ಬೆಳಗಾವಿ ಡಿ.26 NEWS DESK : ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ ಸಿಎಂ ಅವರು, ಭವನದಲ್ಲಿ ಇರುವ ಫೋಟೋಗಳನ್ನು ವೀಕ್ಷಣೆ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರಾದ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ದಿನೇಶ್ ಗುಂಡೂರಾವ್ ಸೇರಿ ಹಲವು ಮಂದಿ ಗಣ್ಯರು, ಶಾಸಕರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಡಿ.26 NEWS DESK : ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯಲ್ಲಿ “ವಿಶ್ವ ಧ್ಯಾನ ದಿನಾಚರಣೆ”ಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಿವರಾಜ್ ಧ್ಯಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಧ್ಯಾನ ಮಾಡಿಸಿದರು. ಸ್ವಯಂ ಸೇವಕರಾದ ಲೀನಾ ಮಂದಣ್ಣ, ಬ್ರೈಟ್ ಬಿಗಿನಿಂಗ್ ಪ್ರಿಸ್ಕೂಲ್ ನ ಮುಖ್ಯ ಶಿಕ್ಷಕರಾದ ಸೋನಿಯಾ ಜೋಸೆಫ್, ಪಾಲಿಬೆಟ್ಟದ ಲೂಡ್ಸ್ ಹಿಲ್ ಕಾನ್ವೆಂಟ್ ಶಿಕ್ಷಕರಾದ ಪವಿತ್ರ, ನರ್ಸರಿ ಶಿಕ್ಷಕರ ತರಬೇತಿಯ ಪ್ರಶಿಕ್ಷಣಾರ್ಥಿಗಳು, ವಿಶೇಷ ಚೇತನ ವಿದ್ಯಾರ್ಥಿಗಳು, ಲೂಡ್ಸ್ ಕಾನ್ವೆಂಟ್ ವಿದ್ಯಾರ್ಥಿಗಳು, ಚೆಶೈರ್ ಹೋಮ್ ನ ಸಿಬ್ಬಂದಿ ವರ್ಗದವರು, ಸ್ಥಳೀಯರು ಭಾಗವಹಿಸಿದ್ದರು.
ಬೆಳಗಾವಿ ಡಿ.26 NEWS DESK : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.
ಕುಶಾಲನಗರ ಡಿ.26 NEWS DESK : ಕೂಡುಮಂಗಳೂರು ಗ್ರಾ.ಪಂ ಸಾಮಾನ್ಯ ಸಭೆಯು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷ ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಮಾ ಖರ್ಚಿನ ಬಗ್ಗೆ ಹಾಗೂ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಗಳ ಕುರಿತು ಚರ್ಚಿಸಲಾಯಿತು. ನಂತರ 15ನೇ ಹಣಕಾಸಿನ ಕ್ರಿಯಾಯೋಜನೆಯನ್ನು ಅನುಮೋದಿಸಲಾಯಿತು. ಪಂಚಾಯಿತಿ ನಿಧಿಯ ಕ್ರಿಯಾಯೋಜನೆಯ ಕಾಮಗಾರಿಯ ಬಗ್ಗೆ ಪಿಡಿಓ ಸದಸ್ಯರ ಗಮನಕ್ಕೆ ತಂದರು. ಸುಂದರನಗರ ಗ್ರಾಮದಲ್ಲಿ ಪಂಚಾಯಿತಿಯಿಂದ ಅನುಮತಿ ಪಡೆಯದೇ ಬಹು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದೆ. ಈ ಹಿಂದೆ ಕಾಮಗಾರಿ ನಡೆಸದಂತೆ ಸೂಚಿಸಲಾಗಿದ್ದರೂ, ಕೆಲಸ ಮಾಡಲಾಗುತ್ತಿದೆ. ಆದ್ದರಿಂದ ಆದಷ್ಟು ಬೇಗನೇ ಕಾಮಗಾರಿಗೆ ಬಳಸುತ್ತಿರುವ ವಸ್ತುಗಳನ್ನು ವಶಕ್ಕೆ ಪಡೆಯುವಂತೆ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ತಿಳಿಸಿದರು. ಇದಕ್ಕೆ ಸದಸ್ಯರಾದ ಆಶಾ ಧ್ವನಿಗೂಡಿಸಿದರು. ಚರಂಡಿ ಸ್ವಚ್ಚತೆ, ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಸದಸ್ಯರು ಆಗ್ರಹಿಸಿದರು. ಬಳಿಕ ಸಾರ್ವಜನಿಕರ ಅರ್ಜಿ ವಿಲೇವಾರಿ ನಡೆಯಿತು. ಅಧ್ಯಕ್ಷರ ಅನುಮತಿ ಮೇರೆಗೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ…
