ಲೇಖಕ: admin

ಮಡಿಕೇರಿ NEWS DESK ಜನವರಿ 31: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ  ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ…

Read More

ಮಡಿಕೇರಿ NEWS DESK ಜ.31 : ಮಾರ್ಚ್ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮಡಿಕೇರಿಯಲ್ಲಿ ನಡೆಯುವ 25ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಕಪ್ ಹಾಕಿ ಹಬ್ಬದ ನೇತೃತ್ವ ವಹಿಸಿರುವ ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿಯ ಪ್ರಮುಖರು ಭಾಗಮಂಡಲದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಉತ್ಸವಕ್ಕೆ ಸರಕಾರದಿಂದ ರೂ.1.50 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು. ಅಲ್ಲದೆ ಹಾಕಿ ಉತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ನಂತರ ಕೊಡಗಿನ ಸಾಂಪ್ರದಾಯಿಕ ಒಡಿಕತ್ತಿಯನ್ನು ಮುಖ್ಯಮಂತ್ರಿಗಳಿಗೆ ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಕೊಡವ ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಸದಸ್ಯ ಸಂಪನ್ ಅಯ್ಯಪ್ಪ, ಮುದ್ದಂಡ ಕುಟುಂಬಸ್ಥರಾದ ಮುದ್ದಂಡ ರಾಯ್ ತಮ್ಮಯ್ಯ,…

Read More

ಮಡಿಕೇರಿ NEWS DESK ಜ.31 : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಹಾಗೂ ಅವರ ತಾಯಿಯ ಮೇಲೆ ಮೂರ್ನಾಡಿನಲ್ಲಿ ಕಿಡಿಗೇಡಿಗಳು ನಡೆಸಿದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಪ್ರಮುಖ್ ಡಾ.ಮಹಾಬಲೇಶ್ವರ್ ತಿಳಿಸಿದ್ದಾರೆ. ದೇವಾಲಯ, ದೇವಾಲಯದ ಅರ್ಚಕರು ಹಾಗೂ ಧಾರ್ಮಿಕ ಪೂಜೆ, ಪುನಸ್ಕಾರ ಇವೆಲ್ಲವು ಹಿಂದೂ ಧರ್ಮದ ಮುಖ್ಯ ಆಧಾರ ಸ್ತಂಭವಾಗಿದೆ. ಹಿಂದೂ ಧರ್ಮವನ್ನು ಉಳಿಸಲು ಅರ್ಚಕರು ನೀಡುತ್ತಿರುವ ಕೊಡುಗೆ ಅಪಾರವಾಗಿದೆ. ಈ ರೀತಿಯ ಹಲ್ಲೆ, ಜೀವ ಬೆದರಿಕೆ ಪ್ರಕರಣಗಳು ಕುತಂತ್ರದ ಒಂದು ಭಾಗವಾಗಿದೆ. ಅರ್ಚಕರ ಮೇಲೆ ಹಲ್ಲೆ ನಡೆದು 5 ದಿನ ಕಳೆದರೂ ತಪ್ಪಿತಸ್ಥರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವಿಫಲವಾಗಿದೆ. ಪ್ರಕರಣವನ್ನು ಲಘುವಾಗಿ ಪರಿಗಣಿಸಿದಂತೆ ಕಂಡು ಬರುತ್ತಿದೆ ಎಂದು ಆರೋಪಿಸಿದ್ದಾರೆ. ದುಷ್ಕರ್ಮಿಯನ್ನು ತಕ್ಷಣ ಬಂಧಿಸಿ, ಅರ್ಚಕರಿಗೆ ಹಾಗೂ ಅರ್ಚಕರ ಕುಟುಂಬಕ್ಕೆ ಆದ ನ್ಯಾಯ ಒದಗಿಸಬೇಕು. ತಪ್ಪಿದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಡಾ.ಮಹಾಬಲೇಶ್ವರ್…

