ಲೇಖಕ: admin

ಸಿದ್ದಾಪುರ ಡಿ.21 NEWS DESK : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ನೇತ್ರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ  ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Read More

ಮಡಿಕೇರಿ NEWS DESK ಡಿ.20 : ರೈತರ ಸಿ ಮತ್ತು ಡಿ ಜಮೀನನ್ನು ಮೀಸಲು ಅರಣ್ಯವನ್ನಾಗಿ ಪರಿವರ್ತಿಸುವ ಆದೇಶವನ್ನು ವಿರೋಧಿಸಿ, ‘ನಮ್ಮ ಭೂಮಿ ನಮ್ಮ ಹಕ್ಕು’ ಘೋಷಣೆಯೊಂದಿಗೆ ಸಹಸ್ರಾರು ಕೃಷಿಕರು ರೈತ ಹೋರಾಟ ಸಮಿತಿ ಮತ್ತು ಕೊಡಗು ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಜಾಥ ನಡೆಸಿದರು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಸಮಾಧಾನ ವ್ಯಕ್ತಪಡಿಸಿದರು. ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹಾಗೂ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಅವರುಗಳ ನೇತೃತ್ವದಲ್ಲಿ ಪಕ್ಷಾತೀತವಾದ ಬೃಹತ್ ಜಾಥ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಆರಂಭಗೊಂಡು ನಗರದ ಖಾಸಗಿ ಬಸ್ ನಿಲ್ದಾಣವನ್ನು ಹಾದು, ಗಾಂಧಿ ಮೈದಾನದವರೆಗೆ ಸಾಗಿತು. ನಗರ ಸಾವಿರಾರು ಪ್ರತಿಭಟನಾಕಾರರಿಂದಾಗಿ ಹಸಿರುಮಯವಾಯಿತು, ಅಲ್ಲದೆ ವಾಹನಗಳ ಸಂಚಾರ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತು. ಗಾಂಧಿ ಮೈದಾನದಲ್ಲಿ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ರೈತರ ಪರ ಹೋರಾಟಗಾರ ಶೃಂಗೇರಿಯ ಸುಧೀರ್ ಕುಮಾರ್…

Read More

ಮಡಿಕೇರಿ ಡಿ.20 NEWS DESK : ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನದ ವರೆಗೆ ಕೈಗೊಂಡ ಸಿರಿಧಾನ್ಯ ನಡಿಗೆ ಹಾಗೂ ಪಾಕ ಸ್ಪರ್ಧೆಯನ್ನು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ಭಾಗವಹಿಸಿರುವ ರೈತ ಮಹಿಳೆಯರಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎನ್‍ಆರ್‍ಎಲ್‍ಎಂ ಯೋಜನೆಯಡಿ ಸಹಾಯಧನ ನೀಡಿ ಮಾರಾಟಕ್ಕೆ ಸಂಪರ್ಕ ಕಲ್ಪಿಸುವ ಬಗ್ಗೆ ಸಹಕಾರ ನೀಡುವುದಾಗಿ ತಿಳಿಸಿದರು. ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳಿಂದ ಒಟ್ಟು 58 ಸ್ಪರ್ಧಿಗಳು ಭಾಗವಹಿಸಿ, 90ಕ್ಕೂ ಹೆಚ್ಚು ತಿನಿಸುಗಳನ್ನು ಪ್ರದರ್ಶಿಸಿದರು. ಸಿರಿಧಾನ್ಯದಿಂದ ತಯಾರಿಸಿದ ಸಿಹಿ ತಿನಿಸುಗಳಲ್ಲಿ ಸಿರಿಧಾನ್ಯ ಫಿಗ್(ಅಂಜೂರ) ಡಿಲೈಟ್, ರಾಗಿ ಗಿಣ್ಣು ಹಾಗೂ ಖಾರ ತಿನಿಸುಗಳಲ್ಲಿ ಸಿರಿಧಾನ್ಯ ಪಾಸ್ತಾ ಜೊತೆಗೆ ಕೊಡಗು ಜಿಲ್ಲೆಯ ಮರೆತು ಹೋದ ಖಾದ್ಯಗಳಲ್ಲಿ ಪ್ರಮುಖವಾಗಿ ಎಲಗದ ಮರದ ಚಕ್ಕೆಯ ಗಿಣ್ಣು, ಹುರುಳಿ ಕಡುಬು ಹಾಗೂ ಕೆಂಜಿಗ ಕುಡಿ ಎಲೆ ಚಟ್ನಿ ಪ್ರಮುಖವಾಗಿ…

