ಮಡಿಕೇರಿ ಡಿ.24 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೈಸೂರು ಪ್ರಾಂತೀಯ ಕಛೇರಿಯ ವತಿಯಿಂದ ಕೊಡಗು ಜಿಲ್ಲಾ ಸಹಕಾರಿಗಳ ಮುಖ್ಯ ಕಾರ್ಯ ನಿರ್ವಾಹಕರ ವಾರ್ಷಿಕ ಸಭೆಯು ಕೊಡವ ಎಂಟರ್ಪ್ರೆನರ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಕೊಡವ ಸಮಾಜ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಅಧ್ಯಕ್ಷ ಎಂ.ಪಿ.ಮುತ್ತಪ್ಪ ಕೊಡಗಿನ ಸಹಕಾರಿ ಮತ್ತು ಅದರ ಕಾರ್ಯವೈಖರಿಯ ಕುರಿತು ವಿಮರ್ಶಿಸಿದರು. ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ವ್ಯವಸ್ಥಾಪಕ ಮನೋಜ್ ಕುಮಾರ್ ಸಾಮಾನ್ಯ ಸೇವಾ ಕೇಂದ್ರದ ಕುರಿತು (ಸಿಎಸ್ ಸಿ) ಮಾಹಿತಿಯನ್ನು ನೀಡಿದರು. ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಮುಖ್ಯ ಕಾರ್ಯನಿರ್ವಾಹಕರ ಶಾಸನಬದ್ಧ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು. ಸಹಕಾರಿ ಅಭಿವೃದ್ಧಿ ಅಧಿಕಾರಿ ಆರ್.ಎಸ್.ಸುರೇಶ ಆರ್ಥಿಕ ಸಬಲತೆಯ ಮಾನದಂಡಗಳ ಸುತ್ತೋಲೆ & ಲೆಕ್ಕಪರಿಶೋಧನ ವರದಿಯಲ್ಲಿ ಕಂಡುಬಂದಿರುವ ನ್ಯೂನ್ಯತೆಗಳ ಕುರಿತು …
ಲೇಖಕ: admin
ಮೂರ್ನಾಡು ಡಿ.24 NEWS DESK : ರಾಜ್ಯಮಟ್ಟದ 16ನೇ ಈಶ ಗ್ರಾಮೋತ್ಸವದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾಂತೂರು-ಮೂರ್ನಾಡು ಮಹಿಳಾ ತಂಡವು ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಆಯೋಜಿಸಲಾಗಿದ್ದ ಈಶ ಗ್ರಾಮೋತ್ಸವದ ಥ್ರೋಬಾಲ್ ಪಂದ್ಯಾವಳಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 14 ತಂಡಗಳ ನಡುವೆ ರೋಮಾಂಚಕ ಪ್ರದರ್ಶನಗಳು ನಡೆದು, ಕೊಡಗು ಜಿಲ್ಲೆಯ ಕಾಂತೂರು-ಮೂರ್ನಾಡು ಮಹಿಳಾ ತಂಡ ಮತ್ತು ಮರಗೋಡು ಬ್ಯಾಕ್ ಪ್ಯಾಂಥರ್ರ್ಸ್ ಪ್ರವೇಶಿಸಿತು. ಈ ಎರಡು ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕಾಂತೂರು-ಮೂರ್ನಾಡು ಮಹಿಳಾ ತಂಡ ವಿಜಯ ಸಾಧಿಸಿತು. ಈ ತಂಡವು ಇದೆ ತಿಂಗಳು 28 ರಂದು ಕೊಯಂಬುತ್ತೂರಿನ ಈಶ ಯೋಗಕೇಂದ್ರದಲ್ಲಿ ನಡೆಯುವ ರಾಷ್ಟಮಟ್ಟದ ಗ್ರಾಮ ನಾಲೆಯಲ್ಲಿ ಭಾಗವಹಿಸಲಿದ್ದಾರೆ. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು.
