ಲೇಖಕ: admin

ಸುಂಟಿಕೊಪ್ಪ ಡಿ.23 NEWS DESK : ವಿದ್ಯಾರ್ಥಿಗಳಿಗೆ ಮುಂದಿನ ಗುರಿ, ಏಕಾಗ್ರತೆ ಸಾಧಿಸುವ ಛಲ, ವಿದ್ಯಾರ್ಜನೆಯಲ್ಲಿ ಪರಿಶ್ರಮ ಮುಖ್ಯವಾಗಿದೆ. ಪೋಷಕರು ಮಕ್ಕಳ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂದು ದಾನಿಗಳೂ ಹಾಗೂ ಬೆಂಗಳೂರಿನ ಪುರವಂಕರ ಕಾರ್ಯನಿರ್ವಾಹಕ ಉಪಾಧ್ಯಕ್ಷ ಹರಪಳ್ಳಿ ರವೀಂದ್ರ ಕರೆ ನೀಡಿದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ ಶಾಲೆಯ 59ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವಿದೆ. ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳೂ ಮುಂದಿದ್ದಾರೆ. ಆದರೆ ಶಾಲಾ ಮಕ್ಕಳು ಚಲನಚಿತ್ರ ನಟ, ನಟಿಯರನ್ನು ವೈಭವಿಕರೀಸುವ ಮನೋಭಾವ ತ್ಯಜಿಸಬೇಕು. ಸಮಾಜ ಪರಿವರ್ತಕರಾದ ಸ್ವಾಮಿವಿ ವೇಕಾನಂದ, ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರಭೋಸ್, ಮಾಜಿ ರಾಷ್ಟ್ರಪತಿ ಅಬ್ಧುಲ್ ಕಲಾಂ ಅವರನ್ನು ಆದರ್ಶವಾಗಿ ತೆಗೆದುಕೊಂಡರೆ ಮುಂದಿನ ಭವಿಷ್ಯದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದು ಅಭಿಮತ ವ್ಯಕ್ತಪಡಿಸಿದರು. ಅಭಿವೃದ್ಧಿ ಪಥದತ್ತ ಸಾಗಿದ ರಷ್ಯಾ, ಚೀನಾ, ಜಪಾನ್ ರಾಷ್ಟ್ರದ ಅಧಿಕಾರ ಚುಕ್ಕಾಣಿ ಹಿಡಿದ ನಾಯಕರುಗಳಿಗೆ ಇಂಗ್ಲೀಷ್ ಬರದಿದ್ದರೂ ಅವರು ದೇಶವನ್ನು ಅಭಿವೃದ್ಧಿ ಮುಂಚೂಣಿಗೆ ತಂದಿದ್ದನ್ನು…

Read More

ವಿರಾಜಪೇಟೆ ಡಿ.23 NEWS DESK : ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಅತೀ ಮುಖ್ಯವಾಗಿದ್ದು, ಶಿಕ್ಷಕರ ಅಮೂಲ್ಯ ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಬೇಕು ಎಂದು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಚೌರಿರ ಜಗತ್ ತಿಮ್ಮಯ್ಯ ಅಭಿಪ್ರಾಯಪಟ್ಟರು. ಮೂರ್ನಾಡು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಯಶಸ್ಸಿಗೆ ಶಿಕ್ಷಕರ ಮಾರ್ಗದರ್ಶನ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿ ಜೀವನ ಮಾತ್ರವಲ್ಲದೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಾಂತುರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ,  ಜೀವನಕ್ಕೆ ಬೇಕಾದ ಉತ್ತಮ ಮೌಲ್ಯ ಹಾಗೂ ಸಂಸ್ಕಾರಕ್ಕೆ ಅಡಿಪಾಯವಾಗುವುದೇ ಪ್ರೌಢ ಶಿಕ್ಷಣ. ಇಲ್ಲಿ ಕಲಿತ ಸತ್ ಚಿಂತನೆಗಳು ಖಂಡಿತವಾಗಿಯೂ ಮುಂದೊಂದು ದಿವಸ ಉತ್ತಮ ಫಲವನ್ನು ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭ ಕಾಂತುರು-ಮೂರ್ನಾಡು ಗ್ರಾ.ಪಂ ಉಪಾಧ್ಯಕ್ಷೆ  ಬಿ.ಎಸ್.ರೇಖಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಎ.ಎನ್.ರಶ್ಮಿ , ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಪಿ.ಎಂ.ವೇಣು ಅಪ್ಪಣ್ಣ, ಖಜಾಂಚಿ ವಿ.ಎ.ಯತೀಶ್, ನಿರ್ದೇಶಕರಾದ…

