ಮಡಿಕೇರಿ NEWS DESK ಫೆ.4 : ಕೇವಲ ಮೂರುವರೆ ಸಾವಿರದಷ್ಟಿರುವ ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ, ಅಥವಾ ಪರ್ಯಾಯವಾಗಿ, ಕೊಡವ ಸಾಂಪ್ರದಾಯಿಕ ಆವಾಸಸ್ಥಾನವನ್ನು ಒಳಗೊಂಡಿರುವ ವಿಶೇಷ ಕೊಡವ ಅಸೆಂಬ್ಲಿ ಮತ್ತು ಸಂಸದೀಯ ಕ್ಷೇತ್ರವನ್ನು ರಚಿಸಬೇಕು. ಆ ಮೂಲಕ ನಮಗೆ ಕೇಂದ್ರ ವಿಸ್ತಾ ಅರ್ಥಾತ್ ಹೊಸ ಪಾರ್ಲಿಮೆಂಟ್ ಹಾಗೂ ರಾಜ್ಯ ವಿಧಾನಸಭೆಯಲ್ಲಿ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಿತು. ಈ ಸಂದರ್ಭ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ, ಆದಿಮಸಂಜಾತ ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ…
ಲೇಖಕ: admin
ಮಡಿಕೇರಿ ಫೆ.3 NEWS DESK : ಕೇಂದ್ರದ 2024-25ನೇ ಸಾಲಿನ ಬಡ್ಜೆಟ್ನಲ್ಲಿ ರಾಜ್ಯಕ್ಕೆ ಕೇವಲ ನಾಮ ತೀಡಿದ ಚೆಂಬು ಮತ್ತು ಚಿಪ್ಪನ್ನಷ್ಟೆ ನೀಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾದ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ನಾಮ ತೀಡಿದ ಚೆಂಬು ಮತ್ತು ಚಿಪ್ಪನ್ನು ಪ್ರದರ್ಶಿಸಿ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡಿಸಿರುವ 50.65 ಲಕ್ಷ ಕೋಟಿಯ ಬಜೆಟ್ನಲ್ಲಿ ಶೇ.32 ರಷ್ಟು ಅಂದರೆ 16 ಲಕ್ಷ ಕೋಟಿ ರೂ.ಗಳ ಸಾಲದ ಪ್ರಸ್ತಾವಿದ್ದರೆ, ಸಾಲದ ಮೇಲನ ಬಡ್ಡಿಯ ಮೊತ್ತವೆ 12.7 ಲಕ್ಷ ಕೋಟಿ, ಅಂದರೆ ಶೇ.26 ರಷ್ಟಾಗುತ್ತದೆ. ಒಟ್ಟಾರೆಯಾಗಿ ಒಟ್ಟು ಬಡ್ಜೆಟ್ನ ಶೇ.58 ಭಾಗ ಸಾಲ ಮತ್ತು ಬಡ್ಡಿಗೆ ಮೀಸಲಿಡಲಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ರಾಷ್ಟ್ರವನ್ನು ‘ಸಾಲದ ಕೂಪ’ಕ್ಕೆ ತಳ್ಳುತ್ತಿರುವುದಾಗಿ ಆರೋಪಿಸಿದರು. ಸ್ವಾತಂತ್ರ್ಯಾನಂತರದಿಂದ 2014ರವರೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಎಲ್ಲಾ ಪಕ್ಷಗಳು ಮಾಡಿರುವ ಸಾಲದ ಮೊತ್ತ 53 ಲಕ್ಷ ಕೋಟಿ. ವಿಶ್ವಗುರು ಪ್ರಧಾನಿಯಾದ ಬಳಿಕ ಕಳೆದ ಹತ್ತೂವರೆ ವರ್ಷಗಳಲ್ಲಿ…
ಮಡಿಕೇರಿ ಫೆ.4 NEWS DESK : ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ, 05 ರಿಂದ 11 ರವರೆಗೆ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ನಡೆಯಲಿದೆ. ಫೆಬ್ರವರಿ, 5 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ…
ಮಡಿಕೇರಿ NEWS DESK ಫೆ.3 : ಭಾಗಮಂಡಲ ಮೇಲ್ಸೇತುವೆ ಉದ್ಘಾಟನೆಗೆಂದು ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ನಿರಾಶೆ ಮೂಡಿಸಿದ್ದಾರೆ. ಜಿಲ್ಲೆಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ವಿಶ್ವಾಸ ಮೂಡಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾಗಮಂಡಲ ಮೇಲ್ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿಗಳು ರಾಜಕೀಯ ಪ್ರೇರಿತ ಭಾಷಣವನ್ನಷ್ಟೇ ಮಾಡಿ ಹೋಗಿದ್ದಾರೆ ಹೊರತು ಜಿಲ್ಲೆಯನ್ನು ಕಾಡುತ್ತಿರುವ ಸಮಸ್ಯೆಗಳ ಕುರಿತು ಉಲ್ಲೇಖಿಸಿಲ್ಲ ಮತ್ತು ಯಾವುದೇ ಅಭಿವೃದ್ಧಿಪರ ಘೋಷಣೆಗಳನ್ನು ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದ್ದು, ಜಾನುವಾರುಗಳು ಬಲಿಯಾಗುತ್ತಿವೆ, ಮಾನವನ ಮೇಲೂ ದಾಳಿಯಾಗುತ್ತಿದೆ. ಕೃಷಿ ಫಸಲು ನಾಶವಾಗಿ ರೈತಾಪಿ ವರ್ಗ ನಷ್ಟ ಅನುಭವಿಸುತ್ತಿದೆ. ಅಕಾಲಿಕ ಮಳೆಯ ಪರಿಣಾಮ ಕಾಫಿ ಬೆಳೆಗಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದ ಗೊಂದಲ ಇನ್ನೂ ಕೂಡ ಇತ್ಯರ್ಥವಾಗಿಲ್ಲ. ರಾಜ್ಯ ಸರ್ಕಾರದಿಂದ ಪರಿಹಾರವಾಗಬಲ್ಲ…
ಮಡಿಕೇರಿ ಫೆ.3 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಜಲಜೀವನ್ ಮಿಷನ್ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಾಮಗಾರಿಗಳನ್ನು ಪೈಪ್ ಲೈನ್ ಅಳವಡಿಕೆ, ಟ್ಯಾಂಕ್ ನಿರ್ಮಾಣದ ಕಾಮಗಾರಿಗೆ ಕೊಳವೆ ಬಾವಿಯಿಂದ ನೀರು ಎತ್ತಲು ವಿದ್ಯುತ್ ಸೌಲಭ್ಯಗಳ ಜೋಡಣೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಸಧ್ಯದಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಾಲ್ಲೂಕು ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ವೀರೇಂದ್ರ ಕುಮಾರ್ ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಣ್ಣ ಪ್ರಮಾಣದ ಬಾಕಿ ಉಳಿದ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಗ್ರಾಮಾಂತರ ಪ್ರದೇಶದ ಜಲಜೀವನ್ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆಯು ಇದೀಗ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚುರುಕುಗೊಂಡಿದೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮುಖೇನ ಕಳೆದ ಮೂರು ವರ್ಷಗಳಿಂದ ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯು ಇದ್ದಾಗಿದ್ದು, ಇದರ ಅನ್ವಯ…
ಮಡಿಕೇರಿ ಫೆ.3 NEWS DESK : ಕೊಡಗು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 14 ವರ್ಷ 7 ತಿಂಗಳು ಸೇವೆ ಸಲ್ಲಿಸಿ ಪ್ರಸ್ತುತ ಪೊನ್ನಂಪೇಟೆ ನ್ಯಾಯಾಲಯದಿಂದ ನಿವೃತ್ತರಾದ ಬೈಲೀಪ್ ಕೆ.ಎಂ.ಲವಕುಮಾರ್ (ಮಾಜಿ ಸೈನಿಕ) ಅವರನ್ನು ಬೀಳ್ಕೊಡುವ ಸಮಾರಂಭ ನಡೆಯಿತು. ಪೊನ್ನಂಪೇಟೆ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಪ್ರದೀಪ್ ಪೋತೆದಾರ್, ಸಿವಿಲ್ ಹಿರಿಯ ನ್ಯಾಯಾಧೀಶ ಮಂಜುನಾಥ್, ವಿರಾಜಪೇಟೆ ಮುಖ್ಯ ಆಡಳಿತಾಧಿಕಾರಿ ಗೋವಿಂದ ರಾಜು, ನಾಝರ್, ಪ್ರೀತಮ್ ಮತ್ತಿತರ ಪ್ರಮುಖರು ಲವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸುವುದರೊಂದಿಗೆ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ಸಂಧ್ಯಾ ಹಾಗೂ ನೇತ್ರಾವತಿ ಪ್ರಾರ್ಥಿಸಿ, ಕವಿತಾ ನಿರೂಪಿಸಿದರು.
