ಮಡಿಕೇರಿ ಜ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಕುವೆಂಪು ರಚಿಸಿರುವ ‘ನಾಡಗೀತೆಗೆ ನೂರು ವರ್ಷ’ ಸಹಸ್ರ ಕಂಠ ಗಾಯನ ಕಾರ್ಯಕ್ರಮವು ನಡೆಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನೋತ್ಸವ ಹಾಗೂ ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ ಪ್ರಯುಕ್ತ ನಾಡಗೀತೆ ಸಹಸ್ರ ಕಂಠ ಗಾಯನ ಕಾರ್ಯಕ್ರಮ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ನಾಡು ಕಂಡ ಶ್ರೇಷ್ಠ ಕವಿ ಕುವೆಂಪು ಅವರು ನಾಡಗೀತೆ ರಚಿಸಿ ನೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಸಹಸ್ರ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಶಾಲಾ ಕಾಲೇಜು ಹಂತದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಕುವೆಂಪು ಅವರು ನಾಡಿಗೆ…
ಲೇಖಕ: admin
ಮಡಿಕೇರಿ ಜ.4 NEWS DESK : ಕೊಡಗಿನ ಮೂಲ ನಿವಾಸಿ ಜನಾಂಗವಾಗಿರುವ ಕೊಡವರು, ಇಂದು ತಮ್ಮ ಅಸ್ತಿತ್ವಕ್ಕಾಗಿ ತಮ್ಮ ತಾಯಿನೆಲದಲ್ಲಿಯೇ ಹೋರಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ತಮ್ಮತನವನ್ನು ಕಾಯ್ದುಕೊಳ್ಳಲು, ಕೊಡವಾಮೆಯ ಬೇರನ್ನು ಗಟ್ಟಿಗೊಳಿಸುವಲ್ಲಿ ಏಳ್ನಾಡ್ ಕೊಡವರ ಜವಾಬ್ದಾರಿ ಅಧಿಕವಾಗಿದ್ದು, ಈ ನಿಟ್ಟಿನಲ್ಲಿ ಇಲ್ಲಿನ ನಾಲ್ಕು ಕೊಡವ ಸಮಾಜಗಳು ಒಮ್ಮತದ ಯೋಜನೆ ತಯಾರಿಸಬೇಕಿದೆ ಎಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ, ನಡುಬಾಡೆ ಸಂಪಾದಕ ಚಾಮೆರ ದಿನೇಶ್ ಬೆಳ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಂದೂರು ಕೊಡವ ಸಮಾಜದ ಆಶ್ರಯದಲ್ಲಿ ನಡೆದ ಉಮ್ಮೇಟಿ ಕೋಲ್ ಮಂದ್ ಮತ್ತು ಪುತ್ತರಿ ಊರೋರ್ಮೆ ಕಾರ್ಯಕ್ರಮವನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಏಳ್ನಾಡ್ ಎಂದರೆ ಕೊಡವಾಮೆಯ ಗೂಡು ಎನ್ನುವ ನಂಬಿಕೆ ಇದೆ. ಆದರೆ ಅದು ಇಂದಿನ ಕಾಲದಲ್ಲಿ ಎಷ್ಟರ ಮಟ್ಟಿಗೆ ಆ ಗೂಡನ್ನ ಉಳಿಸಿಕೊಂಡಿದ್ದೇವೆ ಎನ್ನುವುದನ್ನ ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದರು. ಕೊಡಗಿನ ಮೂರು ಪ್ರಮುಖ ಭಾಗಗಳಾದ ಕ್ಗ್ಗಟ್ಟ್, ಮೇಂದಲೆ ಮತ್ತು ಏಳ್ನಾಡ್ ಭಾಗಗಳನ್ನು…