ಮಡಿಕೇರಿ ಡಿ.26 NEWS DESK : ನಮ್ಮ ಪೂರ್ವಜರು ಕಷ್ಟಪಟ್ಟು ಪದ್ದತಿ ಪರಂಪರೆ ಆಚಾರ, ವಿಚಾರ, ಸಹಬಾಳ್ವೆ ಸಂಸ್ಕಾರಗಳನ್ನು ನಮಗೆ ಕೊಟ್ಟು ಹೋಗಿದ್ದಾರೆ. ಅವುಗಳನ್ನು ನಮ್ಮ ಮುಂದಿನ ಪೀಳಗೆಯತ್ತ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸಮಾಜಗಳು, ಸಂಘ ಸಂಸ್ಥೆಗಳು ಜಾಗರೂಕತೆಯಿಂದ ಹೆಜ್ಜೆ ಇಡಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆದ ಸುವರ್ಣ ಮಹೋತ್ಸವ ( ಪೊನ್ನ್ ನಮ್ಮೆ) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಜಗತ್ತಿನಲ್ಲಿಯೇ ಕೊಡವ ಜನಾಂಗದ ಆಚಾರ ವಿಚಾರಗಳು, ಆಹಾರ ಪದ್ದತಿಗಳು, ಉಡುಗೆ, ತೊಡುಗೆಗಳು ವಿಶಿಷ್ಟವಾಗಿ ಇದ್ದು ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ತುಂಬಾ ಕಷ್ಟ ಪಟ್ಟು ಆಧುನಿಕತೆಯ ಕನಿಷ್ಠ ಸಂಪರ್ಕ ಇಲ್ಲದ ಕಾಲದಲ್ಲಿ ಇಂತಹ ಭವ್ಯ ಪರಂಪರೆಯನ್ನು ಬಳುವಳಿಯಾಗಿ ಉಳಿಸಿ ಹೋಗಿದ್ದಾರೆ.ಇವು ಶಾಶ್ವತವಾಗಿ ಉಳಿದರೇ ಮಾತ್ರ ಜನಾಂಗದ ಅಸ್ಮಿತೆ ಉಳಿಯುತ್ತದೆ. ಈ ನಿಟ್ಟಿನಲ್ಲಿ ಕೊಡವ ಸಮಾಜಗಳು ಪರಿಣಾಮಕಾರಿಯಾಗಿ…
ಸೋಮವಾರಪೇಟೆ NEWS DESK ಡಿ.26 : ಕಳೆದೆರಡು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಶ್ರೀಗಂಧ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಹೊರ ಜಿಲ್ಲೆಯ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಬೀರನಹಳ್ಳಿ ಕಾವಲು ಗ್ರಾಮದ ಚಂದ್ರು ಹಾಗೂ ಸುರೇಶ್ ಬಂಧಿತ ಆರೋಪಿಗಳು. ಅರೋಪಿಗಳು ಸಣ್ಣ ಗಾತ್ರದ ಮರಗಳನ್ನು ಕಡಿದು ಮೂಟೆಗಳಲ್ಲಿ ಸಾಗಿಸುತ್ತಿದ್ದರು. ಗಂಧದ ತುಂಡುಗಳನ್ನು ಬೆಮ್ಮತ್ತಿಯ ವ್ಯಕ್ತಿಯೋರ್ವನಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಅರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಸಿಎಫ್ ಎ.ಎ.