ವಿರಾಜಪೇಟೆ ಮೇ 7 NEWS DESK : ಡೊನೇಷನ್ ಹಾವಳಿ ವಿರೋಧಿಸಿ, ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ವನ್ನು ರಚಿಸುವಂತೆ, ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ರಾಜ್ಯಾದ್ಯಂತ ನೀಡಿದ ಕರೆಗೆ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ವಿರಾಜಪೇಟೆ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಅವರು, 2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು…
ಲೇಖಕ: admin
ವಿರಾಜಪೇಟೆ ಮೇ 7 NEWS DESK : ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಮತ್ತು ಕಾವೇರಿ ಕಾಲೇಜು ವಿರಾಜಪೇಟೆ ಇವರ ಸಹಭಾಗಿತ್ವದಲ್ಲಿ ಮೇ 26ರಂದು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಜಿ.ವೀಣಾ ಮಾಹಿತಿ ನೀಡಿದರು. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಗಡಿ ಪ್ರದೇಶಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಶಿಕ್ಷಣ ಸ್ವರೂಪ, ಭಾಷಾ ನೀತಿ ಹಾಗೂ ಬಹುಭಾಷಾ ವಾಸ್ತವಿಕತೆಗಳ ಮರುಚಿಂತನೆ” ಎಂಬ ಪರಿಕಲ್ಪನೆಯ ಕುರಿತು ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದ ಉದ್ಘಾಟನೆಯನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ ಸಂಗಪ್ಪ ಆಲೂರ ರವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕಾವೇರಿ ಎಜುಕೇಷನ್ ಸೊಸೈಟಿ (ರಿ)ಯ ಅಧ್ಯಕ್ಷರಾದ ಎಂ. ಎಸ್. ಮುತ್ತಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣರವರು ಭಾಗವಹಿಸಲಿದ್ದಾರೆ . ಈ ವಿಚಾರ ಸಂಕಿರಣದಲ್ಲಿ…
ಮಡಿಕೇರಿ ಮೇ 7 NEWS DESK : ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಅಧಿಕೃತ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪತ್ರ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇ ಮಾಲೀಕರು ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪತ್ರ ಪಡೆದ ನಂತರವೇ ಹೋಂ-ಸ್ಟೇಗಳನ್ನು ನಡೆಸುವಂತೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಸೂಚಿಸಿದ್ದಾರೆ. ನೋಂದಣಿ ಮಾಡಿಸದೇ ಅನಧಿಕೃತವಾಗಿ ಹೋಂ-ಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಲ್ಲಿ ಅಂತಹ ಹೋಂ-ಸ್ಟೇಗಳ ವಿರುದ್ಧ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಷರತ್ತು ಪಾಲಿಸುವುದು. ಎಲ್ಲಾ ಅಸ್ತಿತ್ವದಲ್ಲಿರುವ ಮತ್ತು ಹೊಸ ಹೋಂಸ್ಟೇಗಳು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಾಯಿತ ಹೋಂಸ್ಟೇಗಳ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ವೆಬ್ಸೈಟ್ ನಲ್ಲಿ ಪ್ರದರ್ಶಿಸಲಾಗುತ್ತದೆ. ಸಮಯದ ಹಂಚಿಕೆಯ ಆಧಾರದ ಮೇಲೆ ಯಾವುದೇ ಕೊಠಡಿಗಳನ್ನು ಬಾಡಿಗೆಗೆ ನೀಡುವಂತಿಲ್ಲ. ಹೋಂ-ಸ್ಟೇ ಪ್ರವೇಶಿಸುವ…
ಸುಂಟಿಕೊಪ್ಪ ಮೇ 6 NEWS DESK : ಸಂತ ಅಂತೋಣಿ ದೇವಾಲಯದ ವಾರ್ಷಿಕ ಮಹೋತ್ಸವವು ಮೇ 10 ರವರೆಗೆ ನಡೆಯಲಿದೆ ಎಂದು ಧರ್ಮಗುರುಗಳಾದ ವಿಜಯಕುಮಾರ್ ತಿಳಿಸಿದ್ದಾರೆ. ಧ್ವಜಾರೋಹಣ ನೇರವೇರಿಸುವ ಮೂಲಕ ವಾರ್ಷಿಕೋತ್ಸವಕ್ಕೆ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯಾದ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಚಾಲನೆ ನೀಡಿದರು. ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರುಗಳಾದ ಟಿ.ಪೌಲೂಸ್ ಹಾಗೂ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಅವರುಗಳು ನೆರವೇರಿಸಿದರು. ಮೇ 9 ರಂದು ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ಅಡಂಬರ ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರುಗಾಳದ ಚಾಲ್ರ್ಸ್ ಪೆರಿಯನಾಗಮ್ ಅವರು ನೇರವೇರಿಸಲಿದ್ದಾರೆ. ಮೇ 10 ರಂದು ಸಂಜೆ 5.30 ಗಂಟೆಗೆ ಸಂತ ಅಂತೋಣಿಯವರ ಹಬ್ಬದ ಅಂಗವಾಗಿ ಅಡಂಬರ ಗಾಯನ ಬಲಿಪೂಜೆಯನ್ನು ಮೈಸೂರು ಧರ್ಮಕ್ಷೇತ್ರ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಎಸ್ಜೆ ಫ್ರಾನ್ಸಿಸ್ ಸೆರಾವೋ ನೇರವೇರಿಸಲಿದ್ದಾರೆ. ಪಾಲಕ ಸಂತ ಅಂತೋಣಿಯವರ ತೆರಿನ ಮೆರವಣಿಗೆಯ ನಂತರ ಪರಮ ಪ್ರಸಾದ ಆರಾಧನೆಯನ್ನು ಮೈಸೂರು…
