ಲೇಖಕ: admin

ಮಡಿಕೇರಿ NEWS DESK ಡಿ.29 : ಕೊಡಗಿನ ಗೌಡ ಸಮಾಜಗಳ ಮತ್ತು ಗೌಡ ಸಂಘಟನೆಗಳ ಪ್ರಮುಖರ ಸಭೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಿತು. ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಯ ಕುರಿತು ಸಭೆ ಕೆಲವು ನಿರ್ಣಯಗಳನ್ನು ಕೈಗೊಂಡಿತು. ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ 1 ವರ್ಷದ ಹಿಂದೆ ನೂತನವಾಗಿ ನಿರ್ಮಾಣಗೊಂಡ ಮಹಾ ಮೃತ್ಯುಂಜಯ ಕ್ಷೇತ್ರದ ಪ್ರಥಮ ವಾರ್ಷಿಕೋತ್ಸವದ ಅಂತಿಮ ಹಂತದಲ್ಲಿ ದೇವಸ್ಥಾನದ ಕಟ್ಟುಪಾಡುಗಳನ್ನು ಹಾಗೂ ಸರ್ವ ಭಕ್ತಾದಿಗಳ ಸಮ್ಮತಿ ಮೇರೆ ಆಚರಣೆಯಲ್ಲಿದ್ದ ಬೈಲಾದ ನಿಯಮಗಳನ್ನು ಉಲ್ಲಂಘಿಸಿದ ಕ್ರಮವನ್ನು ಕೊಡಗಿನ ಸಮಸ್ತ ಗೌಡ ಜನತೆ ಖಂಡಿಸುವುದು. ಸಾಮಾಜಿಕ ಜಾಲತಾಣಗಳಲ್ಲಿ ಗೌಡ ಜನಾಂಗವನ್ನು ಅತ್ಯಂತ ಕೀಳು ಶಬ್ದಗಳಿಂದ ಜರೆದಿರುವ ವ್ಯಕ್ತಿಗಳ ವಿರುದ್ಧ ಹಾಗೂ ದೇವಸ್ಥಾನದ ಆವರಣದಲ್ಲಿ ಮಾರಕಾಸ್ತçವನ್ನು ತೋರಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸುವುದು. ಗೌಡ ಜನಾಂಗವನ್ನು ಜಾತಿ ನಿಂದನೆ ಮಾಡಿರುವ ಸಂಘಟನೆಯೊAದರ ವ್ಯಕ್ತಿಯ ವಿರುದ್ಧ ಖಂಡನಾ ನಿರ್ಣಯ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು. ಸಾಮಾಜಿಕ…

Read More

ಕುಶಾಲನಗರ NEWS DESK ಡಿ.29 : ನಿರಂತರ ಜಾಗೃತಿಯಿಂದ ಕಾವೇರಿ ನದಿ ಸಂರಕ್ಷಣೆ ಸಾಧ್ಯ ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯುವ ಬ್ರಿಗೇಡ್ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಕಾವೇರಿ ನಮನ ಕಾರ್ಯಕ್ರಮ ಅಂಗವಾಗಿ  ಭಾನುವಾರ ಕುಶಾಲನಗರ ಕಾವೇರಿ ಸೇತುವೆ ಕೆಳಭಾಗದಲ್ಲಿ ಸಾಂಕೇತಿಕವಾಗಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹರಿಯುವ ನದಿ ಕೋಟ್ಯಂತರ ಜನ ಜಾನುವಾರುಗಳಿಗೆ ಹಲವು ರೀತಿಯಲ್ಲಿ ನಿತ್ಯ ಹಾಸು ಹೊಕ್ಕಾಗಿದ್ದು, ಕಾವೇರಿಯನ್ನು ಕಲುಷಿತಗೊಳಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದ ಅವರು, ಇದರ ಪ್ರತಿಫಲವನ್ನು ಮುಂದಿನ ದಿನಗಳಲ್ಲಿ ನಾವುಗಳೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕಾವೇರಿ ನೀರನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸೆಲೆಯಾಗಿ ಬಳಸುತ್ತಿದ್ದು ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.  ಆದರೆ ಮೂಲ ಕಾವೇರಿಯಿಂದ ಜೀವನದಿಯನ್ನು ಸ್ವಚ್ಛ ಶುದ್ಧ ಮಾಡುವ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ವೃಷಭಾವತಿ ನದಿ ರೀತಿಯಲ್ಲಿ ಕಾವೇರಿ ನದಿಯ ಅವನತಿ…

