ಲೇಖಕ: admin

https://www.youtube.com/watch?v=VcN70wEYUNY&authuser=0 ಮಡಿಕೇರಿ ಫೆ.18 NEWS DESK : ‘ಕೊಡಗು ವಿಶ್ವ ವಿದ್ಯಾಲಯ’ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ವಿವಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‍ನ ನೇತೃತ್ವದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ‘ವಿದ್ಯಾರ್ಥಿಗಳ ಸ್ಥಿತಿ ಅಯೋಮಯ, ಮೈಮರೆತರೆ ವಿವಿಗಳೆ ಮಾಯ’, ‘ನಿಲ್ಲಿಸಿ ಶಿಕ್ಷಣದ ವ್ಯಾಪಾರೀಕರಣ’ ಮೊದಲಾದ ಭಿತ್ತಿ ಫಲಕಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು, ‘ವಿ ವಾಂಟ್ ಜಸ್ಟಿಸ್’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು. ನಂತರ ಮೆರವಣಿಗೆಯಲ್ಲಿ ಜಿಲ್ಲಾಡಳಿತದ ಭವನಕ್ಕೆ ತೆರಳಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಎಬಿವಿಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ಕೊಡಗು ವಿಶ್ವ ವಿದ್ಯಾಲಯ ನಮ್ಮ…

Read More

ಮಡಿಕೇರಿ ಫೆ.18 NEWS DESK : ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ಮಡಿಕೇರಿ ಕ್ಷೇತ್ರದ ಶಾಸಕರನ್ನು ಹೊಗಳುವ ಭರದಲ್ಲಿ ಈ ಹಿಂದಿನ ಶಾಸಕರು ನಗರದ ಅಭಿವೃದ್ಧಿಗೆ ದೊಡ್ಡ ಮೊತ್ತದ ಅನುದಾನ ತರಲಿಲ್ಲವೆಂದು ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಬಿಜೆಪಿ ಎಸ್‍ಸಿ ಮೋಚಾದ ನಗರಾಧ್ಯಕ್ಷ ಹೆಚ್.ಜಿ.ಮುಕುಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಿನ ಶಾಸಕರು 3 ಕೋಟಿ ರೂ. ನೀಡಿದರು ಎನ್ನುವ ವಿಚಾರವನ್ನೇ ದೊಡ್ಡದು ಮಾಡಿ ಪ್ರಚಾರಕ್ಕಾಗಿ ಹೇಳಿಕೆ ನೀಡಿರುವ ಪ್ರಕಾಶ್ ಆಚಾರ್ಯ ಅವರು, ಮೊದಲು ದಸರಾ ಅನುದಾನವನ್ನು ದಸರಾ ಸಮಿತಿಗಳಿಗೆ ಬಿಡುಗಡೆ ಮಾಡಿಸಿಕೊಡಲಿ ಎಂದು ಸವಾಲು ಹಾಕಿದ್ದಾರೆ. ಶಾಸಕರ ಪರ ಪ್ರಚಾರ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ, ಆದರೆ ಮಾಜಿ ಶಾಸಕರು ಹೆಚ್ಚಿನ ಅನುದಾನ ತರಲಿಲ್ಲ ಎಂದು ಸುಳ್ಳು ಆರೋಪ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. ಮಡಿಕೇರಿ ನಗರದ ಅಭಿವೃದ್ಧಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರು ತಮ್ಮ ಅಧಿಕಾರವಧಿಯಲ್ಲಿ ದಾಖಲೆ ಮೊತ್ತದ ಅನುದಾನವನ್ನು…

Read More

ಕುಶಾಲನಗರ ಫೆ.18 NEWS DESK :  ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆಗಳುಳ್ಳ ಮಕ್ಕಳ ಕಲಿಕಾ ಹಬ್ಬವು ಮಕ್ಕಳ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಹೇಳಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಸೋಮವಾರಪೇಟೆ ‌ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಕ್ಲಸ್ಟರ್ ಕೇಂದ್ರದ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ( ಫೆ.18 ರಂದು ) ಎಫ್.ಎಲ್.ಎನ್.: “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ(Foundation literacy and Numeracy) ಕುರಿತು ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಸಂಭ್ರಮದ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು. ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಹಾಗೂ ಅವರಲ್ಲಿ ಸಂತಸದ ಕಲಿಕೆಯೊಂದಿಗೆ ಅವರ ಪ್ರತಿಭಾನ್ವೇಷಣೆಗೆ ಸಹಕಾರಿಯಾಗಿದೆ…

