ಕುಶಾಲನಗರ, ಡಿ.23 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ ( ರ್ಯಾಲಿ ) ಕ್ಕೆ ವರ್ಣರಂಜಿತ ತೆರೆಬಿದ್ದಿತು. ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ 600 ಮಕ್ಕಳು ಎರಡು ದಿನಗಳ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿವಿಧ ತರಬೇತಿ/ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹತ್ವವನ್ನು ಸಾರಿದರು. ಶಿಕ್ಷಕರು ತರಬೇತಿ ನಿರತ ವಿದ್ಯಾರ್ಥಿಗಳಿಗೆ ವಿವಿಧ ಅಭ್ಯಾಸಾತ್ಮಕ ತರಬೇತಿ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಸ್ಕೌಟ್, ಗೈಡ್ ಆಂದೋಲನದ ಉದ್ದೇಶವು ವಿದ್ಯಾರ್ಥಿಗಳು, ಯುವಕರಲ್ಲಿ ಉತ್ತಮ…
ಲೇಖಕ: admin
ಮಡಿಕೇರಿ ಡಿ.23 NEWS DESK : ಮಡಿಕೇರಿಯ ತನಲ್ ಆಶ್ರಮದ ಸಮಿತಿಯ ವಾರ್ಷಿಕ ಮಹಾ ಸಭೆಯು ಸಮಿತಿಯ ಅಧ್ಯಕ್ಷ ಮೊಹಮ್ಮದ್ ಮುಸ್ತಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ತನಲ್ ಕೇರಳ ಆಡಳಿತ ಮಂಡಳಿಯ ಸದಸ್ಯ ಆಲಿ ಮೊಹಮ್ಮದ್ ಮಾತನಾಡಿ, ನಿರಂತರವಾಗಿ ಸಹಕಾರ ನೀಡುತ್ತಿರುವ ಸಮಿತಿ ಸದಸ್ಯರು ಹಾಗೂ ದಾನಿಗಳನ್ನು ಸ್ಮರಿಸಿದರು. ಮುಂದಿನ 25-26ನೇ ಸಾಲಿಗೆ ಹೊಸ ಯೋಜನೆಗಳಿಂದ ಆಶ್ರಮವನ್ನು ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ದೇಶಾದ್ಯಂತ ತನಲ್ ನೆರವಿನಿಂದ ಸುಮಾರು ಮೂರು ಲಕ್ಷ ಜನರು ವಿವಿಧ ವಿಭಾಗಗಳ ಮೂಲಕ ಸಹಾಯ ಪಡೆಯುತ್ತಿದ್ದಾರೆ. ಸುಮಾರು 60 ಸಾವಿರ ಅರ್ಹ ಜನರಿಗೆ ಆಹಾರ ವಿತರಣೆ ಮಾಡಲಾಗುತ್ತಿದೆ. ಸೇವೆಗಾಗಿ ಮುಡಿಪಾಗಿರುವ ತನಲ್ ಸಂಸ್ಥಯ ಭಾಗವಾಗಿರವುದು ನಮಗೆ ಅಭಿಮಾನವಿದೆ ಎಂದು ಹೇಳಿದರು. ತನಲ್ ಆಶ್ರಮದಲ್ಲಿ ಮಹಿಳಾ ವಿಭಾಗದ ಸದಸ್ಯರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದು, ಅವರು ಪ್ರತಿ ದಿನದ ಹಾಲು, ಸಾಮಾಗ್ರಿಗಳು, ಸೌದೆ ವ್ಯವಸ್ಥೆ, ಕೋಕೋಡೊಮ ಹಾಗೂ ಅಲಂಕಾರ ಸಾಮಾಗ್ರಿಗಳನ್ನು ತಯಾರುಗೊಳಿಸುವ ಮೂಲಕ ಸಂಸ್ಥೆಯ…
ಮಡಿಕೇರಿ ಡಿ.23 NEWS DESK : ವಿಶ್ವಕ್ಕೇ ಮಾದರಿಯಾಗಿರುವ ಮಹಾನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಂಸತ್ ನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ಕೇಂದ್ರ ಸರಕಾರ ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಸಿಪಿಐ(ಎಂ) ಪಕ್ಷ ನೆಲ್ಲಿಹುದಿಕೇರಿ ಶಾಖೆ ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನೆಲ್ಲಿಹುದಿಕೇರಿಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ನೆಲ್ಲಿಹುದಿಕೇರಿ ಶಾಖಾ ಕಾರ್ಯದರ್ಶಿಯಾದ ಪಿ.