ಕುಶಾಲನಗರ ಜ.4 NEWS DESK : ರಾಜ್ಯದಲ್ಲಿಯೇ ಪ್ರಥಮ ಹಾಲಿನ ಡೈರಿ ಎಂಬ ಹೆಸರು ಗಳಿಸಿರುವ ಕೂಡಿಗೆ ಹಾಲಿನ ಡೈರಿಯು ಸದ್ಯದಲ್ಲೇ ಮೇಲ್ದರ್ಜೆಗೆ ಏರಲಿದ್ದು, ಮುಂದಿನ ದಿನಗಳಲ್ಲಿ ನಮ್ಮ ಡೈರಿಯಲ್ಲಿ ಮೊಸರು ಹಾಗೂ ಮಜ್ಜಿಗೆ ಉತ್ಪನ್ನ ತಯಾರಿಕೆ ಘಟಕ ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಎಂದು ಹಾಸನ ಹಾಲು ಒಕ್ಕೂಟ ಕೊಡಗು ಘಟಕದ ನಿರ್ದೇಶಕರಾದ ಕೆ.ಕೆ. ಹೇಮಂತ್ ಕುಮಾರ್ ತಿಳಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಕೂಡಿಗೆ ಹಾಲಿನ ಡೈರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 1955ರಲ್ಲಿ ರಾಜ್ಯದಲ್ಲಿಯೇ ಪ್ರಥಮ ಹಾಲಿನ ಡೈರಿಯಾಗಿ ಕೂಡಿಗೆ ಡೈರಿ ಸ್ಥಾಪನೆಗೊಂಡಿದೆ. ಇದನ್ನು ಮದರ್ ಡೈರಿ ಎಂದು ಕೂಡ ಕರೆಯಲಾಗುತ್ತದೆ. ಇದೀಗ ಕಚೇರಿಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ರು.34 ಲಕ್ಷ ವೆಚ್ಚದಲ್ಲಿ ತಾತ್ಕಾಲಿಕ ಕಚೇರಿ ನಿರ್ವಹಣೆಗೆ ಕಟ್ಟಡ ನಿರ್ಮಿಸಲಾಗುವುದು. ಅಲ್ಲದೆ ಮುಂದಿನ ದಿನಗಳಲ್ಲಿ ರು.20 ಕೋಟಿ ವೆಚ್ಚದಲ್ಲಿ ಕೂಡಿಗೆ ಡೈರಿಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾವುದು ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸುಮಾರು 39 ಹಾಲು…
ಮಡಿಕೇರಿ ಜ.4 NEWS DESK : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಬೈಲಾದಲ್ಲಿ ಇರುವ ನಡಾವಳಿಗಳನ್ನೆ ಮುಂದುವರೆಸಿಕೊಂಡು ಹೋಗಬೇಕೆಂದು ಕಟ್ಟೆಮಾಡು ಗ್ರಾಮದ ಮರಾಠಿ ಜನಾಂಗ ಬಾಂಧವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಜಿ.ವನಿತಾ ಅವರು, ಶ್ರೀಮಹಾ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವದ ಕೊನೆಯ ದಿನದಂದು ದೇವರು ಜಳಕಕ್ಕೆ ತೆರಳುವ ಹಂತದಲ್ಲಿ ಒಂದು ಜನಾಂಗದವರು, ತಮ್ಮ ಸಾಂಪ್ರದಾಯಿಕ ಉಡುಪು ತೊಟ್ಟುಕೊಂಡು ಬಂದಿದ್ದು, ಇದು ಬೈಲಾದಲ್ಲಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದರು. ದೇವಸ್ಥಾನದ ಬೈಲಾವನ್ನು ಗ್ರಾಮದ ಎಲ್ಲಾ ಜನಾಂಗ ಬಾಂಧವರ ಸಮ್ಮುಖದಲ್ಲಿಯೆ ರಚಿಸಲಾಗಿದ್ದು, ದೇವಸ್ಥಾನಕ್ಕೆ ಬಿಳಿ ಪಂಚೆ ಮತ್ತು ಶರ್ಟ್ ಧರಿಸಿ ಬರುವಂತೆ ಹಾಗೂ ಮಹಿಳೆಯರು ಸೀರೆ ಮತ್ತು ಚೂಡಿದಾರ ಧರಿಸುವಂತೆ ತೀರ್ಮಾಸಲಾಗಿದೆ. ಹೀಗಿದ್ದೂ ದೇವಸ್ಥಾನದ ಉತ್ಸವದ ಸಂದರ್ಭ ‘ಕೊಡವ ಸಾಂಪ್ರದಾಯಿಕ ಉಡುಪು’ ಧರಿಸಿ ಬಂದವರಿಂದ ಉತ್ಸವಕ್ಕೆ ಅಡ್ಡಿಯುಂಟಾಗಿದೆ. ಇದು ದೇವಸ್ಥಾನವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳುವ ಪ್ರಯತ್ನವೆಂದು ಆರೋಪಿಸಿದರು. ಸರ್ವ ಗ್ರಾಮಸ್ಥರ ಭಾವನೆಗಳಿಗೆ ಸ್ಪಂದನೆ ನೀಡಿ ದೇವಸ್ಥಾನದ ಬೈಲಾ ನಿಯಮಾವಳಿಯನ್ನು ಮುಂದುವರೆಸಿಕೊಂಡು ಹೋಗಲು ಜಿಲ್ಲಾಡಳಿತ ಅವಕಾಶ…
ಜ.6 ರಿಂದ 12ರ ವರೆಗಿನ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ. ದೂರ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ದೂರ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ಶೀತ ಬರಲಿದೆ. ಮಿತ್ರರಿಂದ ಸಹಾಯ. ಶುಭಸಂಖ್ಯೆ…
ಮಡಿಕೇರಿ ಜ.4 NEWS DESK : ಯಾವುದೇ ಜಾತಿ, ಜನಾಂಗ ಅಥವಾ ಒಂದು ವರ್ಗಕ್ಕೆ ಸೀಮಿತವಾದ ಸಂಪ್ರದಾಯಗಳಿಗೆ ಆದ್ಯತೆ ನೀಡದೆ ದೇವರ ಸನ್ನಿಧಿಯಲ್ಲಿ ಎಲ್ಲರೂ ಒಂದೇ ಎನ್ನುವ ಭಾವನೆಯಿಂದ ಶ್ರೀಮಹಾಮೃತ್ಯುಂಜಯ ದೇವಾಲಯ ಸಮಿತಿ ರೂಪಿಸಿರುವ ಕಟ್ಟುಪಾಡುಗಳಿಗೆ ನಾವು ಬದ್ಧ ಎಂದು ಕಟ್ಟೆಮಾಡು ಗ್ರಾಮದ ಗೌಡ ಸಮುದಾಯ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಪ್ಪಯಂಡ್ರ ಮಣಿ ಮುತ್ತಪ್ಪ ಅವರು ಡಿ.27ರಂದು ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭ ದೇವರು ಜಳಕಕ್ಕೆ ಹೊರಡುವಾಗ ದೇವಾಲಯ ಸಮಿತಿಯ ನಿಯಮವನ್ನು ಮೀರಿ ಕೆಲವರು ಉದ್ದೇಶಪೂರ್ವಕವಾಗಿ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ್ದಾರೆ. ಇದು ದೇವಾಲಯದ ಅಧಿಕಾರ ಹಿಡಿಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಸಂಘರ್ಷ ನಡೆಯುವ ಸಂದರ್ಭ ಎರಡೂ ಕಡೆಯಿಂದ ಮಾತಿಗೆ ಮಾತು ಬೆಳೆದಿದೆ, ತಳ್ಳಾಟವಾಗಿದೆ. ಆದರೆ ಯಾರ ಮೇಲೂ ಹಲ್ಲೆಯಾಗಿಲ್ಲ, ಯಾರನ್ನೂ ದೇವಾಲಯದ ಒಳಗೆ ಬರಬೇಡಿ ಎಂದು ಹೇಳಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿನಾಕಾರಣ ಸುಳ್ಳು ವದಂತಿ ಹಬ್ಬಿಸಲಾಗುತ್ತಿದೆ. ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸತ್ಯಾಂಶ ಸೆರೆಯಾಗಿದ್ದು, ಯಾರು ಬೇಕಾದರೂ ಪರಿಶೀಲಿಸಬಹುದು ಎಂದು ಹೇಳಿದರು.…