Read More

ಮಡಿಕೇರಿ NEWS DESK ಡಿ.29 : ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ಸಭಾಂಗಣದಲ್ಲಿ ಇಂದು ಈಶ್ವರೀಯ ಸೇವೆಯ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಧ್ಯಾನ ಕಾರ್ಯಕ್ರಮ ನಡೆಯಿತು. ಪದ್ಮಶ್ರೀ ಪ್ರಶಸ್ತಿ ವಿಜೇತ ಕಲಾವಿದೆ ರಾಣಿ ಮಾಚಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೃದ್ದಾಪ್ಯದಲ್ಲಿ ಮಾತಾಪಿತರನ್ನು ತುಂಬಾ ಪ್ರೀತಿಯಿಂದ ಜೋಪಾನವಾಗಿ ಪಾಲನೆ ಮಾಡುವುದು ಬಹಳ ಅವಶ್ಯಕವಾಗಿದೆ. ಯಾವುದೇ ರೀತಿಯಲ್ಲಿ ಅವರನ್ನು ದೂರ ಮಾಡುವ ಸಂದರ್ಭ ಅಥವಾ ಘಟನೆಗಳು ಎದುರಾದಲ್ಲಿ ಹಿತನುಡಿಗಳನ್ನು ಆಡಿ ಆ ಸಂಬಂಧವನ್ನು ಸರಿಪಡಿಸುವ ಕುರಿತು ಕಿವಿಮಾತು ಹೇಳಿದರು. ಪರಮಾತ್ಮನ ನೆನಪಿನ ಮೂಲಕ ಮನ:ಶಾಂತಿಗಾಗಿ ಹಾಗೂ ಜನರ ಉತ್ತಮ ಆರೋಗ್ಯಕ್ಕಾಗಿ ರಾಜಯೋಗದ ಅಗತ್ಯ ಎಷ್ಟಿದೆ, ಅದರ ಅಭ್ಯಾಸದಿಂದ ಜೀವನದಲ್ಲಿ ಅಪಾರ ಪ್ರಾಪ್ತಿಯನ್ನು ಮಾಡಿಕೊಳ್ಳುವ ಕುರಿತು ಕಳೆದ 44 ವರ್ಷಗಳಿಂದ ನಿರಂತರವಾಗಿ ಕೊಡಗಿನ ಜನರಿಗೆ ಜಾಗೃತಿಯನ್ನು ಮೂಡಿಸುತ್ತಾ ಬರುತ್ತಿರುವ ಈ ಸೇವೆಯ ಸ್ಮರಣಾರ್ಥವಾಗಿ ವಿಶೇಷ ಧ್ಯಾನದ ಕಾರ್ಯಕ್ರಮವನ್ನು ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಗಾಯತ್ರೀಜಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಜಿಲ್ಲೆಯ 5 ಸೇವಾಕೇಂದ್ರಗಳ ಮುಖ್ಯ ಶಿಕ್ಷಕಿ…

Read More

ಮಡಿಕೇರಿ NEWS DESK ಡಿ.29 : ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಗ್ರಾಮೋತ್ಸವಮ್ ಥ್ರೋ ಬಾಲ್ ಫೈನಲ್ ಪಂದ್ಯದಲ್ಲಿ ತಮಿಳುನಾಡಿನ ಪಿಜಿ ಪುದುರ್ ತಂಡವನ್ನು ಮಣಿಸಿದ ಕೊಡಗಿನ ಮರಗೋಡು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಚಾಂಪಿಯನ್ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ರೂ.5 ಲಕ್ಷ ನಗದು ಬಹುಮಾನ ನೀಡಲಾಯಿತು. ಈಶ ಫೌಂಡೇಶನ್ ನ ಆದಿಯೋಗಿ ಮೈದಾನದಲ್ಲಿ ರೋಚಕ ಫೈನಲ್ ಪಂದ್ಯಾವಳಿ ನಡೆಯಿತು. ವಿಜೇತರಿಗೆ ಸದ್ಗುರು ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ತಾರೆಯರಾದ ವೀರೇಂದ್ರ ಸೆಹ್ವಾಗ್, ವೆಂಕಟೇಶ್ ಪ್ರಸಾದ್ ಬಹುಮಾನ ವಿತರಿಸಿದರು. ಪಂದ್ಯಾವಳಿಯಲ್ಲಿ ದೇಶದ ವಿವಿಧ ತಂಡಗಳು ಭಾಗವಹಿಸಿದ್ದವು.

