ಲೇಖಕ: admin

ವಿರಾಜಪೇಟೆ ಡಿ.21 NEWS DESK :  ಶಿಕ್ಷಣ ಸಂಸ್ಥೆಗಳು ಒಬ್ಬ ವ್ಯಕ್ತಿಗೆ ಉತ್ತಮ ಶಿಕ್ಷಣ ನೀಡಿ  ಸುಸಂಸ್ಕೃತರನ್ನಾಗಿ ಮಾಡುತ್ತದೆ. ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಉತ್ತಮ ವಿದ್ಯಾರ್ಥಿಯನ್ನು ಕೊಡಗೆಯಾಗಿ ನೀಡುತ್ತದೆ ಎಂದು ಮೈಸೂರು ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿ ಹಾಗೂ ಪ್ರಧಾನ ಧರ್ಮಗುರು ಡಾ.ಬರ್ನಾಡ್ ಮೋರಸ್ ಹೇಳಿದರು. ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಧರ್ಮಗುರುಗಳು ಮನುಜನಿಗೆ ಗ್ರಹಿಸಲು ಜ್ಞಾನಿಸಲು ಶಿಕ್ಷಣ ಬಹುಮುಖ್ಯವಾಗಿದೆ. ಶಿಕ್ಷಿತರೇ ಇಂದು ಭ್ರಷ್ಟಚಾರದಂತ ಕೃತ್ಯಗಳಲ್ಲಿ ಭಾಗಿಗಳಾಗಿ ಸಮಾಜಕ್ಕೆ ಮಾರಕವಾಗಿದ್ದಾರೆ. ತಮ್ಮ ಜೀವನಕ್ಕೆ ಆದ್ಯಾತ್ಮಿಕ ಮೌಲ್ಯಗಳು ಒಳಪಡಿಸಿಕೊಂಡು ಮಾನವನಾಗಿ ಜೀವಿಸಲು ಕಲಿಯಬೇಕು. ಪ್ರತಿಯೋಬ್ಬನು ಶಿಕ್ಷೀತನಾದಲ್ಲಿ  ಮಾತ್ರ ಉತ್ತಮ ಸಮಾಜ ರೂಪಿಸಿಲು ಸಾದ್ಯ. ಈ ನಿಟ್ಟಿನಲ್ಲಿ ಮೈಸೂರು ಧರ್ಮ ಕೇಂದ್ರಕ್ಕೆ ಒಳಪಟ್ಟಿರುವ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಸೃಷ್ಟಿಸಿದೆ. ಇಲ್ಲಿ ವಿದ್ಯಾಭ್ಯಾಸ ಪಡದ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥರಗಳಲ್ಲಿ ಗುರುತಿಸುವಂತಾಗಬೇಕು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಪಾರಿವಾಳಗಳನ್ನು…

Read More

ಮಡಿಕೇರಿ ಡಿ.21 NEWS DESK : ಈ ಬಾರಿಯ ರಾಜ್ಯ ಮಟ್ಟದ ಯುವ ಜನೋತ್ಸವ ದಾವಣಗೆರೆಯಲ್ಲಿ ಜ.4 ಮತ್ತು 5 ರಂದು ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಾನಪದ ನೃತ್ಯ, ಜಾನಪದ ಗೀತೆ, ಕವಿತೆ ಬರೆಯುವುದು, ಚಿತ್ರಕಲೆ, ಕಥೆ ಬರೆಯುವುದು ವಿಷಾಯಧಾರಿತ ಸ್ಪರ್ಧೆ (ವಿಜ್ಞಾನ ಮೇಳ) ಹಾಗೂ ಘೋಷಣೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ತಂಡ ಮತ್ತು ವೈಯಕ್ತಿಯವಾಗಿ ಪ್ರಥಮ ಸ್ಥಾನ ಪಡೆದವರು ಭಾಗವಹಿಸುವಂತೆ ಮನವಿ ಮಾಡಿದರು. ಹಾಜರಾಗುವ ಸ್ಪರ್ಧಿಗಳು ಕೊಡಗು ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಿಂದ ಪ್ರಮಾಣಪತ್ರವನ್ನು…

Read More

ಮಡಿಕೇರಿ ಡಿ.21 NEWS DESK : ಹಾಕತ್ತೂರು ಶಕ್ತಿ ಕೇಂದ್ರದ ನೂತನ ಪ್ರಮುಖ್ ಆಗಿ ಕುಂಜಿಲನ ಎಂ.ಮೋಹನ್, ಸಹ ಪ್ರಮುಖ್ ಆಗಿ ಸಿ.ವಿ.ಸುನೀಲ್ ಆಯ್ಕೆಯಾಗಿದ್ದಾರೆ. ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ಪಿ.ಪಿ.ಸುಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆ ಪ್ರಕ್ರಿಯೆಯನ್ನು ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಾಂಗೀರ ಸತೀಶ್ ಹಾಗೂ ಹಾಕತ್ತೂರು ಶಕ್ತಿ ಕೇಂದ್ರದ ಉಸ್ತುವಾರಿಗಳಾದ ಮೇಕೇರಿಯ ಕಿರಣ ನಡೆಸಿಕೊಟ್ಟರು. ಸಭೆಯಲ್ಲಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಯತೀಶ್, ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ತೇಜಸ್ ನಾಣಯ್ಯ, ಹಾಗೂ ಬೂತ್ ಅಧ್ಯಕ್ಷರುಗಳಾದ ಎಂ.ಎ.ರಮೇಶ್, ಕುಂಟಿಕಾನ ಲಿತೀಶ್, ಮಾಜಿ ಅಧ್ಯಕ್ಷ ಸಜನ್, ಗ್ರಾ.ಪಂ ಸದಸ್ಯರಾದ ಪೊನ್ನಚ್ಚನ ಲೋಕೇಶ್, ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಡಿ.21 NEWS DESK  : ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಸಮುದಾಯದವರಿಗೆ 8 ವಿವಿಧ ರೀತಿಯ `ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ ಎಂದು ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಸುಮಾರು 30 ಸಾವಿರ ಮಂದಿ ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಜನರಿದ್ದಾರೆ. “ಆದಿ ದ್ರಾವಿಡ” ಪರಿಶಿಷ್ಟ ಜಾತಿ ಎಂದು ಜಾತಿ ಪ್ರಮಾಣಪತ್ರ ನೀಡಲು ಸರಕಾರದ ಕ್ರಮ ಕೈಗೊಳ್ಳಬೇಕೆಂದು ಕಳೆದ ಅನೇಕ ವರ್ಷಗಳಿಂದ ಸಂಘಟನೆ ಮೂಲಕ ಒತ್ತಾಯಿಸುತ್ತಾ ಬರಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸರಕಾರ ನಿರ್ದೇಶನ ನೀಡಿದೆ. ಜಿಲ್ಲಾಡಳಿತ ತಾಲ್ಲೂಕು ಕಚೇರಿಗಳಿಗೆ ಆದೇಶ ಮಾಡಿ “ಆದಿ ದ್ರಾವಿಡ” ಎಂದು…

Read More

ಮಡಿಕೇರಿ ಡಿ.21 NEWS DESK : ಇತ್ತೀಚೆಗೆ ಸಂಸತ್ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅಗೌರವ ತೋರುವ ರೀತಿಯಲ್ಲಿ ಹೇಳಿಕೆ ನೀಡಿ ದೇಶದ ಜನರ ಭಾವನೆಗೆ ದಕ್ಕೆ ತಂದಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಗೃಹಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಭಾರತ ದೇಶದಲ್ಲಿ ಸಾವಿರಾರು ಜಾತಿ, ಮತಗಳಿವೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಸರ್ವರಿಗೂ ಸಮಾನ ಹಕ್ಕನ್ನು ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಿದ್ದಾರೆ. ಇದೇ ಕಾರಣಕ್ಕೆ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಿಕೊಳ್ಳುವುದು ಭಾರತೀಯರ ಅಭಿಮಾನಕ್ಕೆ ಸಾಕ್ಷಿಯಾಗಿದೆ. ಆದರೆ ಇದನ್ನೇ ಕೇವಲವಾಗಿ ಕಂಡಿರುವ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಸ್ಮರಿಸುವುದು ಫ್ಯಾಷನ್ ಎಂದು ಹೇಳುವ ಮೂಲಕ ಅಗೌರವ ತೋರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ::: ರವಿ ವಿರುದ್ಧ ಕ್ರಮಕ್ಕೆ ಒತ್ತಾಯ ::: ಬೆಳಗಾವಿ ಅಧಿವೇಶನ…

