ಲೇಖಕ: admin

ವಿರಾಜಪೇಟೆ ಜ.6 NEWS DESK : ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಉಡುಪಿಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ.ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಸಂಚಿತಾ ಆಚಾರ್ಯಗೆ ಲಭಿಸಿದೆ. ಕೋಟ ಶಿವರಾಮ ಕಾರಂತರ ಥೀಮ್ ಪಾರ್ಕನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಚಿತ ಆಚಾರ್ಯ ವಿರಾಜಪೇಟೆಯ ಚಂದ್ರ ಆಚಾರ್ಯ ಮತ್ತು ಪ್ರೇಮಾಂಜಲಿ ಆಚಾರ್ಯ ದಂಪತಿಯ ಪುತ್ರಿ.

Read More

ಮಡಿಕೇರಿ NEWS DESK ಜ.5 : ಸಾಂಪ್ರದಾಯಿಕ ವಸ್ತç ಧರಿಸುವ ವಿಚಾರದಲ್ಲಿ ವಿವಾದದ ಕೇಂದ್ರವಾಗಿ ಮಾರ್ಪಟ್ಟಿರುವ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ ಆಡಳಿತ ಮಂಡಳಿ ಇಂದು ನಡೆಸಿದ ಸಭೆ ಒಮ್ಮತ್ತದ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಯಿತು. ಶ್ರೀ ಮಹಾಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪು ಧರಿಸಿ ಪ್ರವೇಶಿಸುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇತ್ತೀಚೆಗೆ ಶಾಂತಿಸಭೆ ನಡೆಸಿದ್ದರು. ಆಡಳಿತ ಮಂಡಳಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮರಗೋಡು ಸಹಕಾರ ಸಂಘದ ಸಭಾಂಗಣದಲ್ಲಿ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ದೇವಾಲಯದ ವಾರ್ಷಿಕೋತ್ಸವದ ಕೊನೆಯ ದಿನ ಗ್ರಾಮಸ್ಥರು ಮಾತ್ರ ಸಾಂಪ್ರದಾಯಿಕ ಉಡುಪು ಧರಿಸಿ ಬರಲು ಅವಕಾಶ ನೀಡುವ ಕುರಿತು ಪ್ರಸ್ತಾಪಿಸಲಾಯಿತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ಕೆಲವರು ಒಪ್ಪಿಗೆ ಸೂಚಿಸದೆ ಇದ್ದುದರಿಂದ ಸಭೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದೆ ಪ್ರಸ್ತಾಪಿಸಲ್ಪಟ್ಟ ವಿಚಾರಗಳ ಬಗ್ಗೆ…

Read More

ಮಡಿಕೇರಿ NEWS DESK ಜ.5 : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ (24) ವರ್ಷ, ಇಮ್ತಿಯಾಜ್ ಆಲಿ (20) ರೋಹಿಥಾನ್ (50) ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ (32) ಬಂಧಿತ ಆರೋಪಿಗಳು. ಇವರ ಬಳಯಿಂದ 2 ಕೆ.ಜಿ 481 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ…

Read More

ಮಡಿಕೇರಿ NEWS DESK ಜ.4 : ದ್ವಿಚಕ್ರ ವಾಹನ ಸವಾರನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮಡಿಕೇರಿ ತಾಲ್ಲೂಕಿನ ಜೋಡುಪಾಲದಲ್ಲಿ ನಡೆದಿದೆ. ಸ್ಥಳೀಯ ಕಾರ್ಮಿಕ ಮುತ್ತಯ್ಯ ಎಂಬುವವರು ಎಂದಿನಂತೆ ಬೆಳಗಿನ ಜಾವ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಜೋಡುಪಾಲದ 10ನೇ ಮೈಲ್ ಬಳಿ ಕಾಡಾನೆ ದಾಳಿ ನಡೆಸಿದೆ. ಮುತ್ತಯ್ಯ ಅವರು ಆನೆ ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾಡಾನೆ ದ್ವಿಚಕ್ರ ವಾಹನವನ್ನು ತುಳಿದು ಜಖಂಗೊಳಿಸಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ NEWS DESK ಜ.4 : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕೊಡಗಿನ ಮನ್ನೆರ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ಮನ್ನೆರ ಪ್ರಶಸ್ತಿ ಅವರು ಕರ್ನಾಟಕ ಮತ್ತು ಗೋವಾ ಬೆಟಾಲಿಯನ್ ಏರ್ ವಿಂಗ್‌ನಿಂದ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಪೊನ್ನಂಪೇಟೆ ತಾಲ್ಲೂಕು ಹರಿಹರ ಗ್ರಾಮದ ನಿವಾಸಿ ಮನ್ನೆರ ಮನು ಹಾಗೂ ಸೌಮ್ಯ ದಂಪತಿ ಪುತ್ರಿಯಾಗಿದ್ದು, ಪ್ರಸ್ತುತ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.