Read More

ಕುಶಾಲನಗರ NEWS DESK ಡಿ.29 : ಯುವ ಪೀಳಿಗೆ ಜೀವನದ ಬಹುತೇಕ ಸಮಯವನ್ನು ಸಮಾಜದ ಒಳಿತಿಗಾಗಿ, ದೇಶದ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಾವೇರಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಅವರು ಕುಶಾಲನಗರ ವಿವೇಕಾನಂದ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಶಿಸ್ತು ದೃಢತೆ ಮೂಲಕ ಗುರಿ ಸಾಧಿಸಲು ಸಾಧ್ಯ ಎಂದ ಅವರು, ಸ್ವಾಮಿ ವಿವೇಕಾನಂದರ ಕೆಲವು ದೃಷ್ಟಾಂತಗಳನ್ನು ನೆನಪಿಸಿದರು. ಹಣದ ವ್ಯಾಮೋಹ ಮರೆತು ತಮ್ಮ ಉದ್ದೇಶಗಳ ಈಡೇರಿಕೆಗೆ ಸದಾ ಚಟುವಟಿಕೆಯಲ್ಲಿರಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದೆ. ತರಗತಿಗಳಲ್ಲಿ ವಿದ್ಯಾರ್ಥಿಗಳ ಮನೋಬಲವನ್ನು ಕನಿಷ್ಠ ಅವಧಿ ಕೂಡ ಹಿಡಿದಿಟ್ಟುಕೊಳ್ಳುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಕನಿಷ್ಠ ಕೆಲವೇ ಸೆಕೆಂಡುಗಳಷ್ಟು ಅವಧಿಯ ಏಕಾಗ್ರತೆ ಹೊಂದುವ ಮನಸ್ಥಿತಿ ಮಕ್ಕಳಲ್ಲಿ  ಇಲ್ಲದಂತಾಗಿರುವ ಬಗ್ಗೆ  ಆತಂಕ  ವ್ಯಕ್ತಪಡಿಸಿದರು. ಯಾವುದೇ ಕೆಲಸದಲ್ಲಿಯೂ ಹಿಂಜರಿಕೆ…

Read More

ಮಡಿಕೇರಿ NEWS DESK ಡಿ.29 : ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ನಡೆಯಿತು. ಬೈಠಕ್ ನಲ್ಲಿ ವೇಧಿಕೆಯ ನೂತನ ಜಿಲ್ಲಾ ಸಂಯೋಜಕರನ್ನಾಗಿ ಸೋಮವಾರಪೇಟೆ ತಾಲ್ಲೂಕಿನ ರಂಜನ್ ಗೌಡ(ಬೋಜೆ ಗೌಡ) ಅವರನ್ನು ಆಯ್ಕೆ ಮಾಡಲಾಯಿತು. ವೇದಿಕೆಯ ಕೊಡಗು ಜಿಲ್ಲಾ ಸಂಯೋಜಕರಾಗಿದ್ದ ಕುಕ್ಕೇರ ಅಜಿತ್ ಅವರನ್ನು ಕರ್ನಾಟಕ ದಕ್ಷಿಣ ಪ್ರಾಂತ ಸಮಿತಿಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

Read More

ಮಡಿಕೇರಿ NEWS DESK ಡಿ.29 : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಸಋಷಿ, ರಾಷ್ಟçಕವಿ ಕುವೆಂಪು ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ನಗರದಲ್ಲಿ ಕುವೆಂಪು ಪುತ್ಥಳಿಗೆ ಗೌರವ ಅರ್ಪಿಸಿತು. ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಮೋಹನ್ ವಿ.ಜಿ ಅವರ ನೇತೃತ್ವದಲ್ಲಿ ಸಂಘದ ಪ್ರಮುಖರು ನಗರದ ರಾಜಾಸೀಟು ರಸ್ತೆಯಲ್ಲಿರುವ ವಿಶ್ವ ಮಾನವ ಕುವೆಂಪು ಉದ್ಯಾನವನದಲ್ಲಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಮೋಹನ್ ವಿ.ಜಿ ರಾಷ್ಟ್ರದ ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಅವರು ನೀಡಿದ ಕೊಡುಗೆಯನ್ನು ಬಣ್ಣಿಸಿದರು. ನಿರ್ದೇಶಕ ಹಾಗೂ ವಕೀಲ ಎಂ.ಎ.ನಿರಂಜನ್ ಅವರು ಮಾತನಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ಜ್ಞಾನಪೀಠ ಗಳಿಸಿದ ಅಗ್ರಗಣ್ಯ ಕುವೆಂಪು ಅವರ ಕೃತಿಗಳನ್ನು ಪ್ರತಿಯೊಬ್ಬರು ಓದಿ ಮನನ ಮಾಡಿಕೊಳ್ಳಬೇಕು. ಮುಂದಿನ ಪೀಳಿಗೆ ಕುವೆಂಪು ಅವರ ಆದರ್ಶಗಳನ್ನು ಮತ್ತು ಕವಿ ಮನಸ್ಸನ್ನು ನಿತ್ಯ ಸ್ಮರಿಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ರಾಷ್ಟ್ರಕವಿಯ ಬದುಕಿನ ಕುರಿತು ವಿವರಿಸಿದರು. ಸಂಘದ ಪದಾಧಿಕಾರಿಗಳಾದ ರಮೇಶ್ ಕೆ., ಮಂಜುನಾಥ ವಿ.ಎ,…

