ಲೇಖಕ: admin

ಸುಂಟಿಕೊಪ್ಪ ಡಿ.23 NEWS DESK : ಪೋಷಕರು ತಮ್ಮ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕೆಂದು ಸೋಮವಾರಪೇಟೆ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕರೆ ನೀಡಿದರು. ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಸಂಯಕ್ತ ಕಾಲೇಜಿನಲ್ಲಿ ನಡೆದ ಕ್ರೀಡಾ ದಿನಚಾರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸೋಮವಾರಪೇಟೆ, ಕುಶಾಲನಗರ ತಾಲ್ಲೂಕುಗಳಲ್ಲಿ ಮಡಿಕೇರಿ ಜನಪ್ರಿಯ ಶಾಸಕ ಡಾ.ಮಂತರ್‍ಗೌಡ ಅವರ ನಿರ್ದೇಶನ ಮತ್ತು ಉತ್ತೇಜನದ ಮೇರೆಗೆ ಆರು ಶ್ರೇಷ್ಠಗುಣ ಮಟ್ಟದ ವಾಲಿಬಾಲ್ ಮೈದಾನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ರೆ.ಪಾ.ಅವಿನಾಶ್ ಮಾತನಾಡಿ, ಸಂತೋಷವನ್ನು ಅಂಗಡಿಯಲ್ಲಿ ಖರೀದಿಸಲು ಸಾಧ್ಯವಿಲ್ಲ. ನಮ್ಮೊಳಗೆ ಉಳಿಸಿಕೊಳ್ಳಬೇಕಾದರೆ ನಾವು ದೈಹಿಕವಾಗಿ ಸಧೃಢರಾಗಿರಬೇಕು. ದೈಹಿಕವಾಗಿಸದೃಢರಾಗಿಬೇಕಾದರೆ ಕ್ರೀಡೆ ಅತ್ಯವಶ್ಯಕ ಎಂದರು. ಸಂತ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ರೇ.ಪಾ.ವಿಜಯಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ತಮ್ಮಿಂದ ಸಾಧಿಸಲಾಗದನ್ನು ಮಕ್ಕಳ ಹೇರÀಬೇಡಿ, ಮಕ್ಕಳು ಅವರ ಇಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೋತ್ಸಾಹಿಸಿ ಎಂದು ಕರೆ…

Read More

ಮಡಿಕೇರಿ ಡಿ.23 NEWS DESK : ಹಾತೂರು ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ನೂತನ ಕಟ್ಟಡದಲ್ಲಿ ಹಾತೂರು ಪಂಚಾಯಿತಿ ಯಶಸ್ಸು ಕಂಡು ಜನಸಾಮಾನ್ಯರ ಕುಂದು ಕೊರತೆಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾಗಲಿ ಎಂದು ಶುಭಹಾರೈಸಿದರು.