Read More

ಮಡಿಕೇರಿ ಡಿ.23 NEWS DESK :  ಹಸಿವಿನ ಬೆಲೆ ಹಸಿದವರಿಗೆ ಗೊತ್ತು, ಬಡತನ ಅನುಭವಿಸಿದವನಿಗೆ ಗೊತ್ತು, ಬಡತನದ ನೋವು ಅವಮಾನ ಅನುಭವಿಸಿದವನಿಗೆ ಗೊತ್ತು ಅದರ ನೋವು. ಇದು ಮೂರು ಒಂದಕ್ಕೊಂದು ಸಂಬಂಧಿಗಳು. ಇವುಗಳು ಒಂದಾನೊಂದು ಬಿಟ್ಟಿರೋದು ಕಷ್ಟ. ಈ ಲೇಖನದಲ್ಲಿ ಹಸಿವಿನ ಬೆಲೆ ಹಸಿದವರಿಗೆ ಹೇಗೆ ಗೊತ್ತು ಎಂಬ ಬಗ್ಗೆ ಒಂದು ಪೂರ್ವವಲೋಕನ. ಇಂದಿನ ಯುವ ಪೀಳಿಗೆಗೆ ಅದರ ಅನುಭವ ಕಡಿಮೆ. ಅದರಿಂದ ಅವರಿಗೆ ಅನ್ನದ ಬೆಲೆ ಗೊತ್ತಿಲ್ಲ. ಅದು ಇರಲಿ ಇತೀಚಿನ ದಿನಗಳಲ್ಲಿ ಮಕ್ಕಳಿಗೆ ಆಹಾರ ಧಾನ್ಯಗಳನ್ನು ಎಲ್ಲಿ, ಹೇಗೆ ಬೆಳೆಯುವುದು ಎಂಬುದು ಅವರಿಗೆ ಗೊತ್ತೇ ಇಲ್ಲ. ಅದು ಅವರ ತಪ್ಪಲ್ಲ. ಪ್ರಸ್ತುತ ಜೀವನ ಶೈಲಿ ಹಾಗೂ ಆಧುನಿಕ ಶಿಕ್ಷಣ ವ್ಯವಸ್ಥೆ ಈ ರೀತಿಯಲ್ಲಿ ಇದೆ. ಈ ಬರಹದಲ್ಲಿ ನಾನು ಕೇಳಿದ, ನೋಡಿದ ಹಾಗೂ ಭಾಗಶಃ ಅನುಭವಿಸಿದ ಹಸಿದವರ ಬಡತನ, ಅವಮಾನ, ಅನುಭವಿಸಿದವರ ನೋವು ಹಂಚಿಕೊಳ್ಳುವ ಒಂದು ಸಣ್ಣ ಪ್ರಯತ್ನ. ಹಾಗೆ ಇಂದು ಸರ್ಕಾರದಿಂದ ಅನ್ನಭಾಗ್ಯ, ಮಕ್ಕಳಿಗೇ ಮಧ್ಯಾಹ್ನದ ಬಿಸಿಊಟ,…

Read More

ಮಡಿಕೇರಿ ಡಿ.23 NEWS DESK : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ”ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜನವರಿ, 08 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ…

Read More

ಮಡಿಕೇರಿ ಡಿ.23 NEWS DESK : ತಿತಿಮತಿ ಸಮೀಪದ ಭದ್ರಗೋಳದಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ ಹರೀಶ್ ಮತ್ತು ಸನತ್ ಅವರ ಮನೆಗೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಕುಟುಂಬಕ್ಕೆ ಆಧಾರವಾಗಿದ್ದ ಹರೀಶ್ ಮತ್ತು ಸನತ್ ಸಾವನ್ನಪ್ಪಿದ ವಿಚಾರ ತಿಳಿದ ಶಾಸಕರು, ಕುಟುಂಬಸ್ಥರಿಗೆ ರೂ 25,000 ನಗದು ನೀಡಿ ವಾಹನದ ಮಾಲೀಕ ಮತ್ತು ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಮೃತ ಹರೀಶ್ ಅವರ ಪತ್ನಿ ಜೀವಿತ ಅವರಿಗೆ ಉದ್ಯೋಗ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದರು. ಈ ಸಂದರ್ಭ ಮೃತ ಸನತ್ ಮತ್ತು ಹರೀಶ್ ಅವರ ತಂದೆ ನಾರಾಯಣ್, ತಾಯಿ ಶಾರದ, ಹರೀಶ್ ಪತ್ನಿ ಜೀವಿತ ಸೇರಿದಂತೆ ಕುಟುಂಬಸ್ಥರಿದ್ದರು.