Read More

ಸುಂಟಿಕೊಪ್ಪ,ಫೆ.18 NEWS DESK : ಮಾದಾಪುರ ಗ್ರೇಡ್ 1 ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗೆ ಪ್ರಮುಖ ಇಲಾಖೆಯ ಅಧಿಕಾರಿಗಳು ಗೈರಾಗಿದ್ದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಸಭೆಯನ್ನು ಮುಂದೂಡಲಾಯಿತು.  ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ  ಜಾಲಿಸೋಮಣ್ಣ ಅಧ್ಯಕ್ಷತೆಯಲ್ಲಿ ಕೃಷಿಪತ್ತಿನ ಸಹಕಾರ ಸಂಘ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ ಸಭೆಗೆ ಪ್ರಮುಖ ಇಲಾಖೆಗಳಾದ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಆಹಾರ ಇಲಾಖಾಧಿಕಾರಿಗಳು ಗ್ರಾಮಸ್ಥರಾದ ಕೊಪ್ಪತ್ತಂಡ ಗಣೇಶ, ಮಾಜಿ ಸದಸ್ಯ ಮಜೀದ್, ಮಠದ ಗಣೇಶ್, ಮಾಜಿ ಸದಸ್ಯ ಹೆಚ್.ಕೆ.ಸೋಮಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಭೆಯನ್ನು ಮುಂದೂಡುವಂತೆ ಒತ್ತಾಯಿಸಿದರು. ಗ್ರಾಮಸಭೆಗೆ ಹಾಜರಾಗುವಂತೆ 32 ಇಲಾಖೆಗಳಿಗೆ ನೋಟಿಸ್ ಕಳುಹಿಸಲಾಗಿದೆ. ಆದರೆ ಪ್ರಮುಖ ಇಲಾಖೆ ಬಾರದಿರುವುದ್ದರಿಂದ 15 ದಿನದಲ್ಲಿ ಗ್ರಾಮಸಭೆಯನ್ನು ನಡೆಸದಿದ್ದಲ್ಲಿ ಗ್ರಾಮ ಪಂಚಾಯಿತಿ ಮುತ್ತಿಗೆ ಹಾಕಿ ರಸ್ತೆ ತಡೆ ನಡೆಸುವುದಾಗಿ ಸಭೆ ಸೂಚಿಸಿದಾಗ ಸಭೆಗೆ ಆಗಮಿಸಿದ್ದ ಸರ್ವ ಗ್ರಾಮಸ್ಥರು ಸಹಮತ ವ್ಯಕ್ತಪಡಿಸಿದರು. ಇದೇ ಸಂದರ್ಭ ಗ್ರಾಮ ಪಂಚಾಯಿತಿ ವತಿಯಿಂದ ಮನೆಗಳಿಗೆ ಸರಬರಾಜು…

Read More

ಮಡಿಕೇರಿ ಫೆ.18 NEWS DESK  : ನಗರದ  ಸಂತ ಮೈಕೆಲರ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಬಿ.ಸಿ.ಅವನಿಕಾ ರಾಜ್ಯ ಮಟ್ಟದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿದ್ದಾಳೆ. ಈಕೆ ಸಂತ ಮೈಕಲರ ಕಾಲೇಜಿನ ಉಪನ್ಯಾಸಕಿ ಹೇಮಾ ಹಾಗೂ ಚಂದನ್ ದಂಪತಿಗಳ ಪುತ್ರಿ.

Read More

ಮಡಿಕೇರಿ ಫೆ.18 NEWS DESK  : ಸಾಮಾಜಿಕ ಕಳಕಳಿಯೊಂದಿಗೆ ಸಾಹಿತ್ಯ ಕ್ಷೇತ್ರದ ಪ್ರಗತಿಗೆ ಅಪಾರ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ 12ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಇಂದು ಲೇಖಕಿ ಮುಕ್ಕಾಟಿರ ಮೌನಿ ನಾಣಯ್ಯ ಅವರು ರಚಿಸಿರುವ “ಆ ಒರ್ ಬೈಟ್…?” ಎಂಬ ಕೊಡವ ಮಕ್ಕಡ ಕೂಟದ 109ನೇ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಬಯವಂಡ ಮಹಾಬಲ ಪೂವಯ್ಯ ಪುಸ್ತಕ ಬಿಡುಗಡೆ ಮಾಡಿದರು. ಸಾಹಿತಿ ಹಾಗೂ ಕೊಡವ ಮಕ್ಕಡ ಕೂಟದ ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ ಮಾತನಾಡಿ, ಭಾಷೆಯ ಬೆಳೆವಣಿಗೆಗೆ ಸಾಹಿತ್ಯದ ಅಗತ್ಯವಿದೆ, ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಯುವ ಪೀಳಿಗೆ ಮುಂದಾಗಬೇಕು ಎಂದು ಕರೆ ನೀಡಿದರು. ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಲೇಖಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಕೊಡವ ಮಕ್ಕಡ ಕೂಟ ಕೊಡವ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಸಾಹಿತ್ಯ ಬೆಳವಣಿಗೆಗೂ ಸಹಕಾರ ನೀಡುತ್ತಿರುವುದು ಶ್ಲಾಘನೀಯವೆಂದರು. ‘ಆ ಒರ್…

Read More

ಬೆಂಗಳೂರು ಫೆ.18 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದರು. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.‌ ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ…