ಆರ್.ಭರತ್ ಮಾತನಾಡಿ ಡಾ.ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದರು. ನೊಂದವರ ಧ್ವನಿಯಾಗಿ ಸಾಮಾಜಿಕ ನ್ಯಾಯ ಒದಗಿಸಿದ ಡಾ.ಅಂಬೇಡ್ಕರ್ ಅವರನ್ನು ಕಡೆಗಣಿಸಿರುವ ಅಮಿತ್ ಶಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ತಪ್ಪಿದಲ್ಲಿ ಸರಕಾರವೇ ಅವರನ್ನು ವಜಾಗೊಳಿಸಬೇಕು…
ಮಡಿಕೇರಿ ಡಿ.23 NEWS DESK : ಪ್ರತಿಷ್ಠಿತ ಮ್ಯಾನ್ಸ್ ಕಾಂಪೌಂಡ್ ಕ್ಲಬ್(ಎಂಸಿಸಿ) ವತಿಯಿಂದ ನೂತನ ಸಾಲಿನ ಜ.4 ಮತ್ತು 5ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಮೈದಾನದಲ್ಲಿ 5+2 ಆಟಗಾರರ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ಕ್ಲಬ್ ಅಧ್ಯಕ್ಷ ಎ.ಎಂ. ಕ್ರಿಸ್ಟೋಫರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ಮಟ್ಟದ ಈ ಪಂದ್ಯಾವಳಿಯಲ್ಲಿ ಮೊದಲು ನೋಂದಣಿ ಮಾಡಿಕೊಂಡ 32 ತಂಡಗಳ ಪಾಲ್ಗೊಳ್ಳುವಿಕೆಗೆ ಅವಕಾಶವನ್ನು ನೀಡಲಾಗುತ್ತದೆ. ಪ್ರತಿ ತಂಡದಲ್ಲಿ ಇಬ್ಬರು ಅತಿಥಿ ಆಟಗಾರರನ್ನು ಆಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಪಂದ್ಯಾವಳಿ ನಾಕ್ಔಟ್ ಮಾದರಿಯಲ್ಲಿ ನಡೆಯಲಿದೆ. ಅಂತಿಮ ಪಂದ್ಯ ಜ.5ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಪಂದ್ಯಾವಳಿಯಲ್ಲಿ ಜಿಲ್ಲೆಯ ಹೆಸರಾಂತ ತಂಡಗಳು ಪಾಲ್ಗೊಳ್ಳಲಿದ್ದು, ವಿಜೇತ ತಂಡಕ್ಕೆ 30 ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿ, ರನ್ನರ್ಸ್ ಅಪ್ ತಂಡಕ್ಕೆ 20 ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ. ಇದರೊಂದಿಗೆ ಉತ್ತಮ ಆಟಗಾರ, ಉತ್ತಮ ತಂಡ,…
ನಾಪೋಕ್ಲು ಡಿ.23 NEWS DESK : ಕಾಫಿ ಕೃಷಿಯ ನಡುವೆ ವೈವಿಧ್ಯಮಯ ಹಣ್ಣಿನ ಗಿಡಗಳನ್ನು ಬೆಳೆಸುವುದರ ಮೂಲಕ ಕೃಷಿಕರು ಆರ್ಥಿಕವಾಗಿ ಸಬಲರಾಗಬಹುದು ಎಂದು ಚೆಟ್ಟಳ್ಳಿಯ ಹಣ್ಣಿನ ತಳಿಗಳ ವಿಜ್ಞಾನಿ ಮುರಳೀಧರ್ ಹೇಳಿದರು. ಎಲ್.ಡಿ.