ಲೇಖಕ: admin

ಮಡಿಕೇರಿ NEWS DESK ಡಿ.20 : ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ::: ಬೇಡಿಕೆಗಳು ::: *ಅವೈಜ್ಞಾನಿಕವಾಗಿ ಮಾಡಿರುವ ಸಿ & ಡಿ ಸರ್ವೆಯನ್ನು ರದ್ದುಗೊಳಿಸಿ, ಮರು ಸರ್ವೆ ಮಾಡಿ ರೈತರ ವ್ಯವಸಾಯ ಮಾಡಿರುವ ಭೂಮಿಯನ್ನು ರೈತರ ಹೆಸರಿಗೆ ಮಂಜೂರು ಮಾಡಬೇಕು. *ಯಾವುದೇ ಮಾಹಿತಿ ಇಲ್ಲದೆ ಮಾಡಿರುವ ಮೀಸಲು ಅರಣ್ಯ, ಸೆಕ್ಷನ್ 4/5 ಅನ್ನು ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು. *ಅರಣ್ಯ ಹಾಗೂ ಕಂದಾಯ ಇಲಾಖೆಯವರು ವಾಸ್ತವತೆ ಅರಿಯದೆ ಮಾಡಿರುವ ಡೀಮ್ಸ್ ಫಾರೆಸ್ಟ್ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. *ಕಸ್ತೂರಿರಂಗನ್ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿರಸ್ಕರಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದ ಹಾಗೆ ಕೇರಳ ಮಾದರಿಯಂತೆ ಚಾರಿ ಮಾಡಬೇಕು. *ಊರುಉಡುವೆ, ದೇವರಕಾಡು, ಗೋಮಾಳ ಇವುಗಳನ್ನು ನಮ್ಮ ಪೂರ್ವಿಕರು ಊರಿನ ಹಿತದೃಷ್ಠಿಯಿಂದ ಮೀಸಲು ಮಾಡಿರುವ…

Read More

ಮಡಿಕೇರಿ ಡಿ.20 NEWS DESK : ವಿರಾಜಪೇಟೆ ತಾಲ್ಲೂಕು ಪೆರಂಬಾಡಿ ಬಡಾವಣೆಯ ರಸ್ತೆ ಕಾಮಗಾರಿಯು ರೂ.3.60 ಲಕ್ಷ ವೆಚ್ಚದಲ್ಲಿ ಇದೀಗ ಪೂರ್ಣಗೊಂಡಿದೆ.  ಕಾಂಕ್ರೀಟ್ ಕಾಣದೆ ಸಾರ್ವಜನಿಕರಿಗೆ ಓಡಾಡಲು ತುಂಬಾ ದುಸ್ತರವಾಗಿದ್ದ ಈ ರಸ್ತೆಗೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿಶೇಷ ಕಾಳಜಿಯಲ್ಲಿ 73 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಪೂರ್ಣಗೊಂಡಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಈ ಕಾಮಗಾರಿಗೆ ಅನುದಾನ ಮಂಜೂರು ಮಾಡಿದ ಶಾಸಕ ಪೊನ್ನಣ್ಣ, ಸಹಕರಿಸಿದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಗ್ರಾಮ ಪಂಚಾಯತಿ ಸದಸ್ಯರಾದ ಉಪೇಂದ್ರ ಮತ್ತು  ವಲಯ ಅಧ್ಯಕ್ಷ ಅನೂಪ್, ಜಾಫರ್ ಗೆ ಪೆರಂಬಾಡಿ ಬಡಾವಣೆ ನಿವಾಸಿಗಳು ಧನ್ಯವಾದ ಅರ್ಪಿಸಿದ್ದಾರೆ.

Read More

ಮಡಿಕೇರಿ ಡಿ.20 NEWS DESK : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಪ್‍ಸಿಐ), ಮೈಸೂರು ಹಾಗೂ ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್(ಐಎಚ್‍ಎಂ) ಬೆಂಗಳೂರು ಅವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಫುಡ್ ಮತ್ತು ಬೇವರೇಜ್ ಸರ್ವೀಸ್ ಸ್ಟೀವರ್ಡ್ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಪಾಸ್ ಆಗಿರಬೇಕು. ತರಬೇತಿ ಅವಧಿ 4 ತಿಂಗಳು, ಪ್ರತಿ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 100 ಪ್ರತಿ ತರಬೇತಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ 49 ಆಗಿದೆ. ರೂಮ್ ಅಟೆಂಡೆಂಟ್ ವಿದ್ಯಾರ್ಹತೆ 5 ನೇ ತರಗತಿ ಪಾಸ್, ಅವಧಿ 4 ತಿಂಗಳು, ಪ್ರತಿ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 30 ಪ್ರತಿ ತರಬೇತಿಗೆ ಪರಿಶಿಷ್ಟ…