Read More

ಸುಂಟಿಕೊಪ್ಪ ಡಿ.23 NEWS DESK : ಸಂಘದ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯಬೇಕೆಂದರೆ ಸಂಘಕ್ಕೆ ಕಟ್ಟಡ ಮುಖ್ಯವಾಗಿದೆ. ಆದ್ದರಿಂದ ಸದಸ್ಯರುಗಳು ಸಂಘಕ್ಕೆ ಕಟ್ಟಡ ನಿರ್ಮಿಸುವ ದಿಸೆಯಲ್ಲಿ ಸಹಕರಿಸಬೇಕು ಎಂದು ಗೌಡ ಸಂಘ ಸುಂಟಿಕೊಪ್ಪ ನಾಡುಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಹೇಳಿದರು. ಗೌಡ ಸಂಘ ಸುಂಟಿಕೊಪ್ಪ ನಾಡು ಸಂಘದ 9ನೇ ವರ್ಷದ ವಾರ್ಷಿಕ ಮಹಾಸಭೆಯನ್ನು ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಂಘದಲ್ಲಿ 800 ಕ್ಕೂ ಮಿಕ್ಕಿ ಮಂದಿ ಸದಸ್ಯತ್ವನ್ನು ಹೊಂದಿಕೊಂಡಿದ್ದಾರೆ. ಸಂಘದ ಪದಾಧಿಕಾರಿಗಳು ಕಳೆದ 8 ವರ್ಷಗಳಿಂದಲ್ಲೂ ಸಮಾಜ ಕಟ್ಟಡ ನಿರ್ಮಿಸುವ ಇರಾದೆಯನ್ನು ಇರಿಸಿಕೊಂಡಿದ್ದಾರೆ ಅದನ್ನು ಸಾಕಾರಗೊಳಿಸುವಲ್ಲಿ ಇಮ್ಮಡಿಗೊಳ್ಳುತ್ತಿದ್ದು, ಸಂಘದ ಸರ್ವ ಸದಸ್ಯರು ಮತ್ತುಷ್ಟು ಸಹಕಾರವನ್ನು ನೀಡಿದಲ್ಲಿ ಮುಂದಿನ ದಿನಗಳಲ್ಲಿ ಕಟ್ಟಡಕ್ಕೆ ಭೂ ಖರೀದಿಗೊಳಿಸುವ ಮೂಲಕ ಅಲ್ಲಿಯೇ ಉತ್ತಮ ಕಾರ್ಯಕ್ರಮಗಳನ್ನು ನಿಯೋಜಿಸಲಾಗುವುದೆಂದು ಅಧ್ಯಕ್ಷ ಯಂಕನ ಉಲ್ಲಾಸ್ ಹೇಳಿದರು. ಸಂಘದ ನೂತನ ಅಧ್ಯಕ್ಷ ಕುಂಜಿಲನ. ಎಸ್.ಮಂಜುನಾಥ್ ಮಾತನಾಡಿ ಸಂಘವು ಯಾವುದೇ…

Read More

ಸುಂಟಿಕೊಪ್ಪ ಡಿ.23 NEWS DESK : ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ವ್ಯಾಯಾಮ, ಕ್ರೀಡೆ ಮುಖ್ಯ ಎಂದು ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟ ಸಮಾರಂಭದಲ್ಲಿ ಬೆಂಗಳೂರಿನ ಬಿ.ಬಿ.ಎಂ.ಪಿ.ಹಿರಿಯ ಆರೋಗ್ಯ ಪರಿವೀಕ್ಷಕರಾದ ಕೆ.ಬಿ.ಸಂಧ್ಯಾ ಹೇಳಿದರು. ಸುಂಟಿಕೊಪ್ಪನಾಡು ಪ್ರೌಢಶಾಲೆಯ ಶಾಲಾ ವಾರ್ಷಿಕ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಶಾಲೆಯು ನನ್ನ ವೈಯಕ್ತಿಕ ಬೆಳೆವಣಿಗೆಗೆ ತನ್ನದೆಯಾದ ಕೊಡುಗೆಯನ್ನು ನೀಡಿದೆ ಎಂದಿಗೂ ಈ ಶಾಲೆಯ ಋಣವನ್ನು ಮರೆಯಲು ಸಾಧ್ಯವಿಲ್ಲ, ನಾನು ಹಿರಿಯ ಸರಕಾರಿ ಅಧಿಕಾರಿಯಾಗಿದ್ದರೂ ಕೂಡ ಅಲ್ಲಿ ನನ್ನ ವೃತ್ತಿಪರತೆಯನ್ನು ಸಾಭಿತುಪಡಿಸಲು ಆತ್ಮಸ್ಥೈರ್ಯ, ಜ್ಞಾನ, ಸಾಮಥ್ರ್ಯ ಮುಖ್ಯ. ಅದಕ್ಕೆ ಈ ಶಾಲೆಯ ಶಿಕ್ಷಕರುಗಳು ಕಾರಣಿಭೂತರೆಂದು ಭಾವುಕರಾಗಿ ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕುಂಜಿಲನ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕ.ರಾ.ಪ್ರಾ.ಶಾ.ಶಿ.ಸಂಘದ ಉಪಾಧ್ಯಕ್ಷ ಹಂಚೆಟ್ಟಿರ ಕರುಂಬಯ್ಯ, ಶಾಲೆಯ ಹಳೆಯ ವಿದ್ಯಾರ್ಥಿ, ನಿವೃತ್ತ ಉಪ ಅರಣ್ಯಾ…

