ಮಡಿಕೇರಿ ಫೆ.6 NEWS DESK : ಕೊಡಗು ಜಿಲ್ಲಾ ಕಂದಾಯ ಇಲಾಖೆ ವತಿಯಿಂದ ಫೆ.8 ಮತ್ತು 9 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಕಂದಾಯ ಇಲಾಖೆಗಳ 5 ತಂಡ ಹಾಗೂ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗಳ 1 ತಂಡ ಸೇರಿದಂತೆ ಒಟ್ಟು 6 ತಂಡಗಳ ನಡುವೆ ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. 5 ಓವರ್ಗಳಿಗೆ ಪಂದ್ಯಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ಬಹುಮಾನ ನೀಡಲಾಗುತ್ತದೆ. ಇದರೊಂದಿಗೆ ಉತ್ತಮ ಪ್ರದರ್ಶನ ತೋರಿದ ಆಟಗಾರರಿಗೆ ವೈಯುಕ್ತಿಕ ಬಹುಮಾನವನ್ನೂ ನೀಡಲಾಗುತ್ತದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಲೇಖಕ: admin
ಮಡಿಕೇರಿ ಫೆ.6 NEWS DESK : ಕೇಂದ್ರ ಬಜೆಟ್ ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, 2025-26 ಕೇಂದ್ರ ಬಜೆಟ್ ಜನವಿರೋಧಿಯಾಗಿದ್ದು, ಜನಸಾಮಾನ್ಯರ ಪರವಾಗಿಲ್ಲ. ಅಂಬಾನಿ, ಅದಾನಿ ಪರವಾಗಿದ್ದು, ದೇಶದ ಕಾರ್ಪೊರೇಟ್ ಕಂಪೆನಿಗಳು, ಬಂಡವಾಳಶಾಹಿಗಳಿಗೆ ಶಕ್ತಿ ತುಂಬುವ ಬಜೆಟ್ ಆಗಿದೆ. ಅಸಂಘಟಿತ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ಅವರನ್ನು ಆರ್ಥಿಕವಾಗಿ ಸಬಲರಾಗಿಸುವ ಯೋಜನೆಗಳಿಲ್ಲ. ರೈತರಿಗೂ ಯಾವುದೇ ಕೊಡುಗೆ ಕೊಟ್ಟಿಲ್ಲ ಎಂದು ದೂರಿದ ಅವರು, ಕಾರ್ಮಿಕರ ಪರವಾಗಿ ಬಜೆಟ್ ಮಂಡಿಸುವಂತೆ ಎಂದು ಆರೋಪಿಸಿದ ಭರತ್ ಕೇಂದ್ರ ಸರ್ಕಾರ ಕಾರ್ಮಿಕರ ಪರವಾದ, ರೈತರ ಪರವಾದ ಬಜೆಟ್ ಮಂಡಿಸುವಂತೆ ಒತ್ತಾಯಿಸಿದರು. ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಾಬು, ಖಜಾಂಚಿ ಎನ್.ಡಿ.ಕುಟ್ಟಪ್ಪ, ಪದಾಧಿಕಾರಿಗಳಾದ ಶಾಜಿ ರಮೇಶ್, ಸಾವಿತ್ರಿ, ಜಾನಕಿ,…
ಮಡಿಕೇರಿ NEWS DESK ಫೆ.6 : ಮಡಿಕೇರಿ ನಗರದ ಸಂತ ಮೈಕಲರ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಅವನಿಕಾ ಬಿ.ಸಿ ಪ್ರತಿಭಾ ಕಾರಂಜಿ ಹಿಂದಿ ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹೇಮಾ ಹಾಗೂ ಚಂದನ್ ದಂಪತಿಯ ಪುತ್ರಿ.
