ಮಡಿಕೇರಿ ಜ.6 NEWS DESK : ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆಗಳನ್ನು ಒಳಗೊಂಡ ಸಚಿವ ಸತೀಶ್ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಪ್ರಾರಂಭವಾಗಿರುವ ಮಾನವ ಬಂಧುತ್ವ ವೇದಿಕೆಯು ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಫೆ.2 ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಮನವಿ ಮಾಡಿದರು. ನಗರದ ಸುದರ್ಶನ ಅಥಿತಿ ಗೃಹದಲ್ಲಿ ಕಾರ್ಯಕ್ರಮದ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಮಾತನಾಡಿದರು. ಸಭೆಯಲ್ಲಿ ರಾಜ್ಯ ಮಹಿಳಾ ಒಕ್ಕೂಟದ ಸಂಚಾಲಕಿ ಡಾ.ಲೀಲಾ ಸಂಪಿಗೆ, ಮಂಗಳೂರು ವಿಭಾಗೀಯ ಸಂಚಾಲಕ ಕೆ.ಎಸ್.ಸತೀಶ್ ಕುಮಾರ್, ರಾಜ್ಯ ಸಮಿತಿ ಸದಸ್ಯ ರಮನಾಥ್, ಜಿಲ್ಲಾ ಮಹಿಳಾ ಸಮಿತಿಯ ಸಂಚಾಲಕಿ ಡಾ.ಹೆಚ್.ಎಂ.ಕಾವೇರಿ, ಸದಸ್ಯರಾದ ನೆರವಂಡ ಉಮೇಶ್, ಸಾಮಾಜಿಕ ಹೋರಾಟಗಾರ ಟಿ.ಪಿ.ರಮೇಶ್ ಮಾತನಾಡಿ, ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಪಡೆದುಕೊಂಡು ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಂದ ತಲಾ ಎರಡು ಬಸ್ಸುಗಳಂತೆ ಚಳುವಳಿಗಾರರು, ಸಂವಿಧಾನವನ್ನು ಗೌರವಿಸುವ ಮತ್ತು ಉಳಿಸುವ ಮಹತ್ವಕಾಂಕ್ಷೆ ಹೊಂದಿರುವ…
ಲೇಖಕ: admin
ಕುಶಾಲನಗರ ಜ.6 NEWS DESK : ಜೀವಪರವಾದ ಹೋರಾಟಗಳ ಸಾಹಿತ್ಯ ಕೃಷಿ ಮಾಡುವ ಮೂಲಕ ಜನಸಾಮಾನ್ಯರ ಗಟ್ಟಿಧ್ವನಿಯಾಗಿದ್ದ ಸಾಹಿತಿ ನಾ.ಡಿಸೋಜಾ ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಕೊಡಗಿನ ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಹೇಳಿದರು. ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಕುಶಾಲನಗರದ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು, ನಾ.ಡಿಸೋಜಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, 60 ರ ದಶಕದಲ್ಲಿ ಪಾಟೀಲ್ ಪುಟ್ಟಪ್ಪ ಅವರ ಪ್ರಪಂಚ ಪತ್ರಿಕೆಯಲ್ಲಿ ನಿರಂತರವಾಗಿ ನಾ.