ಲೇಖಕ: admin

ಮಡಿಕೇರಿ ಡಿ.25 NEWS DESK : ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ, ಬಾಳೆಹೊನ್ನೂರು, 2025 ನೇ ಇಸವಿಯಲ್ಲಿ 100 ನೇ ವರ್ಷದ ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದು, ಇದರ ಪ್ರಯುಕ್ತ ಕಾಫಿ ಬೆಳೆಯುವ ಪ್ರದೇಶಗಳಿಂದ 100 ಪ್ರಗತಿಪರ ಕಾಫಿ ಬೆಳೆಗಾರರನ್ನ ಗುರುತಿಸಿ ಸನ್ಮಾನಿಸಲು ನಿರ್ಧರಿಸಲಾಗಿದೆ. ಆದ್ದರಿಂದ, ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಕಾಫಿ ಬೆಳೆಗಾರರು ಹತ್ತಿರದ ಕಾಫಿ ಮಂಡಳಿಯ ಕಚೇರಿಯಿಂದ ಅರ್ಜಿಯನ್ನು ಪಡೆದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 10/01/2025 ರ ಒಳಗೆ ಸಲ್ಲಿಸಲು ಕೋರಿಕೊಳ್ಳಲಾಗಿದೆ.

Read More

ಮಡಿಕೇರಿ ಡಿ.25 NEWS DESK : ಕರ್ನಾಟಕ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಕೊಡಗು ಗೌಡ ಸಮಾಜದ ಮೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪುಟಾಣಿಗಳ ಮೂಲಕ ಉದ್ಘಾಟಿಸಿ ಮಾತನಾಡಿದ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಹಾಗೂ ವಿದ್ಯಾ ಸಂಘದ ನಿರ್ದೇಶಕ ಸೂದನ ಎಸ್.ಈರಪ್ಪ ಅವರು, ಅರೆಭಾಷೆ ಸಾಹಿತ್ಯ, ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಂಪ್ರದಾಯದ ಕುರಿತು ಸಮಾಜದ ಬಂಧುಗಳು ಅರಿತುಕೊಳ್ಳಬೇಕು. ಈ ರೀತಿಯ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಮಕ್ಕಳು ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಮತ್ತು ಅರೆಭಾಷೆ ಐನ್‍ಮನೆ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲು ಅರೆಭಾಷೆ ಅಕಾಡೆಮಿ ಸದಾ ಸಿದ್ಧವಿದೆ ಎಂದು ತಿಳಿಸಿದರು. ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು ಮಾತನಾಡಿ ವಿದ್ಯಾ ಸಂಘದ ಕಟ್ಟಡದ ನವೀಕರಣ ಕಾರ್ಯ ನಡೆಯುತ್ತಿದ್ದರೂ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕೆನ್ನುವ…

Read More

ಮಡಿಕೇರಿ ಡಿ.25 NEWS DESK : ಹುಲಿಯೊಂದು ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ನಿಟ್ಟೂರು ಸಮೀಪದ ತಟ್ಟಕೆರೆ ಪೈಸಾರಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ರಾಜನ್ (48) ಎಂಬುವವರೇ ಹುಲಿ ದಾಳಿಗೊಳಗಾದವರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹುಲಿ ದಾಳಿ ಮಾಡಿ ಕಿವಿ ಮತ್ತು ತಲೆಯ ಭಾಗಕ್ಕೆ ಘಾಸಿಗೊಳಿಸಿದೆ. ಅದೃಷ್ಟವಶಾತ್ ಕಿರುಚಾಟ ಕೇಳಿ ಹುಲಿ ಅಲ್ಲಿಂದ ಕಾಲ್ಕಿತ್ತಿದೆ. ನಂತರ ಗಾಯಾಳು ರಾಜನ್ ಅವರನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ರಾಜನ್ ಅವರ ಆರೋಗ್ಯ ವಿಚಾರಿಸಿದರು. ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹುಲಿ ಸೆರೆಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಆದಿಕಾರಿಗಳಿಗೆ ಸೂಚನೆ ನೀಡಿದರು. ಹುಲಿ ದಾಳಿಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು,…

