ಲೇಖಕ: admin

ಬೆಳಗಾವಿ ಡಿ.27 NEWS DESK : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು. ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು ::  2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು…

Read More

ಮಡಿಕೇರಿ ಡಿ.27 NEWS DESK : ಪ್ರಸ್ತುತ ದಿನಗಳಲ್ಲಿ ಯುವಕರಿಗೆ ಕ್ರೀಡಾಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು,ಕ್ರೀಡಾಪಟುಗಳು ಕ್ರೀಡೆಯ ಮೂಲಕ ಬದುಕಟ್ಟಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್ ಕರೆ ನೀಡಿದರು. ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯ ಫೈನಲ್‌ ಪಂದ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಕ್ರೀಡಾಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಫುಟ್ಬಾಲ್ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ತೊಡಗಿಕೊಂಡಿದ್ದಾರೆ. 20 ವರ್ಷದೊಳಗಿನ ಯುವಕರಿಗಾಗಿ ನಡೆಯುತ್ತಿರುವ ಕಾಲ್ಚೆಂಡು ಪಂದ್ಯಾವಳಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಯುವ ಫುಟ್ಬಾಲ್ ಪಟುಗಳಿಗೆ ಸೂಕ್ತ ವೇದಿಕೆಯಾಗಿದೆ. ಗಾಂಧಿ ಯುವಕ ಸಂಘವು ನಿರಂತರವಾಗಿ ಕ್ರೀಡೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಚೆಟ್ಟಳ್ಳಿ ಭಾಗದಲ್ಲಿ ಹೆಸರುವಾಸಿಯಾಗಿದೆ ಎಂದು ವಿ.ಕೆ.ಲೋಕೇಶ್ ಹೇಳಿದರು‌. ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಕೀಂ ಸುಂಟ್ಟಿಕೊಪ್ಪ ಮಾತನಾಡಿ, ಗಾಂಧಿ ಯುವಕ ಸಂಘವು…

Read More

ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಡಿ.29 ರಂದು ನಡೆಯಬೇಕಿದ್ದ ವಿಶ್ವಮಾನವ ದಿನಾಚರಣೆ ಹಾಗೂ ಜ.1 ನಡೆಯಬೇಕಾಗಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮಾರಣಾ ದಿನ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ ರದ್ದುಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಒಂದು ವಾರದತನಕ ಶೋಕಾಚರಣೆ ಇರುವುದರಿಂದ ಇದೇ ಡಿ.29 ರಂದು ಮಾಯಮುಡಿಯಲ್ಲಿ ನಡೆಯಬೇಕಿದ್ದ ತೋಕ್ ನಮ್ಮೆ ಕಾರ್ಯಕ್ರಮವನ್ನು ಜ.5 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ  ತಿಳಿಸಿದ್ದಾರೆ.

Read More

ಮಡಿಕೇರಿ ಡಿ.27 NEWS DESK : ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸುಂಟ್ಟಿಕೊಪ್ಪದ ಸನ್ಸಬೀಲ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದೆ. ರನ್ನರ್ಸ್ ಪ್ರಶಸ್ತಿಗೆ ಚೋಕ್ ಸಿಟಿ ತಂಡವು ತೃಪ್ತಿಪಟ್ಟುಕೊಂಡಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಸನ್ಸಬೀಲ್ ತಂಡವು ಮೊದಲಾರ್ಧದಲ್ಲೇ ಆಟದಲ್ಲಿ ಸಂಪೂರ್ಣ ಹಿಡಿತವನ್ನು ಸಾಧಿಸಿತ್ತು. ಆಕ್ರಮಣಕಾರಿ ಆಟಕ್ಕೆ ಮುಂದಾಗಿತ್ತು. ಸನ್ಸಬೀಲ್ ತಂಡದ ಆಕ್ರಮಣಕಾರಿ ಆಟಕ್ಕೆ ಬ್ರೇಕ್ ನೀಡುವಲ್ಲಿ ವಿಫಲತೆ ಕಂಡ ಚೋಕ್ ಸಿಟಿ ತಂಡವು 3-0 ಗೋಲುಗಳ ಅಂತರದಿಂದ ಸೋಲು‌ಕಂಡಿತ್ತು. ಇದಕ್ಕೂ ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸನ್ಸಬೀಲ್ ತಂಡವು 4-0 ಗೋಲುಗಳ ಅಂತರದಿಂದ ಗಾಂಧಿ ಎಫ್.ಸಿ ತಂಡದ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿತು. ಎರಡನೇ ಸೆಮಿಫೈನಲ್ ಪಂದ್ಯವು ಎಸ್.ಆರ್.ವಿ‌ ಮಡಿಕೇರಿ ಹಾಗೂ ಚೋಕ್ ಸಿಟಿ ತಂಡಗಳ ನಡುವೆ ನಡೆಯಿತು. ಎರಡು ತಂಡಗಳ ಸಮಬಲ ಹೋರಾಟದಿಂದ 1-1 ಗೋಲುಗಳನ್ನು ದಾಖಲಿಸಿ ನಿಗದಿತ…