Read More

ಮಡಿಕೇರಿ NEWS DESK ಡಿ.29 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದಲ್ಲಿ ಡಿ.27 ರಂದು ಜಾತ್ರೋತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಶ್ರೀ ಮಹಾಮೃತ್ಯುಂಜಯ ದೇವಾಲಯದ ಸುತ್ತಮುತ್ತಲಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು 2024 ಡಿ.30ರ ಬೆಳಿಗ್ಗೆ 6 ಗಂಟೆಯಿಂದ 2025 ಜನವರಿ 2ರ ಬೆಳಿಗ್ಗೆ 6 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ, ಜಾಥಾ ನಡೆಸದಂತೆ ಮತ್ತು ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಿದೆ. ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಉಪವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಈ ಆದೇಶ ಹೊರಡಿಸಿದ್ದಾರೆ. ಡಿ.27 ರಂದು ಜಾತ್ರೋತ್ಸವಕ್ಕೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಬಂದ ಕೊಡವರನ್ನು ಕೆಲವರು ತಡೆದಿದ್ದಾರೆ. ಕೊಡವ ಉಡುಪು…

Read More

ಸೋಮವಾರಪೇಟೆ NEWS DESK ಡಿ.29 : ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ವಿಸ್ತಿರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕಾಫಿ ಬೆಳೆಗಾರರ ಸಂಘ ಕಂದಾಯ ಮಂತ್ರಿಗಳಿಗೆ ಮನವಿ ಮಾಡಿದೆ. 1.1.2005 ರ ಪೂರ್ವದಲ್ಲಿ ಸರ್ಕಾರಿ ಜಮೀನನನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿರುವ ರೈತರಿಗೆ ಆ ಜಮೀನು ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸುವುದು ರೈತರಿಗೆ ಉಪಯೋಗವಾಗಿದೆ. ಅರ್ಜಿ ಸ್ವೀಕರಿಸುವ ಕಾಲಾವಕಾಶ 31.12.2024ರಂದು ಮುಕ್ತಾಯಗೊಳ್ಳಲಿದ್ದು, ದಿನಾಂಕವನ್ನು ವಿಸ್ತರಿಸಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲಾದ್ಯಂತ ಅರೇಬಿಕಾ ಹಾಗು ರೋಬಸ್ಟ ಕಾಫಿ ಮತ್ತು ಭತ್ತ ಕಟಾವು ಕೆಲಸ ನಡೆಯುತ್ತಿದೆ. ಅಕಾಲಿಕ ಮಳೆಯ ಭಯದಿಂದ ರೈತರು ಕೃಷಿ ಭೂಮಿಯಲ್ಲಿ ಕೆಲಸದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ತಾಲ್ಲೂಕು ಕಚೇರಿಗೆ ಬಂದು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಇವೆಲ್ಲಾ ಕಾರಣದಿಂದ ದಿನಾಂಕವನ್ನು ವಿಸ್ತರಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಕಳೆದ ಐದಾರು ವರ್ಷಗಳಿಂದ ಅಕಾಲಿಕ ಮಳೆ, ಅತೀವೃಷ್ಟಿ, ಅನಾವೃಷ್ಟಿಯಿಂದ ಕಾಫಿ…

Read More

ಮಡಿಕೇರಿ NEWS DESK ಡಿ.29 : ಲಾರಿಯೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ಸಮೀಪ ಜೋಡುಪಾಲ ಹೆದ್ದಾರಿಯಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಉಡುಪಿಗೆ ಭತ್ತವನ್ನು ಕೊಂಡೊಯ್ಯುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ಕ್ಲೀನರ್ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ.

Read More