ಲೇಖಕ: admin

ಮಡಿಕೇರಿ NEWS DESK ಫೆ.6 : ಕೊಡವ ಜನಾಂಗ ಮತ್ತು ಕೊಡವ ಭಾಷಿಕ ಸಮುದಾಯಗಳ ಕೊಡವಾಮೆ ಬಾಳೋ ಪಾದಯಾತ್ರೆ ಹಿನ್ನೆಲೆ ಮಡಿಕೇರಿ ನಗರದಲ್ಲಿ ಫೆ.7 ರಂದು ನಗರದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದೆ. ಸುದರ್ಶನ ರಸ್ತೆ, ಜಿಲ್ಲಾ ಆಸ್ಪತ್ರೆ ರಸ್ತೆ, ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ, ವಿನೋದ್ ಮೆಡಿಕಲ್ ಮುಂಭಾಗ, ಬಾಲಾಜಿ ಸ್ಟೋರ್ ಮುಂಭಾಗ, ಹಳೇ ಖಾಸಗಿ ಬಸ್ ನಿಲ್ದಾಣ ಆವರಣ, ಕಾರ್ ಟ್ಯಾಕ್ಸಿ ನಿಲ್ದಾಣ, ಕಾಲೇಜು ರಸ್ತೆ, ಗಣಪತಿ ಬೀದಿ, ಮಾರುಕಟ್ಟೆ ಆವರಣ, ಜ್ಯೂನಿಯರ್ ಕಾಲೇಜು ರಸ್ತೆ ಸೇರಿದಂತೆ ಜನ ಸಂದಣಿ ಏರ್ಪಡುವ ಪ್ರದೇಶಗಳಲ್ಲಿ ಎಲ್ಲಾ ರೀತಿಯ ವಾಹನ ಪಾರ್ಕಿಂಗ್ ನಿಷೇಧ ಮಾಡಲಾಗಿದೆಯೆಂದು ಪೊಲೀಸ್ ಇಲಾಖಾ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಪಾರ್ಕಿಂಗ್- ಪಾದಯಾತ್ರೆ ಮಡಿಕೇರಿಗೆ ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ಬರುವ ಹಿನ್ನೆಲೆ, ಕಗ್ಗೋಡ್ಲು ಅಂಬರ ರೆಸಾರ್ಟ್ ಮೈದಾನದಲ್ಲಿ, ಮೇಕೇರಿ ಶಾಲಾ ಮೈದಾನದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಾಗಮಂಡಲ ಕಡೆಯಿಂದ ಬರುವವರ ವಾಹನಗಳ ನಿಲುಗಡೆಎ ತಾಳತ್‌ಮನೆ…

Read More

ಪುತ್ತೂರು ಫೆ.6 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿನಿ ಕೆ.ಸ್ನೇಹಾ ಪೈ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಎಂಬಿಎ ಪರೀಕ್ಷೆಯಲ್ಲಿ 9.22 ಸಿಜಿಪಿಎ ಅಂಕಗಳೊಂದಿಗೆ 5ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಹೆಚ್.ಆರ್ ಮತ್ತು ಫೈನಾನ್ಸ್ ಐಚ್ಚಿಕ ವಿಷಯಗಳನ್ನು ಅಭ್ಯಸಿಸಿರುವ ಈಕೆ ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ಹಾಗೂ ಇತರ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ. ಈಕೆ ಪುತ್ತೂರಿನ ಶ್ರೀಮತಿ ರಾಧಿಕಾ.ಬಿ.ಪೈ ಹಾಗೂ ಶ್ರೀ.ಕೆ.ಬಾಲಕೃಷ್ಣ ಪೈ ಅವರ ಪುತ್ರಿಯಾಗಿದ್ದು, ಪ್ರಸ್ತುತ ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯಲ್ಲಿ ಹೆಚ್.ಆರ್. ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು…

