ಮಡಿಕೇರಿ ಜ.7 NEWS DESK : ಸಿದ್ದಾಪುರದ ಶ್ರೀ ದುರ್ಗಾಭಗವತಿ ದೇವಾಲಯದ ತಿರು ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಬ್ರಹ್ಮಶ್ರೀ ಈಡವಲತ್ ಪುಡಯೂರ್ಮನ ಕುಬೇರನ್ ನಂಬೂದಿರಿಪಾಡ್ ತಂತ್ರಿಗಳು ರಾಜರಾಜೇಶ್ವರ ದೇವಸ್ಥಾನದ ತಲೋರ ತಳಿಪರಂಬ್ ನೇತೃತ್ವದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಜ.3ರ ಸಂಜೆಯಿಂದಲೇ ಪುಣ್ಯಾಹ ಪ್ರಾಸಶುದ್ಧಿ, ವಾಸ್ತುಬಲಿ, ದೀಪಾರಾಧನೆ, ತ್ರಿಕೊಡಿಯೆಟಂ, ಅತ್ತಾಯ ಪೂಜಾ, ಮಹಾಪೂಜೆ, ಮಹಾಗಣಪತಿ ಹೋಮ, ಉಷಾಪೂಜೆ, ಮಹಾಸುದರ್ಶನ ಹೋಮ, ಮಹಾಮೃತ್ಯುಂಜಯ ಹೋಮ, ನವಕಂ ಪಂಚಗವ್ಯಂ, ಕಲಶಾಭಿಷೇಕ, ಭಗವತಿಸೇವೆ, ದೀಪಾರಾಧನೆ, ಸಹಸ್ರದೀಪಾ, ಗುಳಿಗ, ನಾಗದೇವರಿಗೆ ಪೂಜೆ, ಕಲಶಭಿಷೇಕ ಮಹಾಪೂಜೆ ತ್ಡಂಬ್ನೃತ್ಯ, ಅತ್ತಾಯಪೂಜಾ ತ್ರಿಕೊಡಿಎರಕಂ ಪೂಜೆ ಹಾಗೂ ಬಲಿಬಿಂಬದ ಮೆರವಣಿಗೆ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ನಾಲ್ಕುದಿನವೂ ಅನ್ನಸಂತರ್ಪಣೆ ನೆರವೇರಿತು. ವಿವಿಧ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದುರ್ಗಾಭಗವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಲೇಖಕ: admin
ನಾಪೋಕ್ಲು ಜ.7 NEWS DESK : ಸಂಘಟನೆಯಿಂದ ಶಕ್ತರಾಗಿರಿ ವಿದ್ಯೆಯಿಂದ ಪ್ರಬುದ್ಧರಾಗಿರಿ ಎಂಬ ಶ್ರೀ ನಾರಾಯಣ ಗುರುಗಳ ಧ್ಯೇಯೋದ್ದೇಶವನ್ನು ಸಾಕಾರಗೊಳಿಸುವಲ್ಲಿ ಎಸ್ಎನ್ಡಿಪಿ ಕಾರ್ಯನಿರ್ವಹಿಸುತ್ತಿದೆ ಎಂದು ಎಸ್ಎನ್ಡಿಪಿ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಹೇಳಿದರು. ನಾಪೋಕ್ಲುವಿನಲ್ಲಿ ಆಯೋಜಿಸಲಾಗಿದ್ದ ಎಸ್ಎನ್ಡಿಪಿ ಶಾಖೆಯ ಸಂಘಟನಾ ಪುನರ್ ರಚನಾ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರು ಸಂಘಟನೆಯ ಸದಸ್ಯರಾಗಬೇಕು. ನಾರಾಯಣ ಗುರು ನಮ್ಮ ಜೀವನ ಹೀಗಿರಬೇಕು ಎಂದು ಚೌಕಟ್ಟನ್ನು ರೂಪಿಸಿದರು. ಆ ಚೌಕಟ್ಟಿನ ಒಳಗಡೆ ಸಂಘಟನೆ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಮಂದಿ ಸಾಧನೆ ಮಾಡಿದ್ದಾರೆ. ಆರ್ಥಿಕವಾಗಿ ಸದೃಢರಾಗಲು ಗುರುಗಳು ಹಾಕಿ ಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸಬೇಕು ಎಂದರು. ಸೈನ್ಯ ಕೃಷಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವಂತಾಗಬೇಕು ಎಂದು ಹೇಳಿದರು. ಜಿಲ್ಲೆಯ ನಿವಾಸಿಗಳ ಜೊತೆಯಲ್ಲಿ ಉತ್ತಮ ಸಂಬಂಧವನ್ನು ರೂಢಿಸಿಕೊಂಡು ಎಸ್ಎನ್ಡಿಪಿ ಸದಸ್ಯರು ಜೀವನವನ್ನು ರೂಪಿಸಿಕೊಂಡು ಹೋಗುತ್ತಿದ್ದಾರೆ. ಎಂದ ಅವರು ನಮ್ಮ ಸಂಘಟನೆಯಿಂದ ಇನ್ನಷ್ಟು ಜನಪರ ಕೆಲಸಗಳು…