Read More

ಮಡಿಕೇರಿ ಡಿ.25 NEWS DESK : ಪತ್ರಕರ್ತರು ಬರೆಯುವ ಎಲ್ಲಾ ಸುದ್ದಿಗಳು ವಸ್ತುನಿಷ್ಠವಾಗಿ, ವಾಸ್ತವವಾಗಿ ಇರಬೇಕು ಎಂದು ಪೊನ್ನಂಪೇಟೆಯ ಶ್ರೀ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಪರಹಿತಾನಂದ ಜೀ ಹೇಳಿದರು. ಕಾನೂರು ರಸ್ತೆಯಲ್ಲಿ ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲ್ಲೂಕು ಘಟಕದ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಪಂಚದಲ್ಲಿ ಹರಿತವಾದ ವಸ್ತು ಖಡ್ಗ, ಆದರೆ ಪತ್ರಕರ್ತನ ಲೇಖನಿ ಅದಕ್ಕಿಂತ ಹರಿತವಾದದ್ದು ಎಂದು ಅವರು ಹೇಳಿದರು. ನೂತನವಾಗಿ ಉದ್ಘಾಟನೆಗೊಂಡ ಕಚೇರಿ ಸದ್ಬಳಕೆಯಾಗಲಿ. ಈ ಭಾಗದ ಜನರ ಆಶೋತ್ತರಗಳಿಗೆ ಧ್ವನಿಯಾಗಲಿ ಎಂದು ಶುಭ ಕೋರಿದರು.  ಆಶ್ರಮದ ವತಿಯಿಂದ ಸಂಘದ ಕಚೇರಿಗೆ ನೀಡಲಾದ ಕಂಪ್ಯೂಟರನ್ನು ಸಂಘದ ಅಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಪತ್ರಿಕಾಭವನ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಕೇಶವ್ ಕಾಮತ್ ಮಾತನಾಡಿ, ಸಂಘ ಬೆಳವಣಿಗೆ ಕಾಣುತ್ತಿರುವುದು ಸಂತಸದ ಸಂಗತಿಯಾಗಿದೆ. ಇಂದು ಆರಂಭವಾದ ಸಂಘ ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ಹೊಂದುವಂತಾಗಲಿ ಎಂದು ಹಾರೈಸಿದರು. ಇದೇ ಸಂದರ್ಭ ತಾಲೂಕು ಸಂಘದ ಕ್ಷೇಮ ನಿಧಿಗೆ 10 ಸಾವಿರ…

