ಲೇಖಕ: admin

ಮೈಸೂರು NEWS DESK ಡಿ.29 :  ಮೈಸೂರಿನಲ್ಲಿ ಹನುಮ ಜಯಂತಿಯ ಪ್ರಯುಕ್ತ ಮೈಸೂರು ಹನುಮಂತೋತ್ಸವ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 6ನೇ ವರ್ಷದ ಹನುಮ ಹಬ್ಬ ಹಾಗೂ ಶ್ರೀ ಆಂಜನೇಯಸ್ವಾಮಿಯ ಭವ್ಯ ಮೆರವಣಿಗೆಯ ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಪಾಲ್ಗೊಂಡರು. ವಿಶೇಷ ಪೂಜೆ ಸಲ್ಲಿಸಿದ ಅವರು ಯುವ ಸಮೂಹದೊಂದಿಗೆ ಹೆಜ್ಜೆ ಹಾಕಿದರು.

Read More

ನವದೆಹಲಿ NEWS DESK ಡಿ.29 : ತಾಲಿಬಾನ್ ಯೋಧರು ಇಂದು ಮುಂಜಾನೆ ಅಫ್ಘಾನಿಸ್ತಾನ-ಪಾಕ್ ಗಡಿಯಲ್ಲಿ ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿ ವಾಯುಪಡೆ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ತಾಲಿಬಾನಿಗಳು ಫಿರಂಗಿಗಳು ಮತ್ತು ಮೆಷಿನ್ ಗನ್ ಗಳ ಮೂಲಕ ದಾಳಿ ನಡೆಸಿದಾಗ ಸುಮಾರು 19 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.

Read More

ಸಿಯೋಲ್ NEWS DESK ಡಿ.29 : ರನ್‌ವೇಯಲ್ಲಿ ವಿಮಾನ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಕಾರಣ ಸುಮಾರು 85 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ನಡೆದಿದೆ. 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಲ್ಲಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 85ಕ್ಕೇರಿದೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.

Read More

ನವದೆಹಲಿ NEWS DESK ಡಿ.29 : ತಾಲಿಬಾನ್ ಯೋಧರು ಇಂದು ಮುಂಜಾನೆ ಅಫ್ಘಾನಿಸ್ತಾನ-ಪಾಕ್ ಗಡಿಯಲ್ಲಿ ದಾಳಿ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿ ವಾಯುಪಡೆ ನಡೆಸಿದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ತಾಲಿಬಾನಿಗಳು ಫಿರಂಗಿಗಳು ಮತ್ತು ಮೆಷಿನ್ ಗನ್ ಗಳ ಮೂಲಕ ದಾಳಿ ನಡೆಸಿದಾಗ ಸುಮಾರು 19 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಹೇಳಿಕೊಂಡಿದೆ. ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.

Read More

ಕುಶಾಲನಗರ NEWS DESK ಡಿ.29 : ಮರಗೋಡಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭ ವಸ್ತç ಸಂಹಿತೆ ಕುರಿತು ನಡೆದ ಭಿನ್ನಾಭಿಪ್ರಾಯವನ್ನು ನೆಪ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪೋಸ್ಟ್ ಮಾಡುತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕುಶಾಲನಗರ ಗೌಡ ಸಮಾಜ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕ ಹೇಳಿಕೆಗಳನ್ನು ನೀಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇಬ್ಬರು ವ್ಯಕ್ತಿಗಳು ಪ್ರಚೋದನಕಾರಿ ಬರಹದ ಮೂಲಕ ಘರ್ಷಣೆಗೆ ಅವಕಾಶ ಕಲ್ಪಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತಕ್ಷಣ ಇವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಕರಂದ್ಲಾಜೆ ಆನಂದ್, ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಚೆರಿಯಮನೆ ರಷಿ ಹರೀಶ್, ಪದ್ಮಾವತಿ ಗೌಡ…