ಡಿಸೋಜಾ ಅವರು ಬರೆಯುತ್ತಿದ್ದ ಲೇಖನಗಳಿಗಾಗಿ ಓದುಗರು ಕಾತರದಿಂದ ಕಾಯುತ್ತಿದ್ದರು. ಮಲೆನಾಡಿನ ಪ್ರಕೃತಿ ರಮಣೀಯ ಹಸಿರು ಹೊದಿಕೆಗೆ ಘಾಸಿಯಾಗದಂತೆ ಸದಾ ಕಾಲ ಕಾವಲುಗಾರನಂತಿದ್ದು ಪರಿಸರ ಸಂರಕ್ಷಕರಾಗಿದ್ದರು. ಕವಿ, ಸಾಹಿತಿ, ಕಥೆಗಾರ, ಕಾದಂಬರಿಕಾರ ಹೀಗೆ ಸಾಹಿತ್ಯದ ಹಲವು ಆಯಾಮಗಳನ್ನು ತನ್ನಲ್ಲಿ ಅವ್ಯಕ್ತಗೊಳಿಸಿದ್ದ ನಾ.ಡಿಸೋಜ ಶರಾವತಿ ಹಿನ್ನೀರಿನಿಂದಾಗಿ ಜನ ಅನುಭವಿಸುತ್ತಿದ್ದ ಸಂಕಷ್ಟಗಳನ್ನು ತಮ್ಮ ಲೇಖನಿಯ ಮೂಲಕವೇ ಪ್ರತಿರೋಧಿಸುತ್ತಾ ಆಳುವ ಸರ್ಕಾರಗಳಿಗೆ ಎಚ್ಚರಿಕೆಯ ಘಂಟೆಯಾಗಿದ್ದರು ಎಂದು ಬಾಚರಣಿ…
ಮಡಿಕೇರಿ ಜ.6 NEWS DESK : ಕುಶಾಲನಗರದ ಸಮೀಪದ ಬೈಲುಕುಪ್ಪೆ ಟಿಬೆಟಿಯನ್ ನಿರಾಶ್ರಿತರಕ್ಕೆ ಶಿಬಿರಕ್ಕೆ ಟೆಬೆಟಿಯನ್ ಧಾರ್ಮಿಕ ಗುರು ಮತ್ತು ನೊಬೆಲ್ ಪ್ರಶಸ್ತಿ ವಿಜೇತ 14ನೇ ದಲೈಲಾಮ ಭೇಟಿ ನೀಡಿದರು. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬೈಲುಕಪ್ಪೆಗೆ ಆಗಮಿಸಿದ ದಲೈದಾಮ ಅವರನ್ನು ಮೈಸೂರು ಜಿಲ್ಲಾಡಳಿತ, ಶಿಬಿರದ ಪ್ರತಿನಿಧಿಗಳು ಹಾಗೂ ಅವರ ಅನುಯಾಯಿಗಳು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಟಿಬೆಟಿಯನ್ನರ ನಡೆದಾಡುವ ದೈವ ಎಂದೇ ಬಿಂಬಿತವಾಗಿರುವ ಸುಮಾರು 89ರ ವಯೋಮಾನದ ಟಿಬೆಟಿಯನ್ ಪರಮೊಚ್ಚ ಗುರುಗಳಾದ ದಲೈಲಾಮ ವಿಶ್ವಾಂತಿಗಾಗಿ ಬೈಲುಕುಪ್ಪೆಗೆ ಆಗಮಿಸಿದ್ದು, ಬೈಲುಕುಪ್ಪೆ ಶಿಬಿರದ ತಶಿಲೊಂಪೊ ಬೌದ್ಧ ಮಂದಿರದಲ್ಲಿ ಮುಂದಿನ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಶಿಬಿರದ ಪ್ರತಿನಿಧಿ ಜಿಗ್ಮೆ ಸುಲ್ಟರೀಂ ಮಾಹಿತಿ ನೀಡಿದರು. ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಮಡಿಕೇರಿ ಜ.6 NEWS DESK : ನಿವೃತ್ತ ಡೆಪ್ಯುಟಿ ರೇಂಜ್ ಫಾರೆಸ್ಟರ್, ಕೊಡವ ಜಾನಪದ ಪದ್ಧತಿ ಪರಂಪರೆಗಳ ಕುರಿತು ಮೂರು ಪುಸ್ತಕ ಬರೆದಿರುವ, ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಡಿಕೇರಿಯ ಪುಟಾಣಿ ನಗರ ನಿವಾಸಿ ಪಂಜೇರಿರ ಬೆಳ್ಯಪ್ಪ ಜ.5 ರಂದು ಸಂಜೆ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಇಂದು (ಜ.6) ಮಡಿಕೇರಿಯ ಕೊಡವ ಸಮಾಜದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರು ಪತ್ನಿ ಕಾಮವ್ವ, ಪುತ್ರರಾದ ಟಿವಿ9ನ ಜಗದೀಶ್ ಬೆಳ್ಯಪ್ಪ, ರಾಜೇಶ್, ಪುತ್ರಿ ಜರಿತಾ ಅವರನ್ನು ಅಗಲಿದ್ದಾರೆ.