Read More

ಸುಂಟಿಕೊಪ್ಪ ಡಿ.25 NEWS DESK : ಏಸುಕ್ರಿಸ್ತನ ಜನ್ಮದಿನ ಕ್ರಿಸ್‍ಮಸ್ ಹಬ್ಬವನ್ನು ಸುಂಟಿಕೊಪ್ಪದ ವಿವಿಧೆಡೆ ಸಂಭ್ರಮದಿಂದ ಆಚರಿಸಿದರು. ಸಂತ ಅಂತೋಣಿ ದೇವಾಲಯದಲ್ಲಿ ಪ್ರಭು ಕ್ರಿಸ್ತರ ಜನನದ ಸ್ಥಳವಾದ ಗೋದಾಲಿಯನ್ನು ನಿರ್ಮಿಸಿ ಅದರಲ್ಲಿ ಏಸುಕ್ರಿಸ್ತರನ್ನು ಪ್ರತಿಷ್ಠಾಪಿಸುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ವಿಶೇಷ ಗಾಯನ ದಿವ್ಯ ಬಲಿಪೂಜೆ ಪ್ರಭೋದನೆಯೊಂದಿಗೆ ಆಡಂಬರ ದಿವ್ಯ ಬಲಿಪೂಜೆಯನ್ನು ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾ.ವಿಜಯಕುಮಾರ್ ಸಮರ್ಪಿಸಿದರು. ನಂತರ ಮಾತನಾಡಿದ ಅವರು, ಪ್ರಭುಕ್ರಿಸ್ತರು ಮಾನವರಲ್ಲಿ ಪರಸ್ಪರ ಪ್ರೀತಿ, ಅನ್ಯೂನತೆ, ಶಾಂತಿ, ಸಹಬಾಳ್ವೆಯ ಸಂದೇಶವನ್ನು ಜಗತ್ತಿಗೆ ಸಾರಿದ ಪ್ರಭು ಕ್ರಿಸ್ತರ ಸಂದೇಶವನ್ನು ಅಳವಡಿಸಿಕೊಂಡು ಇತರರೊಂದಿಗೆ ಪ್ರೀತಿ, ವಿಶ್ವಾಸದಿಂದ ಬದುಕು ನಡೆಸಬೇಕೆಂದು ಕರೆ ನೀಡಿದರು. ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತ್ರೀಯರು, ಮಕ್ಕಳು,ಯುವಕ, ಯವತಿರು, ಪುರುಷರು ಹಾಗೂ ಮಹಿಳೆಯರು, ನೂರಾರು ಸಂಖ್ಯೆಯಲ್ಲಿ ಸೇರಿದ ಕ್ರೈಸ್ತ ಭಾಂದವರು ಅಡಂಬರ ದಿವ್ಯ ಬಲಿಪೂಜೆ ಆರಾಧನೆಯಲ್ಲಿ ಪಾಲ್ಗೊಂಡು ಮುಂಬತ್ತಿಯನ್ನು ಹಚ್ಚಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಸಂತ ಅಂತೋಣಿ…

Read More

ಬೆಳಗಾವಿ ಡಿ.25 NEWS DESK : ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದರು. ಹುತಾತ್ಮ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ. ಸಂತಾಪ :: ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ…

Read More

  ಮಡಿಕೇರಿ ಡಿ.25 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಜೆ.ಸಿ.ಐ ಪೊನ್ನಂಪೇಟೆ ನಿಸರ್ಗ ಸಹಯೋಗದಲ್ಲಿ ಡಿ.29 ರಂದು ಮಾಯಮುಡಿಯಲ್ಲಿ ತೋಕ್ ನಮ್ಮೆ ನಡೆಯಲಿದೆ. ಮಾಯಮುಡಿ ಸರ್ಕಾರಿ ಶಾಲಾ ಮೈದಾನದಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಉಪಸ್ಥಿತರಿರಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜೆ.ಸಿ.ಐ ಪೊನ್ನಂಪೇಟೆ ನಿಸರ್ಗ ಅಧ್ಯಕ್ಷ ಜೇಸಿ ಪೆಮ್ಮಂಡ ಮಂಜು ಬೋಪಣ್ಣ, ದಕ್ಷಿಣ ಭಾರತದ ಡಿ.ಹೆಚ್.ಎಲ್. ಇ.ಕಾಂ ಉಪಾಧ್ಯಕ್ಷ ಬಾಳೆಯಡ ಕರುಣ್ ಕಾಳಯ್ಯ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ, ಕೊಡಗು ಜಬ್ಬೂಮಿ ಟ್ರಸ್ಟ್ ಅಧ್ಯಕ್ಷ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ, ಕೋಲುಬಾಣೆ ಕಾವೇರಿ…