Read More

ಮಡಿಕೇರಿ NEWS DESK ಜ.4 : ದೇವಾಲಯದ ಕಾಣಿಕೆ ಹುಂಡಿ ಕಳ್ಳತನ ಮಾಡಲು ಯತ್ನಿಸಿದ ಪ್ರಕರಣ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಶ್ರೀಮುತ್ತಪ್ಪ ಹಾಗೂ ಐಶ್ವರ್ಯ ಗಣಪತಿ ದೇವಸ್ಥಾನದಲ್ಲಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 1.45 ಗಂಟೆ ವೇಳೆ ದೇವಾಲಯದ ಆವರಣಕ್ಕೆ ಬಂದ ಚೋರರು ಹುಂಡಿಯನ್ನು ಕದ್ದು ಹೊರಗೆ ಬಂದಿದ್ದಾರೆ. ಈ ಸಂದರ್ಭ ನಾಯಿಗಳು ಬೊಗಳಿದ್ದು, ಅಕ್ಕಪಕ್ಕದ ಮನೆಯವರು ಹೊರ ಬಂದಿದ್ದಾರೆ. ಆತಂಕಗೊಂಡ ಕಳ್ಳರು ಕಾಣಿಕೆ ಹುಂಡಿಯನ್ನು ಅಲ್ಲೇ ಬಿಟ್ಟು ಪಕ್ಕದ ಕಾಡಿನೊಳಗೆ ಪರಾರಿಯಾಗಿದ್ದಾರೆ. ಗ್ರಾಮಸ್ಥರು ಸೇರಿ ಹುಡುಕಾಡಿದರೂ ಪರಾರಿಯಾದವರು ಪತ್ತೆಯಾಗಲಿಲ್ಲ. ದೇವಾಲಯದ ಆಡಳಿತ ಮಂಡಳಿ ನೀಡಿದ ದೂರಿನ ಹಿನ್ನೆಲೆ ಸಿದ್ದಾಪುರ ಪೊಲೀಸರು ಶ್ವಾನದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚೋರರ ಪತ್ತೆಗೆ ತನಿಖೆ ಮುಂದುವರೆದಿದೆ. ಮಾಲ್ದಾರೆ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಹುಣಸೂರು NEWS DESK ಜ.4 : ಕಾರು ಮತ್ತು ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ತಮಿಳುನಾಡು ಭಾಗದ ಕಾರು ಮತ್ತು ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಚಿತ್ರದುರ್ಗದ ಓಮ್ನಿ ನಡುವೆ ಡಿಕ್ಕಿ ನಡುವೆ ಡಿಕ್ಕಿ ಸಂಭವಿಸಿ ಕಾರು ಮಗುಚಿಕೊಂಡಿತು. ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದೆ. ಎರಡೂ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ವಾಹನದಟ್ಟಣೆ ಏರ್ಪಟ್ಟು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಜ.4 NEWS DESK : ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2025-26 ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಜನವರಿ, 16 ರಂದು ಮಡಿಕೇರಿ ತಾಲ್ಲೂಕಿನವರಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಜ.17 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನವರಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ, ಜನವರಿ, 18 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆಯ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ.  ಕ್ರೀಡಾ ಶಾಲೆಯ ಆಯ್ಕೆಗೆ 01-06-2025 ಕ್ಕೆ 11 ವರ್ಷದೊಳಗಿರಬೇಕು.(ಅಂದರೆ 01-06-2014 ರ ನಂತರ ಜನಿಸಿರಬೇಕು), 2025-26ನೇ ಸಾಲಿಗೆ 5ನೇ ತರಗತಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಹಾಕಿ ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು 140 ಸೆಂ.ಮೀ. ಎತ್ತರವಿರಬೇಕು. ಹೆಚ್ಚಿನ ಮಾಹಿತಿಗೆ ಬಿ.ಜಿ.ಮಂಜುನಾಥ್, ಅಥ್ಲೇಟಿಕ್ ತರಬೇತುದಾರರು, ಕ್ರೀಡಾ ಶಾಲೆ ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ.ಸಂ. 9342563014, ವೆಂಕಟೇಶ್ ಬಿ.ಎಸ್. ಹಾಕಿ ತರಬೇತುದಾರರು, ಕ್ರೀಡಾ…

