ಮಡಿಕೇರಿ ಜ.8 NEWS DESK : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯ ಮೈಸೂರು ನಡೆಸುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮಡಿಕೇರಿಯ ಕಲಾ ಕಾವ್ಯ ನಾಟ್ಯ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ.100 ರಷ್ಟು ಫಲಿತಾಂಶ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ನೃತ್ಯಗುರು ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ಸಾಧನೆ ವ್ಯಕ್ತಪಡಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.8 NEWS DESK : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ ಜವಾಬ್ದಾರಿ ವಹಿಸಿರುವ ಮುದ್ದಂಡ ಕುಟುಂಬಸ್ಥರು ಹಾಗೂ ಪ್ರಮುಖರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿಯಾಗಿ ಜ.11ರಂದು ಮಡಿಕೇರಿಯಲ್ಲಿ ನಡೆಯಲಿರುವ ಮುದ್ದಂಡ ಕಪ್ ತಯಾರಿಗೆ ಲೋಗೋ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಮಂತ್ರಣ ನೀಡಿˌ ಹಾಕಿ ಉತ್ಸವ ಯಶಸ್ವಿಯಾಗಿ ಜರುಗಲು ಅಗತ್ಯ ಸಹಕಾರ ಹಾಗೂ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ವಿರಾಜಪೇಟೆ ಜ.8 NEWS DESK : ಟಿ.ಶೆಟ್ಟಿಗೇರಿಯ ರೂಟ್ಸ್ ವಿದ್ಯಾಸಂಸ್ಥೆಯಲ್ಲಿ ಕೊಡವ ಕೂಟಾಳಿಯಡ ಕೂಟದ ಸಂಘಟನೆಯಿಂದ ಕೊಡವ ಆಟ್ ಪಾಟ್ ಪಡಿಪು ಶಿಬಿರದ ಸಮಾರೋಪ ಸಮಾರಂಭವು ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೂಟ್ಸ್ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ಮಲ್ಲಂಗಡ ನಿರನ್ ಉತ್ತಪ್ಪ ಮಾತನಾಡಿ, ಕೊಡವ ಕೂಟಾಳಿಯಡ ಕೂಟದ ಸಂಘಟನೆಯು ಸುಮಾರು ಐದು ವರ್ಷಗಳಿಂದ ಕೊಡವಾಮೆಯನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಕಳೆದ ವರ್ಷ ಇದೇ ಸಂಘಟನೆಯು ನಮ್ಮ ಶಾಲೆಯ ಮಕ್ಕಳಿಗೆ ಕೊಡವ ಪದ್ದತಿಯಲ್ಲಿ ಸಮ್ಮಂಧ ಅಡಕುವ ಶಿಬಿರವನ್ನು ನಡೆಸಿ ಮಕ್ಕಳಿಗೆ ತರಬೇತಿ ನೀಡಿ ಯಶಸ್ವಿಯಾಗಿದ್ದಾರೆ. ಇವರ ತರಬೇತಿಯಲ್ಲಿ ಪಳಗಿದ ಮಕ್ಕಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಯಶಸ್ವಿಯಾಗಿ ಸಮ್ಮಂಧ ಅಡಕಿರುವುದು ಹಾಗೂ ಈ ವರ್ಷದಲ್ಲಿ ಇದೇ ಸಂಘಟನೆಯವರು ನಡೆಸಿದ ಆಟ್ ಪಾಟ್ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳು ಕೋಲಾಟ್, ಬೊಳಕಾಟನ್ನು ಕಲಿತು ಮಂದ್, ಕೊಡವ ಸಮಾಜಗಳಲ್ಲಿ ಪ್ರದರ್ಶನ ನೀಡಿ…
ಮಡಿಕೇರಿ ಜ.7 NEWS DESK : ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಡಿಕೇರಿ ಹೋಬಳಿಯ, ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಜ.7 ರ ಬೆಳಗ್ಗೆ 6 ಗಂಟೆಯಿಂದ ಜ.14 ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಜಾಥ ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಮಡಿಕೇರಿ ಉಪವಿಭಾಗದ ಹಿರಿಯ ಉಪ ವಿಭಾಗಾಧಿಕಾರಿ ಹಾಗೂ ಉಪ ವಿಭಾಗೀಯ ದಂಡಾಧಿಕಾರಿ ವಿನಾಯಕ್ ನರ್ವಡೆ ಆದೇಶಿಸಿದ್ದಾರೆ.