Read More

ಮಡಿಕೇರಿ ಜ.31 NEWS DESK : ಮಡಿಕೇರಿಯಲ್ಲಿ ಫೆ.7 ರಂದು ನಡೆಯಲಿರುವ ಕೊಡವ ಸಮುದಾಯದ ಒಮ್ಮತದ ರ್ಯಾಲಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬೆಂಬಲ ನೀಡಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.  ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಲೋಕದ ಅಚಲ, ಅದಮನೀಯ ಧ್ವನಿ ಮತ್ತು ಆತ್ಮಸಾಕ್ಷಿಯಾಗಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಫೆ.7 ರಂದು ಮಡಿಕೇರಿಯಲ್ಲಿ ನಡೆಯಲಿರುವ ಕೊಡವರ ಒಮ್ಮತದ ರ್ಯಾಲಿಗೆ ಬೆಂಬಲವನ್ನು ನೀಡಲಿದೆ. ಸಿಎನ್‍ಸಿಯು ಕಳೆದ 35 ವರ್ಷಗಳಿಂದ ಪ್ರತಿಪಾದನೆ ಮಾಡುತ್ತಾ ಬಂದಿರುವ ಶಾಸನಬದ್ಧ ಹಕ್ಕೊತ್ತಾಯಗಳನ್ನು ಅದರ ತಾರ್ಕಿಕ ಹಂತಕ್ಕೆ ತಲುಪಿಸುವ ದೃಢ ಸಂಕಲ್ಪ ತೊಟ್ಟಿದೆ ಎಂದು ಹೇಳಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕನ್ನು ಪರಿಗಣಿಸಬೇಕು. ಯುಎನ್ ಆದಿಮ ಸಂಜಾತ ಹಕ್ಕುಗಳು- ವಿಶ್ವ ರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿಡಿಯಲ್ಲಿ ಕೊಡವರನ್ನು ಆದಿಮಸಂಜಾತ ಜನರು ಎಂದು ಗುರುತಿಸುವುದು. ಆದಿಮ ಸಂಜಾತ ಕೊಡವ ಬುಡಕಟ್ಟು ಪಂಗಡ ವರ್ಗೀಕರಣ : ಭಾರತೀಯ ಸಂವಿಧಾನದ ವಿಧಿ…

Read More

ಮಡಿಕೇರಿ ಜ.31 NEWS DESK : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಜನಜಾಗೃತಿ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಚಾಲನೆ ನೀಡಿದರು. 23 ಅಸಂಘಟಿತ ವರ್ಗಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಪರ್‍ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ ಟೆಂಟ್/ ಪೆಂಡಾಲ್‍ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಹಾಗೂ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರು(ಮೆಕ್ಯಾನಿಕ್…

Read More

ಮಡಿಕೇರಿ ಜ.31 NEWS DESK :  ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‍ಸೈಟ್ explorekodagu.com ನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆಯ ಮುಖಾಂತರ ಕೊಡಗು ಪ್ರವಾಸೋದ್ಯಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‍ಸೈಟ್ ಅನ್ನು ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಬಿಡುಗಡೆ ಮಾಡಿದರು. ಈ ವೆಬ್‍ಸೈಟ್‍ನಲ್ಲಿ ಕೊಡಗಿನ ಸುಂದರ ಪ್ರವಾಸಿ ತಾಣಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸಲು ಮೀಸಲಾಗಿರುವ ಸಮಗ್ರ ಆನ್‍ಲೈನ್ ವೇದಿಕೆಯಾಗಿದೆ ಎಂದು ಘೋಷಿಸಲು ಹೆಮ್ಮೆ ಸಂಗತಿಯಾಗಿದೆ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ, ವಿಶ್ವಾಸಾರ್ಹ ಪ್ರಯಾಣ ಅನುಭವವನ್ನು ಖಚಿತಪಡಿಸಿಕೊಳ್ಳಲು ವೆಬ್‍ಸೈಟ್‍ನಲ್ಲಿ ಅಧಿಕೃತವಾಗಿ ನೋಂದಾಯಿತ ಮತ್ತು ಪ್ರಮಾಣೀಕೃತ ಹೋಂಸ್ಟೇಗಳು, ರೆಸಾರ್ಟ್‍ಗಳು, ರೆಸ್ಟೋರೆಂಟ್‍ಗಳು, ಪ್ರವಾಸಿ ಮಾರ್ಗದರ್ಶಿಗಳು, ಟ್ಯಾಕ್ಸಿ ನಿರ್ವಾಹಕರು ಮತ್ತು ಜಿಲ್ಲೆಯ ಅಧೀಕೃತ ಕಾರ್ಯ ಕ್ರಮಗಳನ್ನು ಮಾತ್ರ ಪಟ್ಟಿ ಮಾಡಲಾಗಿರುತ್ತದೆ. ವೆಬ್‍ಸೈಟ್‍ನಲ್ಲಿ ಪ್ರಮುಖ ಲಕ್ಷಣಗಳು: ಜಿಲ್ಲೆಯ ನೋಂದಾಯಿತ ಹೋಂಸ್ಟೇಗಳು ಮತ್ತು…