Read More

ಮಡಿಕೇರಿ ಜ.4 NEWS DESK : ದುಶ್ಚಟಗಳಿಂದ ದೂರವಿರಲು ಸಹಕಾರಿಯಾಗಿರುವ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾಥಿ೯ಗಳು ಕ್ರಿಯಾಶೀಲರಾಗಿ ಪಾಲ್ಗೊಳ್ಳುವ ಮೂಲಕ ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಸಂರಕ್ಷಿಸಲು ಸಾಧ್ಯ ಎಂದು ಉದ್ಯಮ ತಜ್ಞ ಕೊಕ್ಕಲೇರ ಕುಮಾರ್ ಸುಬ್ಬಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಕೊಡಗು ವಿದ್ಯಾಲಯದ ಕ್ರೀಡಾ ದಿನಾಚರಣೆಯನ್ನು ಕ್ರೀಡಾಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಕ್ರೀಡೆ ರಹಿತವಾದ ಶಿಕ್ಷಣ ಪ್ರಯೋಜನಕಾರಿಯಾಗದು. ಕ್ರೀಡಾ ತರಬೇತಿಯೊಂದಿಗಿನ ವಿದ್ಯೆಯು ಶಿಕ್ಷಣವನ್ನು ಪರಿಪೂಣ೯ಗೊಳಿಸುತ್ತದೆ ಎಂದರಲ್ಲದೇ, ಹಿರಿಯರು ಹೇಗೆ ವತಿ೯ಸುತ್ತಾರೆ ಎಂಬುದನ್ನೇ ಕಿರಿಯರೂ ಅನುಕರಿಸುವುದರಿಂದಾಗಿ ಹಿರಿಯರ ನಡವಳಿಕೆ ಕಿರಿಯರ ಪಾಲಿಗೆ ಮಾಗ೯ದಶಿ೯ಯಾಗಿರಬೇಕು ಎಂದು ಸಲಹೆ ನೀಡಿದರು, ಕ್ರಿಕೆಟ್ , ಹಣ ಮತ್ತು ಖ್ಯಾತಿ ತಂದುಕೊಂಡುವ ಕ್ರೀಡೆಯಾಗಿದ್ದರೂ ಕ್ರಿಕೆಟ್ ನಲ್ಲಿ ಸೀಮಿತ ಅವಕಾಶಗಳಿದೆ, ಹೀಗಾಗಿ ಭಾರತದಲ್ಲಿ ಇರುವ ಇತರ ಕ್ರೀಡೆಗಳಲ್ಲಿಯೂ ಪಾಲ್ಗೊಳ್ಳಲು ಕ್ರೀಡಾವಿದ್ಯಾಥಿ೯ಗಳು ಆಸಕ್ತಿ ತೋರುವ ಮೂಲಕ ಉತ್ತಮ ಕ್ರೀಡಾತಾರೆಗಳಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದೂ ಅವರು ಅಭಿಪ್ರಾಯಪಟ್ಟರು. ಪೋಷಕರು, ಶಿಕ್ಷಕರು, ಹಿರಿಯರಿಗೆ ಸದಾ ಗೌರವ ನೀಡಿ ಎಂದು ವಿದ್ಯಾಥಿ೯…

Read More

ಮಡಿಕೇರಿ ಜ.4 NEWS DESK : ನಿರಂತರ ಅಧ್ಯಯನ ಮತ್ತು ಕಾರ್ಯ ತತ್ಪರತೆ ತಮ್ಮನ್ನು ಸಾಧಕರ ಸಾಲಿನಲ್ಲಿ ನಿಲ್ಲಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಕೋರನ ಸರಸ್ವತಿ ಹೇಳಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಒಂದು ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿದ್ದು, ಪ್ರತೀ ವರ್ಷವೂ ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿ ಉನ್ನತ ಹುದ್ದೆಗೇರಿರುವ ಅನೇಕ ಹಿರಿಯ ವಿದ್ಯಾರ್ಥಿಗಳು ಇತಿಹಾಸವನ್ನೆ ನಿರ್ಮಾಣ ಮಾಡಿದ್ದಾರೆ ಎಂದು ಬಣ್ಣಿಸಿದರು. ವಿದ್ಯಾರ್ಥಿಗಳು ತಮ್ಮ ಹೆಜ್ಜೆ ಗುರುತುಗಳನ್ನು ವಿದ್ಯಾಸಂಸ್ಥೆಯಲ್ಲಿ ಬಿಟ್ಟು ಹೋದರೆ ಅದು ಮುಂಬರುವ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ ಎಂದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ‘ವಿದ್ಯಾರ್ಥಿಗಳು ಸ್ನೇಹಿತರ ಮಾತು ಕೇಳದೆ,…

Read More