ಸೋಮವಾರಪೇಟೆ ಡಿ.24 NEWS DESK : ಕ್ರೀಡೆಯಲ್ಲಿ ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದು ಶಾಸಕ ಡಾ.ಮಂತರ್ಗೌಡ ಹೇಳಿದರು. ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಸಮೀಪದ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಭಾನುವಾರ ಜಿಲ್ಲೆಯ ಪತ್ರಕರ್ತರಿಗೆ ಆಯೋಜಿಸಿದ್ದ ಕೆ.ಪಿ.ಎಸ್, ಕ್ರಿಕೆಟ್ ಲೀಗ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಕ್ರೀಡೆ ಎಂಬುದು ಕೊಡಗಿನ ಜನರ ರಕ್ತದಲ್ಲೇ ಇದೆ. ಪತ್ರಕರ್ತರು ಕೂಡ ಶಾಲಾ, ಕಾಲೇಜು ದಿನಗಳಲ್ಲಿ ಎಲ್ಲಾ ಆಟಗಳನ್ನು ಆಡಿರುತ್ತಾರೆ. ಇಂತಹ ಕ್ರೀಡಾಕೂಟಗಳಲ್ಲಿ ಪರಸ್ಪರ ಭೇಟಿಯ ಸುಸಂದರ್ಭ ಒದಗುತ್ತದೆ ಎಂದರು. ಪತ್ರಕರ್ತರು ಪ್ರತಿನಿತ್ಯ ಒತ್ತಡದಿಂದ ಕೆಲಸ ಮಾಡಲೇಬೇಕಾದ ಅನಿವಾರ್ಯತೆಯಿದೆ. ದಿನಕ್ಕೆ ಅರ್ಧಗಂಟೆ ಸಮಯವನ್ನು ವ್ಯಾಯಾಮಕ್ಕಾಗಿ ಮೀಸಲಿಡಬೇಕು. ವಯಸ್ಸಿಗೆ ಅನುಗುಣವಾಗಿ ವ್ಯಾಯಾಮ ಮಾಡಬೇಕು ಎಂದು ಕಿವಿ ಮಾತು ಹೇಳಿದರು. ಗ್ರಾಮೀಣ ಪತ್ರಕರ್ತರಿಗೂ ಸರ್ಕಾರದ ಸೌಲಭ್ಯಗಳು ಸಿಗಬೇಕು ಎಂಬುದು ನಮ್ಮ ಅಶಯವಾಗಿದೆ. ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಸಂಚರಿಸಲು…
ಮಡಿಕೇರಿ NEWS DESK ಡಿ.24 : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮಡಿಕೇರಿಗೆ ದಾಖಲೆ ಸಂಖ್ಯೆಯ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದ್ದು, ವಾಹನದಟ್ಟಣೆಯನ್ನು ತಡೆಯಲು ವರ್ತಕರು ನಾಲ್ಕು ಚಕ್ರದ ವಾಹನವನ್ನು ಬಳಸದೆ ಆದಷ್ಟು ದ್ವಿಚಕ್ರ ವಾಹನದಲ್ಲೇ ಸಂಚರಿಸುವ0ತೆ ನಗರ ಚೇಂಬರ್ ಆಫ್ ಕಾಮರ್ಸ್ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ನ ನಗರಾಧ್ಯಕ್ಷ ಸಂತೋಷ್ ಅನ್ವೇಕರ್, ಮಡಿಕೇರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಭಾರೀ ವಾಹನದಟ್ಟಣೆ ಎದುರಾಗುವ ಸಂಭವವಿದೆ. ಆದ್ದರಿಂದ ಸ್ಥಳೀಯ ವರ್ತಕರು ಅಗತ್ಯವಿದ್ದರೆ ಮಾತ್ರ ನಾಲ್ಕು ಚಕ್ರದ ವಾಹನದಲ್ಲಿ ಸಂಚರಿಸುವ0ತೆ ಕೋರಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುವುದರಿ0ದ ನಗರದಲ್ಲಿ ವಾಹನದಟ್ಟಣೆ ಕಡಿಮೆಯಾಗುತ್ತದೆ. ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಪೊಲೀಸ್ ಇಲಾಖೆಗೆ ಸಹಕರಿಸಿದಂತಾಗುತ್ತದೆ. ವಸ್ತುಗಳ ಖರೀದಿಗೆ ಅಂಗಡಿಗಳಿಗೆ ಬರುವ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ. ಹೆಸರುವಾಸಿ ಪ್ರವಾಸಿತಾಣಗಳಿರುವ ಮಡಿಕೇರಿ ನಗರವನ್ನು ಟ್ರಾಫಿಕ್ ಫ್ರೀ ಪ್ರವಾಸಿತಾಣವನ್ನಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕೆಂದು ಸಂತೋಷ್ ಅನ್ವೇಕರ್ ಮನವಿ ಮಾಡಿದ್ದಾರೆ.