Read More

ಮಡಿಕೇರಿ ಜ.31 NEWS DESK : ವಿವಿಧ ಕ್ಷೇತ್ರಗಳಿಗೆ ಗಣನೀಯ ಕೊಡುಗೆ ನೀಡಿ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸ್ಥಳೀಯರಿಗೆ ಸಚಿವ ಸ್ಥಾನ ನೀಡಬೇಕೆಂದು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಸರಕಾರವನ್ನು ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಕೃತಿ ಸಿರಿಬಳಗ ಟ್ರಸ್ಟ್‍ನ ಟ್ರಸ್ಟಿ ಕೆ.ಎಂ.ಗಣೇಶ್ ಒಂದು ಕಾಲದಲ್ಲಿ ಕೊಡಗು ರಾಜ್ಯವಾಗಿತ್ತು. ಬಳಿಕ ವಿಶಾಲ ಕರ್ನಾಟಕದೊಂದಿಗೆ ವಿಲೀನವಾಗಿ ಜಿಲ್ಲೆಯಾಗಿ ಪರಿವರ್ತಿತವಾಯಿತು. ಇಂತಹ ಪುಟ್ಟ ಕೊಡಗು, ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ನೀಡಿದ, ವಿಧಾನ ಪರಿಷತ್ತಿಗೆ ನಾಯಕರನ್ನು ನೀಡಿದ ಜಿಲ್ಲೆಯಾಗಿದೆ. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲ ಘಟ್ಟದಲ್ಲಿ ಜಿಲ್ಲೆಯ ಮೂವರು ಶಾಸಕರಿಗೆ ಸಚಿವ ಸ್ಥಾನವನ್ನು ನೀಡಲಾಗಿತ್ತು. ನಂತರದ ವರ್ಷಗಳಲ್ಲಿ ಮೂರು ವಿಧಾನ ಸಭಾ ಕ್ಷೇತ್ರ ಎರಡಕ್ಕೆ ಇಳಿದು, ಕಳೆದ ಒಂದೂವರೆ ದಶಕಗಳಿಂದ ಜಿಲ್ಲೆಯ ಯಾವೊಬ್ಬ ಶಾಸಕರಿಗು ಸಚಿವ ಸ್ಥಾನವನ್ನು ಯಾವುದೇ ಸರ್ಕಾರ ನೀಡಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲು ನಾವು ಜಿಲ್ಲೆಯ ಶಾಸಕರೊಬ್ಬರಿಗೆ…