Read More

ಕುಶಾಲನಗರ ಡಿ.28 NEWS DESK :  ಕಾವೇರಿ ನದಿ ಸ್ವಚ್ಛತೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಯುವ ಬ್ರಿಗೇಡ್ ಕಾರ್ಯಕರ್ತರ ‘ಕಾವೇರಿ ನಮನ’ ಬೈಕ್ ರ‍್ಯಾಲಿ ತಂಡ ಇಂದು ಜಿಲ್ಲೆಗೆ ಆಗಮಿಸಿತು. ಯುವ ಬ್ರಿಗೇಡ್ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಶ್ರೀರಂಗಪಟ್ಟಣದಿಂದ ಚಾಲನೆಗೊಂಡ ಸುಮಾರು 100ಕ್ಕೂ ಅಧಿಕ ಸ್ವಯಂಸೇವಕರು 50ಕ್ಕೂ ಅಧಿಕ ಬೈಕ್ ಗಳಲ್ಲಿ ರಾಮನಾಥಪುರ ಮೂಲಕ ಕುಶಾಲನಗರಕ್ಕೆ ಸಂಜೆ ಆಗಮಿಸಿದರು. ಈ ಸಂದರ್ಭದಲ್ಲಿ ಕುಶಾಲನಗರ ಗಡಿಭಾಗದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು ಬರಮಾಡಿಕೊಂಡರು. ಕುಶಾಲನಗರ ಕೊಪ್ಪ ಬಳಿ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಯುವ ಬ್ರಿಗೇಡ್ ಮಾರ್ಗದರ್ಶಕರು ಹಾಗೂ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ  ಕುಶಾಲನಗರ ವಿವೇಕಾನಂದ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ನಂತರ ತಂಡ ಮಡಿಕೇರಿ ಮೂಲಕ ಭಾಗಮಂಡಲಕ್ಕೆ ತೆರಳಿತು. ಭಾಗಮಂಡಲದಲ್ಲಿ ಸಂಜೆ ಸಂಗಮದಲ್ಲಿ ಆರತಿ…

Read More

12 ರಾಶಿಗಳ ರಾಶಿಗಳ 2025 ರ ವರ್ಷ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429)  ಮೇಷ ರಾಶಿ :: ಈ ರಾಶಿಯವರಿಗೆ ಮಿಶ್ರಫಲ ಕೊಡಲಿದೆ. ಉದ್ಯೋಗದಲ್ಲಿ ಕಿರಿಕಿರಿ, ಮಾನಸಿಕ ಒತ್ತಡ, ಶನಿ ಪ್ರಭಾವ ಇರಲಿದೆ. ಸಾಡೆಸಾತ್ ಶನಿ ಆರಂಭವಾಗುವುದು, ಗುರು ಬಲವು ಮೇ ತಿಂಗಳವರೆಗೆ ಇರುವುದರಿಂದ ಯಾವುದೇ ಕೆಲಸ ಕಾರ್ಯಗಳನ್ನು ಮತ್ತು ಹಣಕಾಸಿನ ವ್ಯವಹಾರವನ್ನು ಮಾಡುವುದಾದರೆ ಮೇ ತಿಂಗಳ ಒಳಗೆ ಮಾಡಿಕೊಳ್ಳಬೇಕು. ಅನಾರೋಗ್ಯ, ಕೌಟುಂಬಿಕ ಕಲಹ ಆಗಲಿದೆ. :: ಪರಿಹಾರ :: ಶಿವ ದೇವರ ಆರಾಧನೆಯನ್ನು ಮಾಡಿ. ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ಈ ರಾಶಿಯವರಿಗೆ ಈ ವರ್ಷ ಉತ್ತಮ ಯೋಗವಿದ್ದು, ಅವಿವಾಹಿತರಿಗೆ ವಿವಾಹ ಯೋಗ, ಮನೆ ಕಟ್ಟುವವರಿಗೆ ಮನೆ ಸಂಪೂರ್ಣವಾಗಿ ಕಟ್ಟುವ ಯೋಗ, ಹಣ ಯೋಗ, 11ನೇ ಸ್ಥಾನದಲ್ಲಿ ಶನಿ ಇರುವುದರಿಂದ ಸ್ಥಾನಮಾನ ಪ್ರಾಪ್ತಿ, ಸನ್ಮಾನ, ಶತ್ರುನಾಶ, ಕೋರ್ಟು ಕಚೇರಿ ಕೆಲಸದಲ್ಲಿ…