ಮಡಿಕೇರಿ ಡಿ.24 NEWS DESK : ಬಾಲಗೋಕುಲ – ಮಡಿಕೇರಿ ಹಾಗೂ ಮುಳಿಯ ಪ್ರತಿಷ್ಠಾನದ ಸಹಯೋಗದೊಂದಿಗೆ ಡಿ.25 ರಂದು “ಬಾಲಸಂಗಮ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ಪ್ರಾರಂಭವಾಗಿ ಸಂಜೆ 5 ಗಂಟೆಯವರಗೆ ನಡೆಯಲಿದೆ. ಮುಳಿಯ ಜ್ಯುವೆಲ್ಸ್ ಸಭಾಂಗಣದಲ್ಲಿ ನಡೆಯಲಿರುವ ಈ ಬಾಲ ಸಂಗಮವು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಇದೊಂದು ವೇದಿಕೆಯಾಗಿದೆ. 6 ವಯಸ್ಸಿನಿಂದ 15 ವಯಸ್ಸಿನ ಒಳಗಿರುವ ಎಲ್ಲಾ ಮಕ್ಕಳು ಇದರಲ್ಲಿ ಭಾಗವಹಿಸಬಹುದು. ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವವರು ಈ ಮೊಬೈಲ್ ಸಂಖ್ಯೆಗಳನ್ನು: 97401 31805, 7348838758 ಸಂಪರ್ಕಿಸಬೇಕಾಗಿ ಕೋರಲಾಗಿದೆ.
ಮಡಿಕೇರಿ NEWS DESK ಡಿ.23 : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆ ನರಗದ ಹೋಟೇಲ್ ರಾಜ್ ಸಭಾಂಗಣದಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ರಾಜ್ಯ ಒಕ್ಕಲಿಗರ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಂಸ್ಥೆ, ವಿದ್ಯಾ ಸಂಸ್ಥೆ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಸಂಘದ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ.ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಳೆದ ಸಾಲಿನ ಕಾರ್ಯಚಟುವಟಿಕೆಗಳ ವರದಿಯನ್ನು ಕಾರ್ಯದರ್ಶಿ ಕುಶಾಲಪ್ಪ ವಾಚಿಸಿದರು. ಖಜಾಂಚಿ ಕೆ.ರಮೇಶ್ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಕೊಡಗು ಜಿಲ್ಲಾ ಒಕ್ಕಲಿಗ ಸಂಘದ ಗೌರವ ಸಲಹೆಗಾರ ವಿ.ಪಿ.ಸುರೇಶ್, ಸಂಘದ ನಿರ್ದೇಶಕರು, ಗೌರವ ಸಲಹೆಗಾರರು ಸದಸ್ಯರು ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು. ಧನ್ಯಶ್ರೀ ಪ್ರಾರ್ಥಿಸಿ, ಎಂ.ಧನAಜಯ ಸ್ವಾಗತಿಸಿ ನಿರೂಪಿಸಿದರು, ಶೀಲಾ ಪ್ರಕಾಶ್ ವಂದಿಸಿದರು. :: ಸನ್ಮಾನ :: ಸಭೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ,…
ಮಡಿಕೇರಿ ಡಿ.23 NEWS DESK : ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಸೋಮವಾರಪೇಟೆಯ ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. (32) ಎಂಬುವವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಇದೇ ಡಿ.21 ರಂದು ರಾತ್ರಿ ತಾವು ಚಲಾಯಿಸುತ್ತಿದ್ದ ಪಿಕ್ ಅಪ್ ವಾಹನ ಗರಗಂದೂರು ಬಳಿ ನಿಯಂತ್ರಣ ಕಳೆದುಕೊಂಡು ಮಗುಚಿಕೊಂಡ ಪರಿಣಾಮ ಈಶ್ವರ್ ಎನ್. ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ನಿಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಈಶ್ವರ ಅವರು ಗಂಭೀರ ಸ್ಥಿತಿಯಲ್ಲಿದ್ದ ವಿಚಾರವನ್ನು ವೈದ್ಯರು ಅವರ ಸಹೋದರಿ ಸೌಮ್ಯ ಬಳಿ ತಿಳಿಸಿದಾಗ ಸ್ವಯಂಪ್ರೇರಿತರಾಗಿ ಅಂಗಾಂಗ ದಾನದ ಕುರಿತು ಆಸಕ್ತಿ ತೋರಿದರು. ಕಸಿ ಸಂಯೋಜಕರಾದ ಅಕ್ಷತಾ ಶೆಟ್ಟಿ ಹಾಗೂ ನರಶಸ್ತ್ರ ಚಿಕಿತ್ಸಕರು ಸೇರಿದಂತೆ ವೈದ್ಯಕೀಯ ತಂಡ ಸಮಾಲೋಚನೆ ನಡೆಸಿತು. ನಂತರ ಸಹೋದರಿ ಸೌಮ್ಯ ಹಾಗೂ ಕುಟುಂಬ ವರ್ಗ ಈಶ್ವರ ಅವರ ಮೂಳೆಗಳನ್ನು…