ಗೋಪಾಲ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್ಎಫ್ಒಗಳಾದ ಶೈಲೇಂದ್ರ ಕುಮಾರ್, ಪೂಜಶ್ರೀ, ಡಿಆರ್ಎಫ್ಗಳಾದ ಶ್ರವಣಕುಮಾರ್, ಸೂರ್ಯ, ಲೋಹಿತ್, ರೇಣುಕುಮಾರ್, ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ರಂಜಿತ್, ಸತೀಶ್, ದರ್ಶನ್, ರಾಕೇಶ್, ಪ್ರವೀಣ್, ಹರೀಶ್, ನಂದೀಶ್, ಸಂತೋಷ್ ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಡಿ.26 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ಆವರಣದಲ್ಲಿ ರೂ 20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ದುರ್ಗಾಲಕ್ಷ್ಮಿ ದೇವಾಲಯದ ಪ್ರತಿಷ್ಠಾಪನಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಕೇರಳದ ತಳಿಪರಂಬ ಕಾಳೇಘಾಟ್ ಇಲ್ಲಂ ಮಧುಸೂಧನ್ ತಂತ್ರಿ ಮತ್ತು ತಂಡದವರು ದೇವಾಲಯಕ್ಕೆ ವಿವಿಧ ವಿಶೇಷ ಪೂಜಾ ಕೈಂಕರ್ಯಗಳನ್ನು ನೇರವೇರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಐದು ದಿನಗಳ ಕಾಲ ನಡೆದ ಬ್ರಹ್ಮಕಲಶೋತ್ಸವದಲ್ಲಿ ಗಣಪತಿ ಹೋಮ, ತಿಲಾಹೋಮ, ಸಾಯುಜ್ಯಪೂಜೆ, ಪ್ರಸಾದಬಿಂಬ ಪರಿಗ್ರಹ, ಜಲಾದಿವಾಸ ಪುಣ್ಯಹಃ, ಪ್ರಸಾದಶುದ್ಧಿ, ಅಸ್ತ್ರಕಲಶಪೂಜೆ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಬಲಿ, ವಾಸ್ತುಕಲಶಾಭಿಷೇಕ, ಅತ್ತಾಯ ಪೂಜೆ ಮಹಾಮಂಗಳಾರತಿ ನೆರವೇರಿತು. ನಂತರ ಗಣಪತಿ ಹೋಮ, ಆದಿವಾಹನ ವಿಡರ್ತಿ ಪೂಜೆ, ಶ್ರೀ.ಅಯ್ಯಪ್ಪ ಸ್ವಾಮಿಯ ಬ್ರಹ್ಮಕಲಶ ಪೂಜೆ, ಶ್ರೀ ಭಗವತಿಯ ಬ್ರಹ್ಮಕಲಶ ಪೂಜೆ, ಶ್ರೀ ಗಣಪತಿಯ ಬ್ರಹ್ಮಕಲಶಾಭಿಷೇಕ, ಶ್ರೀ ಭಗವತಿಯ ಪ್ರಸಾದ ಪ್ರತಿಷ್ಟೆ ನೆರವೇರಿದ್ದು, ಶುಭ ಮುಹೂರ್ತ ಕುಂಭ ಲಗ್ನದಲ್ಲಿ ಶ್ರೀ ದುರ್ಗ ಲಕ್ಷ್ಮಿ ದೇವಿಯ ಪ್ರತಿಷ್ಟೆ,…
ಮಡಿಕೇರಿ NEWS DESK ಡಿ.25 : ಚಿರತೆಯನ್ನು ಹೋಲುವ ಕಾಡುಬೆಕ್ಕು ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ನಿಟ್ಟೂರು ಸಮೀಪದ ತಟ್ಟಕೆರೆ ಪೈಸಾರಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ರಾಜನ್ (48) ಎಂಬುವವರೇ ಕಾಡುಬೆಕ್ಕಿನ ದಾಳಿಗೊಳಗಾದವರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ವನ್ಯಜೀವಿ ದಾಳಿ ಮಾಡಿ ಕಿವಿ ಮತ್ತು ತಲೆಯ ಭಾಗಕ್ಕೆ ಘಾಸಿಗೊಳಿಸಿತು. ಅದೃಷ್ಟವಶಾತ್ ಕಿರುಚಾಟ ಕೇಳಿ ಪ್ರಾಣಿ ಅಲ್ಲಿಂದ ಕಾಲ್ಕಿತ್ತಿದೆ. ನಂತರ ಗಾಯಾಳು ರಾಜನ್ ಅವರನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಯಿತು. ರಾಜನ್ ಅವರು ಗಾಬರಿಯಿಂದ ನನ್ನ ಮೇಲೆ ಹುಲಿ ದಾಳಿಯಾಗಿದೆ ಎಂದು ಹೇಳಿಕೆ ನೀಡಿದ ಪರಿಣಾಮ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು. ಅಲ್ಲದೆ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ರಾಜನ್ ಅವರ ಆರೋಗ್ಯ ವಿಚಾರಿಸಿದರು. ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ…