Read More

ಮಡಿಕೇರಿ NEWS DESK ಡಿ.20 : ವಿಶ್ವಕ್ಕೇ ಮಾದರಿಯಾಗಿರುವ ಮಹಾನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಂಸತ್ ನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ಕೇಂದ್ರ ಸರಕಾರ ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಾ.ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡನೀಯ. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ತಪ್ಪಿದಲ್ಲಿ ಸರಕಾರವೇ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಮಾನ ಮಾಡುವ ರೀತಿಯಲ್ಲಿ ನೀಡಿರುವ ಹೇಳಿಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮನೋಸ್ಥಿತಿಯನ್ನು ಬಹಿರಂಗ ಪಡಿಸಿದೆ. ಅಂಬೇಡ್ಕರ್ ಅವರ ಹೆಸರಿಗೆ ಮಸಿ ಬಳಿಯುವ ಕಾರ್ಯ ಬಿಜೆಪಿಗೆ ಹೊಸದೇನಲ್ಲ. ನಿರಂತರವಾಗಿ ನಡೆದುಕೊಂಡು ಬಂದಿರುವ ಈ ಪ್ರಕ್ರಿಯೆ ಅಮಿತ್ ಶಾ…

Read More

ಮಡಿಕೇರಿ ಡಿ.20 NEWS DESK :ಮಗ್ಗುಲ 66/33/11ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಡಿ.21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿರಾಜಪೇಟೆ ಪಟ್ಟಣ, ಸಿದ್ದಾಪುರ, ಮೂರ್ನಾಡು, ಅಮ್ಮತ್ತಿ, ಗೋಣಿಕೊಪ್ಪ, ವಿರಾಜಪೇಟೆ, ಬೇತ್ರಿ, ಪಾಲಂಗಾಲ, ಚೆಂಬೆಬೆಳ್ಳೂರು, ಹೆಗ್ಗಳ, ಕೆ.ಎಸ್.ಬಿ. ಬಿ.ಶೆಟ್ಟಿಗೇರಿ, ಬಿಟ್ಟಂಗಾಲ, ಕೆದಮುಳ್ಳೂರು, ಕದನೂರು, ಕಾಕೋಟುಪರಂಬು, ಹೆಗ್ಗಳ, ಬೇಟೋಳಿ, ಆರ್ಜಿ, ಕರಡಿಗೋಡು, ಗುಹ್ಯ, ಕಡಂಗಮರೂರು, ಚೆಂಬೆಬೆಳ್ಳೂರು, ಕಣ್ಣಂಗಾಲ, ಕೊಂಡಂಗೇರಿ, ಹಾಲುಗುಂದ, ಮಾಲ್ದಾರೆ, ಇಂಜಿಲಗೇರಿ, ಹೊದ್ದೂರು, ನಾಪೋಕ್ಲು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿವಾಹಕ ಎಂಜಿನಿಯರ್ ಕೋರಿದ್ದಾರೆ.

Read More

  ಮಡಿಕೇರಿ ಡಿ.20 NEWS DESK : ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಜಾಗೃತಿ ನಡಿಗೆ ಕಾರ್ಯಕ್ರಮ ನಡೆಯಿತು. ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ನಡೆದ ಜಾಥಾವನ್ನು ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು. ಕೃಷಿ ಇಲಾಖೆಯಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆ ನಡೆಯಲಿದೆ.

Read More

ಮಡಿಕೇರಿ NEWS DESK ಡಿ.19 : ಕೊಡಗು ಜಿಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಇದರ ವಿವಿಧ ಶಾಖೆೆಗಳು ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 34,95,016 ರೂ. ವಂಚಿಸಿರುವ ಪ್ರಕರಣದ 12 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅವರು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ನಗರದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಶಾಖೆಯಲ್ಲಿ ಮೊಹಮ್ಮದ್ ರಿಜ್ವಾನ್ ಕೆ.ಎ.ಎಂಬಾತ ಇದೇ ಡಿ.4 ರಂದು 8 ಚಿನ್ನದ ಬಳೆಗಳನ್ನು ಅಡಮಾನವಿಟ್ಟು ಸಾಲ ಪಡೆಯುವ ಸಂದರ್ಭ, ಆಭರಣಗಳನ್ನು ಪರಿಶೀಲಿಸಿದಾಗ ಅವುಗಳು ನಕಲಿ ಎನ್ನುವುದು ಕಂಡು ಬಂದಿದೆ. ಇದೇ ರೀತಿ ಎಮ್ಮೆಮಾಡು ನಿವಾಸಿಗಳಾದ ರಿಯಾಜ್, ಖತೀಜಾ, ಮೊಹಮ್ಮದ್ ಹನೀಫ್, ಕುಂಜಿಲ ಗ್ರಾಮದ ನಿವಾಸಿಗಳಾದ ಅಬ್ದುಲ್ ನಾಸೀರ್, ಮೂಸಾ ಮತ್ತು ಹಂಸ ಎಂಬವರು ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಕಡಂಗಗಳಲ್ಲಿನ ಕೆಡಿಸಿಸಿ ಬ್ಯಾಂಕ್, ಮಡಿಕೇರಿಯ ಮುತ್ತೂಟ್ ಫಿನ್ ಕಾರ್ಪ್ ಮತ್ತು ಭಾಗಮಂಡಲ ವಿಎಸ್‌ಎಸ್‌ಎನ್ ಬ್ಯಾಂಕ್‌ಗಳಲ್ಲಿ…

