ಕುಶಾಲನಗರ ಜ.8 NEWS DESK : ಅನುಗ್ರಹ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎನ್.ಪುಷ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯತೆಯನ್ನು ಬೆಳೆಸಿಕೊಂಡಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗಿ ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗುವುದಕ್ಕೆ ಸಾಧ್ಯ.ಶಿಕ್ಷಣವು ಅಂಕ ಆಧಾರಿತವಾಗುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾಡಿದ ಸಾಧನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅನುಗ್ರಹ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಎಸ್.ಕೆ.ಸತೀಶ್, ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಬಂದು ಆತ್ಮವಿಶ್ವಾಸವನ್ನು ಬೆಳೆಸಿಕೊಂಡಾಗ ಮಾತ್ರ ಮುಂದೆ ಸಮಾಜದಲ್ಲಿ ಅತ್ತ್ಯುನ್ನತ ಹುದ್ದೆಯನ್ನು ಅಲಂಕರಿಸುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವ ಯಂತ್ರಗಳಾಗದೆ, ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬೇಕಾಸ ಅಗತ್ಯವನ್ನು ನೀತಿ ಕಥೆಯ ಮೂಲಕ ಸಾದರ ಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಹೆಚ್ ಬಿ.ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ…
ಲೇಖಕ: admin
ಸೋಮವಾರಪೇಟೆ ಜ.8 NEWS DESK : ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಸ್.ಬಿ.ಭರತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಹೆಚ್.ಎಸ್.ನೇತ್ರಾವತಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭರತ್ ಕುಮಾರ್ ಮತ್ತು ಕಾಂಗ್ರೆಸ್ ಬೆಂಬಲಿತ ಹೆಚ್.ಆರ್.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಮತ್ತು ಪಕ್ಷೇತರವಾಗಿ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಬಿ.ಪಿ.ಮೊಗಪ್ಪ ನಾಮಪತ್ರ ಸಲ್ಲಿಸಿದ್ದರು. ಆಕಾಂಕ್ಷಿಗಳು ನಾಮಪತ್ರ ವಾಪಾಸ್ಸು ಪಡೆಯದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಬಿ.ಜೆ.ಸಂದೀಪ್ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 8-5 ಮತಗಳ ಅಂತರದಿಂದ ಗೆಲವು ಸಾಧಿಸಿದರು. ಕಳೆದ ಸಾಲಿನ ಅಧ್ಯಕ್ಷರಾಗಿದ್ದ ಹೆಚ್.ಆರ್.ಸುರೇಶ್ ಕೂಡ 5 ಮತಗಳನ್ನು ಪಡೆದರು. 13 ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಗೆ 8 ಬಿಜೆಪಿ, 4 ಕಾಂಗ್ರೆಸ್ ಬೆಂಬಲಿತರು ಹಾಗೂ ಓರ್ವ ಪಕ್ಷೇತರರು ಆಯ್ಕೆಯಾಗಿದ್ದರು. ಚುನಾವಣೆಯ ಸಂದರ್ಭ ಆಡಳಿತ ಮಂಡಳಿ ನಿರ್ದೇಶಕರುಗಳಾದ ಕೆ.ಕೆ.ಶಿವಪ್ರಕಾಶ್, ಜಿ.ಎಂ.ಹೂವಯ್ಯ, ಎ.ಎಸ್.ನವೀನ್ ಕುಮಾರ್, ಜಿ.ಎಸ್.ಪ್ರಸನ್ನ, ಎಸ್.ಸಿ.ಸುನಿತಾ, ಕೆ.ಜಿ.ದಿನೇಶ್,…
