ಸಿದ್ದಾಪುರ ಜ.6 NEWS DESK : ಸಿದ್ದಾಪುರ ಇಕ್ರಾ ಶಾಲಾ ವಾರ್ಷಿಕೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ನೃತ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಇಕ್ರಾ ಪಬ್ಲಿಕ್ ಸ್ಕೂಲ್ ಮತ್ತು ಪ್ರಿ-ಯೂನಿವರ್ಸಿಟಿ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮದಲ್ಲಿ ಗಾಯನ, ಸಂಗೀತ, ನೃತ್ಯ, ಕರಾಟೆ ಪ್ರದರ್ಶನ ಸೇರಿದಂತೆ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ನೆರೆದಿದ್ದ ನೂರಾರು ಪೋಷಕರ ಗಮನ ಸೆಳೆದವು. ಪುಟಾಣಿಗಳ ನೃತ್ಯೋತ್ಸವಕ್ಕೆ ನೆರೆದಿದ್ದವರು ಚಪ್ಪಾಳೆ ತಟ್ಟಿ ಪ್ರೋತ್ಸಹಿಸಿದರು. ನೃತ್ಯ ಹಾಡುಗಳಿಗೆ ವಿದ್ಯಾರ್ಥಿಗಳು ಪೋಷಕರು ಕುಣಿದು ಕುಪ್ಪಳಿಸಿದರು. ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರು ಉದ್ಘಾಟಿಸಿ ಮಾತನಾಡಿ, ಶಿಕ್ಷಣದಿಂದ ವಂಚಿತರಾಗದೆ ಮಕ್ಕಳ ಕಲಿಕೆಗೆ ಹೆಚ್ಚು ಪ್ರೋತ್ಸಾಹ ನೀಡುವ ಮೂಲಕ ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನು ರೂಪಿಸಲು ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಉನ್ನತ ಹುದ್ದೆಯನ್ನು ಅಲಂಕರಿಸುವುದರೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಇಕ್ರಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಕೆ.ಯು.ಅಬ್ದುಲ್ ರಜಾಕ್ ಪ್ರಸ್ತಾವಿಕ ಮಾತನಾಡಿ,…
ಲೇಖಕ: admin
ಹೆಬ್ಬಾಲೆ ಜ.6 NEWS DESK : ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಹುಲುಸೆ ಫ್ರೆಂಡ್ಸ್ ವತಿಯಿಂದ ಹೆಚ್.ವಿ.ಎಲ್ 2024-25ನೇ ಸಾಲಿನ ಲೀಗ್ ಮಾದರಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಹುಲುಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯನ್ನು ಹೆಬ್ಬಾಲೆ ಗ್ರಾ.ಪಂ ಮಾಜಿ ಸದಸ್ಯ, ಗುತ್ತಿಗೆದಾರ ವೆಂಕಟೇಶ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದಾಗಿ ಯುವಕರು ಒಂದೆಡೆ ಸೇರುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚಿಸಲು ಹಾಗೂ ಯುವಕರಿಗೆ ಕ್ರೀಡೆಯ ಬಗ್ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸಹಕಾರಿಯಾಗುತ್ತದೆ. ಇದರ ಮುಖೇನ ಯುವಕರು ಸಂಘಟನೆಯ ಮನೋಭಾವದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಕೂಡಿಗೆ ಕ್ರೀಡಾಪಟು ಚಂದ್ರಶೇಖರ್, ಹರೀಶ್,ಹುಲುಸೆ ಫ್ರೆಂಡ್ಸ್ ನ ಪದಾಧಿಕಾರಿಗಳಾದ ದಿಲೀಪ್, ದರ್ಶನ್, ಗೌತಮ್, ಚಂದ್ರು,ಶಂಕರ್, ಅಭಿ ಸೇರಿದಂತೆ ಸಮಿತಿಯ ಸದಸ್ಯರು ಲೀಗ್ ನ ಎಲ್ಲಾ ಕೀಡಾಪಟುಗಳು ಭಾಗವಹಿಸಿದರು.…
ಬೆಂಗಳೂರು NEWS DESK ಜ.6 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು. ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.