ಮಡಿಕೇರಿ ಜ.7 NEWS DESK : ಕನ್ನಡ ನಾಡಿನ ಹಿರಿಯ ಸಾಹಿತಿ ಶಿಶು ಸಾಹಿತ್ಯದ ಪಿತಾಮಹ “ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಭಿಮ್ಮನೆ ಬಂದಳೊ” ಕೊಡಗಿನ ನಾಡಗೀತೆಯ ರಚನಾಕಾರ ಮಡಿಕೇರಿ ಸೆಂಟ್ರಲ್ ಹೈ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಏಕೈಕ ಭಾರತೀಯ ಕನ್ನಡ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ಬ್ರಿಟಿಷರ ಕಾಲದಲ್ಲಿ ಕೊಡಗಿನ ಶಾಲಾ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ ಅಪ್ರತಿಮಾ ಸಂಘಟಕ, ದಿ. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಡೆಸುವ ಸ್ಥಳ, ನಡೆಸುವ ರೀತಿಯ ಬಗ್ಗೆ ಸಲಹೆ ಸೂಚನೆ ನೀಡುವಂತೆ ಉಪಸ್ಥಿತರಿದ್ದವರಲ್ಲಿ ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಸಾಹಿತಿಗಳಾದ ಡಾ. ಜಿ.ಸೋಮಣ್ಣ, ಮಡಿಕೇರಿ ತಾಲ್ಲೂಕು ನಿಕಟಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್,…
ಮಡಿಕೇರಿ ಜ.7 NEWS DESK : ಕೊಡಗು ಜಿಲ್ಲೆಯಲ್ಲಿ ವೇದಪಾಠ ಶಾಲೆ ಆರಂಭಿಸುವ ಉದ್ದೇಶಕ್ಕೆ ಸೂಕ್ತ ಜಾಗವನ್ನು ಮಂಜೂರು ಮಾಡಬೇಕೆಂದು ಕೊಡಗು ಪುರೋಹಿತ ಕಾರ್ಮಿಕರ ಫೆಡರೇಷನ್ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರ ಬಳಿ ಮನವಿ ಮಾಡಿದೆ. ವೇದಪಾಠ ಶಾಲೆ ಆರಂಭಿಸಲು ಜಾಗ ಮಂಜೂರು ಮಾಡುವುದಾಗಿ ಶಾಸಕರು ನಿಯೋಗಕ್ಕೆ ಭರವಸೆ ನೀಡಿರುವುದಾಗಿ ಪುರೋಹಿತ ಕಾರ್ಮಿಕರ ಫೆಡರೇಷನ್ ನ ಜಿಲ್ಲಾಧ್ಯಕ್ಷ ಪ್ರಸನ್ನ ಭಟ್ ತಿಳಿಸಿದರು. ಭಾರತದ ಎಲ್ಲಾ ಜ್ಞಾನ ಶಾಖೆಗಳಿಗೂ ಮಾತೆಯಾಗಿರುವ ವೇದಗಳ ಅಧ್ಯಯನಕ್ಕೆ ಸ್ಥಳಾವಕಾಶವನ್ನು ನೀಡುವುದು ಕೊಡಗು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ. ವೇದಪಾಠ ಶಾಲೆಯೊಂದಿಗೆ ವೈದಿಕ ಭವನವನ್ನು ಸ್ಥಾಪಿಸಿ ವೈದಿಕರ ಧಾರ್ಮಿಕ ವಿಧಿಗಳಿಗೂ ಅನುಕೂಲ ಕಲ್ಪಿಸುವ ಕಾರ್ಯವಾಗಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಫೆಡರೇಷನ್ ರಾಜ್ಯಾಧ್ಯಕ್ಷ ಡಾ.ಶ್ರೀನಿವಾಸನ್ ಹೇಳಿದ್ದಾರೆ. ಈ ಸಂದರ್ಭ ಫೆಡರೇಷನ್ ಉಪಾಧ್ಯಕ್ಷ ಸುದರ್ಶನ್, ಖಜಾಂಚಿ ಎಸಳೂರು ಉದಯಕುಮಾರ್, ಕಾರ್ಯದರ್ಶಿ ಪ್ರಸಾದ್ ಮತ್ತಿತರರು ಹಾಜರಿದ್ದರು. ಕೊಡಗು ಜಿಲ್ಲೆಯ ಅಸಂಘಟಿತ ಪುರೋಹಿತರನ್ನು ಸಂಘಟಿಸಲು ತಾಲ್ಲೂಕು ಸಮಿತಿಗಳನ್ನು ರಚಿಸಲಾಗುವುದು. ವಿವಿಧ ದೇವಾಲಯಗಳಲ್ಲಿ…