ಸಿ ಕಂಪನಿ ಕುಶಾಲನಗರ ಮತ್ತು ಜಯ ಕಾಫಿ ನೆಲಜಿ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಕಾಫಿಯಲ್ಲಿ ಉತ್ತಮ ಕೃಷಿ ಪದ್ಧತಿಗಳು ಮತ್ತು ಹಣ್ಣಿನ ಬೆಳೆಗಳ ವೈವಿಧ್ಯಕರಣ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಾಗತಿಕವಾಗಿ ಕಾಫಿಗೆ ಅಧಿಕ ಬೇಡಿಕೆ ಇದೆ. ಅದರಲ್ಲೂ ಕೊಡಗಿನ ಕಾಫಿ ಉತ್ಕೃಷ್ಟವಾದದ್ದು, ಕಾಫಿ ತೋಟದ ಒಳಗಡೆ ಹಣ್ಣಿನ ತಳಿಗಳನ್ನು ಬೆಳೆಸುವುದರಿಂದ ಕೃಷಿಕರು ಆರ್ಥಿಕವಾಗಿ ಸಬಲರಾಗಬಹುದು. ಬೆಣ್ಣೆ ಹಣ್ಣು, ರಾಂಬುಟನ್, ಲಿಚ್ಚಿ, ಮ್ಯಾಂಗೋ ಸ್ಟೀನ್, ಕಿತ್ತಳೆ ಮುಂತಾದ ವೈವಿಧ್ಯಮಯ ತಳಿಗಳು ಇಲ್ಲಿನ ಹವಾಮಾನಕ್ಕೆ ಸೂಕ್ತವಾಗಿವೆ. ಉತ್ತಮ ಮಾರುಕಟ್ಟೆಯೂ ಹಣ್ಣಿನ ಬೆಳೆಗಳಿಗೆ ಲಭಿಸುತ್ತಿದೆ. ಹಣ್ಣಿನ ಗಿಡಗಳನ್ನು ಬೆಳೆಸುವುದರ ಮೂಲಕ ಕೃಷಿಕರು ವೈವಿಧ್ಯತೆಯನ್ನು ಕಾಪಾಡಿಕೊಳ್ಳಬಹುದು ಎಂದರು. ಹಣ್ಣಿನ ಗಿಡಗಳ ಬೇಸಾಯ ಹಾಗೂ ಗಿಡಗಳ ಪೋಷಣೆ, ಗಿಡಗಳಿಗೆ…
ನಾಪೋಕ್ಲು ಡಿ.23 NEWS DESK : ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನೆರವಂಡ ಸುನಿಲ್ ದೇವಯ್ಯ ಹೇಳಿದರು. ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಎಂದರು. ಕ್ರೀಡಾಕೂಟದಲ್ಲಿ ಸಿಂಧು ತಂಡ ಸಮಗ್ರ ಪಾರಿತೋಷಕವನ್ನು ಪಡೆದುಕೊಂಡರೆ, ದ್ವಿತೀಯ ಸ್ಥಾನವನ್ನು ಕೃಷ್ಣ ತಂಡದವರು ಪಡೆದುಕೊಂಡರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಪ್ರೊ.ಕಲ್ಯಾಟಂಡ ಪೂಣಚ್ಚ, ಅಪ್ಪಾರಂಡ ಅಪ್ಪಯ್ಯ, ಬಿದ್ದಾಟಂಡ ಮುದ್ದಯ್ಯ, ಕೊಂಬಂಡ ಗಣೇಶ, ನಾಯಕಂಡ ದೀಪಕ್ ಚಂಗಪ್ಪ, ಕಲಿಯಂಡ ಕೌಶಿಕ್ ಕುಶಾಲಪ್ಪ, ಪ್ರಾಂಶುಪಾಲರಾದ ಬಿ.ಎಂ.ಶಾರದಾ ಅಪ್ಪಣ್ಣ ಉಪಸ್ಥಿತರಿದ್ದರು. ಪರಿಧಿ ಪೊನ್ನಮ್ಮ ಪ್ರಾರ್ಥಿಸಿದರು. ಬಿ.ಎಂ.ಶಾರದ ಸ್ವಾಗತಿಸಿದರು, ಶಿಕ್ಷಕರಾದ ಎಂ.ಡಿ.ಕಾಳಯ್ಯ ಮತ್ತು ಎ.ಟಿ.ಭಗವತಿ ಪ್ರಸಾದ್ ನಿರೂಪಿಸಿದರು. ಬಿ.ಪಿ.ಸೌಮ್ಯ ಅತಿಥಿಗಳ ಪರಿಚಯಿಸಿದರು. ಕೆ.ಕೆ.ಸರಿತಾ ಕ್ರೀಡಾ ವರದಿ ವಾಚಿಸಿದರು. ವಿ.ಎನ್.ರೇಷ್ಮಾ…
ಕುಶಾಲನಗರ ಡಿ.23 NEWS DESK : ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರೂಪಾಕ್ಷಪುರ ಗ್ರಾಮ ಅರಣ್ಯ ಸಮಿತಿಗೆ ನೂತನವಾಗಿ ಪದಾಧಿಕಾರಗಳನ್ನು ನೇಮಕ ಮಾಡಲಾಗಿದ್ದು, ಈ ಸಂಬಂಧ ಗ್ರಾಮದ ಹೆಬ್ಬಾಗಿಲಿನಲ್ಲಿ ಅರಣ್ಯ ಸಮಿತಿ ನಾಮಫಲಕವನ್ನು ಗಿರಿಜನ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ಕೆ.