ಮಡಿಕೇರಿ NEWS DESK ಏ.5 : ಮೂಲತಃ ಬೇಕಲ್ ಕರಿಕೆಯ ನಿಧಿ ಗೌಡ ಮುರುಳ್ಯ ಅವರು 46 ಬ್ಯಾಚ್ ನ ಸಿವಿಲ್ ಪಿಎಸ್ಐ ಆಗಿ ನೇಮಕಗೊಂಡಿದ್ದಾರೆ. ಇವರು ಬಾಲಕೃಷ್ಣ ಮುರುಳ್ಯ ಹಾಗೂ ನಳಿನಿ ದಂಪತಿಯ ಪುತ್ರಿ.
ಲೇಖಕ: admin
ಮಡಿಕೇರಿ NEWS DESK ಏ.5 : ಕೊಡಗಿನ ಅತಿ ಎತ್ತರದ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಕೊಚ್ಚಿ ಮೂಲದ ಜಿ.ಎಸ್.ಶರಣ್ಯ(36) ಕೊನೆಗೂ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಸ್ಥಳೀಯ ಕಕ್ಕಬ್ಬೆ ಯವಕಪಾಡಿ ಗ್ರಾಮದ ಕುಡಿಯ ಸಮುದಾಯದ ಯುವಕರ ರಕ್ಷಣಾ ತಂಡ ಶರಣ್ಯ ಅವರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತಡಿಯಂಡಮೋಳ್ ಬೆಟ್ಟದ ಟ್ರಕ್ಕಿಂಗ್ ಪಾಯಿಂಟ್ ನಿಂದ 3.5 ಕಿ.ಮೀ ದೂರದ ಮಲೆ ತಿರಿಕೆ ಎಂಬ ಅರಣ್ಯದೊಳಗೆ ಸುರಕ್ಷಿತವಾಗಿದ್ದ ಶರಣ್ಯ ಅವರನ್ನು ಕುಡಿಯ ಸಮುದಾಯದ ಯುವಕರ ರಕ್ಷಣಾ ತಂಡ ಪತ್ತೆ ಮಾಡಿ ಕರೆ ತಂದಿದ್ದಾರೆ. ತಡಿಯಂಡಮೋಳ್ ಬೆಟ್ಟದ ಸಂಪೂರ್ಣ ಮಾಹಿತಿ ಹೊಂದಿದ್ದ ಸ್ಥಳೀಯ ಕುಡಿಯ ಬುಡಕಟ್ಟು ಸಮುದಾಯದ ಯುವಕರ ತಂಡ ಇಂದು ಸಂಜೆ ವೇಳೆಗೆ ಮಲೆ ತಿರಿಕೆ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶರಣ್ಯ ಇರುವುದನ್ನು ಪತ್ತೆ ಮಾಡುವಲ್ಲಿ ಸಫಲರಾಗಿದ್ದಾರೆ. ಬಳಿಕ ಯುವಕರು ರಕ್ಷಣಾ ತಂಡಗಳಿಗೆ ಮಾಹಿತಿ ರವಾನಿಸಿದ್ದಾರೆ. ಆಹಾರವಿಲ್ಲದೆ ಬಳಲಿದ್ದ ಶರಣ್ಯ ಅವರನ್ನು ಉಪಚರಿಸಿದ ವಿವಿಧ ಇಲಾಖೆಗಳ ರಕ್ಷಣಾ ತಂಡ ಟ್ರಕ್ಕಿಂಗ್ ಪಾಯಿಂಟ್ ಪ್ರವೇಶ…
ಮಡಿಕೇರಿ NEWS DESK ಏ.5 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.5ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಮಾಚೆಟ್ಟಿರ ಮತ್ತು ಐಚೋಡಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಐಚೋಡಿಯಂಡ 5 ವಿಕೆಟ್ ಗಳ ಜಯ ಸಾಧಿಸಿದೆ. ಐಚೋಡಿಯಂಡ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮಾಚೆಟ್ಟಿರ ತಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿತು. ಐಚೋಡಿಯಂಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ನಾಳಿಯಂಡ ಮತ್ತು ಚೆಟ್ರಂಡ ತಂಡಗಳ ನಡುವಿನ ಪಂದ್ಯದಲ್ಲಿ ನಾಳಿಯಂಡ 51 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದ ನಾಳಿಯಂಡ ಬ್ಯಾಟಿಂಗ್ ಆಯ್ದುಕೊಂಡು 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 80 ರನ್ ಗಳನ್ನು ಗಳಿಸಿತು. ಚೆಟ್ರಂಡ…