Read More

ಮಡಿಕೇರಿ ಡಿ.20 NEWS DESK : ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://ssp.karnataka.gov.in ಮೂಲಕ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್‍ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‍ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು(ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ (ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನೋಪೈಡ್ ಪ್ರಮಾಣ ಪತ್ರ, ಪ್ರಸಕ್ತ…

Read More

ಮಡಿಕೇರಿ ಡಿ.20 NEWS DESK : ಮಹಿಳೆಯರು ಎಂದರೆ ಶಕ್ತಿ ಸ್ವರೂಪ. ಆದರೆ ಇಂತಹ ಮಹಿಳೆಯರಿಗೆ ಹೆಚ್ಚಿನ ದೌರ್ಜನ್ಯವಾಗುತ್ತಿದೆ. ಎಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತದೋ ಅಲ್ಲಿ ದೇವತೆಗಳು ಇರುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದರು. ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ಬಾಲಭವನದಲ್ಲಿ ನಡೆದ ಮಹಿಳೆಯರಿಗಾಗಿ ಕಾನೂನು ಅರಿವು ವಿಧಾನ ಸೆ ಸಮಾದಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಿದರೂ ಸಹ ಸಾಕಷ್ಟು ಅನ್ಯಾಯಗಳು ನಡೆಯುತ್ತಿವೆ. ಹಾಗೆಯೇ ಮಹಿಳೆಯರಿಗಾಗಿ ವಿಶೇಷ ಕಾನೂನು ಕಾರ್ಯಕ್ರಮಗಳಿವೆ. ಅದನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಮಹಿಳೆಯರ ಹಕ್ಕುಗಳ ಬಗ್ಗೆ ಹೆಚ್ಚಿನ ಧ್ವನಿ ಎತ್ತಿದವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಹೇಳಿದರು. ಮೊದಲು ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ…

Read More

ಮಡಿಕೇರಿ ಡಿ.20 NEWS DESK : ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 06 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿ (Provisional verifivation list) ನ್ನು ಡಿಸೆಂಬರ್, 20 ರಂದು ಕೊಡಗು ಜಿಲ್ಲಾ ವೆಬ್‍ಸೈಟ್  http://kodagu.nic.in ನಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ 2025 ರ ಜನವರಿ, 08 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯ ಕಚೇರಿ ಸಭಾಂಗಣದಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ 08272-225811/ 225500 ಗೆ ಕರೆ ಮಾಡಿ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು…

Read More

ಮಡಿಕೇರಿ ಡಿ.20 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಚೊಕ್ಕಾಡಿ ಎನ್.ಅಪ್ಪಯ್ಯ ಆಯ್ಕೆಯಾಗಿದ್ದಾರೆ. ನಗರದ ಗೌಡ ಸಮಾಜದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶೆಟ್ಟಜನ ಗಣಪತಿ, ಕಾರ್ಯದರ್ಶಿ ಪುದಿಯನೆರವನ ರೇವತಿ, ಖಜಾಂಚಿ ಕುಯ್ಯಮುಡಿ ಅಶ್ವಿನಿ ಕುಮಾರ್ ಹಾಗೂ ಸಹ ಕಾರ್ಯದರ್ಶಿಯಾಗಿ ಕಟ್ರತನ ಲಲಿತಾ ಅಯ್ಯಣ್ಣ ಆಯ್ಕೆಯಾದರು. ಇತ್ತೀಚಿಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಡಳಿತ ಮಂಡಳಿಗೆ 16 ನಿರ್ದೇಶಕರುಗಳನ್ನು ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಡಿ.20 NEWS DESK : ಮಡಿಕೇರಿಯ ಕನಕ ದಾಸ ರಸ್ತೆಯು ಸಂಪೂರ್ಣವಾಗಿ ಹದಗಿಟ್ಟಿದ್ದು, ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ತಕ್ಷಣವೇ ರಸ್ತೆ ದುರಸ್ತಿ ಕಾರ್ಯ ನಡೆಸುವಂತೆ ನಗರ ಸಭಾ ಸದಸ್ಯ ಎಂ.ಎ.ಮುಸ್ತಫಾ ಒತ್ತಾಯಿಸಿದ್ದಾರೆ.  ನಗರಸಭೆ ಪೌರಾಯುಕ್ತ ಹೆಚ್.ಆರ್.ರಮೇಶ್‍ಗೆ ಮನವಿ ಸಲ್ಲಿಸಿದ ಅವರು, ರಸ್ತೆ ಅವ್ಯವಸ್ಥೆ ಕುರಿತು ಗಮನ ಸೆಳೆದರು. ಈಗಾಗಲೇ ಈ ರಸ್ತೆಯಲ್ಲಿ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುವಂತಾಗಿದ್ದು, ತಕ್ಷಣ ದುರಸ್ತಿ ಪಡಿಸುವಂತೆ ಒತ್ತಾಯಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಪೌರಾಯುಕ್ತರು ಶೀಘ್ರದಲ್ಲೇ ಸರಿಪಡಿಸಲಾಗುವುದೆಂದು  ಭರವಸೆ ನೀಡಿದರು.