ನಾಪೋಕ್ಲು ಫೆ.6 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿಯು ಕಾಂಗ್ರೆಸ್ ಆಡಳಿತದಲ್ಲಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ಧಿ ಸಹಿಸದ ಕೆಲವು ಕಿಡಿಗೇಡಿಗಳು ಪಂಚಾಯಿತಿ ಹಾಗೂ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಅವರಿಗೆ ಲಿಖಿತ ದೂರು ಸಲ್ಲಿಸಿದ ಗ್ರಾ.ಪಂ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದರು. ತಪ್ಪಿದ್ದಲ್ಲಿ ಪಂಚಾಯಿತಿ ಹಾಗೂ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಕಾಂಗ್ರೆಸ್ ವಲಯ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಬೂತ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ ಹಾಗೂ ಗ್ರಾ.ಪಂ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಫೆ.6 NEWS DESK : ಕುಶಾಲನಗರ ಪಟ್ಟಣ ಹೃದಯ ಭಾಗದಲ್ಲಿ ನೆಲೆ ಕಂಡಿರುವ ಐತಿಹಾಸಿಕ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಹಿನ್ನಲೆಯಲ್ಲಿ ಭೂಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಫೆ.9 ಮತ್ತು 10 ರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 6 ಕೋಟಿ ವೆಚ್ಚದಲ್ಲಿ ದೇವಾಲಯ ನವೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ಹಿನ್ನಲೆಯಲ್ಲಿ ಫೆ. 9 ರಂದು ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ, ಋತ್ವಿಕ್ ವರಣ,12 ಕಾಯಿ ಗಣ ಹೋಮ, ಮುಷ್ಠಿ ಕಾಣಿಕೆ ಸಮರ್ಪಣೆ, ನಂತರದಲ್ಲಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ರಾತ್ರಿ ಪ್ರೇತಾ ಆಕರ್ಷಣೆ ಉಚ್ಚಾಟನೆ, ಅಘೋರ ಬಲಿ ನಡೆಯಲಿದೆ. ಫೆ. 10 ರಂದು ಶತ ರುದ್ರಾಭಿಷೇಕ ಬೆಳಿಗ್ಗೆ 7 ರಿಂದ 10ವರೆಗೆ, ನವಗ್ರಹ ಸಹಿತ ಭೂವರಾಹ ಸ್ವಾಮಿ ಹೋಮ ಬೆಳಿಗ್ಗೆ 9 ರಿಂದ 11.30ವರೆಗೆ, ಮಧ್ಯಾಹ್ನ…
ಮಡಿಕೇರಿ ಫೆ.6 NEWS DESK : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಫೆ.7 ರಿಂದ ಚಿತ್ರದುರ್ಗದಲ್ಲಿ ನಡೆಯಲಿರುವ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯ ಕವ್ವಾಲಿ ಸ್ಪರ್ಧೆಗೆ ಮಡಿಕೇರಿಯ ಸಂತ ಜೋಸೆಫರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಅಹ್ಮದ್ ಮುಝಮಿಲ್, ಶಾಂವಾಜ್, ಎಂ.ಹೆಚ್.ಮೊಹ್ಮದ್ ಮಿಶಾಲ್, ಎಂ.ಬಿ.ಮೊಹ್ಮದ್ ರಿಯಾನ್ , ಎಂ.ಯು.ರೆಹಾನ್ , ಎಂ.ಎಂ.ಮೊಹ್ಮದ್ ಮುಷೀರ್ ಆಯ್ಕೆಯಾಗಿದ್ದಾರೆ.
ಮಡಿಕೇರಿ NEWS DESK ಫೆ.5 : ಕೊಡಗು ಜಿಲ್ಲೆಯ ಗಡಿ ಗ್ರಾಮ ಪಂಚಾಯ್ತಿ ಕರಿಕೆ ವ್ಯಾಪ್ತಿಯ ಪ್ರದೇಶದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಭಾಗಮಂಡಲಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳನ್ನು ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಭೇಟಿಯಾದ ಎನ್.ಬಾಲಚಂದ್ರನ್ ನಾಯರ್ ಅವರು ಕರಿಕೆ ಗ್ರಾಮವು ಕರ್ನಾಟಕ- ಕೇರಳ ರಾಜ್ಯಗಳ ಗಡಿಯಲ್ಲಿದ್ದು, ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಕೋರಿದರು. ಕರಿಕೆ ಗ್ರಾಮ ಜಿಲ್ಲಾ ಕೇಂದ್ರವಾದ ಮಡಿಕೇರಿಯಿಂದ 70ಕಿ.ಮೀ ಮತ್ತು ಹೋಬಳಿ ಕೇಂದ್ರವಾದ ಭಾಗಮಂಡಲದಿಂದ 30 ಕಿ.ಮೀ ದೂರದಲ್ಲಿದೆ. ಸಾರಿಗೆ ಸಂಚಾರ ವ್ಯವಸ್ಥೆಯು ದುಸ್ತರವಾಗಿದೆ. ಗ್ರಾಮದ ಜನಸಂಖ್ಯೆಯ ಶೇಕಡಾ 70 ಭಾಗದಷ್ಟು ಜನರು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಶೇಕಡಾ 95 ರಷ್ಟು ಮಂದಿ ಕೃಷಿ ಕೂಲಿ ಕಾರ್ಮಿಕರು ಹಾಗೂ ಅತೀ ಸಣ್ಣ ರೈತರಾಗಿದ್ದಾರೆ.…