ಶನಿವಾರಸಂತೆ ಜ.6 NEWS DESK : ಹನ್ನೆರಡನೇ ಶತಮಾನದ ಬಸವಾದಿ ಶರಣರ ಆದರ್ಶಗಳನ್ನು ತಮ್ಮಲ್ಲಿ ಮೈಗೂಡಿಸಿಕೊಂಡು ವಚನ ಸಾಹಿತ್ಯದ ಪ್ರೇರಕರಾಗಿ ನುಡಿದಂತೆ ನಡೆದಂತಹ ಸಂತ ಶ್ರೇಷ್ಠರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸ್ಮರಣೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಜಿಸಿ ಮಾತನಾಡಿದ ಅವರು ಮನುಷ್ಯನ ಮೌಲ್ಯಯುತ ಬದುಕಿಗೆ ಬೇಕಾದ ನೀತಿಯನ್ನು ಸಾರಿದ ಮಹಾಚೈತನ್ಯ ಸಿದ್ದೇಶ್ವರ ಸ್ವಾಮೀಜಿ. ಅವರ ವಿಚಾರಧಾರೆಗಳು ಸಾರ್ವಕಾಲಿಕವಾಗಿದ್ದು, ಜೀವನವೇ ಒಂದು ಸಂದೇಶವಾಗಿದೆ ಎಂದು ಹೇಳಿದರು. ಜ್ಞಾನಯೋಗಿಗಳ ವಿಚಾರಧಾರೆಗಳು ಮನುಷ್ಯನ ಅಂತರಂಗವನ್ನು ಶ್ರೀಮಂತಗೊಳಿಸುತ್ತವೆ. ದಯೆಯೇ ಧರ್ಮದ ಮೂಲ, ಇವನಾರವ ಎನ್ನದೇ ಇವ ನಮ್ಮವ ಎಂಬ ಶರಣರ ಸರಳತೆ ಯನ್ನು ಯುವ ಜನಾಂಗ ಅರಿಯಬೇಕಿದೆ ಎಂದು ಸದಾಶಿವ ಸ್ವಾಮೀಜಿ ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್ ಮಾತನಾಡಿ, ಬಸವಾದಿ…
ಕಣಿವೆ ಜ.6 NEWS DESK : ಕಾವೇರಿ ಹಾಗೂ ಹಾರಂಗಿ ನದಿಗಳ ಸಂಗಮ ಕ್ಷೇತ್ರ ಕೂಡಿಗೆಯ ಉದ್ಭವ ಸುಬ್ರಮಣ್ಯ ದೇವಾಲಯದಲ್ಲಿ ಕಿರುಷಷ್ಠಿ ಹಾಗೂ ಸತ್ಯನಾರಾಯಣ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಸ್ಥಳೀಯ ಸತ್ಯನಾರಾಯಣ ವೃತಾಚರಣ ಸಮಿತಿ ಸಹಯೋಗದಲ್ಲಿ ನಡೆದ ಪೂಜೋತ್ಸವದಲ್ಲಿ ನೂರಾರು ಮಂದಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾದರು. ಹಾಗೆಯೇ ಕೂಡಿಗೆ ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಮಂದಿ ಭಕ್ತಾಧಿಗಳು ದೇವಾಲಯಕ್ಕೆ ಬಂದು ಅಲಂಕೃತ ಉದ್ಭವ ಸುಬ್ರಮಣ್ಯ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ದೇಗುಲದ ಪ್ರಧಾನ ಅರ್ಚಕ ನವೀನ್ ಭಟ್ ನೇತೃತ್ವದಲ್ಲಿ ಪೂಜಾವಿಧಿಗಳು ನೆರವೇರಿತು. ಇದೇ ಸಂದರ್ಭ ನೆರೆದ ಭಕ್ತಾಧಿಗಳಿಗೆ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಹಾಗೂ ಸತ್ಯನಾರಾಯಣ ಪ್ರಸಾದ ನೀಡಲಾಯಿತು. ದೇವಾಲಯ ಸಮಿತಿ ಅಧ್ಯಕ್ಷ ಸೋಮಯ್ಯ, ಕಾರ್ಯದರ್ಶಿ ಶಮಂತ ರೈ, ಉಪಕಾರ್ಯದರ್ಶಿ ಮಂದಣ್ಣ, ಶ್ರೀಸತ್ಯನಾರಾಯಣ ವೃತಾಚರಣ ಸಮಿತಿ ಅಧ್ಯಕ್ಷ ಡಿ.ಕೆ.ಪೊನ್ನಪ್ಪ, ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಪದಾಧಿಕಾರಿಗಳಿದ್ದರು.
