https://www.youtube.com/watch?v=hIo6vPswmGA&authuser=0 ಮಡಿಕೇರಿ ಫೆ.7 NEWS DESK : ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಕೊಡವಾಮೆ ಬಾಳೋ’ ಕೊಡವರ ಬೃಹತ್ ಪಾದಯಾತ್ರೆ ಜಿಲ್ಲಾ ಕೇಂದ್ರ್ರ ಮಡಿಕೇರಿಯಲ್ಲಿ ಕೊಡವರು ಹಾಗೂ ಕೊಡವ ಭಾಷಿಕರ ‘ಮಹಾಸಂಗಮ’ದೊಂದಿಗೆ ಶಾಂತಿಯುತವಾಗಿ ಸಮಾರೋಪಗೊಂಡಿತು. ಶಾಂತಿಯುತ ಪಾದಯಾತ್ರೆಯ ಮೂಲಕ ಕೊಡವ ಸಮುದಾಯದ ಕೂಗನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮುಟ್ಟಿಸಲಾಯಿತು. ದಕ್ಷಿಣ ಕೊಡಗಿನ ಕುಟ್ಟದಿಂದ ಕಳೆದ ಭಾನುವಾರದಂದು ಆರಂಭಗೊಂಡ ಪಾದಯಾತ್ರೆ ಸತತ ಆರು ದಿನಗಳ ಕಾಲ 84 ಕಿ.ಮೀ. ದೂರವನ್ನು ಕ್ರಮಿಸಿತು. ಇಂದು ಮಡಿಕೇರಿಯ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯ ಕೊಡವ ಸಮಾಜದ ಮಂದ್ನಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನೆರೆದಿದ್ದ ಕೊಡವ ಸಮುದಾಯದ ಬಾಂಧವರು ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಯನ್ನು ಅಂತಿಮಗೊಳಿಸಿದರು. ::: ಜನಸಾಗರ ::: ಪಾದಯಾತ್ರೆಯ ಕೊನೆಯ ದಿನವಾದ ಶುಕ್ರವಾರ ಬೆಳಗ್ಗೆ ‘ಕೊಡವಾಮೆ ಬಾಳೋ’ ಪಾದಯಾತ್ರೆ ಕಗ್ಗೋಡ್ಲುವಿನ ಶ್ರೀ ಭಗವತಿ ದೇವಸ್ಥಾನದ ಬಳಿಯಿಂದ ಬೆಳಗ್ಗೆ 10.30 ರ ಸುಮಾರಿಗೆ ಆರಂಭಗೊಂಡಿತು. ಸಾಂಪ್ರದಾಯಿಕ ಉಡುಪಿನೊಂದಿಗೆ…
ಲೇಖಕ: admin
ಮಡಿಕೇರಿ ಫೆ.7 NEWS DESK : ಕತ್ತಲೆಕಾಡು-ಜೇನುಕೊಲ್ಲಿ ಶ್ರೀ ವಿನಾಯಕ ಸೇವಾ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ ಫೆ.9 ರಂದು ನಡೆಯಲಿದೆ. ಸಂಜೆ 4 ಗಂಟೆಗೆ ಟ್ರಸ್ಟ್ ಆವರಣದಲ್ಲಿ ಅಧ್ಯಕ್ಷ ಕೆ.ಕೆ.ಹೊನ್ನಪ್ಪ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಯನ್ನು ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಡಿ.ಎಂ.ಸುಜಾತ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯಕಾರಿ ಸದಸ್ಯ ಕೆ.ಕೆ.ದಿನೇಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಭಾವತಿ ಗ್ರಾ.ಪಂ ಸದಸ್ಯೆ ಪ್ರಭಾವತಿ ಕರ್ಪಸ್ವಾಮಿ, ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ತರಬೇತುದಾರರಾದ ಎಂ.ಕೆ.ಸುಬ್ರಮಣ್ಯ, ಸುರೇಶ್ ಮಾವಟ್ಕರ್, ಟ್ರಸ್ಟ್ ಕಾರ್ಯದರ್ಶಿ ಬ್ರಿಜೇಶ್ ರೈ, ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಯು.ಸುರೇಶ್, ಮಹಿಳಾ ಘಟಕ ಅಧ್ಯಕ್ಷೆ ಪುಷ್ಪ ಜನಾರ್ದನ್, ವಿದ್ಯಾರ್ಥಿ ಘಟಕ ಅಧ್ಯಕ್ಷೆ ಎಂ.ಎಂ.ದೀಕ್ಷಾ ಉಪಸ್ಥಿತರಿರಲಿದ್ದಾರೆಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.
