ಮಡಿಕೇರಿ ಫೆ.1 NEWS DESK : ವಿರಾಜಪೇಟೆ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ವಿಶೇಷ ಸಭೆಯು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳ ಅಭಿವೃದ್ಧಿಯ ಕುರಿತು ಮಾಹಿತಿ ಪಡೆದ ಶಾಸಕರು, ಮುಂದೆ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳ ಬ್ಲೂಪ್ರಿಂಟ್ ನೀಡಬೇಕೆಂದು ಸೂಚನೆ ನೀಡಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರ ಕಾಂಗ್ರೆಸ್ ಅಧ್ಯಕ್ಷರು, ತಮ್ಮ ಕುಂದು ಕೊರತೆಗಳನ್ನು ಶಾಸಕರ ಗಮನಕ್ಕೆ ತಂದರು. ಅಲ್ಲದೇ ಅಭಿವೃದ್ಧಿ ಕಾಮಗಾರಿಗೆ ಬೇಕಾದ ಅನುದಾನಗಳ ಕೊರತೆ ನೀಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಬಳಿಕ ಮಾತನಾಡಿದ ಶಾಸಕರು ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳ ಜನಸಾಮಾನ್ಯರಿಗೆ ನಿತ್ಯ ಜೀವನ ನಡೆಸುವಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರಲ್ಲದೆ,…
ಲೇಖಕ: admin
ಮಡಿಕೇರಿ ಫೆ.1 NEWS DESK : ಸುಂದರ ಕೊಡಗು ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರು ಕೈಜೋಡಿಸಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ ವತಿಯಿಂದ ವಿರಾಜಪೇಟೆಯಲ್ಲಿ ನಡೆದ ಪರಿಸರ ಜಾಗೃತಿ ಜಾಥಾವನ್ನು ಉದ್ಘಾಟಿಸಿ ಮಾತನಾಡಿದರು. ರಕ್ಷಣಾ ಹೋರಾಟ ಸಮಿತಿಯ ಕಾರ್ಯ ಶ್ಲಾಘನೀಯ. ಪರಿಸರಸ್ವಚ್ಛ ಹಾಗೂ ಪರಿಶುದ್ಧ ಕೊಡಗು ಜಿಲ್ಲೆಯ ಪರಿಕಲ್ಪನೆ ಈಡೇರಲು ಎಲ್ಲರ ಸಹಕಾರ ಅತಿ ಮುಖ್ಯ ಎಂದರು. ಪರಿಸರ ಎಂದರೆ ಭೂ ದೇವಿಯ ಮಡಲಿನ ನೀರು, ಗಾಳಿ ಹಾಗೂ ಇನ್ನಿತರ ಎಲ್ಲಾ ಪ್ರಾಕೃತಿಕ ವಿಷಯಗಳಲ್ಲೂ ಸ್ವಚ್ಛತೆ ಕಾಪಾಡುವುದರ ಮೂಲಕ ಜನರ ಆರೋಗ್ಯಕ್ಕೆ ಮತ್ತು ಸುಂದರ ಕೊಡಗು ನಿರ್ಮಾಣ ಮಾಡುವಲ್ಲಿ ಹಾಗೂ ಆಧುನಿಕ ಯುಗಕ್ಕೆ ಜನ ಮಾರುಹೋದರೂ ಸ್ವಚ್ಛತೆ ಬಗ್ಗೆ ಸದಾ ಗಮನದಲ್ಲಿ ಇಟ್ಟುಕೊಂಡು ಪರಿಸರವನ್ನು ಸಂರಕ್ಷಿಸುವಲ್ಲಿ ಸಾರ್ವಜನಿಕರು ಕೈಜೋಡಿಸಬೇಕೆಂದು ಕರೆ ನೀಡಿದರು.
