌ಗಳು ನಡೆಯಲಿವೆ: ದಿನಾಂಕ ಜಿಲ್ಲೆಗಳು ಫೆ. 14 (ಇಂದು) ಕೊಪ್ಪಳ, ಶಿವಮೊಗ್ಗ, ತುಮಕೂರು ಫೆ. 15 (ಭಾನುವಾರ) ಬಳ್ಳಾರಿ, ಉಡುಪಿ, ಬೆಂಗಳೂರು ಫೆ. 16 (ಸೋಮವಾರ) ರಾಯಚೂರು, ಮಂಗಳೂರು ಫೆ. 17 (ಮಂಗಳವಾರ)…

Read More

ಕೊಲಂಬೊ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ20 ವಿಶ್ವಕಪ್ ಪಂದ್ಯಕ್ಕೆ ಈಗ ಮಳೆಯ ಭೀತಿ ಎದುರಾಗಿದೆ. ಫೆಬ್ರವರಿ 15 ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಹವಾಮಾನ ವೈಪರೀತ್ಯ ಅಡ್ಡಿಪಡಿಸುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹವಾಮಾನ ವರದಿ ಮತ್ತು ಆತಂಕ: ನೈಸರ್ಗಿಕ ಅಪಾಯಗಳ ಆರಂಭಿಕ ಎಚ್ಚರಿಕೆ ಕೇಂದ್ರದ ವರದಿಯ ಪ್ರಕಾರ, ಫೆಬ್ರವರಿ 15 ಮತ್ತು 16ರಂದು ಶ್ರೀಲಂಕಾದಲ್ಲಿ ಹವಾಮಾನ ಹದಗೆಡುವ ಸಾಧ್ಯತೆಯಿದೆ. ಅಕ್ಯುವೆದರ್ (AccuWeather) ಮುನ್ಸೂಚನೆಯಂತೆ: ಪಂದ್ಯದ ದಿನದಂದು ಸುಮಾರು 4 ಗಂಟೆಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಶೇ 26 ರಷ್ಟಿದೆ. ಈ ಅನಿಶ್ಚಿತತೆಯು ಈಗಾಗಲೇ ಮೈದಾನಕ್ಕೆ ಆಗಮಿಸಿರುವ ಪ್ರೇಕ್ಷಕರು ಮತ್ತು ಪಂದ್ಯದ ಸಂಘಟಕರಲ್ಲಿ ಆತಂಕ ಮೂಡಿಸಿದೆ. ವಿವಾದಗಳ ನಡುವೆ ಪಂದ್ಯಕ್ಕೆ ಒಪ್ಪಿದ್ದ ಪಾಕಿಸ್ತಾನ: ಈ ಪಂದ್ಯದ ಆಯೋಜನೆ ಸುಲಭವಾಗಿರಲಿಲ್ಲ. ಭದ್ರತಾ ಕಾರಣಗಳಿಂದಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿ ಟೂರ್ನಿಯಿಂದ ಹಿಂದೆ ಸರಿದಿದ್ದ ಬಾಂಗ್ಲಾದೇಶಕ್ಕೆ ಬೆಂಬಲ…

Read More