ಸಂಪಾಜೆ NEWS DESK ಜ.6 : ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಕಲೇರಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಶ್ರದ್ಧಾಭಕ್ತಿಯಿಂದ ಜರುಗಿತು. ಗುಳಿಗ ದೈವದ ಕೋಲ, ಅಗ್ನಿ ಪ್ರವೇಶ, ಮಾರಿಕ್ಕಳ ಪ್ರವೇಶ, ಶ್ರೀ ರಕ್ತೇಶ್ವರಿ ಅಮ್ಮ, ಪಂಜುರ್ಲಿ, ಪಾಷಾಣ ಮೂರ್ತಿ ದೈವಗಳ ತಂಬಿಲ, ಹರಿಕೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ಒತ್ತೆಕೋಲಕ್ಕೆ ಸಾಕ್ಷಿಯಾದರು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ನೃತ್ಯ ವೈಭವ ಪ್ರೇಕ್ಷಕರನ್ನು ಆಕರ್ಷಿಸಿತು. ಚಿತ್ರ ವರದಿ : ಶರತ್ ಕೀಲಾರು, ಸಂಪಾಜೆ
ಮಡಿಕೇರಿ ಜ.6 NEWS DESK : ಕೂರ್ಗ ಬೈ ರೇಸ್ ಮತ್ತು ಜಮ್ಮ ಹಿಡುವಳಿಯ ಆಧಾರದಲ್ಲಿ ಬಂದಿರುವ ಕೋವಿಯ ವಿಶೇಷ ಹಕ್ಕುದಾರಿಕೆಯನ್ನ ಕೊಡವರು ಶಾಶ್ವತವಾಗಿ ಉಳಿಸಿಕೊಳ್ಳುವತ್ತ ಸಂವಿದಾನ ಬದ್ಧತೆ ರೂಪಿಸಿಕೊಳ್ಳಬೇಕಾದದ್ದು ಇಂದಿನ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಪ್ರತಿಪಾದಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಜೆಸಿಐ ಪೊನ್ನಂಪೇಟೆ ಸಂಸ್ಥೆ ಸಹಯೋಗದಲ್ಲಿ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಅಕಾಡೆಮಿಯ ಪ್ರಥಮ ಬಾರಿಯ ತೋಕ್ ನಮ್ಮೆ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಯ ಬಳಕೆ ಹಾಗೂ ಪಾವಿತ್ರ್ಯತೆಯ ಬಗ್ಗೆ ತಿಳಿದುಕೊಳ್ಳುವುದು ಮತ್ತು ಮುಂದಿನ ಪೀಳಿಗೆಗೆ ತಿಳಿ ಹೇಳುವುದು ನಮ್ಮ ಕರ್ತವ್ಯ ಎಂದರು. ಜಬ್ಬೂಮಿ ಚಾಎಇಟೇಬಲ್ ಟ್ರಸ್ಟ್ ಮುಖ್ಯಸ್ಥ ಚೊಟ್ಟೆಕಮಾಡ ರಾಜಿವ್ ಬೋಪಯ್ಯ ಮಾತನಾಡಿ, ಅನಾದಿಕಾಲದಿಂದ ಬಂದಿರುವ ಸಂಪ್ರದಾಯ ಹಾಗೂ ಜೀವನ ಕ್ರಮವನ್ನು ಬದ್ದತೆಯಿಂದ ಪರಿಪಾಲಿಸುತ್ತಿರುವ ಕೊಡವ ಭಾಷಿಕ ಜನಾಂಗಗಳು ಒಗ್ಗಟ್ಟಿನಿಂದ ಹಕ್ಕುದಾರಿಕೆಯನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂದರು. ವಕೀಲ ಬಲ್ಯಮಡ ಬಿ.ಮಾದಪ್ಪ “ಕೊಡವಡ ತೋಕ್’ರ…
ಮಡಿಕೇರಿ NEWS DESK ಜ.6 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಮೂಲಕ ನೀಡುವ ರಾಜ್ಯ ಮಟ್ಟದ ಹೆಚ್.ಎನ್ ಪ್ರಶಸ್ತಿಗೆ ಭಾಜನರಾದ ‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಹಾಗೂ ಮಹಿಳಾ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ ಚೈತನ್ಯಶ್ರೀ ಪ್ರಶಸ್ತಿಯನ್ನು ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ ಅವರಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಸಮೀಪದ ಬಾಗಲೂರು ವಿ ಜೆ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪರಿಷತ್ 4ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಸ್ರೋ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಮಾರ್ಗದರ್ಶಕರಾದ ಡಾ ಎ ಎಸ್ ಕಿರಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲೆ ಯ ಇಬ್ಬರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಎಚ್ಎನ್ ಪ್ರಶಸ್ತಿ ಪುರಸ್ಕೃತರಿಗೆ ಮತ್ತು 35 ಮಹಿಳಾ ಸಾಧಕರಿಗೆ…
ಮಡಿಕೇರಿ ಜ.6 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಗಳಿಗೆ 2025-26ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಜ.16 ರಂದು ಮಡಿಕೇರಿ ತಾಲ್ಲೂಕಿನವರಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಜ.17 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನವರಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ, ಜನವರಿ, 18 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆಯ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಬಿ.ಜಿ.ಮಂಜುನಾಥ್, ಅಥ್ಲೇಟಿಕ್ ತರಬೇತುದಾರರು, ಕ್ರೀಡಾ ಶಾಲೆ ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ.ಸಂ. 9342563014, ವೆಂಕಟೇಶ್ ಬಿ.ಎಸ್. ಹಾಕಿ ತರಬೇತುದಾರರು, ಕ್ರೀಡಾ ಶಾಲೆ, ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆಕ ದೂ. 9844326007, ದಿನಾಮಣಿ, ಹಾಕಿ ತರಬೇತುದಾರರು, ಕ್ರೀಡಾ ಶಾಲೆ, ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ. ಸಂ.9663241305, ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ಸುರೇಶ್…
ಮಡಿಕೇರಿ ಜ.6 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜ.8 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರಸಭೆ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.