ಮಡಿಕೇರಿ ಮೇ 8 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರು, ಸಂಘದ ಮಾಜಿ ಅಧ್ಯಕ್ಷರಾದ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿರುವ ಸೋಮೇಶ್ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೋಮೇಶ್ ಅವರು, ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾರ್ಯನಿರತ ಪತ್ರಕರ್ತರ ಸಂಘ ಇಂದಿಗೂ ಗಟ್ಟಿಯಾಗಿ ನೆಲೆಯೂರಿದೆ. ಈ ಸಂಘದ ಅಧ್ಯಕ್ಷನಾಗಿ ಕೆಲಸ ಮಾಡಲು ಅವಕಾಶ ದೊರೆತ್ತಿದ್ದು, ನನ್ನ ಸೌಭಾಗ್ಯವಾಗಿದೆ. ನಿವೃತ್ತಿ ನಂತರ ಸಂಘದವರು ಮನೆಗೆ ಬಂದು ಗೌರವಿಸುತ್ತಿರುವುದು ಹೆಮ್ಮೆ ಮೂಡಿಸುವುದರೊಂದಿಗೆ ಹಳೆಯ ನೆನೆಪುಗಳನ್ನು ಮೆಲುಕು ಹಾಕುವಂತೆ ಮಾಡಿದೆ ಎಂದರು. ಸಾಕಷ್ಟು ಏಳುಬೀಳುಗಳ ನಡುವೆ ಕಾರ್ಯನಿರತ ಪತ್ರಕರ್ತರ ಸಂಘ ಗಟ್ಟಿಯಾಗಿ ನಿಂತಿದೆ. 1982ರಲ್ಲಿ ಬೆಂಗಳೂರಿನಲ್ಲಿ ವಿಕ್ರಮ್ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸದ ನಾನು ನವಶಕ್ತಿ ಪತ್ರಿಕೆಯಲ್ಲಿ ಕೆಲಸ ಮಾಡಿದ…
ಗೋಣಿಕೊಪ್ಪ ಮೇ 7 NEWS DESK : ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಅವಭೃತ ಸ್ನಾನ, ಭಗಂಡೇಶ್ವರ ದೇವಸ್ಥಾನದಲ್ಲಿ ದೇವಿಯ ವಸಂತೋತ್ಸವದೂಂದಿಗೆ ತಾವೂರು ಮಹಿಷಾಸುರ ಮರ್ದಿನಿ ದೇವಿಯ ವಾರ್ಷಿಕ ಉತ್ಸವ ನೆರವೇರಿತು. 8 ದಿನಗಳು ನಡೆದ ಉತ್ಸವದಲ್ಲಿ ಅಂದಿ ಬೆಳಕು, ಮನೆಯಿಂದ ಭಂಡಾರತರುವುದು, ದೇವಿಬಲಿ ಉತ್ಸವ, ದೇವರ ದರ್ಶನ, ನೃತ್ಯಬಲಿ, ವಸಂತೋತ್ಸವ, ನೆರಪಿನ ಉತ್ಸವ, ಭಂಡಾರಕಾಣಿಕೆ, ಪ್ರಸಾದ ವಿತರಣೆ, ದೇವರ ಹರಕೆ ಸೇವೆಗಳು, ಅಂಬುಕಾಯಿ, ಎತ್ತು ಪೊರಾಟ, ಬೇಡುಕೋಲ, ಹರಕೆ ಸೇವೆಗಳು, ಶಯನೋತ್ಸವ, ಶುದ್ಧ ಕಲಸ, ಕಲಶಾಭಿಷೇಕ, ಮಂತ್ರಾಕ್ಷತೆ, ನಡೆಯಿತು. ಸಾವಿರಾರು ವರ್ಷಗಳ ಹಿಂದೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ರೈತಾಪಿ ಕುಟುಂಕ್ಕೆ ಬೆಳಕಿನ ಆಕಾರದ ಶಕ್ತಿಯೊಂದು ಗೋಚರಿಸಿದೆ. ಅ ಬೆಳಕನ್ನು ಹಿಂಬಾಲಿಸಿ ಹೋದಾಗ ಮಣ್ಣಿನಲ್ಲಿ ಹುದು ಹೋಗಿದ್ದದೇವಿಯ ಮೂರ್ತಿ ವಿಗ್ರಹಒಂದು ಕಾಣಿಸುತ್ತದೆ. ವಿಶೇಷವಾಗಿ ವಿಗ್ರಹದ ಪಾದದ ಅಡಿಯಲ್ಲಿ ಮಹಿಷಾಸುರ ಸಂಹಾರದದೃಶ್ಯವೂ ಅಡಗಿರುತ್ತದೆ. ಹೀಗಾಗಿ ಈ ವಿಗ್ರಹಕ್ಕೆ ಮಹಿಷಾಸುರ ಮರ್ದಿನಿ ಎಂಬ ಹೆಸರನ್ನ ನೀಡಿ, ವಿಗ್ರಹ ಸಿಕ್ಕಿದ ಸ್ಥಳದಲ್ಲಿ 4 ಮರದ ಕಂಬಗಳನ್ನು ನೆಟ್ಟು…