Read More

ನಾಪೋಕ್ಲು ಡಿ.21 NEWS DESK : ಯಾವುದೇ ಭಾಷೆ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಮಡಿವಂತಿಕೆ ಬಿಟ್ಟು ಸರ್ವರೊಳಗೆ ಒಂದಾಗಿ ಬೆರೆಯಬೇಕು ಎಂದು ಉಪನ್ಯಾಸಕ ಹಾಗೂ ಮೈಸೂರು ಗೌಡ ಸಮಾಜದ ನಿರ್ದೇಶಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಹಾಗೂ ಮೈಸೂರಿನ ವಿವಿಧ ಗೌಡ ಸಂಘಟನೆಗಳ ಆಶ್ರಯದಲ್ಲಿ ನಡೆದ ಅರೆಭಾಷೆ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಭೆ ಸಮಾರಂಭ ಅಲ್ಲದೆ ಇತರರೊಂದಿಗೆ ತಮ್ಮ ಭಾಷೆಯಲ್ಲೇ ವ್ಯವಹರಿಸಿದರೆ ಭಾಷೆ ಮತ್ತು ಸಂಸ್ಕೃತಿ ಉಳಿಯುತ್ತದೆ. ಮಡಿವಂತಿಕೆ ತೋರಿದ ಯಾವುದೇ ಸಂಸ್ಕೃತಿಯಾಗಲಿ, ಭಾಷೆಯಾಗಲಿ, ಜನಾಂಗವಾಗಲಿ ಜಗತ್ತಿನಲ್ಲಿ ಉಳಿಯಲು ಸಾಧ್ಯವಾಗಿಲ್ಲ, ಇಡೀ ಜಗತ್ತನ್ನು ಒಂದು ಕಾಲದಲ್ಲಿ ಆಳಿದ ಇಂಗ್ಲೀಷರು ತಮ್ಮ ಭಾಷೆಯನ್ನು ಜಗತ್ತಿನಲ್ಲಿ ಹಂಚಿದ ಪರಿಣಾಮ ಅವರು ಹೋದ ಮೇಲೂ ಅವರ ಭಾಷೆ ಎಲ್ಲರನ್ನೂ ಆಳುತ್ತಿದೆ, ಆದುದರಿಂದ ಭಾಷೆ ಯಾವುದೇ ಜನಾಂಗಕ್ಕೆ ಸೀಮಿತವಾಗದೆ ಎಲ್ಲರೊಳಗೊಂದಾಗಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ…

Read More

ನಾಪೋಕ್ಲು ಡಿ.21 NEWS DESK : ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ವಾರ್ಷಿಕ ಉತ್ಸವವು ಎರಡು ಪ್ರಮುಖ ಕೋಲಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಮುಂಜಾನೆಯಿಂದಲೇ ವಿವಿಧ ಕೋಲಗಳು, ಶಾಸ್ತಾವು ದೇವರಿಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲಗಳು ನಡೆಯಿತು. ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ವೀಕ್ಷಿಸಿದರು. ಈ ಸಂದರ್ಭ ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಲಾಯಿತು. ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತರಿಗೆ ಅನ್ನದಾನ ನಡೆಯಿತು. ಅಪರಾಹ್ನ ಜರುಗಿದ ವಿಷ್ಣುಮೂರ್ತಿ ಕೋಲದ ಮೇಲೇರಿಯನ್ನು ಭಕ್ತರು ವೀಕ್ಷಿಸಿದರು. ಬೆಳ್ಳಿಯ ಮುಖವಾಡ ಧರಿಸಿ ವಿಷ್ಣುಮೂರ್ತಿ ಕೋಲ ದೇವಾಲಯದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಬರುವುದರೊಂದಿಗೆ ಉತ್ಸವಕ್ಕೆ ತೆರೆ ಬಿತ್ತು. ಉತ್ಸವದ ಅಂಗವಾಗಿ ಭಕ್ತರು ಹರಕೆಯ ಮಣ್ಣಿನ ನಾಯಿಯನ್ನು ಒಪ್ಪಿಸಿದರು. ಉತ್ಸವದ ಮುನ್ನ ಕೊಟ್ಟಿ ಹಾಡುವುದು, ದೀಪಾರಾಧನೆ (ಅಂದಿಬೊಳಕ್)ನೆರವೇರಿತು. ಕೇರಳದ ಚಂಡೆಯೊಂದಿಗೆ ತಿರುವಾಳ ನೃತ್ಯ ಗಮನ ಸೆಳೆಯಿತು.…

