ಮಡಿಕೇರಿ ಜ.11 NEWS DESK : ಮಡಿಕೇರಿ ನಗರದ ಶಕ್ತಿ ಪೀಠಗಳಲ್ಲಿ ಒಂದಾದ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಜ.14 ಮತ್ತು 15 ರಂದು ನಡೆಯಲಿದೆ. ಜ.14 ರಂದು ಸಂಜೆ 6 ಗಂಟೆಯಿಂದ ಪ್ರಾರ್ಥನೆ, ಪುಣ್ಯ, ಸಪ್ತಶುಧ್ಧಿ, ಪ್ರಸಾದ ಶುಧ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ದಿಶಾ ಬಳಿ ನಂತರ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಜ.15 ರಂದು ಬೆಳಗ್ಗೆ 8 ಗಂಟೆಯಿಂದ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ, ಆಶ್ಲೇಷ ಬಳಿ, ಕಲಶಾಭಿಶೇಕ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಯಿಂದ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.30ಕ್ಕೆ ಸಾಯಂಪೂಜೆ, 6.30ಕ್ಕೆ ರಂಜಪೂಜೆ, 7 ಗಂಟೆಗೆ ದೇವಾಲಯದ ಆವರಣದಲ್ಲಿ ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠ ಪೂಜೆ, ಶುದ್ಧಿ ಕಲಶಾಭಿಶೇಕ, ಮಂತ್ರಾಕ್ಷತೆ ನಂತರ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ…
ಲೇಖಕ: admin
ಕುಶಾಲನಗರ ಜ.11 NEWS DESK : ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಕೊಡಗು ಮೈಸೂರು ಜಿಲ್ಲೆಯ ಗಡಿ ಭಾಗದ ಕಾವೇರಿ ನದಿಯ ಎರಡು ಸೇತುವೆಗಳನ್ನು ಸ್ವಚ್ಛ ಮಾಡಿ ಬಣ್ಣ ಬಳಿಯುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಳೆದ ಒಂದು ವಾರದಿಂದ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಶಿಬಿರಾರ್ಥಿಗಳು 177 ವರ್ಷಗಳ ಹಿಂದೆ ಕಾವೇರಿ ನದಿಗೆ ನಿರ್ಮಾಣವಾದ ಹಳೆಯ ಸೇತುವೆಯ ಸ್ವಚ್ಛತೆ ಮತ್ತು ಎರಡು ಬದಿಗಳಲ್ಲಿ ಬೆಳೆದಿರುವ ಗಿಡ ಗಂಟೆಗಳನ್ನು ತೆರವುಗೊಳಿಸಿದರು. ಭಾರತ್ ಮಾತಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಫಾ.ಎಬಿನ್ ಮತ್ತು ಶಿಬಿರಾಧಿಕಾರಿ ಹೆಚ್.ಆರ್.ದಿನೇಶ್ ನೇತೃತ್ವದಲ್ಲಿ ಹಗಲು ರಾತ್ರಿ ಕೆಲಸ ನಿರ್ವಹಿಸಿ ನೂತನ ಸೇತುವೆಗೆ ಬಣ್ಣ ಬಳಿದರು. ಹಗಲು ವೇಳೆ ಸೇತುವೆಯ ಮೇಲೆ ವಾಹನಗಳ ಸಂಚಾರದ ಒತ್ತಡ ಇದ್ದ ಹಿನ್ನೆಲೆಯಲ್ಲಿ ರಾತ್ರಿ 9 ಗಂಟೆ ಯಿಂದ ತಡರಾತ್ರಿ ಒಂದು ಗಂಟೆಯ ತನಕ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಸೇರಿದಂತೆ ಶಿಬಿರದ ಐವತ್ತಕ್ಕೂ ಅಧಿಕ ಶಿಬಿರಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛತಾ…