ಮಡಿಕೇರಿ ಮೇ 7 NEWS DESK : ಸುಂಟಿಕೊಪ್ಪದಲ್ಲಿ ಮೇ ಕೊನೆಯ ವಾರದಲ್ಲಿ ಆಯೋಜಿತವಾಗಿರುವ ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ, ಕತೆಗಾರ ಅಬ್ದುಲ್ ರಶೀದ್ ಆಯ್ಕೆಯಾಗಿದ್ದಾರೆ. ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಒಮ್ಮತದಿಂದ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಯಿತು. ಕನ್ನಡ ಸಾಹಿತ್ಯ ಸಮ್ಮೇಳನವು ಸುಂಟಿಕೊಪ್ಪದಲ್ಲಿ ಮೇ.29 ಮತ್ತು 30 ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಅಬ್ದುಲ್ ರಶೀದ್ ಅವರು ಕನ್ನಡದ ಬರಹಗಾರರು, ಕವಿ ಮತ್ತು ಅನುವಾದಕ. 2004ರಲ್ಲಿ ಅವರು ಜೀವಮಾನ ಸಾಧನೆಗಾಗಿ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕøತರಾಗಿದ್ದಾರೆ. ಅಬ್ದುಲ್ ರಶೀದ್ ಅವರು ಆಲ್ ಇಂಡಿಯಾ ರೇಡಿಯೋದಲ್ಲಿ ಕಾರ್ಯಕ್ರಮ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಅವರು ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ದೇಶಕರಾಗಿದ್ದರು. ಇವರು ಕಳೆದ 2025ನೇ ಸಾಲಿನ ಫೆs.28ರಂದು ಮೈಸೂರು ಆಕಾಶವಾಣಿಯಿಂದ…
ಮಡಿಕೇರಿ ಮೇ 7 NEWS DESK : ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಒಳಗೊಂಡ ಗ್ರೀನ್ ಜಿಂಜರ್ ಡೀಲರ್ಸ್ ಅಸೋಸಿಯೇಷನ್ನ ಮಹಾ ಸಭೆ ಪೊನ್ನಂಪೇಟೆಯ ಖಾಸಗಿ ರೆಸಾರ್ಟ್ನಲ್ಲಿ ನಡೆಯಿತು. ಮಹಾಸಭೆಯನ್ನು ಉದ್ದೇಶಿಸಿ ಸಾಬು ಐಪು ಮಾತನಾಡಿದರು. ಅಸೋಸಿಯೇಷನ್ನ ಕೋಶಾಧಿಕಾರಿ ಮಸೂದ್ ಅವರು ಲೆಕ್ಕ ಪತ್ರ ಮಂಡಿಸಿದರು. ಸುಲೈಮಾನ್ ಸಿ.ಬಿ, ಜಾಕೋಬ್, ಮನು ಕೆ.ಜಿ.ಟಿ, ಅವರುಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ನೂತನ ಸಾಲಿನ ಅಧ್ಯಕ್ಷರಾಗಿ ಸಾಬು ಐಪು, ಪ್ರಧಾನ ಕಾರ್ಯದರ್ಶಿಯಾಗಿ ಬಟ್ಟಕಾಳ0ಡ ರಾಜ, ಕೋಶಾಧಿಕಾರಿಯಾಗಿ ಜಾಯ್ ಪಿ.ವಿ.ಜೆ, ಉಪಾಧ್ಯಕ್ಷರಾಗಿ ಜೋಬಿ, ಮೊಹಮ್ಮದ್ ನಹೀಸ್, ಮನು ಕೆ.ಜಿ.ಟಿ, ಅವರುಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಗಳಾಗಿ ಮಸೂದ್, ಜೇಕಬ್, ಬಾಲು ಕುಶಾಲನಗರ ಅವರುಗಳು ಆಯ್ಕೆಯಾದರು. ಚುನಾವಣಾ ಉಸ್ತುವಾರಿಯಾಗಿ ಕೇರಳ ವಯನಾಡ್ ಜಿಲ್ಲೆಯ ಗ್ರೀನ್ ಜಿಂಜರ್ ವ್ಯಾಪಾರಿಗಳ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಉಸ್ಮಾನ್ ಕಾರ್ಯನಿರ್ವಹಿಸಿದರು.