Read More

ಮಡಿಕೇರಿ ಡಿ.25 NEWS DESK : ಇತಿಹಾಸ ಪ್ರಸಿದ್ಧ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ  ದೇವಾಲಯಕ್ಕೆ ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ನೂತನ ಪ್ರವೇಶದ್ವಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗಿನ ಕುಲದೇವರಾದ ಮಳೆದೇವರು ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಇಗ್ಗುತ್ತಪ್ಪ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ನೂತನ ಪ್ರವೇಶದ್ವಾರ ಸಹಕಾರಿಯಾಗಲಿದೆ. ಪುರಾತನ ಕಾಲದಿಂದಲೂ ಪ್ರಸಿದ್ಧಿ ಪಡೆದಿರುವ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯ ಅಭಿವೃದ್ಧಿಗೊಳ್ಳುತ್ತಿರುವುದು ಸಂತಸದ ವಿಷಯ, ಈ ದೇವಾಲಯವು ಇನ್ನೂ ಹೆಚ್ಚಿನ ಕಾಯಕಲ್ಪ ಪಡೆಯುವುದರ ಮೂಲಕ ಭಕ್ತಾದಿಗಳಿಗೆ ಸದುಪಯೋಗವಾಗಲಿ ಎಂದು ಹೇಳಿದರು. ಜೊತೆಗೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವರ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲೆ ಇರುವುದರೊಂದಿಗೆ ನಾಡು ಸುಭಿಕ್ಷವಾಗಿರಲಿ ಎಂದು ಹಾರೈಸಿದರು. ಇದೇ ಸಂದರ್ಭ ದೇವಾಲಯ ಸಮಿತಿ ವತಿಯಿಂದ ಸಂಸದರನ್ನು ಸನ್ಮಾನಿಸಿ, ಗೌರವಿಸಲಾಯಿತು. ವಿಧಾನ ಪರಿಷತ್ ಸದಸ್ಯ ಸುಜ ಕುಶಾಲಪ್ಪ, ಮುಖಂಡರುಗಳು, ಆಡಳಿತ ಮಂಡಳಿ ಸಮಿತಿಯವರು,…

Read More

ಮಡಿಕೇರಿ ಡಿ.25 NEWS DESK : 2025-26 ನೇ ಸಾಲಿಗೆ ನಗರಸಭೆ ಆಯವ್ಯಯ ತಯಾರಿಸುವ ಸಲುವಾಗಿ ಈ ಸಾಲಿನ ಆದಾಯ ಮತ್ತು ವ್ಯಯದ ಬಗ್ಗೆ ಸೂಕ್ತ ಸಲಹೆ ಸೂಚನೆ ಪಡೆಯಲು ನಗರಸಭೆ ಪೌರಯುಕ್ತರ ಅಧ್ಯಕ್ಷತೆಯಲ್ಲಿ ಹಾಗೂ ಚುನಾಯಿತ ಆಡಳಿತ ಸದಸ್ಯರ ಉಪಸ್ಥಿತಿಯಲ್ಲಿ ಡಿ.30 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಎನ್‍ಜಿಒಗಳು ಮತ್ತು ಮಾಜಿ ಚುನಾಯಿತ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಹಾಗೂ ಆಸಕ್ತಿಯುಳ್ಳ ಸಾರ್ವಜನಿಕರು ಹಾಜರಾಗಿ ತಮ್ಮ ಸೂಕ್ತ ಸಲಹೆ ಮಾರ್ಗದರ್ಶನ ನೀಡುವಂತೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಕೋರಿದ್ದಾರೆ.

Read More

ಮಡಿಕೇರಿ ಡಿ.25 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಲೋಕಸಭಾ ಆಯೋಗದ ವತಿಯಿಂದ ನಡೆಸಲಾಗುತ್ತಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಗಳು ಡಿ.29 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಎಫ್.ಎಂ.ಕೆ.ಎಂ.ಸಿ ಕಾಲೇಜು ಇಲ್ಲಿ ಪರೀಕ್ಷೆ ನಡೆಯಲಿದೆ. ಆ ದಿಸೆಯಲ್ಲಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಇಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಅನಂತ್ ಪ್ರಕಾಶ್ ಮೀನಾರವರು ಆದೇಶ ಹೊರಡಿಸಿದ್ದಾರೆ.

Read More