Read More

ಮಡಿಕೇರಿ ಡಿ.27 NEWS DESK : ಕ್ರೀಡಾಕೂಟಗಳಿಂದ ನಾಯಕತ್ವ ಗುಣದೊಂದಿಗೆ ಪರಸ್ಪರ ಸಹೋದರತೆ ಬೆಳೆಯುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಳೆದ ಮೂರು ದಿನಗಳಿಂದ ನಡೆದ ಪೊಲೀಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಮಾಜದ ಆರೋಗ್ಯ ಕಾಪಾಡುವುದು ಕಾನೂನಿನ ಉದ್ದೇಶವಾಗಿರುತ್ತದೆ. ಕಾನೂನು ಕಾಪಾಡುತ್ತಲೇ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಕಡೆ ಗಮನ ಹರಿಸುವುದು ಪೊಲೀಸರಿಗೆ ಕಷ್ಟಕರ. ಇಂತಹ ಕಾರ್ಯಕ್ರಮಗಳು ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ಕ್ರೀಡಾಕೂಟಗಳಿಂದ ನಾಯಕತ್ವದ ಬೆಳವಣಿಗೆಯೊಂದಿಗೆ ಸಹೋದರತೆ ಭಾವನೆ ಬೆಳೆಯುತ್ತದೆ. ಎಲ್ಲರೂ ಒಂದೇ ಕುಟುಂಬದಂತೆ ಕೆಲಸ ಮಾಡಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರತಿವರ್ಷ ಕ್ರೀಡಾಕೂಟ ಹಮ್ಮಿಕೊಂಡು ಬರಲಾಗುತ್ತಿದ್ದು, ಇದರಿಂದಾಗಿ ಒಂದು ತಂಡ ರಚನೆಯೊಂದಿಗೆ ಎಲ್ಲರೂ ಒಂದೇ ಕುಟುಂಬ ಎಂಬಂತೆ ಬೆರೆಯಲು ಸಾಧ್ಯವಾಗುತ್ತದೆ. ದೈಹಿಕ ಶಕ್ತಿ ವೃದ್ಧಿಯೊಂದಿಗೆ ಇತರರಿಗೂ ಮಾದರಿಯಾಗಿ ಎಲ್ಲರೂ…

Read More

ಮಡಿಕೇರಿ ಡಿ.27 NEWS DESK  : ಪ್ರಸಕ್ತ(2024-25) ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಆನ್‍ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ, 10 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ: 08272-225528/220214, ನಿಲಯಪಾಲಕರು 9742116601, 9945960004 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ…

Read More

ಕುಶಾಲನಗರ  ಡಿ.27 NEWS DESK : ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  ರಾಷ್ಟ್ರೀಯ ಗ್ರಾಹಕರ ದಿನಾಚರಣೆ: 2024  ನಡೆಯಿತು. ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣಿ, ಗ್ರಾಹಕರ ಹಕ್ಕುಗಳು ಮತ್ತು ಹಿತರಕ್ಷಣೆ ಎಲ್ಲರ ಹೊಣೆಯಾಗಿದೆ.ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳುವ ಮೂಲಕ ಗ್ರಾಹಕರ ಹಿತರಕ್ಷಣೆಯನ್ನು ಕಾಪಾಡಬೇಕು ಎಂದರು. ಗ್ರಾಹಕರು ಅಂದರೆ ನಾವೆಲ್ಲರೂನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿ ಗ್ರಾಹಕ ಹಕ್ಕುಗಳು ಅವಶ್ಯಕತೆ ಇದೆ. ಮಾರುಕಟ್ಟೆ ವ್ಯವಸ್ಥೆಯು ಇಂದು ನೈತಿಕತೆಗಳು ಹಾಗೂ ಮೌಲ್ಯಗಳ ಮೇಲೆ ನಡೆಯಬೇಕು. ಆಗ ಮಾತ್ರ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.…

Read More

ಮಡಿಕೇರಿ ಡಿ.27 NEWS DESK  : ಓವರ್ ಲ್ಯಾಂಡರ್ ಅಸೋಸಿಯೇಷನ್ ವತಿಯಿಂದ ಡಿ.29 ರಂದು ಬೆಳಗ್ಗೆ 9 ಗಂಟೆಯಿಂದ ಸುಂಟಿಕೊಪ್ಪ ಬಳಿಯ ಕಾನ್‍ಬೈಲು ಗ್ರಾಮದಲ್ಲಿ ಆರೋಗ್ಯ ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ. ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದಂತ ತಜ್ಞ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ತಪಾಸಣೆ ನಡೆಸಿ ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡಲಿದ್ದಾರೆ. ಸಾಮಾಜಿಕ ಹೊಣೆಯುಳ್ಳ ಸಂಸ್ಥೆಯಾಗಿರುವ ಓವರ್ ಲ್ಯಾಂಡರ್ ಅಸೋಸಿಯೇಷನ್‍ನ ಈ ಆರೋಗ್ಯ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ, ಹೆಚ್ಚಿನ ಮಾಹಿತಿಗೆ ಕಾರ್ಸನ್ ಕಾರ್ಯಪ್ಪ 9448380234 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸದೆ.

Read More