ಮಡಿಕೇರಿ ಜ.7 NEWS DESK : ಗ್ರಾಮೀಣ ಪ್ರದೇಶದಲ್ಲಿ ನೆಲೆನಿಂತಿರುವ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ಈಗ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು, ಜ.11 ರಂದು ಸಂಸ್ಥೆಯ 60ನೇ ವಷಾ೯ರಣೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕನ೯ಲ್ ಬಿ.ಜಿ.ವಿ. ಕುಮಾರ್ ತಿಳಿಸಿದ್ದಾರೆ. ದಾನಿಗಳಾದ ದಿವಂಗತ ಲೆಫ್ಟಿನೆಂಟ್ ಕನ೯ಲ್ ಡಿ.ಸಿ.ಬಸಪ್ಪ ಅವರ ಪ್ರಯತ್ನದಿಂದಾಗಿ ಅವರ ತಾಯಿ ಡಿ ಚೆನ್ನಮ್ಮ ಸ್ಮರಣಾಥ೯ 1960 ರ ಜುಲೈ 22 ರಂದು ಆರಂಭವಾದ ಪ್ರೌಡಶಾಲೆ 6 ದಶಕಗಳಲ್ಲಿ ಈ ವ್ಯಾಪ್ತಿಯ ಗ್ರಾಮೀಣ ವಿದ್ಯಾಥಿ೯ಗಳಿಗೆ ಜ್ಞಾನದೀವಿಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದಿವಂಗತರಾದ | ಮಚ್ಚಂಡ ಗಣಪತಿ, ಪುಟ್ಟುಸ್ವಾಮಿ ಮುತ್ತಯ್ಯ ಗುಂಡುಕುಟ್ಟಿ ಮಂಜುನಾಥಯ್ಯ, ಎಂ ಎ ಪೊನ್ನಪ್ಪ, , ಕೆ.ಡಿ.ಸೋಮಯ್ಯ, ಸಿ.ಎ.ಪೂವಯ್ಯ, ಎಂ ಜಿ ಬೋಪಣ್ಣ ಸೇರಿದಂತೆ ಅನೇಕ ಮಹನೀಯರ ಪರಿಶ್ರಮದಿಂದಾಗಿ ಶಿಕ್ಷಣ ಸಂಸ್ಥೆಯು ಸಾಕಷ್ಟು ಅಭಿವೖದ್ದಿ ಹೊಂದಿದೆ ಎಂದು ಸ್ಮರಿಸಿಕೊಂಡರು. 1964ರಲ್ಲಿ ಗರಗಂದೂರಿನ ಈಗಿನ ಸುಂದರ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲಾಯಿತು ಎಂದು ತಿಳಿಸಿದ…
ನಾಪೋಕ್ಲು ಜ.7 NEWS DESK : ಎಸ್ಎನ್ಡಿಪಿ ಶಾಖೆಯ ನೂತನ ಅಧ್ಯಕ್ಷರಾಗಿ ಟಿ.ಸಿ.ಲವ ಆಯ್ಕೆಯಾಗಿದ್ದಾರೆ. ನಾಪೋಕ್ಲುವಿನಲ್ಲಿ ಆಯೋಜಿಸಲಾಗಿದ್ದ ಎಸ್ಎನ್ಡಿಪಿ ಶಾಖೆಯ ಸಂಘಟನಾ ಪುನರ್ ರಚನಾ ಕಾರ್ಯಕ್ರಮದಲ್ಲಿ ಶಾಖೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪಿ.ಎನ್.ಹರಿದಾಸ್, ಎಂ.ಕೆ.ತಂಗ, ಕಾರ್ಯದರ್ಶಿಯಾಗಿ ಪಿ.ಸಿ.ಕಿಶೋರ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಎಂ.ಆರ್.ಅಜಿತ್, ಖಜಾಂಜಿಯಾಗಿ ಕೆ.ಬಿ.ಸುಧೀಶ್, ಯೂನಿಯನ್ ಪ್ರತಿನಿಧಿಯಾಗಿ ಟಿ.ಸಿ.ರಾಜೀವ್, ಸಂಘಟನಾ ಕಾರ್ಯದರ್ಶಿ ಚಿನ್ನ, ಸಂಘಟನಾ ಸಹ ಕಾರ್ಯದರ್ಶಿಯಾಗಿ ಎ.ಕೆ.ಮನೋಹರ, ನಿರ್ದೇಶಕರಾಗಿ ಟಿ.ಸಿ.ಮಣಿ, ಟಿ.ಸಿ.ಹರೀಶ್, ಪಿ.ಬಿ.