Read More

ಮಡಿಕೇರಿ, ಡಿ.23 NEWS DESK : ಗ್ರಾಮೀಣ ಜನಪದ ಕ್ರೀಡೆಗಳು, ಹಳ್ಳಿಯ ಸೊಗಡು ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಜೀವಂತವಾಗಿ ಉಳಿಸಿ ಬೆಳಸುವ ಜತೆಗೆ ಮುಂದಿನ ತಲೆಮಾರಿಗೂ ತಿಳಿಸಿಕೊಡಬೇಕಾಗಿದೆ ಎಂದು ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ( ಗ್ರೇಡ್ – 1 ) ದ ಅಧ್ಯಕ್ಷರೂ ಆದ ಜನಪದ ಕ್ರೀಡೆಯ ಸಂಪನ್ಮೂಲ ವ್ಯಕ್ತಿ ಡಾ ಸದಾಶಿವಯ್ಯ ಎಸ್.ಪಲ್ಲೇದ್  ಹೇಳಿದರು. ಕೊಡಗು ಜಿಲ್ಲಾಮಟ್ಟದ‌ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ( ಖಚಿಟಟಥಿ ) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ‌ ಸ್ಕೌಟ್ಸ್, ಗೈಡ್ಸ್ ಮಕ್ಕಳ ಮೇಳ (ರ‍್ಯಾಲಿ)ದ  ಅಂಗವಾಗಿ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಕ್ರೀಡೆಗಳಲ್ಲಿ ಪ್ರತಿ ಆಟದಲ್ಲಿ ಮಾನವೀಯ ಮೌಲ್ಯವಿದೆ. ಇದರಿಂದ ಮಕ್ಕಳಲ್ಲಿ ಸಾಮಾಜಿಕ ಬೆಳೆಸಲು ಸಹಕಾರಿಯಾಗಿವೆ.…

Read More

ಮಡಿಕೇರಿ ಡಿ.23 NEWS DESK : ದುಶ್ಚಟ ದೂರ ಮಾಡಲು ಕ್ರೀಡೆ ಸಾಧನ ಎಂದು ಮಡಿಕೇರಿ ಉಪವಿಭಾಗ ಪೊಲೀಸ್ ಅಧೀಕ್ಷಕ ಮಹೇಶ್ ಕುಮಾರ್ ಹೇಳಿದರು. 5ನೇ ಆವೃತ್ತಿಯ ಇಬ್ನಿವಳವಾಡಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ನಗರದ ಜ. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಲು ಪೂರಕವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಜನತೆ ತಪ್ಪು ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ದುಶ್ಚಟಗಳಿಂದ ವೈಯಕ್ತಿಕ ಆರೋಗ್ಯದೊಂದಿಗೆ ಸಮಾಜದ ಸ್ವಾಸ್ಥ್ಯವೂ ಹದಗೆಡುತ್ತದೆ. ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದುಶ್ಚಟದಿಂದ ದೂರ ಉಳಿಯಲು ಸಾಧ್ಯ ಎಂದು ಪ್ರತಿಪಾದಿಸಿದರು. ಕ್ರೀಡಾಪಟುಗಳಲ್ಲಿ ಕ್ರೀಡಾ ಸ್ಫೂರ್ತಿ ಇರಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕಿ ಎಂದು ಹೇಳಿದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಮಾತನಾಡಿ, ಕೊಡಗು ಕ್ರೀಡೆ ಹಾಗೂ ಸೈನ್ಯ ಕ್ಷೇತ್ರಕ್ಕೆ ಹೆಸರುವಾಸಿಯಾಗಿದೆ. ಆದರೆ, ರಾಷ್ಟ್ರೀಯ ತಂಡಗಳಿಗೆ ಕೊಡಗಿನಿಂದ ಆಯ್ಕೆಯಾಗುವರ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದನೀಯ. ಸಾಧನೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಸಾಗಬೇಕು ಎಂದು…