ಮಡಿಕೇರಿ ಫೆ.3 NEWS DESK : ಖೇಲೋ ಇಂಡಿಯಾ 2024-25 ಮಹಿಳಾ ಫುಟ್ಬಾಲ್ ಪಂದ್ಯಾವಳಿಗೆ ಯುನೈಟೆಡ್ ಎಫ್ಸಿ ಕೊಡಗು ತಂಡವು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದೊಂದಿಗೆ ಭಾಗವಹಿಸುತ್ತಿದ್ದು, ಫುಟ್ಬಾಲ್ ಪಂದ್ಯಾವಳಿಗೆ ತಂಡದ ಆಯ್ಕೆ ಪ್ರಕ್ರಿಯೆ ಫೆ.5ರಂದು ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕೊಡಗು ಯುನೈಟೆಡ್ ಎಫ್.ಸಿ ತಂಡದ ಮುಖ್ಯಸ್ಥ ಹೆಚ್.ಹೆಚ್.ಹರೀಶ್ ತಿಳಿಸಿದ್ದಾರೆ. 1-1-2010 ಹಾಗೂ 31-12-2011ರೊಳಗೆ ಜನಿಸಿರುವ ಆಟಗಾರ್ತಿಯರು ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ಭಾಗವಹಿಸುವ ಆಟಗಾರ್ತಿಯರು ತಮ್ಮ ಒರ್ಜಿನಲ್ ಆಧಾರ್ ಕಾರ್ಡ್ ಮತ್ತು ಬರ್ತ್ ಸರ್ಟಿಫಿಕೇಟ್ ಕಡ್ಡಾಯವಾಗಿ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ 8951820251 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಫೆ.3 NEWS DESK : ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಕೊಡಗು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ ತೆನ್ನೀರ ಟೀನಾ ಚಂಗಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಚಂದನ್ ನಂದರಬೆಟ್ಟು, ಖಜಾಂಚಿಯಾಗಿ ವಿನೋದ್ ಕುಡ್ತೇಕರ್ ನೇಮಕಗೊಂಡಿದ್ದಾರೆ. ನಿರ್ದೇಶಕರುಗಳಾಗಿ ಅರುಣ್ ಕಡಗದಾಳು, ರುಬೀನಾ ಸೋಮವಾರಪೇಟೆ, ರಿಶಾ ಸೋಮವಾರಪೇಟೆ, ಹರ್ಷಿತಾ ಶೆಟ್ಟಿ ಗಾಳಿಬೀಡು, ಕೆ.ಎ.ಸಂಕೇತ್ ಗಾಳಿಬೀಡು, ಮಾಗಲು ಲೋಹಿತ್, ರಂಜಿತ್ ಜಯರಾಂ, ಲೋಕೇಶ್ ಕಾಟಕೇರಿ, ಎಸ್.ಆರ್.ವತ್ಸಲಾ, ಪೇರಿಯಂಡ ಜಯಂತಿ ಉತ್ತಪ್ಪ, ಬಿ.ಎನ್.ಚಿತ್ರಾ ಸುಜನ್, ಅಬ್ದುಲ್ಲಾ ಎಂ.ಎಂ.ವಿಶ್ವ ಕುಂಬೂರು, ಕೆ.ಎಂ.ವಿನೋದ್ ಆಯ್ಕೆಯಾಗಿದ್ದಾರೆಂದು ಬೊಳ್ಳಜಿರ ಬಿ.