ಕುಶಾಲನಗರ ಜ.11 NEWS DESK : ವಿದ್ಯಾರ್ಥಿಗಳು ಸೃಜನಶೀಲತೆ ಮೈಗೂಡಿಸಿಕೊಳ್ಳುವ ಮೂಲಕ ಸದಾ ಅಧ್ಯಯನಶೀಲರಾದಲ್ಲಿ ಹೆಚ್ಚಿನ ಜ್ಞಾನವಂತರಾಗಲು ಸಾಧ್ಯ. ಜ್ಞಾನಕ್ಕೆ ಸರಿ ಸಮನಾದ ಗೌರವ ಸಮಾಜದಲ್ಲಿ ಮತ್ತೊಂದಿಲ್ಲ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕರೆ ನೀಡಿದರು. ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ವವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಓದು ಉದ್ಯೋಗ ತಂದು ಕೊಟ್ಟರೆ, ಜ್ಞಾನ ಅವರನ್ನು ಅನ್ವೇಷಣೆಗೆ ಈಡು ಮಾಡುತ್ತದೆ ಎಂದು ಹೇಳಿದ ಶಶಿಧರ್, ಅಬ್ದುಲ್ ಕಲಾಂ, ಅಂಬೇಡ್ಕರ್, ಬುದ್ಧ, ಬಸವಣ್ಣನಂತಹ ಮೇರು ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಕರೆ ನೀಡಿದರು.ನೈತಿಕತೆ, ಸಚ್ಚಾರಿತ್ರ್ಯ, ಉತ್ತಮ ಸಂಸ್ಕಾರ ಇರುವವರಲ್ಲಿ ದೇಶದ ಭವಿಷ್ಯ ಅಡಗಿದೆ ಎಂದು ಹೇಳಿದರು. ಶಕ್ತಿ ಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಮಾತನಾಡಿ, ವಿದ್ಯಾರ್ಥಿಗಳು ಗುರಿಯನ್ನು ಮುಂದಿಟ್ಟು ಅದನ್ನು ತಲುಪಲು ನಿರಂತರ ಶ್ರಮ, ಸತತ ಅಧ್ಯಯನ ಹಾಗೂ ಏಕಾಗ್ರತೆ ಅತಿ ಮುಖ್ಯ. ವಿದ್ಯಾರ್ಥಿಗಳಿಗೆ ಸಾಧಕರು ಮಾದರಿಯಾಗಬೇಕು. ಪರೀಕ್ಷೆಯನ್ನು ಹಬ್ಬದಂತೆ ಆಚರಿಸಿ.…
ಮಡಿಕೇರಿ ಜ.11 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.3 ರಿಂದ ಕೊಡವ ಕ್ರಿಕೆಟ್ ಲೆದರ್ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯು ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ ಎಂದು ಫೌಂಡೇಶನ್ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಡ್ಡಿಂಗ್ ಅರ್ಜಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಟಿ-20 ಮಾದರಿಯ ಪಂದ್ಯಾವಳಿ ನಡೆಯಲಿದ್ದು, ಸೀಸನ್-1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದಾರೆ. ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳವ ನಿರೀಕ್ಷೆ ಇದ್ದು, ಆಸಕ್ತ ಆಟಗಾರರ ಬಿಡ್ಡಿಂಗ್ ಅರ್ಜಿ ನಮೂನೆಯನ್ನು ಪಡೆದು ಫೆ.28ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಎಲ್ಲಾ ಜನಾಂಗದ ಪ್ರತಿಭೆಗಳನ್ನು ಮುಂದೆ ತರುವ ಗುರಿ ಹೊಂದಿದ್ದೇವೆ. ಸೀಸನ್-2ರ ವಿಜೇತರಿಗೆ ಪ್ರಥಮ ಬಹುಮಾನ 2 ಲಕ್ಷ, ದ್ವಿತೀಯ 1 ಲಕ್ಷ, ತೃತೀಯ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಫೌಂಡೇಶನ್ನ ಉಪಾಧ್ಯಕ್ಷ ಪಾಲಚಂಡ ಜಗನ್ ಮಾತನಾಡಿ, ಈಗಾಗಲೇ…
ಮಡಿಕೇರಿ ಜ.11 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ 36ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವ ಜ.14 ರಂದು ನಡೆಯಲಿದೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14ರಂದು ನಡೆಯುವ ಮಕರ ಸಂಕ್ರಾಂತಿ ಮಹೋತ್ಸವಕ್ಕೆ ಜಿಲ್ಲೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು. ಜ.13ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಶೇಕ ಇತ್ಯಾದಿ ಸೇವೆ ನಡೆಯಲಿದೆ. ಜ.14ರ ಬೆಳಗ್ಗೆ 6.30 ಗಂಟೆಗೆ ನಿರ್ಮಾಲ್ಯ ವಿಸರ್ಜನೆ, ಉಷಾಪೂಜೆ, 7 ಗಂಟೆಗೆ ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರ ಪೂಜೆ, 7.30ರಿಂದ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಶ್ರೀ ಕುಟ್ಟಿಚಾತನ್ ವೆಳ್ಳಾಟಂ, 9 ಗಂಟೆಗೆ ಮುತ್ತಪ್ಪ ವೆಳ್ಳಾಟಂ, 10 ಗಂಟೆಗೆ ಶ್ರೀ ಪೋದಿ ದೇವರ ವೆಳ್ಳಾಟಂ ನಡೆಯಲಿದೆ ಎಂದು…
ಮಡಿಕೇರಿ ಜ.11 NEWS DESK : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 33ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನಾಚರಣೆಯ ಅಂಗವಾಗಿ ಜ.22 ಮತ್ತು 23 ರಂದು ಅಂತರರಾಜ್ಯ ಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ, ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಹಾಗೂ ಜಿಲ್ಲಾಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಳತ್ತಮನೆ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ಸಮಬಲೀರಣ ಮತ್ತು ಕ್ರೀಡಾ ಇಲಾಖೆ ಕೊಡಗು, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಜ.22 ರಂದು ಅಪರಾಹ್ನ 3.30 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ತಾಳತ್ತಮನೆ ಹೋಟೆಲ್ ಆಕ್ಸಿರಿಚ್ ಮಾಲೀಕ ಪಿ.ಟಿ.ಉಣ್ಣಿಕೃಷ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ್ ಲೋಚನ,…
ಮಡಿಕೇರಿ ಜ.11 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಕಾಮಗಾರಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ವೀಕ್ಷಿಸಿದರು. ಸಂಬಂಧಪಟ್ಟ ಎಂಜಿನಿಯರ್ ಅವರಿಂದ ಮಾಹಿತಿ ಪಡೆದು ಮಾತನಾಡಿದ ಸಚಿವರು ತಡೆಗೋಡೆಯ ದುರಸ್ತಿ ಕಾರ್ಯವನ್ನು ಪ್ರಸಕ್ತ ಸಾಲಿನ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ಕಡೆಗೆ ತೆರಳುವ ರಸ್ತೆಯ ಬಲಭಾಗದಲ್ಲಿ ಕೆಲ ವರ್ಷಗಳ ಹಿಂದೆ, ಜಿಲ್ಲಾಡಳಿತ ಭವನದ ಸುರಕ್ಷತೆಗಾಗಿ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಇದು ನಂತರದ ವರ್ಷದ ಭಾರೀ ಮಳೆಯ ಸಂದರ್ಭ ಕುಸಿತಕ್ಕೆ ಒಳಗಾಗುವ ಅಪಾಯವನ್ನು ಎದುರಿಸಿದ ಹಿನ್ನೆಲೆ, ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು. ತಡೆಗೋಡೆಯನ್ನು ಎರಡು ಹಂತಗಳಲ್ಲಿ ಮೆಟ್ಟಿಲಿನ ಮಾದರಿಯಲ್ಲಿ ದುರಸ್ತಿ ಪಡಿಸಲಾಗುತ್ತದೆ. ಈ ಹಿಂದಿನ ತಡೆಗೋಡೆಯ ಅರ್ಧ ಭಾಗವನ್ನು ಅದು ಇರುವ ಯಥಾಸ್ಥಿತಿಯಲ್ಲಿ ಗಟ್ಟಿಗೊಳಿಸಿ, ಅದರ ಮೇಲೆ ಕಾಂಕ್ರೀಟ್ ಹಾಕಲಾಗುತ್ತದೆ. ಬಳಿಕ ಮತ್ತೊಂದು ಹಂತವನ್ನು 45 ಡಿಗ್ರಿ ಕೋನದಲ್ಲಿ ತಡೆಗೋಡೆ ನಿರ್ಮಿಸಿ ಬಲ ಪಡಿಸಲಾಗುತ್ತದೆ ಎಂದು…
