ಲೇಖಕ: admin

ಬೆಂಗಳೂರು ಜ.8 NEWS DESK : ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ…

Read More

ಮಡಿಕೇರಿ ಜ.8 NEWS DESK : ಕೊಡಗು ಜಿಲ್ಲೆಯ ಸರಕಾರಿ ಕಚೇರಿಗಳನ್ನು ಭ್ರಷ್ಟಾಚಾರ ಮತ್ತು ದಲ್ಲಾಳಿ ಮುಕ್ತಗೊಳಿಸಬೇಕೆಂದು ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎ.ಎಸ್.ಕಟ್ಟಿ ಮಂದಯ್ಯ ಅವರು ಜಿಲ್ಲೆಯ ಕಂದಾಯ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅರ್ಜಿದಾರರಿಗೆ ಹೆಚ್ಚಾಗಿ ಸಮಸ್ಯೆ ಎದುರಾಗುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಐದು ತಾಲ್ಲೂಕುಗಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ಭ್ರಷ್ಟಾಚಾರ ಎನ್ನುವುದು ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದೆ, ಇಂದು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಮೂಲಕ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಅರ್ಜಿದಾರರು ನೀಡುವ ಹಣದಲ್ಲಿ ಅರ್ಧಭಾಗ ದಲ್ಲಾಳಿಗಳಿಗೆ, ಉಳಿದ ಅರ್ಧಭಾಗ ಅಧಿಕಾರಿಗಳಿಗೆ ಎಂದು ಹಂಚಿಕೆಯಾಗುತ್ತಿದೆ. ಈ ಹಿಂದೆ ಭಾರತೀಯ ಪ್ರಜೆಗಳು ಬ್ರಿಟಿಷರ ಗುಲಾಮರಾಗಿ ಸಂಕಷ್ಟದ ಜೀವನ ನಡೆಸಬೇಕಾಗಿತ್ತು. ಆದರೆ ಇಂದು ಅಧಿಕಾರಿಗಳ ಗುಲಾಮರಾಗುವ ದುಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದರು. ::: ಸಕಾಲ ಮರು ಜಾರಿಯಾಗಲಿ ::: ಸಾರ್ವಜನಿಕರ ಅರ್ಜಿಗಳು…

Read More

ನಾಪೋಕ್ಲು ಜ.8 NEWS DESK : ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಜ.10 ರಂದು ವೈಕುಂಠ ಏಕಾದಶಿಯ ಪ್ರಯುಕ್ತ ವಿಶೇಷ ದರ್ಶನ ಹಾಗೂ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಜ.8 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರಿಗೂ ಶಿಕ್ಷಕರಷ್ಟೇ ಜವಾಬ್ದಾರಿ ಇರುತ್ತದೆ. ಪೋಷಕರು ತಮ್ಮ ಮಕ್ಕಳ ಮೇಲೆ ಸದಾ ಕಾಳಜಿಯ ಕಣ್ಣಿಟ್ಟಿರಬೇಕು ಎಂದು ಮಡಿಕೇರಿಯ ಜಿಲ್ಲಾ ನ್ಯಾಯಾಲಯದ ವಕೀಲರು ಹಾಗೂ ಬಾರ್ ಕೌನ್ಸಿಲ್ ಅಧ್ಯಕ್ಷ ಎಂ.ಎ.ನಿರಂಜನ್ ಹೇಳಿದರು. ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವದ ಅಂಗವಾಗಿ ವಿದ್ಯಾರ್ಥಿ ನಾಯಕರಿಂದ ಗೌರವ ವಂದನೆ ಹಾಗೂ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಸಂಪೂರ್ಣ ದೂರವಿರಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ಉತ್ತಮ ಗೆಳೆಯರ ಒಡನಾಟವನ್ನು ಹೊಂದಿರಬೇಕು. ಶೈಕ್ಷಣಿಕವಾಗಿ ದೊರೆಯುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಮಾನವೀಯತೆಯೊಂದಿಗೆ ಬದುಕು ಮತ್ತು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮಾರುತಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಮುಂಡಂಡ ಕೆ.ಅಪ್ಪಚ್ಚು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ, ಪೋಷಕರ ನಿರಂತರ ಸಹಕಾರದಿಂದ ಶಾಲೆ ಪ್ರಗತಿಯನ್ನು ಹೊಂದುತ್ತಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಉತ್ತಮ ಹವ್ಯಾಸದ ಜೊತೆಗೆ ತಮ್ಮಲ್ಲಿರುವ ಪ್ರತಿಭೆಯನ್ನು…