Read More

ಸುಂಟಿಕೊಪ್ಪ ಡಿ.23 NEWS DESK : ವಿದ್ಯಾರ್ಥಿಗಳಿಗೆ ಮುಂದಿನ ಗುರಿ, ಏಕಾಗ್ರತೆ ಸಾಧಿಸುವ ಛಲ, ವಿದ್ಯಾರ್ಜನೆಯಲ್ಲಿ ಪರಿಶ್ರಮ ಮುಖ್ಯವಾಗಿದೆ. ಪೋಷಕರು ಮಕ್ಕಳ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂದು ದಾನಿಗಳೂ ಹಾಗೂ ಬೆಂಗಳೂರಿನ ಪುರವಂಕರ ಕಾರ್ಯನಿರ್ವಾಹಕ ಉಪಾಧ್ಯಕ್ಷ ಹರಪಳ್ಳಿ ರವೀಂದ್ರ ಕರೆ ನೀಡಿದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ ಶಾಲೆಯ 59ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವಿದೆ. ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳೂ ಮುಂದಿದ್ದಾರೆ. ಆದರೆ ಶಾಲಾ ಮಕ್ಕಳು ಚಲನಚಿತ್ರ ನಟ, ನಟಿಯರನ್ನು ವೈಭವಿಕರೀಸುವ ಮನೋಭಾವ ತ್ಯಜಿಸಬೇಕು. ಸಮಾಜ ಪರಿವರ್ತಕರಾದ ಸ್ವಾಮಿವಿ ವೇಕಾನಂದ, ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರಭೋಸ್, ಮಾಜಿ ರಾಷ್ಟ್ರಪತಿ ಅಬ್ಧುಲ್ ಕಲಾಂ ಅವರನ್ನು ಆದರ್ಶವಾಗಿ ತೆಗೆದುಕೊಂಡರೆ ಮುಂದಿನ ಭವಿಷ್ಯದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದು ಅಭಿಮತ ವ್ಯಕ್ತಪಡಿಸಿದರು. ಅಭಿವೃದ್ಧಿ ಪಥದತ್ತ ಸಾಗಿದ ರಷ್ಯಾ, ಚೀನಾ, ಜಪಾನ್ ರಾಷ್ಟ್ರದ ಅಧಿಕಾರ ಚುಕ್ಕಾಣಿ ಹಿಡಿದ ನಾಯಕರುಗಳಿಗೆ ಇಂಗ್ಲೀಷ್ ಬರದಿದ್ದರೂ ಅವರು ದೇಶವನ್ನು ಅಭಿವೃದ್ಧಿ ಮುಂಚೂಣಿಗೆ ತಂದಿದ್ದನ್ನು…