Read More

ಮಡಿಕೇರಿ ಡಿ.28 NEWS DESK : ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಪಣಿಎರವರ ಪೊನ್ನು (21) ಎಂಬುವವರೇ ಮೃತ ಕಾರ್ಮಿಕ. ಗುಂಡು ಹೊಡೆದ ಆರೋಪದಡಿ ವಿರಾಜಪೇಟೆಯ ಬ್ಯಾಂಕ್ ವೊಂದರ ಭದ್ರತಾ ಸಿಬ್ಬಂದಿ ಪೊರ್ಕಂಡ ಚಿಣ್ಣಪ್ಪ ಎಂಬಾತನನ್ನು ಬಂಧಿಸಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲಿಸರು ಆರೋಪಿಯ ಬಳಿಯಿಂದ ಕೃತ್ಯಕ್ಕೆ ಬಳಸಿದ್ದ ಕೋವಿಯನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಮಿಕ ದಂಪತಿ ಪಣಿಎರವರ ಪೊನ್ನು ಹಾಗೂ ಗೀತಾ ಕೆಲವು ತಿಂಗಳ ಹಿಂದೆ ಚೆಂಬೆಬೆಳ್ಳೂರು ಗ್ರಾಮದ ತೋಟದ ಮಾಲೀಕರೊಬ್ಬರ ಲೈನ್ ಮನೆಗೆ ಬಂದು ನೆಲೆಸಿದ್ದರು. ಡಿ.27 ರಂದು ಸಂಜೆ ಕಾರ್ಮಿಕ ದಂಪತಿ ಪಕ್ಕದಲ್ಲೇ ಇದ್ದ ಆರೋಪಿ ಚಿಣ್ಣಪ್ಪ ಅವರ ತೋಟದ ಅಂಚಿನಲ್ಲಿದ್ದ ಹಲಸಿನ ಮರದ ಬಳಿಗೆ ತೆರಳಿದ್ದರು. ಈ ಸಂದರ್ಭ ಪೊನ್ನು ಹಲಸಿನ ಮಿಡಿ ಕೊಯ್ಯಲು ಮರವೇರಿದ್ದರು. ಇದೇ ಸಂದರ್ಭ ಸ್ಥಳಕ್ಕೆ ಬಂದ ಚಿಣ್ಣಪ್ಪ, ಹಲಸಿನ ಮರವೇರಿದ ಪೊನ್ನವನ್ನು ನಿಂದಿಸಿ…

Read More

ಸಿದ್ದಾಪುರ ಡಿ.28 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ವೀಲ್ ಚೇರ್, ವಾಟರ್ ಬೆಡ್ ಹಾಗೂ ವಾತ್ಸಲ್ಯ ಕಿಟ್’ ಗಳನ್ನು  ಚೆನ್ನಂಗಿ ಕಾರ್ಯಕ್ಷೇತ್ರದಲ್ಲಿ ವಿತರಣೆ ಮಾಡಲಾಯಿತು.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕ ರಾಕೇಶ್ ಮಾತನಾಡಿ, ಗ್ರಾಮದ ಕಮಲಮ್ಮ ಎಂಬುವವರು ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಗಿದೆ ಹಾಗೂ ವಾತ್ಸಲ್ಯ ಕಿಟ್ ನ್ನು ಸದಸ್ಯರಾದ ರಾಜು, ವಾಟರ್ ಬೆಡ್ ನ್ನು ಗಣಪತಿ ಅವರಿಗೆ ವಿತರಿಸಲಾಗಿದೆ ಎಂದು ತಿಳಿಸಿದರು. ಒಕ್ಕೂಟದ ಅಧ್ಯಕ್ಷ ಜೈಮಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ನಿಕಟಪೂರ್ವ ವ್ಯಕ್ತಿ ಹಾಗೂ ಚನ್ನಂಗಿ ಕಾರ್ಯಕ್ಷೇತ್ರದ ಮಾಜಿ ಸೇವಾ ಪ್ರತಿನಿಧಿ ಯತೀಶ್ ಹಾಜರಿದ್ದರು.