ಮಡಿಕೇರಿ ಜ.8 NEWS DESK : ರಾಜ್ಯ ಮತ್ತು ಬಹುಸಂಖ್ಯಾತ ಸಮುದಾಯಗಳು ಕೊಡವರಂತಹ ಆದಿಮಸಂಜಾತ ಸಮುದಾಯಗಳ ಅನನ್ಯ ಅಸ್ಮಿತೆ ಸಾಂಸ್ಕೃತಿಕ, ಭಾಷಿಕ, ಸಾಂಪ್ರದಾಯಿಕ ಹಕ್ಕುಗಳನ್ನು ಗುರುತಿಸಬೇಕು ಮತ್ತು ರಕ್ಷಿಸಬೇಕು. ಸಂವಿಧಾನೇತರ ಶಕ್ತಿಗಳಾದ ದರ್ಶಕರು ಹಾಗೂ ಮಠಾಧೀಶರು ಸರಕಾರಿ ವ್ಯವಹಾರಗಳಲ್ಲಿ ಅಥವಾ ಕೊಡವರ ಹಕ್ಕುಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾಂವಿಧಾನಿಕ ಆಡಳಿತವನ್ನು ಎತ್ತಿಹಿಡಿಯುವ ಮತ್ತು ಆದಿಮಸಂಜಾತ ಕೊಡವ ಸಮುದಾಯದ ಹಕ್ಕುಗಳನ್ನು ರಕ್ಷಿಸುವ ಮಹತ್ವವನ್ನು ಸಿಎನ್ಸಿ ಒತ್ತಿ ಹೇಳುತ್ತದೆ ಎಂದು ಹೇಳಿದ್ದಾರೆ. ಸಾಂವಿಧಾನಿಕ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂವಿಧಾನೇತರ ಶಕ್ತಿಗಳಾದ ದರ್ಶಕರು ಹಾಗೂ ಮಠಾಧೀಶರು ಸರಕಾರಿ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಕೊಡವರಂತಹ ಆದಿಮಸಂಜಾತ ಸಮುದಾಯಗಳು ಸೇರಿದಂತೆ ಎಲ್ಲಾ ನಾಗರೀಕರ ಸುರಕ್ಷತೆ, ರಕ್ಷಣೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವುದು ರಾಜ್ಯದ ಕರ್ತವ್ಯವಾಗಿದೆ. ಬಹುಸಂಖ್ಯಾತ ಸಮುದಾಯಗಳು ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳು, ಸ್ವಾಭಿಮಾನ ಮತ್ತು ಗುರುತನ್ನು ಗೌರವಿಸಬೇಕು ಮತ್ತು ರಕ್ಷಿಸಬೇಕು. ಬಹುಸಂಖ್ಯಾತರ ಜನಸಂಖ್ಯಾ ತೂಕದ ಮೂಲಕ…
ಸೋಮವಾರಪೇಟೆ ಜ.8 NEWS DESK : ಸೋಮವಾರಪೇಟೆ ತಾಲ್ಲೂಕು ಹೋಂಸ್ಟೇ ಅಸೋಸಿಯೇಷನ್ ಪದಾಧಿಕಾರಿಗಳು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಚರ್ಚಿಸಿದರು. ಶಾಸಕ ಕಚೇರಿಯಲ್ಲಿ ಶಾಸಕರನ್ನು ಭೇಟಿ ಮಾಡಿದ ಅಸೋಸಿಯೇಷನ್ ಪ್ರಮುಖರು, ತಾಲ್ಲೂಕಿನಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯ, ರಸ್ತೆ ಸೇರಿದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ಮಾಟ್ನಳ್ಳಿ ಗ್ರಾಮದಲ್ಲಿರುವ ಮೂಖ ಬೆಟ್ಟ ಅಭಿವೃದ್ಧಿ ಮತ್ತು ಸೂರ್ಯೋದಯ, ಸೂರ್ಯಾಸ್ತ ವೀಕ್ಷಣಾ ಗ್ಯಾಲರಿ, ರಸ್ತೆ ದರಸ್ತಿ ಮತ್ತು ರಸ್ತೆ ಅಭಿವೃದ್ಧಿ ಪಡಿಸಬೇಕು, ಕೋಟೆಬೆಟ್ಟದಲ್ಲಿ ಪ್ರೇಕ್ಷಣೀಯ ಸ್ಥಳಗಳ ನಾಮಫಲಕ ಅಳವಡಿಸಬೇಕು, ಅಲ್ಲಿನ ಸ್ವಚ್ಚತೆ ಕಾಪಾಡಲು ವ್ಯವಸ್ಥೆಗಳನ್ನು ಮಾಡಬೇಕು, ಪುಷ್ಪಗಿರಿ ಬೆಟ್ಟದಲ್ಲಿ ವೀಕ್ಷಣಾ ಗ್ಯಾಲರಿಯನ್ನು ಅಳವಡಿಸಬೇಕು, ಮಲ್ಲಳ್ಳಿ ಜಲಪಾತದಲ್ಲಿ ಸೂಚನಾ ಫಲಕ ಹಾಗೂ ಮೆಟ್ಟಿಲುಗಳ ಕಂಬಿಗಳನ್ನು ದುರಸ್ತಿ ಪಡಿಸಬೇಕು ಮತ್ತು ಜಿಪ್ ಲೈನ್ ಅನ್ನು ಅಳವಡಿಸಬೇಕು, ಕಿರಗಂದೂರು ಗ್ರಾಮದ ಮಕ್ಕಳ ಗುಡಿ ಬೆಟ್ಟದಲ್ಲಿ ವೀಕ್ಷಣಾ ಗ್ಯಾಲರಿಯನ್ನು ಅಳವಡಿ, ರಸ್ತೆಯನ್ನು ದುರಸ್ತಿ ಪಡಿಸಬೇಕು, ಕಲ್ಕಂದೂರು ಗ್ರಾಮದಲ್ಲಿ ಪುರಾತನ ಜೈನ ಮಂದಿರವಿದ್ದು ಅದರ…