ಮಡಿಕೇರಿ ಫೆ.5 NEWS DESK : ಕೊಡಗಿನ ಕೊಡವರು ಹಾಗೂ ಕೊಡವ ಭಾಷಿಕ ಸಮುದಾಯದ ವಿಶಿಷ್ಟ, ಸಂಸ್ಕೃತಿ ಮತ್ತು ಪರಂಪರೆಗಳ ಸಂರಕ್ಷಣೆಯ ಮುಖ್ಯ ಧ್ಯೇಯದೊಂದಿಗೆ ದಕ್ಷಿಣ ಕೊಡಗಿನ ಕುಟ್ಟದಿಂದ ಆರಂಭಗೊಂಡಿರುವ ‘ಬಾಳೋ ಕೊಡವಾಮೆ’ ಬೃಹತ್ ಪಾದಯಾತ್ರೆ ನಾಲ್ಕನೇ ದಿನವೂ ಭಾರೀ ಜನಸ್ತೋಮದೊಂದಿಗೆ ಮಡಿಕೇರಿ ತಾಲ್ಲೂಕು ಗಡಿ ಬೇತ್ರಿಯನ್ನು ತಲುಪಿತು. ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಇಂದು ಬೆಳಗ್ಗೆ ಬಿಟ್ಟಂಗಾಲದ ಹೆಗ್ಗಡೆ ಸಮಾಜದಿಂದ ಆರಂಭಗೊಂಡಿತು. ಸಹಸ್ರಾರು ಸಂಖ್ಯೆಯ ಸಮುದಾಯ ಬಾಂಧವರು ಸಾಂಪ್ರದಾಯಿಕ ಉಡುಪಿನೊಂದಿಗೆ ಅತ್ಯಂತ ಶಿಸ್ತುಬದ್ಧವಾಗಿ ಜಾಥದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು. ನಾಲ್ಕನೇ ದಿನದ ಪಾದಯಾತ್ರೆ ಬಿಟ್ಟಂಗಾಲದಿಂದ ತಾಲ್ಲೂಕು ಕೇಂದ್ರ ವಿರಾಜಪೇಟೆ ಮೂಲಕ ಕದನೂರು, ಕಾಕೋಟುಪರಂಬುವನ್ನು ಹಾದು ಸಂಜೆ ಬೇತ್ರಿ ಗ್ರಾಮದಲ್ಲಿ ಕೊನೆಗೊಂಡಿತು. ಬೇತ್ರಿಯ ಕಾವೇರಿ ನದಿಗೆ ಅಡ್ಡಲಾಗಿ ಇರುವ ಸೇತುವೆಯಲ್ಲಿ ದಕ್ಷಿಣ ಕೊಡಗಿನಿಂದ ಆರಂಭಗೊಂಡ ಜಾಥವನ್ನು ಮಡಿಕೇರಿ ತಾಲ್ಲೂಕಿನ ಕೊಡವ ಸಮುದಾಯ ಬಾಂಧವರು ಸ್ವಾಗತಿಸಿದರು. ಪಾದಯಾತ್ರೆಯ ಮೂಲಕ ಕೊಡವ ಸಮುದಾಯ ಬಾಂಧವರು ತಮ್ಮ ಜನಾಂಗದ ಅಸ್ತಿತ್ವ ಮತ್ತು…
ಮಡಿಕೇರಿ ಫೆ.5 NEWS DESK : ಬಿಟ್ಟಂಗಾಲದಲ್ಲಿರುವ ಸಮಾಜದ ಕಟ್ಟಡ ಅಭಿವೃದ್ಧಿಯ ಮುಂದುವರಿದ ಕಾಮಗಾರಿಗೆ ಅನುದಾನ ಕೊರಿ ಕೊಡಗು ಹೆಗ್ಗಡೆ ಸಮಾಜದ ನಿಯೋಗವು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಭೇಟಿ ಮಾಡಿತು. ಬೆಂಗಳೂರಿನ ವಿಕಾಸಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಪ್ರಮುಖರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ, ಉಪಾಧ್ಯಕ್ಷ ಕೊರಕುಟ್ಟಿರ ಸರಚಂಗಪ್ಪ, ನಿರ್ದೇಶಕರಾದ ಕೊರಂಡ ಪ್ರಕಾಶ್ ನಾಣಯ್ಯ, ಪ್ರಮುಖರಾದ ಪಡಿಞರಂಡ ಗಿರೀಶ್, ಕಾಕೇರ ರವಿ ಮತ್ತಿತರ ಪ್ರಮುಖರು ಹಾಜರಿದ್ದರು.
ಮಡಿಕೇರಿ ಫೆ.5 NEWS DESK : ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ದೊರಕಿಸುವುದರೊಂದಿಗೆ, ಬುಡಕಟ್ಟು ಮಂದಿಯ ಆರೋಗ್ಯ ರಕ್ಷಣೆಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಔಷಧಿಗಳು ಉಚಿತವಾಗಿ ದೊರಕಿಸಿಕೊಡಬೇಕೆಂದು ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘದ ಸಲಹೆಗಾರ ಎ.ಬಿ.ವಿನಯ ಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಡಕಟ್ಟು ಕಾರ್ಮಿಕರ ಸಂಘ ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ ಸಂಘಟನೆಗಳು ಒಗ್ಗೂಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಕ್ಕೆ ಆಗ್ರಹಿಸಿ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ ನಡೆಸುತ್ತಿವೆ. ಬೇಡಿಕೆಗಳ ಮನವಿ ಪತ್ರವನ್ನು ಆಯಾ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಆರೋಗ್ಯ ಸಚಿವರಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದರು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಗುಣಮಟ್ಟದ ಔಷಧಿ ಪೂರೈಸಲು ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಹಿಂದೆಯೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತಾದರು, ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು. ರಾಜ್ಯದಲ್ಲಿ ‘ಆರೋಗ್ಯ ಹಕ್ಕು’…