Read More

ಮಡಿಕೇರಿ ಡಿ.21 NEWS DESK : ಗೋಣಿಕೊಪ್ಪಲಿನ ಆಲ್ ಸ್ಟಾರ್ ಫುಟ್ಬಾಲ್ ಕ್ಲಬ್ ಗೌರವಾಧ್ಯಕ್ಷರಾಗಿ ಗೋಣಿಕೊಪ್ಪಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅವಿರೋಧ ಆಯ್ಕೆಯಾಗಿದ್ದಾರೆ. ಆಲ್ ಸ್ಟಾರ್ ಎಫ್.ಸಿ ತಂಡದಿಂದ ಗೋಣಿಕೊಪ್ಪಲಿನಲ್ಲಿ ನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕುಲ್ಲಚಂಡ ಪ್ರಮೋದ್ ಗಣಪತಿ ಯುವ ಕ್ರೀಡಾಪಟುಗಳಿಗೆ ನನ್ನ ಎಲ್ಲಾ ರೀತಿಯ ಸಹಕಾರ ಮತ್ತು ‌ಬೆಂಬಲ ಇರಲಿದೆ. ಮೇ ತಿಂಗಳ ಒಂದರಿಂದ ನಾಲ್ಕರವರೆಗೆ ಗೋಣಿಕೊಪ್ಪಲಿನ ಜಿ.ಎಂಪಿ ಶಾಲಾ ಮೈದಾನದಲ್ಲಿ ನಡೆಯಲಿರುವ ಆಲ್ ಸ್ಟಾರ್ ಎಫ್.ಸಿ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಕ್ರೀಡಾಕೂಟವೂ ಯಶಸ್ವಿಯಾಗಿ ನಡೆಯಲಿ ಎಂದು  ಪ್ರಮೋದ್ ಗಣಪತಿ ಶುಭ ಹಾರೈಸಿದರು. ಈ ಸಂದರ್ಭ ಗೋಣಿಕೊಪ್ಪ ಗ್ರಾ.ಪಂ ಉಪಾಧ್ಯಕ್ಷೆ ಮಂಜುಳಾ, ಆಲ್ ಸ್ಟಾರ್ ಎಫ್.ಸಿ‌ ತಂಡದ ಶೀಲಾ ಬೋಪಣ್ಣ, ಎಒನ್ ಶರತ್, ಚುಮ್ಮಿ, ಸಲೀಂ, ರನೀಸ್, ಶಾನಿಫ್,ಬೋಪಣ್ಣ, ಸುಮನ್, ವಿನ್ಸಿ, ಧನುಷ್ ಇದ್ದರು.

Read More

ಸಿದ್ದಾಪುರ ಡಿ.21 NEWS DESK : ಸಂತ ಅನ್ನಮ್ಮ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಪೋಷಕರ ದಿನಾಚರಣೆಯನ್ನ ಸಂಭ್ರಮದಿಂದ ಆಚರಿಸಲಾಯಿತು.  ಪರಿಸರ ಸಂರಕ್ಷಣೆ, ದೇಶಪ್ರೇಮ, ತಂದೆ ತಾಯಿಗಳ ಪ್ರೀತಿ ವಾತ್ಸಲ್ಯ, ಗುರು ಹಿರಿಯರಿಗೆ ಗೌರವ ಸಮರ್ಪಣೆ ಸೇರಿದಂತೆ ಕಿರು ನಾಟಕ ಹಾಗೂ ಹಾಡು, ಸಂಗೀತ ನೃತ್ಯದ ಮೂಲಕ ಹಲವು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು. ಮಡಿಕೇರಿ ತಾಲ್ಲೂಕು ಶಿಕ್ಷಣಾಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಖ್ಯ. ಪೋಷಕರು ತಮ್ಮ ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚು ಪ್ರೋತ್ಸಾಹ ನೀಡಿದ್ದಲ್ಲಿ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.  ಅತಿಯಾದ ಟಿವಿ, ಮೊಬೈಲ್ ಬಳಕೆಯಿಂದ ಪೋಷಕರು ಹಾಗೂ ಮಕ್ಕಳಲ್ಲಿ ಪ್ರೀತಿ ವಾತ್ಸಲ್ಯಗಳು ದೂರವಾಗಿ ಸಹಬಾಳ್ವೆಯ ನೆಮ್ಮದಿಯ ವಾತಾವರಣ ಇಲ್ಲದಂತಾಗುತ್ತದೆ.  ಮಕ್ಕಳ ಶೈಕ್ಷಣಿಕ ಬಲ ವರ್ಧನೆ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಪೋಷಕರು ಸಹಕಾರ…

Read More

ಮಡಿಕೇರಿ ಡಿ.21 NEWS DESK : ಕೊಡಗಿನ ಆದಿವಾಸಿ ಹೋರಾಟಗಾರ ಹಾಗೂ ಆದಿವಾಸಿಗಳ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕರಾಗಿದ್ದ ವೈ.ಕೆ.ಗಣೇಶ್ (49) ಇಂದು ಮುಂಜಾನೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಗಣೇಶ್ ಅವರು ದೀರ್ಘಕಾಲ ಆದಿವಾಸಿಗಳು ಹಾಗೂ ಆದಿವಾಸಿ ಕಾರ್ಮಿಕರ ಪರವಾಗಿ ಹೋರಾಟಗಳನ್ನು ನಡೆಸಿದ್ದರು. ಗಣೇಶ್ ಅವರ ನಿಧನಕ್ಕೆ ಕಾರ್ಮಿಕ ಸಂಘಟನೆಗಳ ಮುಖಂಡರಾದ ಪಿ.ಆರ್.ಭರತ್ ಹಾಗೂ ಹೆಚ್.ಬಿ.ರಮೇಶ್ ಸಂತಾಪ ಸೂಚಿಸಿದ್ದಾರೆ.

Read More