Read More

ಸುಂಟಿಕೊಪ್ಪ ಫೆ.6 NEWS DESK : ಬಾಳೆಕಾಡು ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ತೆರೆ ಮಹೋತ್ಸವ ಸೇವಾ ಸಮಿತಿಯ 2025-26ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ (ಪ್ರಶು), ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ ಆಯ್ಕೆಯಾಗಿದ್ದರೆ. ಸೇವಾ ಸಮಿತಿಯ ಉಪಾಧ್ಯಕ್ಷರಾಗಿ ಹರೀಶ, ಖಜಾಂಚಿಯಾಗಿ ಸತೀಶ, ಸಹಕಾರ್ಯದರ್ಶಿಯಾಗಿ ಪ್ರಕಾಶ್, ಸಹ ಖಜಾಂಚಿಯಾಗಿ ವಸಂತ, ಸಲಹೆಗಾರರುಗಳಾಗಿ ಸಂದೀಪ್, ಸುಧಿ, ಪ್ರವೀಣ್, ಮೋಹನ್, ವಿನು, ಮನೋದ್, ಪ್ರದೀಪ್, ಸಂದೀಪ್, ಅಶೋಕ, ರವಿ, ರಾಮಚಂದ್ರ. ಅಭಿಷೇಕ್, ಸಂಜು, ಸಚಿನ್ ಚಂದ್ರ ಅವರುಗಳನ್ನು ನೇಮಕಗೊಳಿಸಲಾಯಿತು. ನಂತರ ನಡೆದ 60ನೇ ವರ್ಷದ ತೆರೆ ಮಹೋತ್ಸವ ಸೇವಾ ಸಮಿತಿಯ ವತಿಯಿಂದ ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ತೆರೆ ಮೆರವಣಿಗೆ ನಡೆಸುವ ಬಗ್ಗೆ ಚರ್ಚಿಸಲಾಯಿತು.

Read More

ವಿರಾಜಪೇಟೆ ಫೆ.6 NEWS DESK : ಇತ್ತೀಚಿಗೆ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಎ.ಹನಿಯ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಇವಳು ಅಮ್ಮತ್ತಿಯ ಕಂದಾಯ ಇಲಾಖೆಯ ಪರಿವೀಕ್ಷಕರಾದ ಅನಿಲ್ ಹಾಗೂ ರಂಜಿನಿ ದಂಪತಿಯ ಪುತ್ರಿ. ಖ್ಯಾತ ಚಿತ್ರಕಲಾವಿದರು ಹಾಗೂ ಚಿತ್ರಕಲಾ ಶಿಕ್ಷಕ ಕ್ಲಿಫರ್ಡ್ ಡಿ ಮೆಲ್ಲೋ ಅವರಲ್ಲಿ ಚಿತ್ರಕಲೆಯ ತರಬೇತಿ ಪಡೆಯುತ್ತಿದ್ದಾಳೆ.

Read More

ಮಡಿಕೇರಿ ಫೆ.6 NEWS DESK : ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದ ವಿಶೇಷ ಅತಿಥಿಯಾಗಿ ಭಾಗವಹಿಸಿ, ಮರಳಿ ಗ್ರಾಮಕ್ಕೆ ಬಂದಿರುವ ಹೊದ್ದೂರು ಗ್ರಾ.ಪಂ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಅವರನ್ನು ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಮತ್ತು ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರಾದ ಕುಮಾರಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಮತಿ, ಬಾಲ ಕಾರ್ಮಿಕ ಅಧಿಕಾರಿ ಸಿರಾಜ್, ಮೂರ್ನಾಡು ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್, ಹೊದ್ದೂರು ಗ್ರಾಮ ಪಂಚಾಯಿತಿ ಪಿಡಿಓ ಅಬ್ದುಲ್ಲಾ ಮತ್ತು ಎಸ್.ಡಿ.ಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

Read More

ಮಡಿಕೇರಿ ಫೆ.6 NEWS DESK : ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ನೇತೃತ್ವದಲ್ಲಿ ನಿಯಮಾನುಸಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಸಹಿಸದ ಕೆಲವು ವ್ಯಕ್ತಿಗಳು ಡಾ.ಅಂಬೇಡ್ಕರ್ ಭವನ ಸಮಿತಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹಾಗೂ ಅಶೋಕಪುರ ಸಮಿತಿಯ ಸದಸ್ಯ ಹೆಚ್.ಎನ್.ಯೋಗೇಶ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರು ಸಾಮಾಜಿಕ ಕಳಕಳಿ ಇರುವ ವ್ಯಕ್ತಿಯಾಗಿದ್ದಾರೆ. ಡಾ.ಅಂಬೇಡ್ಕರ್ ಭವನವನ್ನು ದಲಿತರು ಸೇರಿದಂತೆ ಎಲ್ಲಾ ವರ್ಗದವರಿಗೂ ಸಾಮಾಜಿಕ ಚಟುವಟಿಕೆ ಮತ್ತು ಸಭೆಗಳನ್ನು ನಡೆಸಲು ಯಾವುದೇ ಆಕ್ಷೇಪಣೆ ಇಲ್ಲದೆ ನೀಡುತ್ತಾ ಬಂದಿದ್ದಾರೆ. ಭವನದ ಕಾರ್ಯಚಟುವಟಿಕೆ ನಿಯಮಾನುಸಾರ ನಡೆಯುತ್ತಿದ್ದು, ಎಲ್ಲಾ ದಾಖಲೆ ಮತ್ತು ಲೆಕ್ಕಪತ್ರಗಳು ಸಮಿತಿಯ ಬಳಿ ಇದೆ. ಈ ಬಗ್ಗೆ ಸಮಿತಿಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪಡೆಯದೆ ದುರುದ್ದೇಶದಿಂದ ಕೆಲವರು ತೇಜೋವಧೆ ಮಾಡುವ ರೀತಿಯ…