ಹರೀಶ್ ಕುಮಾರ್ ನೇಮಕಗೊಂಡರು. ಸಂಘದ ಅಧ್ಯಕ್ಷ ಟಿ.ಸಿ.ರಾಜೀವ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಎಸ್ಎನ್ಡಿಪಿ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್, ಕೊಡಗು ಜಿಲ್ಲಾ ಮಹಿಳಾ ಯೂನಿಯನ್ ಹಾಗೂ ಬ್ಯಾಂಕ್ ಅಧ್ಯಕ್ಷ ರಿಷ ಸುರೇಂದ್ರನ್, ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೇಮಾನಂದ, ನಾಪೋಕ್ಲು ವಿ ಎಸ್ ಎಸ್ ಎನ್ ನಿರ್ದೇಶಕ, ಎಸ್.ಎನ್ಡಿ.ಪಿ ಶಾಖೆಯ ನಿರ್ದೇಶಕ ಟಿ.ಎ.ಮಿಟ್ಟು, ನಾಪೋಕ್ಲು ಶಾಖೆಯ ಉಪಾಧ್ಯಕ್ಷ ಟಿ.ಆರ್.ಮಣಿ, ಕಬಡಕೇರಿ ನಿರ್ದೇಶಕ ವಿನಿಲ್ ಪಪ್ಪು, ಗೌರವ ಕಾರ್ಯದರ್ಶಿ ಟಿ.ಕೆ.ರಘು ಹಾಗೂ ಶಾಖೆಯ ನಿರ್ದೇಶಕರು ಸದಸ್ಯರು ಪಾಲ್ಗೊಂಡಿದ್ದರು. ವರದಿ…
ನಾಪೋಕ್ಲು ಜ.7 NEWS DESK : ಸಿ ಮತ್ತು ಡಿ ವರ್ಗದ ಜಮೀನನ್ನು ಮೀಸಲು ಅರಣ್ಯವೆಂದು ಘೋಷಿಸುವ ವಿಷಯದ ಕುರಿತಾಗಿ ಚರ್ಚಿಸಲು ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು. ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ, ಯವಕಪಾಡಿ, ನಾಲಡಿ ಮತ್ತು ಮರಂದೋಡ ಗ್ರಾಮಗಳಲ್ಲಿ ಈಗಾಗಲೇ ವಾಸದ ಮನೆಯನ್ನು ನಿರ್ಮಿಸಿರುವ, ಕೃಷಿ ಮಾಡಿಕೊಂಡು ಅನುಭವ ಸ್ವಾಧೀನದಲ್ಲಿರುವ ಜಾಗವನ್ನು ಹೊರತುಪಡಿಸಿ, ಜಮ್ಮಾ ಮಲೆಗೆ ಹೋಗುವ ಬಂಡಿ ದಾರಿ, ಕುಡಿಯುವ ನೀರಿನ ಮೂಲ, ದೇವರ ಸ್ಥಾನಗಳಿಗೆ ಹೋಗುವ ದಾರಿಗೆ ಅಡ್ಡಿ ಪಡಿಸದಂತೆ ನಿರ್ಣಯ ಕೈಗೊಂಡು ಸಂಬಂಧಿಸಿದ ಇಲಾಖೆಯ ಅಧಿಕಾರಿವರಿಗೆ ಕಳುಹಿಸಿಕೊಡುವಂತೆ ತೀರ್ಮಾನಿಸಿದರು. ಪಂಚಾಯಿತಿ ಅಧ್ಯಕ್ಷೆ ಪಿ.ಎಲ್.ಶಿಲ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ್ ಕುಮಾರ್, ಕಂದಾಯ ಪರಿವೀಕ್ಷಕ ರವಿ ಕುಮಾರ್, ಭಾಗಮಂಡಲ ವಲಯ ಅರಣ್ಯಾಧಿಕಾರಿ ಗ್ರಾಮಸ್ಥರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದರು. ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಬೀನಾ ಸುಚಿತ್ರ, ಸದಸ್ಯರಾದ ಚೋಯಮಾಡಂಡ ಹರಿ ಮೊಣ್ಣಪ್ಪ, ಲೀಲಾವತಿ, ನಂಬುಡಮಂಡ ಶೈಲ,…