Read More

ಮಡಿಕೇರಿ NEWS DESK ಡಿ.22 : ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ಸ್ಕೌಟ್ಸ್, ಗೈಡ್ಸ್  ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ‌ಇಲಾಖೆಯ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಏರ್ಪಡಿಸಿದ್ದ ಜಿಲ್ಲಾಮಟ್ಟದ‌ ಸ್ಕೌಟ್ಸ್, ಗೈಡ್ಸ್ ಮಕ್ಕಳ ಮೇಳ( Rally ) : 2024 ದ ಅಂಗವಾಗಿ  ಭಾನುವಾರ ( ಡಿ.22 ರಂದು ) ಸರ್ವಧರ್ಮ ಪ್ರಾರ್ಥನೆ ನೆರವೇರಿಸಲಾಯಿತು.  ಸರ್ವಧರ್ಮ ಪ್ರಾರ್ಥನೆಗೆ ಚಾಲನೆ ನೀಡಿದ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸರ್ವಧರ್ಮಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸುವ ಮೂಲಕ ಅವರಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ ಹಾಗೂ ಸೌಹಾರ್ದತೆ ಬೆಳೆಸಲು ಸಹಕಾರಿಯಾಗಿದೆ ಎಂದರು. *ರಾಷ್ಟ್ರಧ್ವಜ , ರಾಷ್ಟ್ರಗೀತೆ ಬಗ್ಗೆ ಮಾಹಿತಿ*: ಮಕ್ಕಳ ರ್‍ಯಾಲಿಯಲ್ಲಿ ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಮಕ್ಕಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು…

Read More

ಮಡಿಕೇರಿ NEWS DESK ಡಿ.22 : ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್  ಪಂದ್ಯಾವಳಿಗೆ  . ರಾಷ್ಟ್ರಮಟ್ಟದ ಹಾಕಿ ಆಟಗಾರ ಹಾಗೂ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಆಟಗಾರ ಮಂಜುನಾಥ್ ಪಿ. ಎಲ್ ಚಾಲನೆ ನೀಡಿದರು.  ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಮಂಜುನಾಥ್, ಯಾವುದೇ ಕ್ರೀಡೆಯಲ್ಲಿ  ಮಕ್ಕಳಿಗೆ ಶಿಸ್ತು ಬಹಳ ಮುಖ್ಯ, ಹಾಗೆಯೇ ಪ್ರತಿ ಆಟದಲ್ಲೂ ಸೋಲು ಗೆಲುವು ಎಂಬುದು ಇದ್ದೇ ಇರುತ್ತದೆ, ಆದರೆ ಸೋಲನ್ನು ಒಪ್ಪಿಕೊಳ್ಳುವ  ಮನೋಭಾವ ಮಕ್ಕಳಲ್ಲಿ ಇರಬೇಕು ಎಂದು   ಕಿವಿ ಮಾತು ಹೇಳಿದರು.  ಈ ಪಂದ್ಯಾವಳಿಯಲ್ಲಿ ಕೊಡಗಿನ ವಿವಿಧ ಶಾಲೆಗಳ 210  ಸ್ಪರ್ಧಿಗಳು ಪಾಲ್ಗೊಂಡಿದ್ದರು. ಶಾಲೆಯ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್ ಆಡಳಿತ ನಿರ್ವಹಣಾಧಿಕಾರಿ ರವಿ ಪಿ ಟೇಬಲ್ ಟೆನ್ನಿಸ್ ತರಬೇತುದಾರ ರಚನ್ ಪೊನ್ನಪ್ಪ ಹಾಗೂ ಪಂದ್ಯಾವಳಿ ಸಂಚಾಲಕ  ದಿನೇಶ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read More

ಗುಂಡ್ಲುಪೇಟೆ NEWS DESK ಡಿ.22 : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಕುಂದುಕೆರೆ ವಲಯದ ಯಲಚೆಟ್ಟಿ ಶಾಖೆಯ ಕುಂದುಕೆರೆ ಗಸ್ತಿನ ಸಿದ್ದರಾಮನಕಟ್ಟೆ ಹಳ್ಳದ ಅರಣ್ಯ ಪ್ರದೇಶದಲ್ಲಿ ಸುಮಾರು 30-35 ವರ್ಷದ ಗಂಡಾನೆಯೊಂದರ ಕಳೇಬರ ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಡಾನೆಯ ದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಆನೆಗಳ ಕಾದಾಟದಿಂದ ಗಾಯಗೊಂಡು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ತಿಳಿಸಿದ್ದಾರೆ. ಆನೆಯ 2 ದಂತಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ.

Read More