Read More

NEWS DESK *ಕೊಡವರ ಪಾದಯಾತ್ರೆ : ಫೆ.7 ರಂದು ಮಡಿಕೇರಿಯಲ್ಲಿ 700 ಕ್ಕೂ ಅಧಿಕ ಪೊಲೀಸರ ನಿಯೋಜನೆ : ಮದ್ಯ ಮಾರಾಟ ನಿಷೇಧ* ದಿನಾಂಕ: 07-02-2025 ರಂದು ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ 06 ರಿಂದ ರಾತ್ರಿ 12 ಘಂಟೆ ವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. > ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರು ಶಾಂತಿಯುತವಾಗಿ ರಸ್ತೆಯ ಒಂದು ಬದಿಯಲ್ಲಿ ತೆರಳುವುದು. > ಪಾದಯಾತ್ರೆಯ ಆಯೋಜಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವವರ ವಾಹನಗಳನ್ನು ಪಾರ್ಕಿಂಗ್‌ಗೆ ನಿಗಧಿಪಡಿಸಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಹಾಗೂ ಪಾದಯಾತ್ರೆಯೊಂದಿಗೆ ವಾಹನಗಳು ಬರದಂತೆ ನೋಡಿಕೊಳ್ಳವುದು. > ಪಾದಯಾತ್ರೆಯಲ್ಲಿನ ಸ್ವಯಂ ಸೇವಕರು ಸಾರ್ವಜನಿಕರಿಗೆ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು. > ಪಾದಯಾತ್ರೆ ಸಮಯದಲ್ಲಿ ಎಲ್ಲಿಯು ರಸ್ತೆ ತಡೆ ಮಾಡದಂತೆ ಸ್ವಯಂ ಸೇವಕರು ನೋಡಿಕೊಳ್ಳವುದು. > ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಸೂಕ್ತ ಕ್ರಮ ಕೈಗೊಳ್ಳುವುದು. ವಿಶೇಷ ಸೂಚನೆ:- ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228330…

Read More

ಬೆಂಗಳೂರು ಫೆ.5 NEWS DESK :  ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು. ಸ್ಪರ್ಧೆಯ ಷರತ್ತುಗಳು: • ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-.202 4 ರಿಂದ 31-01-2025 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು. • ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. • ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ…

Read More

ಮಡಿಕೇರಿ ಫೆ.6 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು(ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via/CET/NEET ಮುಖಾಂತರ) ಎಂಬಿ, ಎಂಎಸ್, ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಟೆಕ್ನಾಲಜಿ (ಬಿಇ/ಬಿಟೆಕ್), ಎಂ ಟೆಕ್ ಎಂಇಬಿ ಆರ್ಕ್, ಎಂಆರ್ಕ್, ಎಂಬಿಎ, ಎಂಸಿಎ, ಎಲ್‍ಎಲ್‍ಬಿ, ಬಿಎಸ್‍ಸಿ ಇನ್ ಆರ್ಟಿಕಲ್ಚರ್, ಕೃಷಿ, ಡೈರಿ ಟೆಕ್ನಾಲಜಿ, ಪಾರೆಸ್ಟ್ರೀ, ವೆಟರ್ನರಿ, ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋ ಟೆಕ್ನಾಲಜಿ, ಫಿಶರಿಸ್, ಸೆರಿಕಲ್ಚರ್, ಹೋಮ್, ಕಮ್ಯುನಿಟಿ ಸೈನ್ಸ್, ಫುಡ್ ನ್ಯೂಟ್ರೀಷ್ಯನ್ ಮತ್ತು ಡಯಾಟಿಕ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ…

Read More

ಮಡಿಕೇರಿ ಫೆ.6 NEWS DESK : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.11 ಮತ್ತು 12 ರಂದು ನಡೆಯಲಿದೆ. ದೇವಾಲಯದಲ್ಲಿ ಎರಡು ದಿನಗಳ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ. ಫೆ.11 ರಂದು ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ಸಂಜೆ 6 ಗಂಟೆಗೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ. ಫೆ.12 ರಂದು ಬೆಳಿಗ್ಗೆ 10 ಗಂಟೆಯಿಂದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4.30 ಗಂಟೆಗೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿಂದ ಭಜನಾ…

Read More