ಮಡಿಕೇರಿ ಡಿ.25 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಲೋಕಸಭಾ ಆಯೋಗದ ವತಿಯಿಂದ ನಡೆಸಲಾಗುತ್ತಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಗಳು ಡಿ.29 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಎಫ್.ಎಂ.ಕೆ.ಎಂ.ಸಿ ಕಾಲೇಜು ಇಲ್ಲಿ ಪರೀಕ್ಷೆ ನಡೆಯಲಿದೆ. ಆ ದಿಸೆಯಲ್ಲಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಇಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಅನಂತ್ ಪ್ರಕಾಶ್ ಮೀನಾರವರು ಆದೇಶ ಹೊರಡಿಸಿದ್ದಾರೆ.
ಲೇಖಕ: admin
ಮಡಿಕೇರಿ ಡಿ.25 NEWS DESK : ರಾಜ್ಯ ಕಾಂಗ್ರೆಸ್ ಸರಕಾರ ಸರ್ವಾಧಿಕಾರದ ಧೋರಣೆ ಅನುಸರಿಸುತ್ತಿದ್ದು, ಇದಕ್ಕೆ ತಕ್ಕ ಉತ್ತರ ನೀಡುವ ಅಗತ್ಯವಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಗೋಣಿಕೊಪ್ಪಲು ದುರ್ಗಾಬೋಜಿ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಬಿಜೆಪಿ ಮಂಡಲದ ಸಂಘಟನಾ ಪರ್ವ ಮತ್ತು ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಕರ್ನಾಟಕ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಸಂಘಟನಾತ್ಮಕವಾಗಿ ಬಲಹೊಂದುವ ಮೂಲಕ ಬಿಜೆಪಿಗೆ ಮತ್ತೆ ಶಕ್ತಿ ತುಂಬುವ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತರು ಮಾಡಬೇಕೆಂದು ಕರೆ ನೀಡಿದರು. ಕಾಂಗ್ರೆಸ್ ಸರಕಾರ ನಡೆಸುತ್ತಿರುವ ದಾದಾಗಿರಿಯ ಆಡಳಿತಕ್ಕೆ ತಕ್ಕ ಉತ್ತರ ನೀಡಬೇಕಾಗಿದೆ. ದೇಶಪ್ರೇಮ, ಧರ್ಮ ರಕ್ಷಣೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಮೈಗೂಡಿಸಿಕೊಂಡಿರುವ ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕಾರ್ಯ ಕಾಂಗ್ರೆಸ್ ಪಕ್ಷದಿಂದ ಸಾಧ್ಯವಿಲ್ಲವೆಂದರು. ವಿರಾಜಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಸುವಿನ್ ಗಣಪತಿ ಮಾತನಾಡಿ ಕೊಡಗಿನಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿ ತನ್ನ ವರ್ಚಸ್ಸನ್ನು ಕಳೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ…
ಬೆಂಗಳೂರು ಡಿ.25 NEWS DESK : ನಂದಿನಿ ವತಿಯಿಂದ ಪ್ರಥಮಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಸಚಿವರಾದ ವೆಂಕಟೇಶ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭಿಮಾನಯಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಡಿ.25 NEWS DESK : ವಿರಾಜಪೇಟೆ ತಾಲ್ಲೂಕಿನ ತಾಲ್ಲೂಕು ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯು ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 26 ರಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಸಾಮಥ್ರ್ಯ ಸೌಧದ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ.ಇಒ ಕೊಣಿಯಂಡ ಸಿ.ಅಪ್ಪಣ್ಣ ತಿಳಿಸಿದ್ದಾರೆ.
ಮಡಿಕೇರಿ ಡಿ.25 NEWS DESK : ಇತಿಹಾಸ ಪ್ರಸಿದ್ಧ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ನೂತನ ಪ್ರವೇಶ ದ್ವಾರವನ್ನುಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅನಾದಿಕಾಲದಿಂದಲೂ ಪ್ರಸಿದ್ಧವಾದ ಈ ದೇವಸ್ಥಾನಕ್ಕೆ ನೂತನ ಕಾಯಕಲ್ಪ ನೀಡಿರುವುದು ಅತ್ಯಂತ ಖುಷಿಯನ್ನು ನೀಡಿದೆ ಎಂದು ಬಣ್ಣಿಸಿದರು. ಶ್ರೀ ಪಾಡಿ ಇಗ್ಗುತ್ತಪ್ಪ ದೇವರ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲೆ ಇರಲಿ ಎಂದು ಹಾರೈಸಿದರು. ಈ ಸಂದರ್ಭ ವಿಧಾನ ಪರಿಷತ್ತು ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಪ್ರಮುಖರಾದ ತೀತಿರ ರೋಶನ್ ಅಪ್ಪಚ್ಚು ಹಾಗೂ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು, ಗ್ರಾಮಸ್ಥರು ಹಾಜರಿದ್ದರು.