ಮಡಿಕೇರಿ ಜ.4 NEWS DESK : ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಈಗ ಅಸ್ತಿತ್ವದಲ್ಲಿರುವ ಆಡಳಿತ ಮಂಡಳಿಯನ್ನು ಉಚ್ಚಾಟಿಸಿ ಸರಕಾರ ದೇವಾಲಯವನ್ನು ತನ್ನ ಅಧೀನಕ್ಕೆ ಪಡೆಯಬೇಕೆಂದು ಅಖಿಲ ಕೊಡವ ಸಮಾಜ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು, ಈಗ ಇರುವ ದೇವಾಲಯ ಆಡಳಿತ ಮಂಡಳಿ ಜಾತಿವಾದಿಯಾಗಿದ್ದು, ಸಂಘರ್ಷಕ್ಕೆ ನಾಂದಿ ಹಾಡಿದೆ. ಅತ್ಯಂತ ಪ್ರಾಚೀನವಾದ ಮಾದೇವ ದೇವಸ್ಥಾನದ ಹೆಸರನ್ನು ಬಾಡಗರಕೇರಿ ಮೃತ್ಯುಂಜಯ ದೇವಾಲಯಕ್ಕೆ ಪರ್ಯಾಯವಾಗಿ ಶ್ರೀಮಹಾಮೃತ್ಯುಂಜಯ ದೇವಾಲಯವೆಂದು ಬದಲಾಯಿಸಿ ಆಡಳಿತ ಮಂಡಳಿ ರಚಿಸಲಾಗಿದೆ ಎಂದು ಆರೋಪಿಸಿದರು. ಮಾದೇವ ದೇವರ ಹೆಸರಿನಡಿ ಸ್ಥಳೀಯ ಸಂಪ್ರದಾಯಕ್ಕೆ ಬದ್ಧವಾಗಿ ಆಡಳಿತ ನಡೆಸಲು ಅಖಿಲ ಕೊಡವ ಸಮಾಜ ಸರಕಾರಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದರು. ಕಟ್ಟೆಮಾಡು ಪಾಪಳಕೇರಿ ಮಾದೇವ ದೇವರ ಸ್ಥಾನಕ್ಕೆ ಸುಮಾರು ಸಾವಿರ ವರ್ಷಗಳ ಇತಿಹಾಸವಿದೆ. ಕೊಡಗಿನಲ್ಲಿ ಪಾಲೇರಿ ರಾಜವಂಶ ಸ್ಥಾಪನೆಯಾಗುವ ಮೊದಲೇ ಈ ದೇವಾಲಯವಿದ್ದು, ಕೆಲವು ಕೊಡವ ಭಾಷಿಕ ಕುಟುಂಬಗಳು ವರ್ಷಾವಧಿ ಪೂಜೆ ನಡೆಸುತ್ತಾ ಬಂದಿರುವುದು…
ಸೋಮವಾರಪೇಟೆ ಜ.4 NEWS DESK : ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕಟ್ಟಡ ದುರಸ್ತಿ ಹಾಗೂ ಬಿಸಿಯೂಟದ ಹಾಲ್ ನಿರ್ಮಾಣಕ್ಕೆ ಅನುದಾನ ಕೋರಿ ಶಾಸಕ ಡಾ.ಮಂತರ್ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ನೂತನ ವರ್ಷಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ಮಕ್ಕಳಿಗೆ ಶಾಸಕರು ಸಿಹಿ ವಿತರಿಸಿದರು. ಇದೇ ಸಂದರ್ಭ ಶಾಲಾ ಮಕ್ಕಳಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಆಲಿಸಿದ ಶಾಸಕರು, ಪಕ್ಕದ ಗ್ರಾಮಗಳಿಂದ ಶಾಲೆಗೆ ಬರುತ್ತಿರುವ ವಿದ್ಯಾರ್ಥಿಗಳಿಗೆ ಎದುರಾಗುತ್ತಿರುವ ಬಸ್ ಸಮಸ್ಯೆ, ಕಾಡಾನೆ ಹಾವಳಿ, ಶಾಲೆ ಸಮೀಪ ಇರುವ ಅರಣ್ಯ ಪ್ರದೇಶದಿಂದ ಚಿಕ್ಕ ಕೀಟಗಳ ಉಪಟಳ ಆಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು. ಸಮಸ್ಯೆಗಳ ಕುರಿತು ತಕ್ಷಣವೇ ಪರಿಹರಿಸಲಾಗುವುದೆಂದು ಶಾಸಕರು ಹೇಳಿದರು. ಶಾಸಕರು ಶಾಲೆಗೆ ಭೇಟಿ ನೀಡಿದ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯೋಗೇಶ್, ಸದಸ್ಯರಾದ ಭರತ್, ಕಾಲೇಜು ಪ್ರಭಾರ ಪ್ರಾಂಶುಪಾಲ ಎಚ್.ಕೆ ಉಮೇಶ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್ ಕುಮಾರ್ ಇದ್ದರು.