ಮಡಿಕೇರಿ ಜ.6 NEWS DESK : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನೂತನ ಕಟ್ಟಡದ ವಿನ್ಯಾಸದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಾಸಕರು, ಸಹಕಾರಿ ಸಂಘವು ಮತ್ತಷ್ಟು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಗುಹ್ಯ ಅಗಸ್ತ್ಯೇಶ್ವರ ಸಹಕಾರಿ ಸಂಘದ ಬೆಳವಣಿಗೆ ಹಾಗೂ ಏಳಿಗೆಗೆ ಶ್ರಮಿಸುತ್ತಿರುವ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳನ್ನು ಶ್ಲಾಘಿಸಿ, ಸಂಘದ ಸದಸ್ಯರ ಏಳಿಗೆಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಿ, ಕಾಳಜಿ ವಹಿಸುವಂತೆ ಕರೆ ನೀಡಿದರು. ಈ ಸಂದರ್ಭ ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಸಹಕಾರಿ ಸಂಘದ ಸಿಬ್ಬಂದಿ ವರ್ಗ, ಸಹಕಾರಿ ಸಂಘದ ಸದಸ್ಯರುಗಳು, ಗ್ರಾಮದ ಪ್ರಮುಖರು ಮತ್ತಿತರರು ಹಾಜರಿದ್ದರು.
ಬೆಂಗಳೂರು NEWS DESK ಜ.6 : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ::: ನಕ್ಸಲರು ಶರಣಾಗುವ ಸಾಧ್ಯತೆಯಿದೆ…
ಬೆಂಗಳೂರು ಜ.6 NEWS DESK : ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಸಾರಿಗೆ ನೌಕರರು ತಮ್ಮ ದುಡಿಮೆಯ ಮೂಲಕ ಸಂಸ್ಥೆಯ ಮತ್ತು ನಿಗಮದ ಆದಾಯ ಹೆಚ್ಚಿಸುತ್ತಿದ್ದಾರೆ. ಇವರ ಆರೋಗ್ಯ ಸರ್ಕಾರದ ಮತ್ತು ಸಂಸ್ಥೆ ಹಾಗೂ ನಿಗಮದ ಜವಾಬ್ದಾರಿ ಆಗಿದೆ. ಈ ಕಾರಣಕ್ಕೇ ಖಾಸಗಿ ಆಸ್ಪತ್ರೆಗಳ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದ್ದೇವೆ ಎಂದರು. 275 ಖಾಸಗಿ ಆಸ್ಪತ್ರೆಗಳ ಜೊತೆಗೆ ಒಡಂಬಡಿಕೆ ಆಗಿದೆ. ಈ ಪ್ರಮಾಣ ಇನ್ನೂ ಹೆಚ್ಚಲಿದೆ. ಸಿಬ್ಬಂದಿ ಕರ್ತವ್ಯನಿರತ ಊರಿನಲ್ಲೇ ಚಿಕಿತ್ಸೆ ಪಡೆಯಬಹುದು. ನೌಕರರ ಕುಟುಂಬದವರು ಅವರು ನೆಲೆಸಿರುವ ಊರಿನಲ್ಲೇ ನಗದು ರಹಿತವಾಗಿ ಚಿಕಿತ್ಸೆ ಪಡೆಯಬಹುದಾದ ಅತ್ಯಂತ ಸುಲಲಿತ ಯೋಜನೆ ಇದಾಗಿದೆ. ನಮ್ಮ ನೌಕರರು ಮತ್ತು ಕುಟುಂಬದವರು ಇದರ…