ಸುಂಟಿಕೊಪ್ಪ ಫೆ.1 NEWS DESK : ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯವಾಗಿ ಪರಸ್ಪರ ಎದುರಾಳಿಗಳೇ ಹೊರತು ಅಭಿವೃದ್ಧಿ ವಿಷಯ ಬಂದಾಗ ಎಲ್ಲರೂ ಒಂದಾಗಿ ಸಾಗಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ಗೌಡ ಕರೆ ನೀಡಿದರು. ಲೋಟಸ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸೇರಿದಂತೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ರೂ.40 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ರಾಜ್ಯದ ಎಲ್ಲಾ ಶಾಸಕರುಗಳು ತಲಾ ರೂ.10 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಮೊದಲೇ ಮಂಜೂರಾಗಿರುವ ಆರೋಗ್ಯ ಇಲಾಖೆಯ ನಿಗಧಿತ ಅನುದಾನ ಬರ ಪರಿಹಾರ, ಮಳೆ ಪರಿಹಾರಕ್ಕೆ ತಾಲ್ಲೂಕು ಪಂಚಾಯಿತಿ ಅನುದಾನದ ಅಡಿಯಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶುಂಕುಸ್ಥಾಪನೆ ನೇರವೇರಿಸಲಾಗಿದೆ. ಗ್ರಾ.ಪಂ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಗುಣಮಟ್ಟದ ಕಾಮಗಾರಿಯನ್ನು ಪರಿಶೀಲಿಸಬೇಕೆಂದು ಸಲಹೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7 ವಾರ್ಡ್ಗಳಿದ್ದು, ಸಾಕಷ್ಟು ಅಭಿವೃದ್ಧಿ…
ಮಡಿಕೇರಿ ಫೆ.1 NEWS DESK : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಾಗಿ ಸುಮಾರು 58 ಸಾವಿರ ಕೋಟಿ ರೂ ವೆಚ್ಚ ಮಾಡುತ್ತಿದೆ. ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ಇಡೀ ದೇಶದಲ್ಲಿ ಚರ್ಚಿಸಲಾಗುತ್ತಿದೆ. ಜೊತೆಗೆ ವಿವಿಧ ರಾಜ್ಯಗಳಲ್ಲಿ ಗ್ಯಾರಂಟಿ ಮಾದರಿಯನ್ನು ಅನುಸರಿಸಲಾಗುತ್ತಿದೆ ಎಂದು ಶಾಸಕರು ವಿವರಿಸಿದರು. ಗ್ಯಾರಂಟಿ ಯೋಜನೆಗಳು ಶೇ.80 ರಷ್ಟು ಬಡಜನರಿಗೆ ತಲುಪುತ್ತಿವೆ. ಗ್ಯಾರಂಟಿ ಯೋಜನೆ ವಿರೋಧಿಸುವವರು ಸಂವಿಧಾನ ವಿರೋಧಿಗಳು ಎಂದು…
ವಿರಾಜಪೇಟೆ ಫೆ.1 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಬಿ.ಸಿ ಟ್ರಸ್ಟ್, ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಗ್ರಾಮಸ್ಥರಿಗೆ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು. ಮೂರ್ನಾಡು ವಲಯದ ಮರಗೋಡು ಕಾರ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಡಗದಾಳು ಗ್ರಾಮದ ಪ್ರಗತಿಪರ ಕೃಷಿಕರಾದ ಮಂಜುಳ ಅವರು ಆಗಮಿಸಿ ಸದಸ್ಯರಿಗೆ ಪರಿಸರ ಸಂರಕ್ಷಣೆ ಮಣ್ಣಿನ ಸವಕಳಿ ಮತ್ತು ಏಲಕ್ಕಿ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರು ಆಧುನಿಕ ತಂತ್ರಜ್ಞಾನದ ಮೂಲಕ ಕೃಷಿಯಲ್ಲಿ ಆಗುವ ಪರಿಣಾಮ ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭದಾಯಕ ಕೃಷಿ ಪದ್ಧತಿಯ ಬಗ್ಗೆ ಮಾಹಿತಿ ನೀಡಿದರು. ನಂತರ ಗ್ರಾಮಸ್ಥರಿಂದ ಗಿಡ ನಾಟಿ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಪ್ರತಾಪ್, ಸೇವಾ ಪ್ರತಿನಿಧಿಯಾದ ಲತಾ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.1 NEWS DESK : ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಆತಂಕ ಮೂಡಿಸಿದ ಕಾಜೂರು ಕರ್ಣ (40) ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿ ಸೆರೆಹಿಡಿದರು. ಎಲಿಪ್ಯಾಂಟ್ ಟಾಸ್ಕ್ ಫೋರ್ಸ್(ಇಟಿಎಫ್) ಮತ್ತು ರ್ಯಾಪಿಡ್ ರೆಸ್ಪಾನ್ಸ್ ಟೀಮ್ (ಆರ್ಆರ್ಟಿ) ಸಿಬ್ಬಂದಿಗಳು ಯಡವನಾಡು, ಜೇನುಕಲ್ಲುಬೆಟ್ಟ, ಮಾಲಂಬಿ, ನಿಡ್ತ, ಹರದೂರು ಮೀಸಲು ಅರಣ್ಯದಲ್ಲಿ ನಿರಂತರ ಹುಡುಕಾಟ ನಡೆಸುತ್ತಿದ್ದರು. ಶುಕ್ರವಾರ ಕಾಜೂರು ಅರಣ್ಯದಲ್ಲಿ ಕಾಜೂರು ಕರ್ಣನನ್ನು ಗುರುತಿಸಿದ ಸಿಬ್ಬಂದಿ, ಶನಿವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಅರವಳಿಕೆ ತಜ್ಞರಾದ ರಮೇಶ್, ಚಿಟ್ಟಿಯಪ್ಪ, ಶಾರ್ಪ್ ಶೂಟರ್ ರಂಜನ್ ಹಾಗೂ ಅರಣ್ಯಾಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ 4 ಗಂಟೆಗೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. 7.45ಕ್ಕೆ ಕಾಜೂರು ಜಂಕ್ಷನ್ ಬಳಿಯೆ ಬಂದ ಕಾಡಾಣೆ ಅರಣ್ಯ ಇಲಾಖೆಯ ಜೀಪಿನ ಮೇಲೆ ದಾಳಿಗೆ ಮುಂದಾಗಿದ್ದು, ತಕ್ಷಣವೇ ಶಾರ್ಪ್ ಶೂಟರ್ ರಂಜನ್ ಡಾಟ್ ಮಾಡಿದ್ದಾರೆ. ದುಬಾರೆಯ ಸಾಕಾನೆ ಕ್ಯಾಂಪ್ನ ಹರ್ಷ, ಪ್ರಶಾಂತ,…
ಸಿದ್ದಾಪುರ ಫೆ.1 NEWS DESK : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಅತ್ಯವಶ್ಯಕವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನ ಶಾಲೆಗೆ ಕಳಿಸುವ ಮೂಲಕ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಳ್ಳಲು ಸಹಕಾರ ನೀಡಬೇಕಾಗಿದೆ ಎಂದು ಚೆನ್ನಯ್ಯಕೋಟೆ ಗ್ರಾ.ಪಂ ಅಧ್ಯಕ್ಷ ಮೇಕೇರಿರ ಅರುಣ್ ಕುಮಾರ್ ಅಭಿಪ್ರಾಯಪಟ್ಟರು ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಯಾವುದೇ ಕೊರತೆ ಇಲ್ಲದೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಇದರ ಸದುಪಯೋಗಪಡಿಸಿಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ ಅವರು, ಗ್ರಾಮ ಪಂಚಾಯಿತಿ ಮೂಲಕ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದರು. ಮಾಜಿ ತಾಲ್ಲೂಕು ಅಧ್ಯಕ್ಷೆ ರಾಣಿ ನಾರಾಯಣ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಅದೆಷ್ಟು ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡು ಮುನ್ನಡೆದಿದ್ದಾರೆ. ಈಗಿನ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆಯಾಗಿದೆ. ಸರ್ಕಾರಗಳ ಹಲವಾರು…
ಕುಶಾಲನಗರ ಫೆ.1 NEWS DESK : ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಎನ್.ಪುಷ್ಪ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಸಂಸ್ಥೆಗೆ ಹಿರಿಯ ಉಪನ್ಯಾಸಕಿಯಾಗಿ ಮುಂಬಡ್ತಿ ಹೊಂದಿದ್ದಾರೆ. ಬಿ.ಎನ್.ಪುಷ್ಪ ಶುಕ್ರವಾರ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಈ ಸಂದರ್ಭ ಡಯಟ್ ಸಂಸ್ಥೆಯ ಪ್ರಾಂಶುಪಾಲ ಹಾಗೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ(ಅಭಿವೃದ್ಧಿ)ರಾದ ಚಂದ್ರಕಾಂತ್ ಶುಭಾಶಯ ಕೋರಿ ಸ್ವಾಗತಿಸಿದರು. 