ಬರೇಲಿ ಫೆ.7 NEWS DESK : ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಕ್ವಿಲಾ ಪ್ರದೇಶದಲ್ಲಿ ಗಾಳಿಪಟದ ದಾರ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ ಈ ಸ್ಫೋಟದಲ್ಲಿ ಕಾರ್ಖಾನೆ ಮಾಲೀಕರು ಸಹ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಗಾಳಿಪಟದ ದಾರಗಳಿಗೆ ಲೇಪಿಸಲು ಸಲ್ಫರ್, ಪೊಟ್ಯಾಶ್ ಮತ್ತು ಗಾಜು ಮಿಶ್ರಣ ಮಾಡುವಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಸಂಚಾರ) ತಿಳಿಸಿದ್ದಾರೆ.
https://youtu.be/fClFWQoeASo?si=NtLsMYhmcMFh6zIs ಮಡಿಕೇರಿ ಫೆ.7 NEWS DESK : ಕೊಡವ ಜನಾಂಗ ಹಾಗೂ ಕೊಡವ ಸಂಸ್ಕೃತಿಯ ಸಮಗ್ರ ಅಸ್ತಿತ್ವದ ಮೇಲೆ ನಡೆಯುತ್ತಿರುವ ಜನಾಂಗೀಯ ತಾರತಮ್ಯ, ದಬ್ಬಾಳಿಕೆ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯುವ ಯತ್ನದ ವಿರುದ್ಧ ಪಾದಯಾತ್ರೆ ನಡೆಸಲಾಗಿದೆ ಎಂದು ಅಖಿಲ ಕೊಡವ ಸಮಾಜ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ತಿಳಿಸಿದೆ. ಸುಳ್ಳು ಇತಿಹಾಸವನ್ನು ಸೃಷ್ಟಿಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ತರುವ ಪ್ರಯತ್ನ ನಡೆದಿದೆ. ದೇಶಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗಳಿಗೆ ಅಗೌರವ ತೋರಲಾಗಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಮಹಾನ್ ಸೇನಾನಿಗಳನ್ನು ಕೊಡವರು ಎಂಬ ಏಕೈಕ ಕಾರಣಕ್ಕೆ ಅವಹೇಳನ ಮಾಡಲಾಗಿದೆ. ಕೊಡವರನ್ನು ದ್ವೇಷಿಸುವ ಉದ್ದೇಶ ಇದರಲ್ಲಿ ಅಡಗಿದೆ. ದುಷ್ಟಕೂಟ ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ನಿರಂತರವಾಗಿ ಕೊಡವ ಮಹಿಳೆಯರು, ಮಕ್ಕಳ ಅವಹೇಳನ ಮಾಡಲಾಗುತ್ತಿದೆ. ಕೊಡವರ ಸಾಂಪ್ರದಾಯಿಕ ಉಡುಪು ಮತ್ತು ಆಭರಣಗಳನ್ನು ವಿಡಂಬನಾತ್ಮಕವಾಗಿ ದುರ್ಬಳಕೆ ಹಾಗೂ ಉದ್ದೇಶಪೂರ್ವಕವಾಗಿ ಕೊಡವರಿಗೆ ಮತ್ತು ಕೊಡವ ಸಂಸ್ಕೃತಿಗೆ ಅವಮಾನ ಮಾಡಲಾಗುತ್ತಿದೆ. ಕೊಡಗಿನ…