Read More

ನಾಪೋಕ್ಲು ಜ.8 NEWS DESK : ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಆದಿಸ್ಥಾನ ಮಲ್ಮದಲ್ಲಿ ಸಂಪ್ರದಾಯದಂತೆ ಪುದಿಯಕ್ಕಿ ನೈವೇದ್ಯ (ಹೊಸ ಅಕ್ಕಿ ನೈವೇದ್ಯ)ವನ್ನು ಶ್ರದ್ಧಾಭಕ್ತಿಯಿಂದ ದೇವರಿಗೆ ಅರ್ಪಿಸಲಾಯಿತು. ಈ ಸಂದರ್ಭ ಪಾಡಿ, ನೆಲಜಿ, ಪೇರೂರು ಗ್ರಾಮಗಳಿಂದ ತಕ್ಕ ಮುಖ್ಯಸ್ಥರು ಪಾಲ್ ಬೈವಾಡ್ ಸಮೇತ ಆಗಮಿಸಿದ್ದರು. ದೇವತಕ್ಕ ಪರದಂಡ ಪ್ರಿನ್ಸ್ ತಮ್ಮಪ್ಪ ಹೊಸ ಅಕ್ಕಿಯ ನೈವೇದ್ಯ ಅರ್ಪಣೆ ಮಾಡಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗೆ, ನಾಡಿನ ಸುಭಿಕ್ಷೆಗೆ ಪ್ರಾರ್ಥನೆ ಸಲ್ಲಿಸಿದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಜ.8 NEWS DESK : ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ನೈಜ ಪ್ರತಿಭಾನ್ವಿತ ಕಬಡ್ಡಿ ಆಟಗಾರರಿಗೆ ಆಟವಾಡಲು ಅವಕಾಶ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಕುಶಾಲನಗರ ಫ್ರೆಂಡ್ಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಎಸ್.ಆದಂ ಹಾಗೂ ಕಬಡ್ಡಿ ಆಟಗಾರರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಆದಂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಜನವರಿ 6ರಿಂದ 8 ರವರೆಗೆ ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿ ನಡೆದಿದೆ. ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಕೊಡಗಿನ ಪ್ರತಿಭಾವಂತ ಕಬಡ್ಡಿ ಆಟಗಾರರು ಉತ್ಸುಕರಾಗಿದ್ದರು. ಆದರೆ ಆಟಗಾರರ ಆಯ್ಕೆಯು ನಿಯಮಬಾಹಿರವಾಗಿ ನಡೆದಿರುವುದರಿಂದ ಸ್ಥಳೀಯ ಆಟಗಾರರಿಗೆ ಅನ್ಯಾಯವಾಗಿದೆ. ಕೊಡಗಿನ ಆಸಕ್ತ ಆಟಗಾರರು ಕುಶಾಲನಗರದ ಜ್ಞಾನ ಭಾರತಿ ಶಾಲಾ ಮೈದಾನಕ್ಕೆ ತೆರಳಿ ಕೊಡಗು ಜಿಲ್ಲೆಯ ಕಬಡ್ಡಿ ಅಸೋಸಿಯೇಷನ್ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಉತ್ತಮವಾಗಿ ಆಟವಾಡುವ ಆಟಗಾರರನ್ನು ಆಯ್ಕೆ ಮಾಡದೆ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ…