ಮಡಿಕೇರಿ ಜ.7 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯವು ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿದ ಗ್ರೂಪ್ ‘ಎ’ ದೇವಾಲಯವಾಗಿದ್ದು, ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಈ ದೇವಾಲಯಕ್ಕೆ ಒಳಪಡುವ ಶ್ರೀ ಆಂಜನೇಯ ಮತ್ತು ಕೋಟೆ ಗಣಪತಿ ದೇವಾಲಯದ ಕಾರ್ಯಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 3 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ಸಂಬಂಧಿಸಿದ ವಿವರ: ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷದಿಂದ 33 ವರ್ಷ ದೊಳಗಿರಬೇಕು. (ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು).ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-3(ಸ್ವಚ್ಛತಗಾರ, ಕಾವಲುಗಾರರು) ವೇತನ ರೂ.9,600 ಮತ್ತು ಇತರೆ. ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ. ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ…
ಸಿದ್ದಾಪುರ ಜ.7 NEWS DESK : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ನೂತನ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಾಪುರ ವ್ಯಾಪ್ತಿಯ ಸಹಕಾರ ಸಂಘದ ಸದಸ್ಯರುಗಳಿಗೆ ಆರ್ಥಿಕ ಬಲ ನೀಡುವ ಮೂಲಕ ಜಿಲ್ಲೆಯ ಪ್ರಗತಿ ಪಥದತ್ತ ಸಾಗುವ ಸಹಕಾರ ಸಂಘಗಳಲ್ಲಿ ಒಂದಾಗಿದೆ. ಹಲವಾರು ವರ್ಷಗಳಿಂದಲೂ ಉತ್ತಮ ಸೇವೆ ಸಲ್ಲಿಸುವುದರ ಮೂಲಕ ಮಾದರಿ ಸಹಕಾರ ಸಂಘವಾಗಿ ಮೆಚ್ಚುಗೆಗಳಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಸಹಕಾರ ಸಂಸ್ಥೆ ಗಳು ನಾಗರಿಕರ ಸೇವೆಗೆ ಆರ್ಥಿಕ ಸಹಕಾರವನ್ನು ನೀಡುವ ಮೂಲಕ ಆಯಾ ಪ್ರದೇಶದಲ್ಲಿ ಪ್ರಾಮಾಣಿಕ ವಾಗಿ ಸೇವೆಯನ್ನು ಒದಗಿಸುತ್ತಿರು ವುದು ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘಗಳ ಕಟ್ಟಡಗಳು ಗ್ರಾಹಕರ ಸೇವಾ ಕೇಂದ್ರವಾಗಿ ಮುಂದುವರಿಯು ವಂತಾಗಲಿ ಸಹಕಾರ ಸಂಘದ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಗುಹ್ಯ ಅಗಸ್ತ್ಯೇಶ್ವರ…
ಮಡಿಕೇರಿ ಜ.7 NEWS DESK : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ಕೈಗೊಳ್ಳಲಾಗಿದ್ದು, ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿಕೊಂಡು, ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ನಮೂನೆ-6 ರಲ್ಲಿ 1549 ಸ್ವೀಕೃತವಾಗಿದ್ದು, 1460 ಅರ್ಜಿಗಳು ಅಂಗೀಕಾರವಾಗಿದೆ. 89 ಅರ್ಜಿಗಳು ತಿರಸ್ಕøತವಾಗಿವೆ. ನಮೂನೆ-7ರಡಿ 1631 ಅರ್ಜಿಗಳು ಸ್ವೀಕೃತವಾಗಿದ್ದು, 1549 ಅರ್ಜಿಗಳು ಅಂಗೀಕೃತವಾಗಿದೆ. 82 ಅರ್ಜಿಗಳು ತಿರಸ್ಕøತಗೊಂಡಿವೆ. ಹಾಗೆಯೇ ನಮೂನೆ-8 ರಲ್ಲಿ 3123 ಅರ್ಜಿಗಳು ಸ್ವೀಕೃತವಾಗಿದ್ದು, 2,871 ಅರ್ಜಿಗಳು ಅಂಗೀಕೃತವಾಗಿದೆ. 252…