ಮಡಿಕೇರಿ ಏ.4 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.4ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಪೆರಿಯಂಡ ಮತ್ತು ಕಲ್ಲೇಂಗಡ (ನಾಪೋಕ್ಲು) ನಡುವಿನ ಪಂದ್ಯದಲ್ಲಿ 3 ವಿಕೆಟ್ ನಷ್ಟಕ್ಕೆ 44 ರನ್ ಗಳನ್ನು ಗಳಿಸಿ ಕಲ್ಲೇಂಗಡ ಜಯ ಸಾಧಿಸಿತು. ಪೆರಿಯಂಡ ತಂಡ 1 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪೂಲಂಡ ಮತ್ತು ಕಾಳಿಮಾಡ ನಡುವಿನ ಪಂದ್ಯದಲ್ಲಿ ಕಾಳಿಮಾಡ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 29 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಪೂಲಂಡ ತಂಡ 6 ವಿಕೆಟ್ ಗಳನ್ನು ಕಳೆದುಕೊಂಡು 28 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಸಿದ್ದಂಡ ಮತ್ತು ನಂದೇಟಿರ ನಡುವಿನ ಪಂದ್ಯದಲ್ಲಿ 3 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಸಿದ್ದಂಡ ಗೆಲುವು ಸಾಧಿಸಿತು. ನಂದೇಟಿರ 3 ವಿಕೆಟ್ ನಷ್ಟಕ್ಕೆ 60…
ಮಡಿಕೇರಿ ಏ.4 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.4ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಪೆರಿಯಂಡ ಮತ್ತು ಕಲ್ಲೇಂಗಡ (ನಾಪೋಕ್ಲು) ನಡುವಿನ ಪಂದ್ಯದಲ್ಲಿ 3 ವಿಕೆಟ್ ನಷ್ಟಕ್ಕೆ 44 ರನ್ ಗಳನ್ನು ಗಳಿಸಿ ಕಲ್ಲೇಂಗಡ ಜಯ ಸಾಧಿಸಿತು. ಪೆರಿಯಂಡ ತಂಡ 1 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪೂಲಂಡ ಮತ್ತು ಕಾಳಿಮಾಡ ನಡುವಿನ ಪಂದ್ಯದಲ್ಲಿ ಕಾಳಿಮಾಡ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 29 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಪೂಲಂಡ ತಂಡ 6 ವಿಕೆಟ್ ಗಳನ್ನು ಕಳೆದುಕೊಂಡು 28 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಸಿದ್ದಂಡ ಮತ್ತು ನಂದೇಟಿರ ನಡುವಿನ ಪಂದ್ಯದಲ್ಲಿ 3 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಸಿದ್ದಂಡ ಗೆಲುವು ಸಾಧಿಸಿತು. ನಂದೇಟಿರ 3 ವಿಕೆಟ್ ನಷ್ಟಕ್ಕೆ 60…
ಸೋಮವಾರಪೇಟೆ ಏ.4 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶದ್ಧಾಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚ್ ನ ಫಾದರ್ ಕ್ರಿಸ್ಟೋಫರ್ ಸಗಾಯರಾಜ್ ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಯೇಸು ಕ್ರಿಸ್ತನು ವಿಶ್ವದ ಒಳಿತಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದ ಕುರಿತು ವಿವರಿಸಿದರು. ಹೆಚ್ಚಿನ ಸಂಖ್ಯೆಯ ಕ್ರೈಸ್ತ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ಕುಶಾಲನಗರ ಏ.4 NEWS DESK : ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕಾನೂನು ಬದ್ಧ ಕೆಲಸವಾಗಿದೆ. ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ಶನಿವಾರ ಮನವಿ ಮಾಡಿದರು. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ವತಿಯಿಂದ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ಮೂರು ದಿನಗಳ ಕಾಲ ಮನೆಪಟ್ಟಿ ಹಾಗೂ ಜನಗಣತಿ ಕಾರ್ಯದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಗಣತಿ ಕಾರ್ಯವನ್ನು ಶಿಕ್ಷಕರು ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 164 ಬ್ಲಾಕ್ ಗಳನ್ನು ಗುರುತಿಸಿದ್ದು, 30 ಮಂದಿ ಮೇಲ್ವಿಚಾರಕರು ಹಾಗೂ 174 ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನೇಮಕಗೊಂಡಿರುವ ಗಣತಿದಾರರು ಮೊದಲ ಹಂತದ ಮನೆ ಪಟ್ಟಿ ಕಾರ್ಯದಲ್ಲಿ ನಿಗದಿ ಪಡಿಸುವ…
ಮಡಿಕೇರಿ, NEWS DESK ಏ.4 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.5ರಂದು ನಡೆಯುವ ಪಂದ್ಯಗಳ ವಿವರ. *ಮೈದಾನ 1* ಬೆಳಿಗ್ಗೆ 9ಗಂಟೆಗೆ ಮಾಚೆಟ್ಟಿರ ಮತ್ತು ಐಚೋಡಿಯಂಡ, 10ಕ್ಕೆ ನಾಳಿಯಂಡ ಮತ್ತು ಚೆಟ್ರಂಡ, 11ಕ್ಕೆ ಮಾಚೆಟ್ಟಿರ (ಬಾಳುಗೋಡು) ಮತ್ತು ಮಾಚಂಗಡ, ಮಧ್ಯಾಹ್ನ 12ಕ್ಕೆ ಕಾಯಪಂಡ ಮತ್ತು ಕಳ್ಳಂಗಡ, 1ಕ್ಕೆ ಚೆಟ್ಟಿಯಾರಂಡ ಮತ್ತು ಬಲ್ಯಮಾಡ, 2ಕ್ಕೆ ಕಾಂಚೇರಿರ ಮತ್ತು ಕಲಿಯಂಡ ಹಾಗೂ 3ಗಂಟೆಗೆ ಕಡೆಮಡ ಮತ್ತು ಪುದಿಯೊಕ್ಕಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಕುಂಞÂÃರ ಮತ್ತು ಪರದಂಡ, 10ಕ್ಕೆ ಸೋಮೆಯಂಡ ಮತ್ತು ಮುಕ್ಕಾಟಿರ (ಪುಲಿಕೋಟು), 11ಕ್ಕೆ ಕುಂದೀರ ಮತ್ತು ಕೋದಂಡ, ಮಧ್ಯಾಹ್ನ 12ಕ್ಕೆ ಮುದಿಯಡ ಮತ್ತು ಆದೇಂಗಡ, 1ಕ್ಕೆ ಕೊಡಂದೇರ ಮತ್ತು ಪುಲ್ಲಂಗಡ, 2ಕ್ಕೆ ಕಟ್ಟೇರ (ಅರಮೇರಿ) ಮತ್ತು ಚಿಂದಮಾಡ ಹಾಗೂ 3 ಗಂಟೆಗೆ ಮೇಕೇರಿರ ಮತ್ತು ನಂದೀರ
ಮಡಿಕೇರಿ, NEWS DESK ಏ.04:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಜನ್ಮ ದಿನಾಚರಣೆಯು ಏಪ್ರಿಲ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ…
ಮಡಿಕೇರಿ, NEWS DESK ಏ.4:-ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಏಪ್ರಿಲ್, 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ “ಉದ್ಯೋಗಮೇಳ” ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಜಾಯ್ ಆಲುಕಾಸ್ ಜ್ಯುವೆಲ್ಲರಿ, ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಟ್ಸ್ ರೆಸಾರ್ಟ್, ಮಡಿಕೇರಿ, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್ಎಸ್ಎಲ್ಸಿ., ಪಿಯುಸಿ, ಐಟಿಐ, ಡಿಪೆÇ್ಲೀಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ…