ಕುಶಾಲನಗರ ಫೆ.7 NEWS DESK : ಸ್ವಾಮಿ ವಿವೇಕಾನಂದ ಯುವ ಒಕ್ಕೂಟಗಳ ರಾಜ್ಯ ಸಮಿತಿ ವತಿಯಿಂದ ಮುದ್ದೇಬಿಹಾಳದ ಅಕ್ಕಮಹಾದೇವಿ ಮಹಿಳಾ ವಿವಿ ಆವರಣದಲ್ಲಿ ಕೊಡಮಾಡಿದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಯನ್ನು ಕೊಡಗು ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ಸಾಹಿತ್ಯಪರ ಸಂಘಟನೆಗಳ ಸಂಚಾಲಕ ಕೆ.ಎಸ್.ಮೂರ್ತಿ ಅವರಿಗೆ ನೀಡಿ ಗೌರವಿಸಲಾಯಿತು. ಬಿಜಾಪುರ ಜಿಲ್ಲೆಯ ಸಿದ್ಧನ ಕೊಳ್ಳದ ನಿರಂತರ ದಾಸೋಹ ಮಠದ ಪೀಠಾಧಿಪತಿ ಡಾ.ಶಿವಕುಮಾರ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಸರ್ಕಾರದ ಸಾಬೂನು ಮತ್ತು ಮಾರ್ಜಕ ಮಂಡಳಿ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ, ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಚಲನ ಚಿತ್ರ ನಟ ಡಾ.ಗುರುರಾಜ ಹೊಸಕೋಟೆ, ಕಿತ್ತೂರು ಕರ್ನಾಟಕ ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ಅಧ್ಯಕ್ಷೆ ಕಾಶಿಬಾಯಿ ರಾಂಪುರ, ಸ್ವಾಮಿ ವಿವೇಕಾನಂದ ಯುವ ಒಕ್ಕೂಟಗಳ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ, ಬಿಜಾಪುರದ ಅಕ್ಕಮಹಾದೇವಿ ವಿವಿ ಕುಲಪತಿ ಡಾ.ಶಂಕರೇಗೌಡ…
ಮಡಿಕೇರಿ ಫೆ.7 NEWS DESK : ಬಿಟ್ಟಂಗಾಲದಲ್ಲಿರುವ ಕೊಡಗು ಹೆಗ್ಗಡೆ ಸಮಾಜದ ಕಟ್ಟಡ ಅಭಿವೃದ್ಧಿಯ ಮುಂದುವರಿದ ಕಾಮಗಾರಿಗೆ ಅನುದಾನ ಕೋರಿ ಕೊಡಗು ಹೆಗ್ಗಡೆ ಸಮಾಜದ ನಿಯೋಗವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್.ತಂಗಡಗಿ ಅವರನ್ನು ಭೇಟಿ ಮಾಡಿತು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಪ್ರಮುಖರು, ತಮ್ಮ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ, ಉಪಾಧ್ಯಕ್ಷ ಕೊರಕುಟ್ಟಿರ ಸರಚಂಗಪ್ಪ, ನಿರ್ದೇಶಕ ಕೊರಂಡ ಪ್ರಕಾಶ್ ನಾಣಯ್ಯ, ಪ್ರಮುಖರಾದ ಪಡಿಞರಂಡ ಗಿರೀಶ್, ಕಾಕೇರ ರವಿ ಮತ್ತಿತರರು ಹಾಜರಿದ್ದರು.