ಸುಂಟಿಕೊಪ್ಪ ಡಿ.25 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಕಬ್ಸ್ ತಂಡ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಕಬ್ಸ್ ತಂಡವು ಅತ್ಯುತ್ತಮ ತಂಡವೆಂದು ಪ್ರಶಂಸನಾ ಪತ್ರವನ್ನು ಪಡೆದುಕೊಂಡರು. ಶಾಲೆಯ ಮುಖ್ಯೋಪಾದ್ಯಾಯನಿ ಜೋವಿಟಾ ವಾಸ್ ಕಬ್ಸ್ ತಂಡ ಹಾಗೂ ತರಬೇತುದಾರರಾದ ಯಿವಾಬೆನ್ಸಿಸ್ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಸುಂಟಿಕೊಪ್ಪ NEWS DESK ಡಿ.25 : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮಸಭೆಗೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾದ ಕಾರಣ ತೀವ್ರ ಅಸಮಾಧಾನಗೊಂಡ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಸಭೆಯಿಂದ ಹೊರ ನಡೆದರು. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ ಅವರ ಅಧ್ಯಕ್ಷತೆಯಲ್ಲಿ ಕಾನ್ಬೈಲು ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದು ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ತಯಾರಿ ಮಾಡಿಕೊಂಡಿದ್ದರು. ಪ್ರಮುಖ ಇಲಾಖೆಗಳಾದ ಕಂದಾಯ, ನೀರಾವರಿ, ಆಹಾರ, ಅರಣ್ಯ ಆದಿಕಾರಿಗಳು ಗೈರು ಹಾಜರಾಗಿದ್ದ ಕಾರಣ ಗ್ರಾಮಸ್ಥರು ಸಭೆ ಮುಂದೂಡಬೇಕೆAದು ಆಗ್ರಹಿಸಿದರು. ಅಧ್ಯಕ್ಷ ಮಂದೋಡಿ ಜಗನ್ನಾಥ ಮಾತನಾಡಿ ಇಂದಿನ ಸಭೆಯಲ್ಲಿ ಗ್ರಾಮಸ್ಥರು ನೀಡುವ ಅಹವಾಲನ್ನು ಆಯಾ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸಿ ಅದನ್ನು ಅನುಷ್ಠಾನಗೊಳಿಸುವ ಪ್ರಯತ್ನ ಮಾಡೋಣ ಎಂದರು. ಈ ಸಂದರ್ಭ ಮಾತನಾಡಿದ ಗ್ರಾಮಸ್ಥರಾದ ರಾಮಯ್ಯ, ಅಂಬೆಕಲ್ ಚಂದ್ರು, ಶಾಂತಪ್ಪ ಮತ್ತಿತರರು ಪಡಿತರ, ಕುಡಿಯುವ ನೀರು, ರಸ್ತೆ ಮತ್ತು…
ಮಡಿಕೇರಿ ಡಿ.25 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ಜಾತ್ರೋತ್ಸವವು ಆರಂಭಗೊಂಡಿದ್ದು, ಮೊದಲದಿನ ದೇವರಿಗೆ ಹೊರೆಕಾಣಿಕೆ ಸಮರ್ಪಿಸಲಾಯಿತು. ಮುಂಜಾನೆ ಗಣಪತಿ ಹೋಮ, ಹೊರೆಕಾಣಿಕೆ ಸಮರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಮಧ್ಯಾಹ್ನ ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಸಂಜೆ ಧ್ವಜಾರೋಹಣದ ಬಳಿಕ ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಡಿ.24 ರಂದು ನೈರ್ಮಾಲ್ಯ ಬಲಿ, ಮಧ್ಯಾಹ್ನ ಧ್ವಜಸ್ತಂಭ ಪೂಜೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀಭೂತಬಲಿ (ತೂಚಂಬಲಿ), ಧ್ವಜಸ್ತಂಭ ಪೂಜೆ ನೆರವೇರಿತು. ರಾತ್ರಿ ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಬೆಂಗಳೂರು ಡಿ.25 NEWS DESK : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಡಿಕೇರಿಯ ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಅವರ ‘ನಿಜದ ಸೂಜಿಮೊನೆ’ ಕೃತಿಯನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
ಸುಂಟಿಕೊಪ್ಪ ಡಿ.25 NEWS DESK : ಸುಂಟಿಕೊಪ್ಪ ಗೌಡ ಸಂಘದ 2024-25ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಕುಂಜಿಲನ ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಯಂಕನ ಕೌಶಿಕ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಳಿಯಾರ ಜವಾಹರ್(ಮಂಜು), ಸಹ ಕಾರ್ಯದರ್ಶಿಯಾಗಿ ಮಾಗಲು ವಸಂತ, ಖಜಾಂಚಿಯಾಗಿ ಪಟ್ಟೆಮನೆ ಉದಯಕುಮಾರ್, ಗೌರವಧ್ಯಕ್ಷರಾ ಯಂಕನ ಉಲ್ಲಾಸ್ ನೇಮಕಗೊಂಡಿದ್ದು, ನಿರ್ದೇಶಕರುಗಳಾಗಿ ಶಾಂತನ ಲೋಕೇಶ್, ಕಡ್ಯದ ಅರುಣ್ಕುಮಾರ್, ಮಳ್ಳನ ಸತೀಶ್, ಬೈಚನ ಮೋಹನ್ ಕುಮಾರ್, ಮೊಟ್ರಮಾಡ ಸೋಮಯ್ಯ, ಓಡಿಯಪ್ಪನ ಸುದೀಶ್, ಪಡ್ಡಬೈಲ್ ರುಕ್ಕಮ್ಮಯ್ಯ, ಯಂಕನ ಕೃಪಾ ಶೇಖರ್, ಕಡ್ಲೇರ ರತಿ ರಘುಕುಮಾರ್, ಹಾರ್ಬೈಲ್ ಭೂಮಿಕ ನಿತಿನ್, ಕಾಯರ್ಮಾರ್ ದೇವಿಪ್ರಸಾದ್, ಅಂಬೇಕಲ್ ಚಂದ್ರಶೇಖರ್, ಮಟ್ಟನ ಕರುಣಾಕರ್ (ಹಾದ್ರೆಹೆರೂರು) ಇವರುಗಳನ್ನು ನೇಮಕಮಾಡಲಾಯಿತು.