Read More

ಕುಶಾಲನಗರ ಡಿ.28 NEWS DESK : ಅರಣ್ಯವಾಸಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಿಗಬೇಕಾದ ಸವಲತ್ತುಗಳನ್ನು ದೊರಕಿಸಲು ಕಳೆದ ಅನೇಕ ದಶಕಗಳ ಕಾಲ ಹೋರಾಟ ನಡೆಸಿ ಇದೀಗ ಅನಾರೋಗ್ಯಕ್ಕೆ ತುತ್ತಾಗಿರುವ ಮಾವಿನಹಳ್ಳ ಗಿರಿಜನ ಹಾಡಿಯ ಜೆ.ಪಿ.ರಾಜು ಹಾಗೂ ಅವರ ಪತ್ನಿ ಪಾರ್ವತಿ ಅವರನ್ನು ಹಾಡಿಯ ಅರಣ್ಯ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ಜಿ.ಪಂ ಮಾಜಿ ಸದಸ್ಯ ಹಾಗೂ ಗಿರಿಜನ ಮುಖಂಡ ಆರ್.ಕೆ.ಚಂದ್ರು, ಧ್ವನಿ ಇಲ್ಲದ ಗಿರಿಜನ ವಾಸಿಗಳಿಗಾಗಿ ಹಗಲು ಇರುಳೆನ್ನದೇ ಹೋರಾಟ ನಡೆಸಿ ಅನೇಕ ಸೌಲಭ್ಯಗಳನ್ನು ಒದಗಿಸಿಕೊಟ್ಟ ಜೆ.ಪಿ.ರಾಜು ಅವರನ್ನು ಮಹಾತ್ಮ ಗಾಂಧಿಗೆ ಹೋಲಿಸಿದರಲ್ಲದೇ, ಕನಿಷ್ಟ ಗುಡಿಸಲು ಹಾಗೂ ಕುಡಿಯಲು ನೀರು ಕೂಡ ಇಲ್ಲದ ಪರಿಸ್ಥಿತಿಯಲ್ಲಿ ನಮ್ಮ ಅರಣ್ಯವಾಸಿಗಳು ಇದ್ದಂತಹ ಸಂದರ್ಭದಲ್ಲಿ ಮನೆ ಮಠ ತೊರೆದು ಗಿರಿಜನರ ಹಕ್ಕುಗಳಿಗಾಗಿ, ಗಿರಿಜನ ಮಕ್ಕಳ ಶಿಕ್ಷಣಕ್ಕಾಗಿ ಅವಿರತ ದುಡಿದಿರುವುದನ್ನು ನಾವು ಯಾರೂ ಕೂಡ ಮರೆಯುವಂತಿಲ್ಲ. ನಾಗರಹೊಳೆ ಅರಣ್ಯದಂಚಿನಲ್ಲಿ ತಾಜ್ ಗ್ರೂಫ್ ಅವರು ಹೋಟೆಲ್ ನಿರ್ಮಿಸಲು ಮುಂದಾದಗ ಜೆ.ಒಇ.ರಾಜು ಅವರ ಹೋರಾಟದಿಂದಾಗಿಯೇ ಅದು ಸ್ಥಗಿತಗೊಂಡಿತು.…

Read More