ಮಡಿಕೇರಿ ಜ.11 NEWS DESK : ಕೊಡಗಿನ ಸೈನಿಕ ಶಾಲೆಗೆ ಭಾರತೀಯ ವಾಯು ಸೇನೆಯ ತರಬೇತಿ ಕಮಾಂಡ್ ಏರ್ ಮಾರ್ಷಲ್ ನಾಗೇಶ್ ಕಪೂರ್ (ಎ.ವಿ.ಎಸ್.ಎಂ, ವಿ.ಎಂ, ಎಒಸಿ-ಇನ್-ಸಿ) ಪತ್ನಿ ಏ.ಎಫ್.ಎಫ್.ಡಬ್ಲೂ ಏ (ಪ್ರಾದೇಶಿಕ) ಅಧ್ಯಕ್ಷರಾದ ವಂದನಾ ಕಪೂರ್ ಅವರೊಂದಿಗೆ ಭೇಟಿ ನೀಡಿದರು. ಶಾಲೆಯಲ್ಲಿರುವ ಯುದ್ಧವೀರರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸುವುದರ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಸಿದರು. ನಂತರ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ತಮ್ಮ ವೃತ್ತಿಪರ ಸಾಧನೆಗಳು ಮತ್ತು ತರಬೇತಿಯ ಆರಂಭಿಕ ದಿನಗಳಿಂದ ಏಒಸಿ-ಇನ್-ಸಿ ತರಬೇತಿ ಕಮಾಂಡ್, ಭಾರತೀಯ ವಾಯುಸೇನೆಯ ಅಧಿಕಾರಿಯಾಗುವವರೆಗಿನ ಗಮನಾರ್ಹ ಹಾಗೂ ಸುದೀರ್ಘ ಪ್ರಯಾಣದ ಮೇಲೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳು ತಮ್ಮ ಜೀವನದ ಮಹಾತ್ವಾಕಾಂಕ್ಷೆಗಳನ್ನು ನೆರವೇರಿಸಿಕೊಳ್ಳಲು ಉತ್ಸಾಹದಿಂದ ಕಾರ್ಯಪ್ರವೃತರಾಗಬೇಕೆಂದು ಸಲಹೆ ನೀಡಿದರು. ಯುಪಿಎಸ್ಸಿ, ಎನ್ಡಿಎ ಮತ್ತು ವಿವಿಧ ರಕ್ಷಣಾ ತರಬೇತಿ ಅಕಾಡೆಮಿಗಳಿಗೆ ಹಾಗೂ ಇತರೆ ಸೇನಾ ಇಲಾಖೆಯ ಪ್ರವೇಶಾತಿಗಳಿಗೆ ತಯಾರಿ ಮಾಡುವ ಕುರಿತು ಮಾರ್ಗದರ್ಶನ ನೀಡಿದರು. ಭಾರತೀಯ ಸಶಸ್ತ್ರ ಪಡೆಗಳಲ್ಲಿ ಬದ್ಧತೆ…
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯಲ್ಲಿ ಆದಿವಾಸಿಗಳ ಮೇಲೆ ನಡೆದಿರುವ ಎಲ್ಲಾ ದೌರ್ಜನ್ಯದ ಪ್ರಕರಣಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ವಿಶೇಷ ಅದಾಲತ್ ನಡೆಸಬೇಕೆಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ.ಎಸ್.ವೈ.ಗುರುಶಾಂತ್, ಜಿಲ್ಲೆಯಲ್ಲಿ ಆದಿವಾಸಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಲಿಷ್ಠರ ಒತ್ತಡಗಳಿಗೆ ಮಣಿಯದೆ ನಿಷ್ಠುರ, ನಿಷ್ಪಕ್ಷಪಾತದಿಂದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಆದಿವಾಸಿಗಳು ಹಾಗೂ ದುರ್ಬಲ ವರ್ಗಗಳ ಕೆಲಸಗಾರರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಕೋವಿ ತೋರಿಸಿ ಬೆದರಿಸುವ, ನಾಯಿ ಬಿಟ್ಟು ಕಚ್ಚಿಸುವ, ಸಾಲದ ನೆಪಹೇಳಿ ಜೀತದಾಳುಗಳನ್ನಾಗಿ ದಂಡಿಸಿ ದುಡಿಸುವ ಪ್ರಕರಣಗಳು ನಡೆಯುತ್ತಲೇ ಇದೆ. ಈ ರೀತಿಯ ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನಿಲ್ಲದೆ ಬಲಾಢ್ಯ ಆರೋಪಿಗಳನ್ನು ರಕ್ಷಿಸುವ…
ಮಡಿಕೇರಿ ಜ.11 NEWS DESK : ಮಡಿಕೇರಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ನಗರದ ತಮ್ಮ ಕಚೇರಿಗೆ ಆಗಮಿಸಿದ್ದ ಸಂಸದರು ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿˌ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೇ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.