ಮಡಿಕೇರಿ ಮೇ 7 NEWS DESK : ಹಾಕಿ ಕ್ರೀಡಾ ಪ್ರೇಮಿಗಳನ್ನು ತಿಂಗಳ ಕಾಲ ರಂಜಿಸಿದ ನಾಪೋಕ್ಲುವಿನ ಚೇನಂಡ ಕಪ್ ಹಾಕಿ ಉತ್ಸವದ ಹಂತದಲ್ಲಿಯೇ, “ಗೋಲಿಗೊಂದು ಗಿಡ” ಎನ್ನುವ ಚಿಂತನೆಯೊಂದಿಗೆ ಹಾಕಿ ಉತ್ಸವ ಆಯೋಜನಾ ಸಮಿತಿ ಸದ್ದುಗದ್ದಲವಿಲ್ಲದೆ ಜಿಲ್ಲೆಯ ವಿವಿಧೆಡೆಗಳಲ್ಲಿ 2200ಕ್ಕೂ ಹೆಚ್ಚಿನ ವೃಕ್ಷಾರೋಪಣ ಮಾಡುವ ಮೂಲಕ ಹಸಿರ ಪರಿಸರ ಸಂರಕ್ಷಣೆಗೆ ವಿಶಿಷ್ಟವಾದ ಕೊಡುಗೆಯನ್ನು ನೀಡಿದೆ. ಸುದ್ದಿಗೋಷ್ಠಿಯಲ್ಲಿ ಚೇನಂಡ ಕಪ್ ಹಾಕಿ ನಮ್ಮೆಯ ಆಯೋಜನಾ ಸಮಿತಿಯ ಪದಾಧಿಕಾರಿಗಳು ಉತ್ಸವದ ಯಶಸ್ವಿ ಆಯೋಜನೆಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿ ಮಾತನಾಡಿ, ಚೇನಂಡ ಕಪ್ ಹಾಕಿ ಉತ್ಸವದಲ್ಲಿ ಪ್ರದರ್ಶನ ಪಂದ್ಯಗಳನ್ನು ಒಳಗೊಂಡಂತೆ ಒಟ್ಟು 385 ಪಂದ್ಯಗಳು ನಡೆದು 1520 ಗೋಲುಗಳು ದಾಖಲಾಗಿದೆ. ಗೋಲಿಗೊಂದು ಗಿಡ ಎನ್ನುವ ನಮ್ಮ ಪರಿಕಲ್ಪನೆಯನ್ನು ಮೀರಿ ಹೆಚ್ಚಿನ ಪ್ರಮಾಣದ ಗಿಡಗಳನ್ನು ವಿವಿಧೆಡೆಗಳಲ್ಲಿ ನೆಟ್ಟು, ಅವುಗಳ ಬೆಳವಣಿಗೆಯತ್ತ ನಿಗಾ ವಹಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. ಚೇನಂಡ ಕುಟುಂಬಸ್ಥರ ಗೋಮಾಳ ಜಾಗದಲ್ಲಿ ನೆಟ್ಟ ಗಿಡಗಳು ಚೆನ್ನಾಗಿ ಬೆಳೆಯುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ದಕ್ಷಿಣ ಕೊಡಗಿನ…
ಮಡಿಕೇರಿ NEWS DESK ಮೇ 7 : ಕೊಡಗು ಜಿಲ್ಲೆಯ ಏಳು ಭದ್ರಕಾಳಿ ನೆಲೆಯ ತಕ್ಕ ಮುಖ್ಯಸ್ಥರು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡಗು ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ತಾಪಮಾನ ಹೆಚ್ಚಾಗುತ್ತಿದೆ. ಕುಡಿಯುವ ನೀರಿನ ಕೊರತೆಯೂ ಎದುರಾಗುತ್ತಿದ್ದು, ಮಳೆ ಅನಿವಾರ್ಯವಾಗಿದೆ. ಸಕಲ ಜೀವಸಂಕುಲಕ್ಕೆ ನೀರಿನ ಅಗತ್ಯವಿದ್ದು, ಉತ್ತಮ ಮಳೆ ಬೆಳೆಯಾಗಲೆಂದು ಪ್ರಾರ್ಥಿಸಿದರು. ಕಾಟಕೇರಿ, ಗಾಳಿಬೀಡು, ಇಬ್ನಿವಳವಾಡಿ, ಮಕ್ಕಂದೂರ್, ಹಾಲೇರಿ, ಕೆದಕಲ್, ಮದೆನಾಡ್ ಸೇರಿದಂತೆ ಏಳು ಭದ್ರಕಾಳಿ ನೆಲೆಗಳ ಪ್ರಮುಖರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ತೆರಳಿ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಬೈವಾಡ್ ಸೇವೆಯನ್ನು ಸಮರ್ಪಿಸಿದರು.