Read More

ನಾಪೋಕ್ಲು ಫೆ.18 NEWS DESK : ಎಲ್ಲಾ ಧರ್ಮಗಳು ವಿದ್ಯೆಗೆ ಮಹತ್ವ ನೀಡಿವೆ. ಇಸ್ಲಾಂ ಧರ್ಮದ ಜೀವನಾಡಿ ಕೂಡ ವಿದ್ಯೆ ಆಗಿದೆ ಎಂದು ಕೊಳಕೇರಿಯ ಸುಹೇಬ್ ಫೈ ಝ ಹೇಳಿದರು. ಚೆರಿಯಪರಂಬು ಮಖಾಂ ಉರೂಸ್ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಭಾಗವಹಿಸಿ ಅವರು ಮಾತನಾಡಿದರು. ಅವರವರ ಧರ್ಮದ ಆಚಾರ ವಿಚಾರಗಳನ್ನು ಅನುಷ್ಠಾನಗಳನ್ನು ಕಲಿತು ಸುಸಂಸ್ಕೃತರಾಗಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ವಿದ್ಯೆ ಅಗತ್ಯ. ಇಸ್ಲಾಂ ಧರ್ಮವು ಕೂಡ ವಿದ್ಯೆಗೆ ಮಹತ್ವ ನೀಡಿದೆ ಎಂದು ಹೇಳಿದರು. ಶಿಕ್ಷಣದಿಂದ ಒಬ್ಬ ಮನುಷ್ಯ ಸಮಾಜದಲ್ಲಿ ಒಳ್ಳೆಯವನಾಗುತ್ತಾನೆ. ಸೌಹಾರ್ದತೆಯಿಂದ ಕೂಡಿದ ಜೀವನವನ್ನು ಕೈಗೊಳ್ಳಲು ವಿದ್ಯೆ ಸಹಕಾರಿ ಎಂದರು. ಸಾಧು, ಸಂತರು, ಪ್ರವಾದಿಗಳು, ಪವಾಡ ಪುರುಷರು ಮಾನವರ ಜೀವನವನ್ನು ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ದುಡಿದು ಉತ್ತಮ ರೀತಿಯಲ್ಲಿ ಬದುಕುವಂತೆ ಮಾಡಿದರು ಎಂದು ಧಾರ್ಮಿಕ ಪುಣ್ಯ ಪುರುಷರ ಹಿತ ಚಿಂತನೆಯ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ನಾಪೋಕ್ಲು ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ…

Read More

ಮಡಿಕೇರಿ ಫೆ.18 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬಿದ್ದಾಟಂಡ ವಾಡೆ ಮುಖಾಂತರ ಫುಲ್ಲೇರ, ಅಚ್ಚಾಂಡಿರ, ತಟಂಡ, ಮಲೇಯರ ಕುಟುಂಬಸ್ಥರ ಮನೆಗಳಿಗೆ ಹೋಗುವ ಸಂಪರ್ಕ ರಸ್ತೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ರೂ.5 ಲಕ್ಷದ ಅನುದಾನದಲ್ಲಿ  ಕೈಗೊಳ್ಳಲಾದ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 20 ವರ್ಷದಿಂದ ಅಭಿವೃದ್ಧಿ ಕಾಣದೆ ಇದ್ದ ಈ ರಸ್ತೆಯ ಕಾಮಗಾರಿಯನ್ನು ಮುತುವರ್ಜಿ ವಹಿಸಿ ಶಾಸಕರು ಅನುದಾನವನ್ನು ಬಿಡುಗಡೆಗೊಳಿಸಿದ್ದಕ್ಕೆ ಹಾಗೂ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಲು ಸಹಕರಿಸಿದ ಬ್ಲಾಕ್ ಅಧ್ಯಕ್ಷರಾದ ಕೆ.ಎ. ಇಸ್ಮಾಯಿಲ್ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ  ಮಾಚೇಟ್ಟಿರ ಕುಶು ಕುಶಾಲಪ್ಪನವರಿಗೂ ಕೊಳಕೇರಿ ಗ್ರಾಮಸ್ಥರು ಸಲ್ಲಿಸಿದ್ದಾರೆ.

Read More

https://www.youtube.com/watch?v=VcN70wEYUNY&authuser=0 ಮಡಿಕೇರಿ ಫೆ.18 NEWS DESK : ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿ ಎಬಿವಿಪಿ ಪ್ರಮುಖರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ಮತ್ತು ಇತರೆ ಹಿಂದುಳಿದ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದರು. ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಿಷ್ಠಗೊಳಿಸುವ ಕಾಳಜಿ ಮತ್ತು ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚೆಗೆ ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವುದರಿಂದ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಕೊಟ್ಟಿದೆ. ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಣ ಒದಗಿಸುವುದಕ್ಕೆ ಆಗದೆ ವಿಶ್ವವಿದ್ಯಾನಿಯಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ. ಈ ನಿರ್ಧಾರವನ್ನು ಹಿಂಪಡೆದು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು…

Read More