ಕುಶಾಲನಗರ, ಡಿ.23 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ ( ರ್ಯಾಲಿ ) ಕ್ಕೆ ವರ್ಣರಂಜಿತ ತೆರೆಬಿದ್ದಿತು. ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ 600 ಮಕ್ಕಳು ಎರಡು ದಿನಗಳ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿವಿಧ ತರಬೇತಿ/ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹತ್ವವನ್ನು ಸಾರಿದರು. ಶಿಕ್ಷಕರು ತರಬೇತಿ ನಿರತ ವಿದ್ಯಾರ್ಥಿಗಳಿಗೆ ವಿವಿಧ ಅಭ್ಯಾಸಾತ್ಮಕ ತರಬೇತಿ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಸ್ಕೌಟ್, ಗೈಡ್ ಆಂದೋಲನದ ಉದ್ದೇಶವು ವಿದ್ಯಾರ್ಥಿಗಳು, ಯುವಕರಲ್ಲಿ ಉತ್ತಮ…
ಮಡಿಕೇರಿ ಡಿ.23 NEWS DESK : ಮಡಿಕೇರಿಯ ತನಲ್ ಆಶ್ರಮದ ಸಮಿತಿಯ ವಾರ್ಷಿಕ ಮಹಾ ಸಭೆಯು ಸಮಿತಿಯ ಅಧ್ಯಕ್ಷ ಮೊಹಮ್ಮದ್ ಮುಸ್ತಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ತನಲ್ ಕೇರಳ ಆಡಳಿತ ಮಂಡಳಿಯ ಸದಸ್ಯ ಆಲಿ ಮೊಹಮ್ಮದ್ ಮಾತನಾಡಿ, ನಿರಂತರವಾಗಿ ಸಹಕಾರ ನೀಡುತ್ತಿರುವ ಸಮಿತಿ ಸದಸ್ಯರು ಹಾಗೂ ದಾನಿಗಳನ್ನು ಸ್ಮರಿಸಿದರು. ಮುಂದಿನ 25-26ನೇ ಸಾಲಿಗೆ ಹೊಸ ಯೋಜನೆಗಳಿಂದ ಆಶ್ರಮವನ್ನು ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ದೇಶಾದ್ಯಂತ ತನಲ್ ನೆರವಿನಿಂದ ಸುಮಾರು ಮೂರು ಲಕ್ಷ ಜನರು ವಿವಿಧ ವಿಭಾಗಗಳ ಮೂಲಕ ಸಹಾಯ ಪಡೆಯುತ್ತಿದ್ದಾರೆ. ಸುಮಾರು 60 ಸಾವಿರ ಅರ್ಹ ಜನರಿಗೆ ಆಹಾರ ವಿತರಣೆ ಮಾಡಲಾಗುತ್ತಿದೆ. ಸೇವೆಗಾಗಿ ಮುಡಿಪಾಗಿರುವ ತನಲ್ ಸಂಸ್ಥಯ ಭಾಗವಾಗಿರವುದು ನಮಗೆ ಅಭಿಮಾನವಿದೆ ಎಂದು ಹೇಳಿದರು. ತನಲ್ ಆಶ್ರಮದಲ್ಲಿ ಮಹಿಳಾ ವಿಭಾಗದ ಸದಸ್ಯರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದು, ಅವರು ಪ್ರತಿ ದಿನದ ಹಾಲು, ಸಾಮಾಗ್ರಿಗಳು, ಸೌದೆ ವ್ಯವಸ್ಥೆ, ಕೋಕೋಡೊಮ ಹಾಗೂ ಅಲಂಕಾರ ಸಾಮಾಗ್ರಿಗಳನ್ನು ತಯಾರುಗೊಳಿಸುವ ಮೂಲಕ ಸಂಸ್ಥೆಯ…
ಮಡಿಕೇರಿ ಡಿ.23 NEWS DESK : ವಿಶ್ವಕ್ಕೇ ಮಾದರಿಯಾಗಿರುವ ಮಹಾನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಂಸತ್ ನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ಕೇಂದ್ರ ಸರಕಾರ ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಸಿಪಿಐ(ಎಂ) ಪಕ್ಷ ನೆಲ್ಲಿಹುದಿಕೇರಿ ಶಾಖೆ ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನೆಲ್ಲಿಹುದಿಕೇರಿಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ನೆಲ್ಲಿಹುದಿಕೇರಿ ಶಾಖಾ ಕಾರ್ಯದರ್ಶಿಯಾದ ಪಿ.ಆರ್.ಭರತ್ ಮಾತನಾಡಿ ಡಾ.ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದರು. ನೊಂದವರ ಧ್ವನಿಯಾಗಿ ಸಾಮಾಜಿಕ ನ್ಯಾಯ ಒದಗಿಸಿದ ಡಾ.ಅಂಬೇಡ್ಕರ್ ಅವರನ್ನು ಕಡೆಗಣಿಸಿರುವ ಅಮಿತ್ ಶಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ತಪ್ಪಿದಲ್ಲಿ ಸರಕಾರವೇ ಅವರನ್ನು ವಜಾಗೊಳಿಸಬೇಕು…