ಮಡಿಕೇರಿ ಜ.4 NEWS DESK : ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾವಿತ್ರಿ ಬಾಯಿಫುಲೆ ಅವರ ಜನ್ಮದಿನದ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ದನ್, ಸಾಮಾಜಿಕ ಅನಿಷ್ಟ ಹಾಗೂ ಗೊಡ್ಡು ಸಂಪ್ರದಾಯಗಳ ನಡುವೆ, ಪುರುಷರಂತೆ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಸಿಗಬೇಕು ಎಂದು ಹೋರಾಟ ಮಾಡಿದ್ದಾರೆ ಎಂದರು. ಮಾನವ ಬಂಧುತ್ವ ನಡೆದುಕೊಂಡ ಬಂದ ದಾರಿಯ ಬಗ್ಗೆ ವಿವರಿಸಿದರು. ವಿಜ್ಞಾನವೇ ನಮ್ಮ ನಡೆ ಮೌಡ್ಯದಿಂದ ಹೊರಬನ್ನಿ ಎಂದು ಹೇಳಿದರು. ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಚಂದ್ರಕಲಾ ಮಾತನಾಡಿ, ಸಾವಿತ್ರಿಬಾಯಿಫುಲೆ ಹೆಣ್ಣುಮಕ್ಕಳಿಗೆ ಹಾಗೂ ಮಹಿಳೆಯರಿಗೆ ಶಿಕ್ಷಣ ಸಿಗಬೇಕು, ಮುಖ್ಯವಾಹಿನಿಗೆ ಬರಬೇಕು. ಹೆಣ್ಣು ಅಬಲೆ ಅಲ್ಲ ಸಬಲೆ ಎಂದು ಪ್ರಾತಿಪಾದಿಸಿದ್ದಾರೆ ಎಂದ ಅವರು, ಮಹಿಳೆಯರಿಗೆ ಅವರು…
ಮಡಿಕೇರಿ ಜ.4 NEWS DESK : ಕೊಡ್ಲಿಪೇಟೆಯ ಬೆಸೂರು ಜೈ ಭೀಮ್ ವಿಪ್ಲವ ಯುವ ಬಳಗದ ವತಿಯಿಂದ ಬೆಸೂರಿನಲ್ಲಿ ಜ.5 ರಂದು ಭೀಮ ಕೊರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಬೆಸೂರು ನ್ಯಾಯದಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಜೈ ಭೀಮ್ ವಿಪ್ಲವ ಯುವ ಬಳಗದ ಅಧ್ಯಕ್ಷ ಎನ್.ಆರ್.ರಂಗಸ್ವಾಮಿ (ಪಾಂಡು) ವಹಿಸಲಿದ್ದಾರೆ. ಮುಖ್ಯತಿಥಿಗಳಾಗಿ ಅರಕಲಗೋಡು ಶಾಸಕ ಎ.ಮಂಜು, ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸೀಮೆಂಟ್ ಮಂಜು, ಬೆಸೂರು ಗ್ರಾ.ಪಂ ಅಧ್ಯಕ್ಷರಾದ ಕಮಲಮ್ಮ, ಎಸ್ಸಿ-ಎಸ್ಟಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರ ಪಾಲ್ಗೊಳ್ಳಲಿದ್ದು, ಖ್ಯಾತ ವಕೀಲ ಹಾಗೂ ಅಂಬೇಡ್ಕರ್ ವಿಚಾರವಾದಿ ಪ್ರೊ.ಹರಿರಾಮ್ ಮುಖ್ಯ ಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಕೊಡ್ಲಿಪೇಟೆ ವೃತ್ತದಿಂದ…