ಅಯ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರಸಂತೆ ಫೆ.3 NEWS DESK : ಗುಡುಗಳಲೆಯ ಜಾತ್ರಾ ಸಮಾರೋಪದಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಮಹಿಳಾ ಘಟಕದ ವತಿಯಿಂದ ನಡೆಸಿಕೊಟ್ಟ ಶಿವತಾಂಡವ ನೃತ್ಯ ರೂಪಕ ನೋಡುಗರ ಗಮನ ಸೆಳೆಯಿತು. ಕೊಡ್ಲಿಪೇಟೆಯ ಕಿರಿಕೊಡ್ಲಿಮಠ ಹಾಗೂ ಅಂಕನಹಳ್ಳಿ ಮನೆಹಳ್ಳಿ ಮಠದ ಶ್ರೀಗಳು ಸಾನಿಧ್ಯ ವಹಿಸಿದ್ದರು. ವೀರಶೈವ ಮಹಾಸಭಾದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದೀಪಿಕಾ ಕರುಣ, ಪ್ರಧಾನ ಕಾರ್ಯದರ್ಶಿ ಲೇಖನಾ ಧರ್ಮೇಂದ್ರ, ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಂದೀಶ್, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಪಿ.ಮಹದೇವಪ್ಪ, ಶಿಕ್ಷಕರಾದ ಶಿವಲಿಂಗ, ಬಸವರಾಜು, ವಿದ್ಯಾ ಸೇರಿದಂತೆ ಇತರರು ಇದ್ದರು.
ಪುತ್ತೂರು ಫೆ.3 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ಮತ್ತು ಮಾನವಿಕ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅಧ್ಯಾಪಕ ಮಾರ್ಗದರ್ಶಕರಿಗೆ ಉತ್ತಮ ಬೋಧನಾ ಮತ್ತು ಕಲಿಕಾ ಅಭ್ಯಾಸಗಳು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರ ನಡೆಯಲಿದೆ. ಬೋಧಕರಲ್ಲಿ ನವೀನ ಶಿಕ್ಷಣ ಕೌಶಲ್ಯಗಳನ್ನು ಹೆಚ್ಚಿಸುವುದು, ಉತ್ತಮ ಬೋಧನಾ ಪದ್ದತಿಗಳನ್ನು ಅಳವಡಿಸುವ ಮೂಲಕ ಫಲಿತಾಂಶ ಅಧಾರಿತ ಶಿಕ್ಷಣದ ಪರಿಷ್ಕರಣೆ, ಪರಿಣಾಮಕಾರೀ ಮಾರ್ಗದರ್ಶನ ಕೌಶಲಗಳನ್ನು ಅಳವಡಿಸುವುದು, ಸಂವಾದಾತ್ಮಕ ಬೋಧನೆಗಾಗಿ ಡಿಜಿಟಲ್ ಉಪಕರಣಗಳು ಮತ್ತು ತಂತ್ರಜ್ಞಾನದ ಬಳಕೆ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಉತ್ತಮ ಅಭ್ಯಾಸಗಳನ್ನು ಉತ್ತೇಜಿಸುವುದು ಇದೇ ಮುಂತಾದ ವಿಷಯಗಳ ಬಗ್ಗೆ ಪದವಿಪೂರ್ವ, ಪದವಿ, ಇಂಜಿನಿಯರಿಂಗ್, ಬಿ.ಎಡ್ ಉಪನ್ಯಾಸಕರಿಗೆ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಮಾಹಿತಿಯನ್ನು ನೀಡುವುದಕ್ಕಾಗಿ ಇದನ್ನು ಆಯೋಜಿಸಲಾಗಿದೆ. ಫೆ.5 ರಿಂದ 7ರ ವರೆಗೆ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು, ರಾಜ್ಯಾದ್ಯಂತ ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಮತ್ತು ಪ್ರೌಢ…