Read More

ವಿರಾಜಪೇಟೆ ಡಿ.23 NEWS DESK : ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಅತೀ ಮುಖ್ಯವಾಗಿದ್ದು, ಶಿಕ್ಷಕರ ಅಮೂಲ್ಯ ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಬೇಕು ಎಂದು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಚೌರಿರ ಜಗತ್ ತಿಮ್ಮಯ್ಯ ಅಭಿಪ್ರಾಯಪಟ್ಟರು. ಮೂರ್ನಾಡು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಯಶಸ್ಸಿಗೆ ಶಿಕ್ಷಕರ ಮಾರ್ಗದರ್ಶನ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿ ಜೀವನ ಮಾತ್ರವಲ್ಲದೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಾಂತುರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ,  ಜೀವನಕ್ಕೆ ಬೇಕಾದ ಉತ್ತಮ ಮೌಲ್ಯ ಹಾಗೂ ಸಂಸ್ಕಾರಕ್ಕೆ ಅಡಿಪಾಯವಾಗುವುದೇ ಪ್ರೌಢ ಶಿಕ್ಷಣ. ಇಲ್ಲಿ ಕಲಿತ ಸತ್ ಚಿಂತನೆಗಳು ಖಂಡಿತವಾಗಿಯೂ ಮುಂದೊಂದು ದಿವಸ ಉತ್ತಮ ಫಲವನ್ನು ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭ ಕಾಂತುರು-ಮೂರ್ನಾಡು ಗ್ರಾ.ಪಂ ಉಪಾಧ್ಯಕ್ಷೆ  ಬಿ.ಎಸ್.ರೇಖಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಎ.ಎನ್.ರಶ್ಮಿ , ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಪಿ.ಎಂ.ವೇಣು ಅಪ್ಪಣ್ಣ, ಖಜಾಂಚಿ ವಿ.ಎ.ಯತೀಶ್, ನಿರ್ದೇಶಕರಾದ…

Read More

ಮಡಿಕೇರಿ ಡಿ.23 NEWS DESK :  ಹಸಿವಿನ ಬೆಲೆ ಹಸಿದವರಿಗೆ ಗೊತ್ತು, ಬಡತನ ಅನುಭವಿಸಿದವನಿಗೆ ಗೊತ್ತು, ಬಡತನದ ನೋವು ಅವಮಾನ ಅನುಭವಿಸಿದವನಿಗೆ ಗೊತ್ತು ಅದರ ನೋವು. ಇದು ಮೂರು ಒಂದಕ್ಕೊಂದು ಸಂಬಂಧಿಗಳು. ಇವುಗಳು ಒಂದಾನೊಂದು ಬಿಟ್ಟಿರೋದು ಕಷ್ಟ. ಈ ಲೇಖನದಲ್ಲಿ ಹಸಿವಿನ ಬೆಲೆ ಹಸಿದವರಿಗೆ ಹೇಗೆ ಗೊತ್ತು ಎಂಬ ಬಗ್ಗೆ ಒಂದು ಪೂರ್ವವಲೋಕನ. ಇಂದಿನ ಯುವ ಪೀಳಿಗೆಗೆ ಅದರ ಅನುಭವ ಕಡಿಮೆ. ಅದರಿಂದ ಅವರಿಗೆ ಅನ್ನದ ಬೆಲೆ ಗೊತ್ತಿಲ್ಲ. ಅದು ಇರಲಿ ಇತೀಚಿನ ದಿನಗಳಲ್ಲಿ ಮಕ್ಕಳಿಗೆ ಆಹಾರ ಧಾನ್ಯಗಳನ್ನು ಎಲ್ಲಿ, ಹೇಗೆ ಬೆಳೆಯುವುದು ಎಂಬುದು ಅವರಿಗೆ ಗೊತ್ತೇ ಇಲ್ಲ. ಅದು ಅವರ ತಪ್ಪಲ್ಲ. ಪ್ರಸ್ತುತ ಜೀವನ ಶೈಲಿ ಹಾಗೂ ಆಧುನಿಕ ಶಿಕ್ಷಣ ವ್ಯವಸ್ಥೆ ಈ ರೀತಿಯಲ್ಲಿ ಇದೆ. ಈ ಬರಹದಲ್ಲಿ ನಾನು ಕೇಳಿದ, ನೋಡಿದ ಹಾಗೂ ಭಾಗಶಃ ಅನುಭವಿಸಿದ ಹಸಿದವರ ಬಡತನ, ಅವಮಾನ, ಅನುಭವಿಸಿದವರ ನೋವು ಹಂಚಿಕೊಳ್ಳುವ ಒಂದು ಸಣ್ಣ ಪ್ರಯತ್ನ. ಹಾಗೆ ಇಂದು ಸರ್ಕಾರದಿಂದ ಅನ್ನಭಾಗ್ಯ, ಮಕ್ಕಳಿಗೇ ಮಧ್ಯಾಹ್ನದ ಬಿಸಿಊಟ,…