Read More

ಮಡಿಕೇರಿ ಡಿ.20 NEWS DESK : ಸಂವಿಧಾನದ ಮೂಲಕ ದೇಶದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರುವ ರೀತಿಯ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂದು ಅಮಿತ್ ಶಾ ಅವರು ಅಧಿಕಾರದ ಉನ್ನತ ಸ್ಥಾನಕ್ಕೇರಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣವಾಗಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲ ತುಂಬಿದ ಹೆಗ್ಗಳಿಕೆ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಈ ಕಾರಣಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಸ್ಮರಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ತಪ್ಪಿಗಾಗಿ ಅಮಿತ್ ಶಾ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ರಾಷ್ಟ್ರಪತಿಗಳು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Read More

ಕುಶಾಲನಗರ ಡಿ.20 NEWS DESK  :  ಗೋಣಿಕೊಪ್ಪಲಿನ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಪ್ರಗತಿಪರ ಕೃಷಿಕ ಹೆಚ್.ಎಸ್.ಮಹೇಶ್ ಅವರ ತೋಟದಲ್ಲಿ ಕೃಷಿ ಕ್ಷೇತ್ರೋತ್ಸವ ನಡೆಯಿತು.  ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಡಾ.ವೀರೇಂದ್ರಕುಮಾರ್ ನೆರೆದಿದ್ದ ಕೃಷಿಕರಿಗೆ ಮಾಹಿತಿ ನೀಡಿದರು. 2013 ರಲ್ಲಿ ಪೆಪ್ಪರ್ ಗೆ ದೊರೆತ ಅತ್ಯಧಿಕ ದರಕ್ಕೆ ಮಾರು ಹೋದ ಬಹಳಷ್ಟು ಮಂದಿ ಕೃಷಿಕರು ಪೆಪ್ಪರ್ ಬೆಳೆಯತ್ತ ಮಾರುಹೋದರು. ಆದರೆ, ಪೆಪ್ಪರ್ ಬೆಳೆಯನ್ನು ಬೆಳೆಯುವ ವಿಧಾನಗಳನ್ನು ಅರಿಯದಾದ ಬಹಳಷ್ಟು ಮಂದಿ ಬೆಳೆಗಾರರು, ಪೆಪ್ಪರ್ ಗೆ ಬಾಧಿಸುವ ರೋಗಗಳನ್ನು ಹತೋಟಿ ಮಾಡಲಾಗದೇ ಬೆಳೆಯಿಂದ ವಿಮುಕ್ತರಾದರು. ಕುಶಾಲನಗರ ತಾಲ್ಲೂಕಿನಲ್ಲಿ ಪೆಪ್ಪರ್ ಬೆಳೆಗೆ ಸೂಕ್ತವಾದ ವಾತಾವರಣ ವಿದ್ದು ಬೆಳೆಗಾರರು ಮಿಶ್ರ ಮಾದರಿಯ ಪೆಪ್ಪರ್ ಗಿಡಗಳನ್ನು ಬೆಳೆಸುವಂತೆ ಸಲಹೆ ನೀಡಿದರು.  ಕೊಡಗು ಜಿಲ್ಲೆಯಲ್ಲಿ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪೆಪ್ಪರ್ ಬೆಳೆ ಕೈಗೊಳ್ಳಲಾಗಿದೆ. ಈ ಪೈಕಿ ಶೇ 80 ಭಾಗ ಪಣೀರ್ 1 ತಳಿಯದ್ದಾಗಿದೆ. ಆದರೆ, ಮುಂದಿನ…

Read More