25 ವರ್ಷಗಳ ಕಾಲ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ಪುಷ್ಪ ಅವರು ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಉತ್ತಮ ಸಾಧನೆ ಹೊಂದಲಿ ಎಂದು ಡಯಟ್ ನ ಪ್ರಾಂಶುಪಾಲ ಚಂದ್ರಕಾಂತ್ ಶುಭಾಶಯ ಕೋರಿದರು. ಡಯಟ್ ನ ಹಿರಿಯ ಉಪನ್ಯಾಸಕರಾದ ಬಿ.ಎಂ.ಗೀತಾ, ಸ್ವಾಮಿ, ಹೇಮರಾಜ್, ಉಪನ್ಯಾಸಕರಾದ ವಿಜಯ್, ನಳಿನಾಕ್ಷಿ, ಗೀತಾ, ಬಿ.ಆರ್.ಸಿ., ಎಂ.ವಿ.ಮಂಜೇಶ್, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ.ಹೇಮಂತ್, ನಿರ್ದೇಶಕ ಪಾಲಾಕ್ಷ,ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗದ ಸಂಚಾಲಕ…
ಪಾಲಿಬೆಟ್ಟ ಫೆ.1 NEWS DESK : ಸರ್ವಧರ್ಮ ಸಂಕೇತದ ಭಕ್ತರ ನಂಬಿಕೆಗೆ ಹೆಸರುವಾಸಿಯಾಗಿರುವ ಇತಿಹಾಸ ಪ್ರಸಿದ್ಧ ಆರ್ಕಾಡ್ ಪಟ್ಟಾಣ್ ಬಾಬಾ ಷಾ ವಲಿ ಉರೂಸ್ ನೇರ್ಚೆಗೆ ಗಣ್ಯರು ಚಾಲನೆ ನೀಡಿದರು. ಮಸೀದಿಯಲ್ಲಿ ಜುಮಾ ನಮಾಜ್ ಬಳಿಕ ಆರ್ಕಾಡ್ ಪಟ್ಟಾಣ್ ಬಾಬಾ ದರ್ಗಾಗೆ ತೆರಳಿ ವಿಶೇಷ ಪ್ರಾರ್ಥನೆಯೊಂದಿಗೆ ಮುಖಾಂ ಝಿಯಾರತ್ ಬಳಿಕ ಜುಮಾ ಮಸೀದಿ ಕಮಿಟಿ ಅಧ್ಯಕ್ಷ ಪಿ.ಕೆ ಇಸ್ಮಾಯಿಲ್ ಹಾಜಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇತಿಹಾಸ ಪ್ರಸಿದ್ಧ ಉರೂಸ್ ಗೆ ಸರ್ವಧರ್ಮಿಯರು ನಂಬಿಕೆಯೊಂದಿಗೆ ಆಗಮಿಸುತ್ತಿದ್ದು, ತಮ್ಮ ಕಷ್ಟಕಾರ್ಪಣ್ಯಗಳ ಇಷ್ಟಾರ್ಥ ಅರಕೆಗಳನ್ನ ತೀರಿಸುವುದರೊಂದಿಗೆ ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಫೆ.3 ರವರೆಗೆ ಉರೂಸ್ ಕಾರ್ಯಕ್ರಮ ನಡೆಯಲಿದ್ದು, ಕೊನೆಯ ದಿನದಂದು ಸರ್ವಧರ್ಮ ಸಮ್ಮೇಳನಕ್ಕೆ ವಿವಿಧ ಧಾರ್ಮಿಕ ಪಂಡಿತರುಗಳು, ಜನಪ್ರತಿನಿಧಿಗಳು, ಸಮಾಜ ಸೇವಕರು, ಗಣ್ಯರು ಭಾಗವಹಿಸಲಿದ್ದಾರೆ. ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣ ಕಾರ್ಯ ನಡೆಯಲಿದೆ ಎಂದರು. ಜುಮ ಮಸೀದಿ ಖತೀಬ್ ಝುಬೈರ್ ಸಖಾಫಿ…
ಮಡಿಕೇರಿ ಫೆ.1 NEWS DESK : ಮೇಕೇರಿ ಎಂ.ಕೆ.ಕ್ರಿಕೆಟರ್ಸ್ ವತಿಯಿಂದ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮೂರುದಿನಗಳ ಕಾಲ ನಡೆದ ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5ರ ಚಾಂಪಿಯನ್ ಆಗಿ ಚರಣ್ ಮಾಲೀಕರತ್ವದ ಟೀಂ ರೋಲೆಕ್ಸ್ ಹೊರಹೊಮ್ಮಿದೆ. ಪ್ರದೀಪ್ ಮಾಲೀಕತ್ವದ ಸುತಿರ್ತ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, ವಿನಯ್ ಮಾಲೀಕತ್ವದ ಸಂತೃಪ್ತಿ ಕಾಫಿ ಲಿಂಕ್ಸ್ ತಂಡ ತೃತೀಯ ಹಾಗೂ ಅನಿಸ್ ಮಾಲೀಕತ್ವದ ಅಪ್ಪು ಕ್ರಿಕೆಟರ್ಸ್ ತಂಡ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದೆ. ಪ್ರಥಮ ವಿಜೇತ ತಂಡಕ್ಕೆ ರೂ.1 ಲಕ್ಷ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.50 ಸಾವಿರ ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ರೂ.10 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಲಾಯಿತು. ಅಲ್ಲದೇ ಹಲವು ವೈಯಕ್ತಿಕ ಬಹುಮಾನವನ್ನು ನೀಡಲಾಯಿತು. ಸಮಾರೋಪ ಸಮಾರಂಭ :: ಮೂರನೇ ದಿನ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ…