ಮಡಿಕೇರಿ NEWS DESK ಜ.6 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ವಿರಾಜಪೇಟೆ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು. ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಘಟನೆ ಮತ್ತು ಭಾನುವಾರ ಆಡಳಿತ ಮಂಡಳಿ ನಡೆಸಿದ ತುರ್ತು ಸಭೆಯ ಕುರಿತು ಪ್ರಮುಖರು ವಿವರಿಸಿದರು. ಎಲ್ಲಾ ಗೊಂದಲಗಳಿಗೆ ಅತಿ ಶೀಘ್ರದಲ್ಲಿ ಪರಿಹಾರ ಸಿಗಬಹುದು ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ನಾಪೋಕ್ಲು ಜ.6 NEWS DESK : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ನಾವು ಪ್ರತಿಷ್ಠಾನ ಸಂಸ್ಥೆ ಸಹಯೋಗದಲ್ಲಿ “ಮಕ್ಕಳ ಸಂವಿಧಾನ ಕ್ಲಬ್” ಕುರಿತಂತೆ ಕೊಡಗು ಮತ್ತು ಮೈಸೂರು ಜಿಲ್ಲೆಯ ವಸತಿ ಶಾಲಾ ಸಮಾಜ ವಿಜ್ಞಾನ ಶಿಕ್ಷಕರಿಗೆ ಕಾರ್ಯಾಗಾರವನ್ನು ನೆಡೆಸಲಾಗಿದ್ದು,ಇದರ ಭಾಗವಾಗಿ ನಾಪೋಕ್ಲು ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ನಾವು ಪ್ರತಿಷ್ಠಾನ ಭೇಟಿ ನೀಡಿ ತರಗತಿಗಳ ಪರಿವೀಕ್ಷಣೆ ಮಾಡಿದರು. ಆರು ಮತ್ತು ಏಳನೇ ತರಗತಿ ಮಕ್ಕಳಿಗೆ ಮಕ್ಕಳ ಹಕ್ಕುಗಳ ಕುರಿತು ಮಕ್ಕಳಿಗೆ ಚಟುವಟಿಕೆಗಳ ಮೂಲಕ ಪ್ರಜಾಪ್ರಭುತ್ವತ್ಮಾಕ ತರಗತಿಗಳನ್ನು ಸಮಾಜ ವಿಜ್ಞಾನ ಶಿಕ್ಷಕ ಪಿ.ಎಲ್.ಗುಲ್ಶನ್ ನಡೆಸಿ ಮಾರ್ಗದರ್ಶನ ನೀಡಿದರು. ನಂತರ ನಾವು ಪ್ರತಿಷ್ಠಾನದ ಸುಮನ್ ಮ್ಯಾಥ್ಯೂ ಮಕ್ಕಳಿಗಿರುವ ಬದುಕುವ, ಅಭಿವೃದ್ಧಿ ಹೊಂದುವ, ರಕ್ಷಣೆಯ ಮತ್ತು ಭಾಗವಹಿಸುವ ಹಕ್ಕುಗಳ ಬಗ್ಗೆ ಹಾಗೂ ಮಕ್ಕಳಲ್ಲಿ ಆಲೋಚನೆ ಮೂಡುವಂತೆ ಮಾಡುಲು ಸಂವಾದ ನಡೆಯಸಿದರು. ಮಕ್ಕಳಿಗೆ ಮೂಲಭೂತ ಹಾಗೂ ವಿಶ್ವಸಂಸ್ಥೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ನಾವು ಸಂಸ್ಥೆಯ ಗೌತಮ್ ಕಿರಗಂದೂರು ಮತ್ತು ಕಾರ್ಯಕ್ರಮ ಸಂಯೋಜಕಿ ಬಿ.ಕೆ.ಕುಮಾರಿ…
ನಾಪೋಕ್ಲು ಜ.6 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನಾಪೋಕ್ಲು ಹಳೆ ತಾಲ್ಲೂಕು ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಅಂಗನವಾಡಿ ಕೇಂದ್ರದ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಸೇವೆಯಲ್ಲಿ ಘಟಕದ ಪ್ರಮುಖರಾದ ಬಾಳೆಯಡ ದಿವ್ಯ, ಶಂಕರ್, ಶರವಣ, ರವಿ, ಉಮಾಲಕ್ಷ್ಮಿ, ಚಂದ್ರಕಲಾ, ಶ್ಯಾಮಲಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಸಹಾಯಕಿ ಸರೋಜ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.