Read More

ಸೋಮವಾರಪೇಟೆ ಜ.8 NEWS DESK : ಸಮಾಜಸೇವೆಯಿಂದ ಸಿಗುವ ಸಂತೃಪ್ತಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗುವುದಿಲ್ಲ ಎಂದು ಇನ್ನರ್ ವ್ಹೀಲ್ ಕ್ಲಬ್‍ನ ಜಿಲ್ಲಾಧ್ಯಕ್ಷೆ ವೈಶಾಲಿ ಕುಡ್ವಾ ಹೇಳಿದರು. ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಗೆ ಭೇಟಿ ನೀಡಿ ನಂತರ ಒಕ್ಕಲಿಗರ ಸಂಘದ ಶ್ರೀಗಂಧಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಸಂಪಾದಿಸಿದ ಹಣದಲ್ಲಿ ಒಂದಷ್ಟು ಭಾಗವನ್ನು ಸಮಾಜಸೇವೆಗೆ ಬಳಸಬೇಕು. ತಾಯಿಯಂದಿರು ಗಂಡು ಮಕ್ಕಳಿಗೆ ಸಭ್ಯತೆ ಹಾಗೂ ಮೌಲ್ಯಧಾರಿತ ಬದುಕು ಕಟ್ಟಿಕೊಳ್ಳುವ ಪಾಠವನ್ನು ಹೇಳಿಕೊಡಬೇಕು ಎಂದು ಮನವಿ ಮಾಡಿದ ಅವರು, ಹೆಣ್ಣು ಮಕ್ಕಳು ತಮ್ಮ ರಕ್ಷಣೆಗೆಬೇಕಾದ ವಿದ್ಯೆಯನ್ನು ಕಲಿತುಕೊಳ್ಳಬೇಕು. ಪೋಷಕರು ಅಂತಹ ವಿದ್ಯೆ ಕಲಿಯಲು ಪ್ರೋತ್ಸಾಹ ನೀಡಬೇಕು. ಅತ್ಯಾಚಾರದಂತಹ ಘಟನೆಗಳು ನಡೆದಾಗ ಪ್ರತಿಭಟನೆ ಮಾಡಿ ಪ್ರಯೋಜನವಿಲ್ಲ. ಬಲಿಷ್ಠ ಕಾನೂನು ಅವಶ್ಯಕವಾಗಿದೆ ಎಂದು ಹೇಳಿದರು. ಸೋಮವಾರಪೇಟೆ ಕ್ಲಬ್ ಉತ್ತಮ ಜನಪರ ಕಾರ್ಯಕ್ರಮಗಳನ್ನು ನಿರ್ವಹಿಸಿದೆ ಎಂದು ಶ್ಲಾಘೀಸಿದರು. ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಅಳವಡಿಸಲಾಗಿದ್ದ ಡಿಜಿಟಲ್…

Read More

ಸೋಮವಾರಪೇಟೆ ಜ.8 NEWS DESK : ತೋಳೂರುಶೆಟ್ಟಳ್ಳಿ ನಡ್ಲಕೊಪ್ಪ ಗುಂಪು ಸಮಿತಿಯ ವಾರ್ಷಿಕ ಮಹಾಸಭೆ ಇಬ್ಬನಿ ಹೋಂಸ್ಟೇಯಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ಟಿ.ಕೆ.ಮಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿ.ಪಂ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಪಿ.ವೀರೇಂದ್ರ, ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಿ.ಕೆ.ಶಿವಕುಮಾರ್ ಅವರುಗಳನ್ನು ಸನ್ಮಾನಿಸಲಾಯಿತು. ಈ ಸಂರ್ಭ ಸಮಿತಿ ಕಾರ್ಯದರ್ಶಿ ವಿ.ವಿ.ಸೋಮಯ್ಯ, ಖಜಾಂಚಿ ಎಂ.ಕೆ.ಧರ್ಮಪ್ಪ, ಗ್ರಾಮದ ಮುಖಂಡರಾದ ಹೆಚ್.ಬಿ.ರಮೇಶ, ಸುಬ್ಬಯ್ಯ, ಶಾಂತಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಮತ್ತಿತರರು ಇದ್ದರು.

Read More

ಸೋಮವಾರಪೇಟೆ ಜ.7 NEWS DESK : ಯಡೂರು ಗ್ರಾಮದ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಸಮಿತಿ ಅಧ್ಯಕ್ಷ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಕಾಲೇಜು ತರಗತಿಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವುದು, ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಕಾಲೇಜಿನಲ್ಲಿ ನಿರಂತರವಾಗಿ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ಸಂದರ್ಭ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಶಾಸಕರಿಗೆ ಮನವಿ ಮಾಡಿದರು. ಶಾಸಕರು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳು ಡ್ರಗ್ಸ್, ಧೂಮಪಾನ ಮದ್ಯಪಾನಗಳಂತಹ ವ್ಯಸನಗಳ ಕಡೆ ವಾಲುವುದಕ್ಕೆ ಅವಕಾಶ ಮಾಡಿಕೊಡಬಾರದು. ವಿದ್ಯಾರ್ಥಿ ಹಾಜರಾತಿ ಕಡೆ ಸೂಕ್ತ ಗಮನ ನೀಡಬೇಕು. ಆಗಾಗ್ಗೆ ಪೋಷಕರ ಸಭೆ ಕರೆದು ವಿದ್ಯಾರ್ಥಿಗಳ ಪ್ರಗತಿ, ಕಲಿಕೆಯ…

Read More

ಮಡಿಕೇರಿ NEWS DESK ಡಿ.8 : ಮಡಿಕೇರಿ ನಗರಸಭಾ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ಡಾ.ಮಂತರ್‌ ಗೌಡ ಅವರು ಚಾಲನೆ ನೀಡಿದರು.

Read More