Read More

ಮಡಿಕೇರಿ ಜ.31 NEWS DESK : ಮರಗೋಡು ಗೌಡ ಈವ್ನಿಂಗ್ ಸ್ಟಾರ್ ವತಿಯಿಂದ ಇದೇ ಮೊದಲ ಬಾರಿಗೆ ಮುಂದಿನ ಏ.26ರಿಂದ ಹದಿನೈದು ದಿನಗಳ ಕಾಲ ಗ್ರಾಮದ ಭಾರತೀಯ ಜೂನಿಯರ್ ಕಾಲೇಜು ಮೈದಾನದಲ್ಲಿ ಗೌಡ ಕುಟುಂಬಗಳ ನಡುವಣ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡ ಈವ್ನಿಂಗ್ ಸ್ಟಾರ್‍ನ ಅಧ್ಯಕ್ಷರಾದ ರೋಷನ್ ಕಟ್ಟೆಮನೆ, ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೌಡ ಸಮುದಾಯದ 100 ರಿಂದ 150 ಕುಟುಂಬ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಂಡಗಳ ಹೆಸರು ನೋಂದಣಿಗೆ ಏಪ್ರಿಲ್ 10ರವರೆಗೆ ಕಾಲಾವಕಾಶವನ್ನು ನೀಡಲಾಗಿದೆಯೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಪ್ರತಿನಿತ್ಯ 10 ಪಂದ್ಯಗಳು ನಡೆಯಲಿದ್ದು, ಪ್ರತಿ ಪಂದ್ಯ 6 ಓವರ್‍ಗಳದ್ದಾಗಿರುತ್ತದೆ. ಪ್ರೀ ಕ್ವಾರ್ಟರ್ ಹಂತದ ಪಂದ್ಯಗಳು 8 ಓವರ್ ಹಾಗೂ ಕ್ವಾರ್ಟರ್ ಫೈನಲ್ ನಂತರದ ಎಲ್ಲಾ ಪಂದ್ಯಗಳು 10 ಓವರ್‍ಗಳದ್ದಾಗಿದ್ದು, ಪ್ರೀ ಕ್ವಾರ್ಟರ್ ನಂತರದ ಎಲ್ಲಾ ಪಂದ್ಯಗಳನ್ನು ಪವರ್ ಪ್ಲೇ ಮೂಲಕ ನಡೆಸಲಾಗುತ್ತದೆಂದು ಎಂದರು. ಪಂದ್ಯಾವಳಿಯನ್ನು 10 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಆಯೋಜನೆ…

Read More

ಮಡಿಕೇರಿ ಜ.31 NEWS DESK :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಕ್ಕ ಮುಖ್ಯಸ್ಥರಾದ…

Read More

ಮಡಿಕೇರಿ ಜ.31 NEWS DESK : ವನ್ಯಜೀವಿ ಮಾನವ ಸಂಘರ್ಷ ಕಾಡಿಂಚಿನ ಊರುಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಆನೆಗಳು, ಚಿರತೆಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಪ್ರಾಣಿಗಳು ಆಹಾರ ಮತ್ತು ನೀರಿಗಾಗಿ ಕಾಡಿನಿಂದ ನಾಡಿಗೆ ಬರುತ್ತಿವೆ. ಹಾಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ ಕೈಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ ::  ಸರ್ಕಾರಿ ಭೂಮಿ ಭೂ ಗುತ್ತಿಗೆ ನೀಡುವುದಕ್ಕೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ ಸರ್ಕಾರಿ ಭೂಮಿ ಕೊಟ್ಟರೆ ವಿರೋಧ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿವೇಶನ ಇಲ್ಲದಿರುವವರಿಗೆ, ಜಮೀನು ಇಲ್ಲದವರಿಗೂ ಭೂಮಿ ಕೊಡುತ್ತೇವೆ ಎಂದರು. ಕಾವೇರಿ ನದಿ ಸ್ವಚ್ಛತೆಯ ಬಗ್ಗೆ ರಚಿಸಲಾಗಿದ್ದ ಸಮಿತಿ ಇನ್ನೂ ವರದಿ ನೀಡಿಲ್ಲ. ವರದಿ ನೀಡಿದ ನಂತರ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಕಾಮಗಾರಿಗೆ ಅನುದಾನ ನೀಡಿ ಶೀಘ್ರಗತಿಯಲ್ಲಿ ಪೂರ್ಣ…

Read More