Read More

ಮಡಿಕೇರಿ ಡಿ.23 NEWS DESK : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ”ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜನವರಿ, 08 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ…

Read More

ಮಡಿಕೇರಿ ಡಿ.23 NEWS DESK : ತಿತಿಮತಿ ಸಮೀಪದ ಭದ್ರಗೋಳದಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ ಹರೀಶ್ ಮತ್ತು ಸನತ್ ಅವರ ಮನೆಗೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಕುಟುಂಬಕ್ಕೆ ಆಧಾರವಾಗಿದ್ದ ಹರೀಶ್ ಮತ್ತು ಸನತ್ ಸಾವನ್ನಪ್ಪಿದ ವಿಚಾರ ತಿಳಿದ ಶಾಸಕರು, ಕುಟುಂಬಸ್ಥರಿಗೆ ರೂ 25,000 ನಗದು ನೀಡಿ ವಾಹನದ ಮಾಲೀಕ ಮತ್ತು ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಮೃತ ಹರೀಶ್ ಅವರ ಪತ್ನಿ ಜೀವಿತ ಅವರಿಗೆ ಉದ್ಯೋಗ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದರು. ಈ ಸಂದರ್ಭ ಮೃತ ಸನತ್ ಮತ್ತು ಹರೀಶ್ ಅವರ ತಂದೆ ನಾರಾಯಣ್, ತಾಯಿ ಶಾರದ, ಹರೀಶ್ ಪತ್ನಿ ಜೀವಿತ ಸೇರಿದಂತೆ ಕುಟುಂಬಸ್ಥರಿದ್ದರು.

Read More

ಮಡಿಕೇರಿ, ಡಿ.23 NEWS DESK : ಗ್ರಾಮೀಣ ಜನಪದ ಕ್ರೀಡೆಗಳು, ಹಳ್ಳಿಯ ಸೊಗಡು ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಜೀವಂತವಾಗಿ ಉಳಿಸಿ ಬೆಳಸುವ ಜತೆಗೆ ಮುಂದಿನ ತಲೆಮಾರಿಗೂ ತಿಳಿಸಿಕೊಡಬೇಕಾಗಿದೆ ಎಂದು ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ( ಗ್ರೇಡ್ – 1 ) ದ ಅಧ್ಯಕ್ಷರೂ ಆದ ಜನಪದ ಕ್ರೀಡೆಯ ಸಂಪನ್ಮೂಲ ವ್ಯಕ್ತಿ ಡಾ ಸದಾಶಿವಯ್ಯ ಎಸ್.ಪಲ್ಲೇದ್  ಹೇಳಿದರು. ಕೊಡಗು ಜಿಲ್ಲಾಮಟ್ಟದ‌ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ( ಖಚಿಟಟಥಿ ) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ‌ ಸ್ಕೌಟ್ಸ್, ಗೈಡ್ಸ್ ಮಕ್ಕಳ ಮೇಳ (ರ‍್ಯಾಲಿ)ದ  ಅಂಗವಾಗಿ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಕ್ರೀಡೆಗಳಲ್ಲಿ ಪ್ರತಿ ಆಟದಲ್ಲಿ ಮಾನವೀಯ ಮೌಲ್ಯವಿದೆ. ಇದರಿಂದ ಮಕ್ಕಳಲ್ಲಿ ಸಾಮಾಜಿಕ ಬೆಳೆಸಲು ಸಹಕಾರಿಯಾಗಿವೆ.…

Read More