ಮೂರ್ನಾಡು ಜ.7 NEWS DESK : ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ನವೀಕೃತಗೊಂಡ ಕಟ್ಟಡದ ಮೇಲ್ಛಾವಣಿಯ ಉದ್ಘಾಟನಾ ಸಮಾರಂಭ ಮತ್ತು ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮೈಸೂರಿನ ನಾರಾಯಣ ಆಸ್ಪತ್ರೆಯ ರೀಜನಲ್ ಹೆಚ್.ಆರ್.ಮಾಳೇಟಿರ ನಿರ್ಮಲಾ ಮಾದಪ್ಪ ಕಾಲೇಜಿನ ನವೀಕೃತಗೊಂಡ ಕಟ್ಟಡದ ಮೇಲ್ಛಾವಣಿಯನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಾಧನೆ ಗೈಲು ಸಾಧ್ಯ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈ ವಿದ್ಯಾಸಂಸ್ಥೆಯ ಸದುಪಯೋಗಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಬದುಕುರೂಪಿಸಿಕೊಳ್ಳಬೇಕು ಎಂದರು. ನಾನು ಈ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿದ್ದು, ನಾರಾಯಣ ಆಸ್ಪತ್ರೆಯ ಮೂಲಕ ಕಾಲೇಜಿನ ಕಟ್ಟಡದ ಮೇಲ್ಛಾವಣಿಯನ್ನು ನವೀಕರಣಗೊಳಿಸಲು ಒಂದು ಸದಾವಕಾಶ ಸಿಕ್ಕಿದೆ ಎಂದರು. ವಿದ್ಯೆಕಲಿಸಿದ ಸಂಸ್ಥೆಯ ಬೆಳವಣಿಗೆಗೆ ಕೈಜೋಡಿಸಲು ತುಂಬಾಸಂತೋಷವಾಗುತ್ತದೆ. ಜಿಲ್ಲೆಯಲ್ಲಿ ಈ ವಿದ್ಯಾಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಎಂದು ಹೇಳಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಸಿ.ಜಗತ್ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಎನ್.ಪಿ.ಮಾದಪ್ಪ, ಕಾರ್ಯದರ್ಶಿ ಪಿ.ಎಂ.ಅಪ್ಪಣ್ಣ, ಖಜಾಂಚಿ ವಿ.ಎ.ಯತೀಶ್, ನಿರ್ದೇಶಕರಾದ ಇ.ಯು. ಸೋಮಣ್ಣ, ಪುದಿಯೊಕ್ಕಡ. ಎ.ಹರೀಶ್, ಪಿ.ಎ.ಹರೀಶ್, ಎಂ.ಕೆ.ಚಂಗಪ್ಪ, ಕೆ.ಜಿ.ರಾಮಮೂರ್ತಿ,…
ಬೆಂಗಳೂರು NEWS DESK ಜ.7 : ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗವಾಗಲಿದೆ. ಗರುಡಾಕ್ಷಿ ಆನ್ಲೈನ್ ಎಫ್ ಐಆರ್ ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಇಂದು ಚಾಲನೆ ನೀಡಿದರು. ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ ಸಹಯೋಗದೊಂದಿಗೆ ಗರುಡಾಕ್ಷಿ ಆನ್ಲೈನ್ ಎಫ್ ಐಆರ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು. ಆಧುನಿಕ ವ್ಯವಸ್ಥೆಗೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತç ಪ್ರಯೋಗಿಸಲಾಗುವುದು. ಪೊಲೀಸ್ ಇಲಾಖೆಯಲ್ಲಿ ಇರುವ ರೀತಿಯಲ್ಲೇ ಅರಣ್ಯ ಇಲಾಖೆಯಲ್ಲೂ ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ…
ವಿರಾಜಪೇಟೆ ಜ.7 NEWS DESK : ಕರ್ನಾಟಕ ಸರಕಾರದ ಗಂಗೂಭಾಯಿ ಹಾನಗಲ್ ಯೂನಿವರ್ಸಿಟಿ ವತಿಯಿಂದ ಅಕ್ಟೋಬರ್ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಪರೀಕ್ಷೆಯಲ್ಲಿ ನಾಟ್ಯಂಜಲಿ ನೃತ್ಯ ಸಂಸ್ಥೆಗೆ ಶೇ.100 ರಷ್ಟು ಫಲಿತಾಂಶ ದೊರೆತಿದೆ. ಪರೀಕ್ಷೆಗೆ ಹಾಜರಾಗಿದ್ದ ಸಂಸ್ಥೆಯ ವಿದ್ಯಾರ್ಥಿಗಳಾದ ಮನ್ವಿತಾ, ಜಾನ್ವಿ ಶೆಟ್ಟಿ, ಅಶ್ಮಯ ಸಚಿನ್ ಹಾಗೂ ಪಿಯಾ ಪೊನ್ನಮ್ಮ ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಲವಾರು ವರ್ಷಗಳಿಂದ ಶೇ.100 ರಷ್ಟು ಫಲಿತಾಂಶವನ್ನು ಈ ಸಂಸ್ಥೆ ಪಡೆದುಕೊಂಡು ಬಂದಿರುವುದು ಸಂಸ್ಥೆಯ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಗುರು ಹೇಮಾವತಿ ಕಾಂತ್ರಾಜ್ ಹಾಗೂ ಗುರು ಕಾವ್ಯಶ್ರೀ ಕಾಂತ್ರಾಜ್ ತಿಳಿಸಿದ್ದಾರೆ.