ವಿರಾಜಪೇಟೆ NEWS DESK ಡಿ.25 : ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ನಲ್ಲಿ ಶಾಂತಿಧೂತ ಯೇಸುಕ್ರಿಸ್ತರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸುವ ಮೂಲಕ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಪ್ರಧಾನ ಧರ್ಮಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್ ಹಾಗೂ ಸಹ ಧರ್ಮ ಗುರುಗಳಾದ ರೆ.ಫಾ.ಮದಲೈ ಮುತ್ತು ಅವರುಗಳ ಸಾನಿಧ್ಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೈಬಲ್ ಪಠಣ ಹಾಗೂ ಧರ್ಮಕೇಂದ್ರದ ಗಾಯನ ವೃಂದದಿಂದ ಕ್ಯಾರಲ್ ಗಾಯನ ನಡೆಯಿತು. ಪ್ರಧಾನ ಧರ್ಮಗುರುಗಳು ಬಾಲಯೇಸುವಿನ ಮೂರ್ತಿಯನ್ನು ದೇವಾಲಯದಲ್ಲಿ ನಿರ್ಮಿಸಲಾದ ಗೋದಲಿಯಲ್ಲಿ ಪ್ರತಿಷ್ಠಾಪನೆ ಮಾಡಿದರು. ನಂತರ ಬಲಿಪೂಜೆ ಮತ್ತು ಯೇಸುಕ್ರಿಸ್ತರ ದಿವ್ಯ ಗಾಯನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಗುರುಗಳು ಧರ್ಮ ಸಂದೇಶದಲ್ಲಿ ಪ್ರೀತಿ ಮತ್ತು ಶಾಂತಿಯ ಸಮಾಜ ನಿರ್ಮಾಣಕ್ಕಾಗಿ ಕರೆ ನೀಡಿದರು. ನೆರೆದಿದ್ದವರು ಕೇಕ್ ಹಂಚಿ ಪರಸ್ಪರ ಶುಭ ಸಂದೇಶವನ್ನು ವಿನಿಮಯ ಮಾಡಿಕೊಂಡು ಹಬ್ಬವನ್ನು ಸಂಭ್ರಮವನ್ನು ಆಚರಿಸಿದರು. ::: ಪೊನ್ನಣ್ಣ ಭೇಟಿ ::: ಕ್ರಿಸ್ಮಸ್ ಅಂಗವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು…
ಮಡಿಕೇರಿ NEWS DESK ಡಿ.25 : ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ. ನೆಲ್ಲಿಹುದಿಕೇರಿಯ ನಿವಾಸಿಗಳಾದ ಚಿದಾನಂದ ಆಚಾರ್ಯ (48) ಹಾಗೂ ಪತ್ನಿ ನಳಿನಿ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮಂಗಳೂರಿನಲ್ಲಿ ನಡೆಯುವ ತಮ್ಮ ಸಂಬAಧಿಕರ ಉಪನಯನ ಕಾರ್ಯಕ್ರಮಕ್ಕೆಂದು ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕೊಯನಾಡಿನ ಚಡಾವು ಎಂಬಲ್ಲಿ ಅಪಘಾತ ಸಂಭವಿಸಿದೆ. ಚಿದಾನಂದ ಆಚಾರ್ಯ ಅವರು ಸ್ಥಳದಲ್ಲೇ ಮೃತಪಟ್ಟರೆ, ನಳಿನಿ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಕೊನೆಯುಸಿರೆಳೆದಿದ್ದಾರೆ. ಮೃತರು 14 ವರ್ಷದ ಓರ್ವ ಪುತ್ರನನ್ನು ಅಗಲಿದ್ದಾರೆ. ಗ್ರಾಮಾಂತರ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.