ಮಡಿಕೇರಿ ಜ.8 NEWS DESK : ತಾನು ಮಾಡುವ ಸೇವೆ ಶಾಶ್ವತವಾಗಿ ಉಳಿಯಬೇಕು, ಬಡ ಕುಟುಂಬಕ್ಕೆ ಆಸರೆಯಾಗಬೇಕು ಎನ್ನುವ ಅಭಿಲಾಷೆಯಿಂದ ಅಪರೂಪದ ದಾನಿಯೊಬ್ಬರು ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಕೊಟ್ಟಿದ್ದಾರೆ. ಸಾಮಾಜಿಕ ಕಳಕಳಿಯೊಂದಿಗೆ ಹುಟ್ಟು ಹಬ್ಬದಂದು ಅದನ್ನು ಹಸ್ತಾಂತರ ಮಾಡಿದ ಅಪರೂಪದ ಕ್ಷಣಕ್ಕೆ ವಿರಾಜಪೇಟೆಯ ತೆರ್ಮೆಕಾಡು ಪೈಸಾರಿ ಸಾಕ್ಷಿಯಾಯಿತು. ಆರ್ಜಿ ಗ್ರಾಮದ ನಿವಾಸಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು, ವಿದ್ಯುತ್ ಗುತ್ತಿಗೆದಾರರು ಮತ್ತು ತಾಲ್ಲೂಕು ಬಿಲ್ಲವ ಸೇವಾ ಸಂಘದ ಅದ್ಯಕ್ಷ ಬಿ.ಎಂ.ಗಣೇಶ್ ಅವರು ತಮ್ಮ ಹುಟ್ಟು ಹಬ್ಬದ ದಿನದಂದು ತೆರ್ಮೆಕಾಡು ಪೈಸಾರಿಯ ಶಂಕ್ರು ಹಾಗೂ ವಾಸಂತಿ ಕುಟುಂಬಕ್ಕೆ ತಾವು ನಿರ್ಮಿಸಿಕೊಟ್ಟ ಮನೆಯನ್ನು ಕೀಲಿ ಕೈ ನೀಡುವ ಮೂಲಕ ಹಸ್ತಾಂತರಿಸಿದರು. ಇದು ಇವರು ಬಡ ಮಂದಿಗೆ ನೀಡುತ್ತಿರುವ ಮೂರನೇ ಮನೆಯಾಗಿದೆ. ಈ ಹಿಂದೆ ಪೆರುಂಬಾಡಿ ಗ್ರಾಮದ ಕಾಳ ಮತ್ತು ಕೆದಮುಳ್ಳೂರು ಗ್ರಾಮ ಪಂಚಾಯ್ತಿಯ ತೆರ್ಮೆಮೊಟ್ಟೆ ಗ್ರಾಮದ ನಿವಾಸಿ ಬಿ.ಎಂ.ಕಮಲ ಅವರುಗಳಿಗೆ ಮನೆ ನಿರ್ಮಿಸಿ ಸಾರ್ವಜನಿಕರ ಸಮ್ಮುಖದಲ್ಲಿ ಹಸ್ತಾಂತರ ಮಾಡಿದ್ದರು. ಅಲ್ಲದೆ ಒಟ್ಟು 6…
ಮಡಿಕೇರಿ ಜ.8 NEWS DESK : ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ಜ.16 ರಂದು ನಡೆಯಲಿರುವ 20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಥೆ, ಕವನ, ಕಾದಂಬರಿ ಪ್ರಕಟಗೊಳಿಸಿರುವ 17 ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಪುಸ್ತಕಗಳ ಪ್ರಕಟಣೆ ಅಥವಾ ಪತ್ರಿಕೆಗಳಲ್ಲಿ ಲೇಖನಗಳು ಬರೆದಿರುವ ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಪ್ಪತ್ತನೆಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಎಲ್ಲಾ ಸಾಹಿತ್ಯ ಬರೆಯಲು ತೊಡಗಿರುವ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. ವಿದ್ಯಾರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ. ಓದುವ ತರಗತಿ, ಶಾಲೆ, ಪುಸ್ತಕ…
ಕುಶಾಲನಗರ ಜ.8 NEWS DESK : ಮೈಸೂರಿನ ಕುವೆಂಪು ನಗರದ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ತೋಳು ಕುಸ್ತಿ ಪಂದ್ಯಾವಳಿಯಲ್ಲಿ ಸಿದ್ದಾಪುರದ ಇಕ್ರಾ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಆದಿಲ್ ಅರಫಾ ಸಾಧನೆ ತೋರಿದ್ದಾನೆ. 60 ಹಾಗೂ 65 ಕೆಜಿ ತೂಕದ ಪಂದ್ಯಾವಳಿಯಲ್ಲಿ ಮೊದಲ ಸ್ಥಾನಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಆದಿಲ್ ಅರಫಾ ಕುಶಾಲನಗರದ ಪ್ರವಾಸೋದ್ಯಮಿ ಕಿಂಗ್ಸ್ ವಿ ಡ್ರೀಮ್ ಮಾಲೀಕ ಎಂ.ಎಂ.ದಾವುದ್ ಹಾಗೂ ಎಂ.ಬಿ.ಸೌಧ ದಂಪತಿಯ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಇಕ್ರಾ ಶಾಲೆಯ ಆಡಳಿತ ಮಂಡಳಿ ಪ್ರಶಂಸೆ ವ್ಯಕ್ತ ಪಡಿಸಿದೆ.
ಕುಶಾಲನಗರ ಜ.8 NEWS DESK : ಯುವ ಸಮುದಾಯ ದುಶ್ಚಟಗಳಿಂದ ದೂರವಿರಸಲು ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ. ಅದರ ಅಗತ್ಯತೆ ಇತ್ತೀಚಿಗೆ ತೀರ ಹೆಚ್ಚಾಗಿದೆ ಎಂದು ಇನ್ನರ್ ವೀಲ್ ಕ್ಲಬ್ ನ ಜಿಲ್ಲಾ ಚೇರಮನ್ ವೈಶಾಲಿ ಕುಡ್ವಾ ಕರೆ ನೀಡಿದರು. ಕುಶಾಲನಗರದ ಇನ್ನರ್ ವೀಲ್ ಕ್ಲಬ್ ಗೆ ಅಧಿಕೃತ ಭೇಟಿ ನೀಡಿ ಮಾತನಾಡಿದ ಅವರು, ಸಮಾಜದಲ್ಲಿ ಜನರ ಮನಸ್ಸಿಗೆ ಹತ್ತಿರವಾಗುವ ಮತ್ತು ಒಳ್ಳೆಯ ಸೇವೆ ಮಾಡುತ್ತಾ ಬಂದಿರುವ ಕಾರಣ ಇನ್ನರ್ ವೀಲ್ ಕ್ಲಬ್ ವಿಶೇಷವಾದ ಸ್ಥಾನದಲ್ಲಿ ನಿಲ್ಲುತ್ತದೆ. ಇನ್ನರ್ ವೀಲ್ ಕ್ಲಬ್ ಸದಸ್ಯರು ಸಮಾಜದಲ್ಲಿ ಅದ್ಭುತ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ಶ್ಲಾಘೀಸಿದರು. ಯಾವುದೇ ಸೇವೆ ಮಾಡಿದರು ಕನಿಷ್ಠ 20 ವರ್ಷಗಳು ನೆನಪಿನಲ್ಲಿ ಇರುವ ಹಾಗೆ ಇರಬೇಕು. ಆ ಸೇವೆಯಿಂದ ನಮಗೆ ಮೊದಲು ಸಂತೃಪ್ತಿ ಸಿಗಬೇಕು. ನಂತರ ಬೇರೆಯರಿಗೂ ಸ್ಫೂರ್ತಿಯಾಗುವುದರಲ್ಲಿ ಅನುಮಾನವಿಲ್ಲ. ಕೇವಲ ಮನುಷ್ಯರಿಗೆ ಅಷ್ಟೇ ಅಲ್ಲದೆ ಪ್ರಾಣಿ ಪಕ್ಷಿಗಳಿಗೂ ನಮ್ಮ ಅವಶ್ಯವಿರುತ್ತೆ. ಅವುಗಳಿಗೆ ತಮ್ಮ ಕಷ್ಟ ಹೇಳಿಕೊಳ್ಳಲು ಆಗುವುದಿಲ್ಲ. ಅವುಗಳ…
ಮೈಸೂರು ಜ.8 NEWS DESK : ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟಮಟ್ಟದ ತಾರಾಲಯ ಕಟ್ಟಡ ಕಾಮಗಾರಿಯನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರಿಶೀಲಿಸಿದರು. ಈ ಸಂದರ್ಭ ಭಾರತಿಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಮ್. ರಾಘು ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಮಡಿಕೇರಿ ಜ.8 NEWS DESK : ಇಶಾ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಮರಗೋಡುವಿನ ಮಹಿಳಾ ತಂಡದ ಸದಸ್ಯರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.