https://youtu.be/fClFWQoeASo?si=NtLsMYhmcMFh6zIs ಮಡಿಕೇರಿ ಫೆ.7 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು. :: ಬೇಡಿಕೆಗಳು :: ಸೂಕ್ಷ್ಮಾತಿ ಸೂಕ್ಷ್ಮ ಅಲ್ಪಸಂಖ್ಯಾತ ಕೊಡವ ಜನಾಂಗದ ಸಂವಿಧಾನಬದ್ಧ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಕೊಡವ ಜನಾಂಗದ ಪರಂಪರೆ, ಧಾರ್ಮಿಕ ಆಚರಣೆಗಳು, ಸಾಮಾಜಿಕ ಭದ್ರತೆಗೆ ಪೂರಕವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಡವರು ಹಾಗೂ ಜಮ್ಮಾ…
https://www.youtube.com/watch?v=tDf31OOg6xU&authuser=0 ಮಡಿಕೇರಿ ಫೆ.7 NEWS DESK : ಮಡಿಕೇರಿಯಲ್ಲಿ ‘ಕೊಡವಾಮೆ ಬಾಳೋ’ ಕೊಡವರ ಬೃಹತ್ ಪಾದಯಾತ್ರೆ
ಮಡಿಕೇರಿ ಫೆ.7 NEWS DESK : ನಗರಸಭೆ ವ್ಯಾಪ್ತಿಯಲ್ಲಿ 2 ಲೀ.ಗಿಂತಲೂ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲಿಗಳ ಬಳಕೆ ಹಾಗೂ ಮಾರಾಟವನ್ನು ಸಂಪೂರ್ಣ ನಿಷೇಧಿಸಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಮಡಿಕೇರಿ ನಗರಸಭೆಯವರೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತ ಹೆಚ್.ಆರ್.ರಮೇಶ್ ತಿಳಿಸಿದ್ದಾರೆ.
ನಾಪೋಕ್ಲು ಫೆ.7 NEWS DESK : ಬಡ ಕುಟುಂಬದ ಮನೆಯೊಂದಕ್ಕೆ ಸುಣ್ಣ ಬಣ್ಣ ಬಳಿಯುವ ಮೂಲಕ ನಾಪೋಕ್ಲು ಶೌರ್ಯ ವಿಪತ್ತು ತಂಡ ಮಾನವೀಯತೆ ಮೆರೆದಿದೆ. ಕೂರುಳಿಯ ಮನೆಯೊಂದರಲ್ಲಿ ವಾಸವಿರುವ ಪಾರ್ಶ್ವವಾಯು ಪೀಡಿತ ಗಂಡ. ಕಾಯಿಲೆಯಿಂದ ಬಳಲುತ್ತರುವ ಹೆಂಡತಿ. ಆಸರೆಗೆ ಯಾರೂ ಇಲ್ಲದ ದಯಾನೀಯ ಪರಿಸ್ಥಿತಿಯಲ್ಲಿರುವ ಕುಟುಂಬಕ್ಕೆ ಹತ್ತು ಹಲವು ಸೇವಾ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ನಾಪೋಕ್ಲು ಶೌರ್ಯ ವಿಪ್ಪತ್ತು ನಿರ್ವಹಣಾ ಘಟಕದ ಸದಸ್ಯರು ಬಣ್ಣ ಖರೀದಿಸಿ ಪೂರ್ತಿಮನೆಗೆ ಬಣ್ಣ ಬಳಿದು ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದ್ದಾರೆ. ಸೇವಾ ಕಾರ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲ್ಲೂಕು ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ, ಪ್ರಮುಖರಾದ ಉಮಾಲಕ್ಷ್ಮಿ, ಸೀನ, ಮಾಧವನ್, ಶಂಕರ, ಶರವಣ, ರವಿ, ಚಂದ್ರಕಲಾ, ರಮ್ಯ, ಪೊನ್ನಮ್ಮ ಮೊದಲಾದವರು ಭಾಗವಹಿಸಿದ್ದು, ಸಾರ್ವಜನಿಕರ ಪ್ರಸಂಸೆಗೆ ಪಾತ್ರರಾದರು. ವರದಿ : ದುಗ್ಗಳ ಸದಾನಂದ.