ಮಡಿಕೇರಿ ಜ.7 NEWS DESK : ನವದೆಹಲಿಯಲ್ಲಿ ಜ.12 ರಂದು ನಡೆಯಲಿರುವ ರಾಷ್ಟ್ರಮಟ್ಟದ ಯುವ ಜನೋತ್ಸವದಲ್ಲಿ ಕೊಡಗಿನ ಶ್ವೇತನ್ ಜಿ.ರೈ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಡಿಕೇರಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ, ಸೋಮವಾರಪೇಟೆ, ಹಾಗೂ ವಿರಾಜಪೇಟೆ, ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವದ ವೈಯಕ್ತಿಕ ವಿಜ್ಞಾನ ಮೇಳ ವಿಭಾಗದಲ್ಲಿ ಭಾಗವಹಿಸಿದ ಶ್ವೇತನ್ ಜಿ.ರೈ ಪ್ರಥಮ ಸ್ಥಾನ ಗಳಿಸಿದ್ದರು. ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುವ ಜನೋತ್ಸವದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಕಳತ್ಮಾಡ್ ಲಯನ್ಸ್ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿರುವ…
ನಾಪೋಕ್ಲು ಜ.8 NEWS DESK : ಪಟ್ಟಣದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳಲು ಜ.8 ರಂದು ಪಟ್ಟಣದ ಅಂಗಡಿ ಮಾಲೀಕರ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ಠಾಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 10.30 ಗಂಟೆಗೆ ಅಂಗಡಿ ಮಾಲೀಕರ ಸಭೆ ನಡೆಯಲಿದ್ದು, ಎಲ್ಲ ಅಂಗಡಿ ಮಾಲೀಕರು ಸಮಯಕ್ಕೆ ಸರಿಯಾಗಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಜ.7 NEWS DESK : ವಿರಾಜಪೇಟೆಯ ಮಟನ್ ಮಾರ್ಕೆಟ್ ಬಳಿ ಇರುವ ಆಟೋ ನಿಲ್ದಾಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಆಟೋ ಚಾಲಕರ ಮನವಿಗೆ ಸ್ಪಂದಿಸಿದರು. ವಿರಾಜಪೇಟೆಯ ಮಟನ್ ಮಾರ್ಕೆಟ್ ಬಳಿ ಹಲವಾರು ವರ್ಷದಿಂದ ಇದ್ದ ಆಟೋ ನಿಲ್ದಾಣವನ್ನು ಬದಲಾಯಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ ಹಿನ್ನೆಲೆ ಆಟೋ ಚಾಲಕರು ಶಾಸಕರೊಂದಿಗೆ ತಮ್ಮ ನೋವನ್ನು ಹೇಳಿಕೊಂಡರು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಆಟೋ ಚಾಲಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಸ್ಥಳೀಯ ವ್ಯಾಪಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಅಲ್ಲಿಯೇ ಆಟೋ ನಿಲ್ದಾಣವನ್ನು ಚಾಲಕರ ಇಚ್ಛೆಯಂತೆ ಮುಂದುವರೆಯಲು ಸೂಚನೆ ನೀಡಿದರು. ಅಲ್ಲದೇ ತಾವೇ ಸ್ವತಹ ಆಟೋವನ್ನು ಚಾಲನೆ ಮಾಡುವ ಮೂಲಕ ಆಟೋ ಚಾಲಕರೊಂದಿಗೆ ತಾನು ಸದಾ ಇದ್ದೇನೆ ಎಂದು ಸಂದೇಶ ಸಾರಿದರು. ಈ ಸಂದರ್ಭ ಆಟೋ ಚಾಲಕರು ಹಾಗೂ ಸಾರ್ವಜನಿಕರು ಶಾಸಕರಿಗೆ ಜಯ ಘೋಷ ಕೂಗಿ ಹರ್ಷ ವ್ಯಕ್ತಪಡಿಸಿದರು. ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ…