ಚಂದ್ರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಗಿರಿಜನ ನಿವಾಸಿಗಳೂ ಸೇರಿದಂತೆ ಇತರೇ ನಿವಾಸಿಗಳಿಗೆ ಸರ್ಕಾರದ ಸವಲತ್ತುಗಳು ಸಮರ್ಪಕವಾಗಿ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಗ್ರಾಮದ ನಿವಾಸಿಗಳು ಸಂಘಟಿತರಾಗಿ ಹೋರಾಟ ನಡೆಸುವ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಗ್ರಾಮ ಅರಣ್ಯ ಸಮಿತಿ ರಚಿಸಲಾಗಿದೆ ಎಂದರು. ಈ ಸಂದರ್ಭ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಹೆಚ್.ಕೆ.ಗಿರೀಶ, ಉಪಾಧ್ಯಕ್ಷೆ ಹೆಚ್.ಕೆ.ಗಿರಿಜ, ಕಾರ್ಯದರ್ಶಿ ಕೆ.ಟಿ.ಕೇಶವ, ಗ್ರಾಮದ ಯಜಮಾನ ಪಿ.ಹೆಚ್.ದೇವರಾಜು, ಸದಸ್ಯರುಗಳಾದ ಬಿ.ಟಿ.ಪೊನ್ನಪ್ಪ, ಸಿ.ಆರ್.ಪದ್ಮಾವತಿ, ಎನ್.ಶೀಬಾ, ಹೆಚ್.ಟಿ.ಜಯ, ಎಂ.ಎ.ಬಶೀರ್, ಕೆ.ಎಸ್.ಮಣಿ, ಕೆ.ಎಂ.ಅಬ್ಬಾಸ್, ಹೆಚ್.ಎಸ್.ಶಾರದಾ, ಕೆ.ಜಿ.ಮಂಜುನಾಥ ಸೇರಿದಂತೆ ಮತ್ತಿತರ ಪ್ರಮುಖರು ಹಾಜರಿದ್ದರು.
ಕಣಿವೆ ಡಿ.23 NEWS DESK : ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಬೇಸಾಯ ಪದ್ದತಿಯನ್ನು ಅಳವಡಿಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು. ಜೊತೆಗೆ ಯುವಜನತೆಯನ್ನು ಕೃಷಿಯತ್ತ ಆಕರ್ಷಿಸಬೇಕೆಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಚಿಕ್ಕನಾಯಕನ ಹೊಸಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಮಾಜಿ ಪ್ರಧಾನಿ ಚರಣ್ ಸಿಂಗ್ ಚೌಧರಿ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೇವಲ ಭತ್ತ, ಜೋಳದಂತಹ ಬೆಳೆಗಳಿಗೆ ಸೀಮಿತವಾಗದೇ ಸಮಗ್ರ ಬೆಳೆಗಳತ್ತ ಮುಂದಾಗಬೇಕು. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ರೈತರಿಗೆ ಅರಣ್ಯ ಇಲಾಖೆಯಿಂದ ಸಾಕಷ್ಟು ಪ್ರಯೋಜನಗಳಿದ್ದು, ಈ ಯೋಜನೆಗಳ ಬಗ್ಗೆ ರೈತರಿಗೆ ಅರಿವಿಲ್ಲ. ಅತ್ತ ಅರಣ್ಯ ಇಲಾಖೆಯೂ ರೈತರ ಮನೆ ಬಾಗಿಲತ್ತ ತೆರಳಿ ಯೋಜನೆಗಳ ಮಾಹಿತಿಗಳಾಗಲೀ, ಅನುಕೂಲಗಳನ್ನಾಗಲೀ ಒದಗಿಸುತ್ತಿಲ್ಲ ಎಂದು ಡಾ.ದೇವಗಿರಿ ವಿಷಾದಿಸಿದರು. ಕೃಷಿ ಅರಣ್ಯದಲ್ಲಿ ರೈತರಿಗೆ ಸಾಕಷ್ಟು ಪ್ರಯೋಜನಗಳಿದ್ದು, ಹೆಚ್ಚು ಲಾಭದಾಯಕವಾದ ಕೃಷಿಯಾಗಿದೆ. ಜೊತೆಗೆ ಭೂಮಿಯ ಫಲವತ್ತತೆಯೂ ಹೆಚ್ಚುತ್ತದೆ ಎಂದು ಅವರು ಮಾಹಿತಿ…
ಮಡಿಕೇರಿ ಡಿ.23 NEWS DESK : ಕೊಡವ ಮಕ್ಕಡ ಕೂಟದ 106ನೇ ಮತ್ತು ನಟ, ನಿರ್ದೇಶಕ, ನಿರ್ಮಾಪಕ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ 11ನೇ ಪುಸ್ತಕ “ಗಮ್ಯ” ಇಂದು ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪಂಡ ಸುನಿಲ್ ಸುಬ್ರಮಣಿ ಅವರು ಸಮಾಜದ ಸುಧಾರಣೆಯಲ್ಲಿ ಪುಸ್ತಕಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಪುಸ್ತಕಗಳು ಸಾಮಾಜಿಕ ಕಾಳಜಿಯೊಂದಿಗೆ ಉತ್ತಮ ಸಂದೇಶವನ್ನು ನೀಡಬೇಕು, ಬಿಡುಗಡೆಗೊಳ್ಳುವ ಪುಸ್ತಕಗಳಿಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಓದುಗರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು. ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಲು ಸಾಧ್ಯವಿಲ್ಲ, ಹುಟ್ಟಿದ ಮೇಲೆ ಜಾತಿಯ ಬಗ್ಗೆ ಸ್ವಾಭಿಮಾನ, ಅಭಿಮಾನವಿರಬೇಕು. ಹುಟ್ಟಿದ ಮಣ್ಣಿನ ಮೇಲೆ ಪ್ರೀತಿ ಇರಬೇಕು. ಕೊಡವರಾಗಿ ಹುಟ್ಟಿರುವ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಕೊಡಗಿನ ನೆಲ, ಜಲ, ಸಂಸ್ಕೃತಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಇವರ ಸಿನಿಮಾಗಳಲ್ಲಿ ಇದನ್ನು ಕಾಣಬಹುದಾಗಿದೆ. ಸಿನಿಮಾ ಕ್ಷೇತ್ರದೊಂದಿಗೆ ಸಾಹಿತ್ಯ ಕ್ಷೇತ್ರಕ್ಕೂ…
ನಾಪೋಕ್ಲು ಡಿ.23 NEWS DESK : ವಿದ್ಯಾರ್ಥಿ ಜೀವನದಲ್ಲಿ ಎಸ್ಎಸ್ಎಲ್ಸಿ ಪ್ರಮುಖ ಘಟ್ಟವಾಗಿದ್ದು, ಯಶಸ್ಸಿನ ಮೆಟ್ಟಿಲನ್ನು ಏರಲು ವಿದ್ಯಾರ್ಥಿಗಳು ಸತತವಾಗಿ ಶ್ರಮವಹಿಸಬೇಕು ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ ಅನಂತಶಯನ ಹೇಳಿದರು. ಕೆಪಿಎಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪರೀಕ್ಷಾ ಸಿದ್ಧತೆ ಪ್ರೇರಣಾ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದಲ್ಲಿ ಅಸಾಧ್ಯವಾದದ್ದು, ಏನೂ ಇಲ್ಲ. ಗುರು ನಿಮ್ಮ ಭವಿಷ್ಯವನ್ನು ರೂಪಿಸುತ್ತಾರೆ. ಅದಕ್ಕೆ ಗುರುವಿಗೆ ದೇವರ ಸ್ಥಾನವನ್ನು ಕಲ್ಪಿಸಲಾಗಿದೆ ಎಂದರು. ಭವಿಷ್ಯವನ್ನು ರೂಪಿಸಲು ಅಧಿಕ ತಯಾರಿ ನಡೆಸಬೇಕಾಗುತ್ತದೆ. ಉತ್ತಮ ಶಿಕ್ಷಣ ಪಡೆಯುವುದರ ಮೂಲಕ ಸಮಾಜವನ್ನು ಬೆಳೆಸುವ, ಕಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬೆಳೆಯಬೇಕು ಎಂದ ಅವರು ತಯಾರಿಗೆ ಸಮಯ ವ್ಯರ್ಥ ಮಾಡದೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಕೂಡಿಗೆ ಡಯಟ್ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಮಾತನಾಡಿ, ಬದಲಾದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಸ್ನೇಹಿತರನ್ನಾಗಿ ಶಿಕ್ಷಣ ಇಲಾಖೆ ನೋಡುತ್ತಿದೆ. ಈಗಿನ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಮತ್ತು ಸೌಲಭ್ಯವಿದೆ. ಪರೀಕ್ಷೆ ಎಂದರೆ ಭಯ ಬೇಡ…