Read More

ಮಡಿಕೇರಿ ಡಿ.19 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳು ಡಿ.20 ರಂದು ಮಡಿಕೇರಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನೈತಿಕ ಬೆಂಬಲ ನೀಡಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿ ಮತ್ತು ಡಿ ಭೂಮಿ ಸಮಸ್ಯೆಗೆ ಪರಿಹಾರ ಸೂಚಿಸುವ ಬದಲು ಗೊಂದಲ ಸೃಷ್ಟಿಸಲಾಗಿದೆ. ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ರೈತರ ಭೂಮಿ ಕಸಿದುಕೊಳ್ಳುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ. ಹೊರಗಿನ ಬಂಡವಾಳಶಾಹಿಗಳು ಕಬಳಿಕೆ ಮಾಡಿಕೊಂಡಿರುವ ಸಾವಿರಾರು ಎಕರೆ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಲು ವಿಫಲವಾಗಿರುವ ಸರಕಾರ ಸಣ್ಣ ರೈತರನ್ನು ಗುರಿ ಮಾಡಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡುತ್ತಿದೆ. 99 ವರ್ಷಗಳಿಗೆ ಗುತ್ತಿಗೆ ನೀಡಿದ ಭೂಮಿಯನ್ನು 999 ವರ್ಷಗಳೆಂದು ವಂಚಿಸಿದ ದೊಡ್ಡ ಬಂಡವಾಳಶಾಹಿಗಳನ್ನು ತೆರವುಗೊಳಿಸುವಂತೆ ನ್ಯಾಯಾಲಯದ ಆದೇಶವಿದ್ದರೂ ಕ್ರಮ ಕೈಗೊಳ್ಳದ ಸರಕಾರ ಸ್ಥಳೀಯ ರೈತರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು…

Read More

ಮಡಿಕೇರಿ ಡಿ.19 NEWS DESK : ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಮೈಸೂರು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಗೆ 218 (ಪರಿಶಿಷ್ಟ ಜಾತಿ-9, ಪರಿಶಿಷ್ಟ ಪಂಗಂಡ 189, ಸಾಮಾನ್ಯ 20) ಗುರಿ ನಿಗಧಿಯಾಗಿದ್ದು ಆಯ್ಕೆಯಾಗುವ ಪ್ರತಿ ಫಲಾನುಭವಿಗಳಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಅರ್ಜಿಯನ್ನು ಭರ್ತಿ ಮಾಡಿ ಡಿಸೆಂಬರ್, 27 ರೊಳಗೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ 9448647276, ವಿರಾಜಪೇಟೆ 9141093996, ಪೆÇನ್ನಂಪೇಟೆ 9480669439, ಸೊಮವಾರಪೇಟೆ 9980360200, ಕುಶಾಲನಗರ 9448422269 ಇವರನ್ನು ಸಂಪರ್ಕಿಸಬಹುದು. ಆಸಕ್ತ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ವಿರಾಜಪೇಟೆ ಡಿ.19 NEWS DESK : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಭಾರತ ಭೂಷಣ ಹಾಗೂ ಕರುನಾಡ ಭೂಷಣ ರಾಷ್ಟ್ರೀಯ ಪ್ರಶಸ್ತಿ ಮತ್ತು ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕೆಪಿಸಿಸಿ ಸಂಯೋಜಕ ಮಂಜುನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಶಿಧರ್ ಕೋಟೆ, ಡಾ.ಕೆಂಚನೂರು ಶಂಕರ್, ಡಾ.ಶ್ರೀಧರ್, ಕಾಂತಿ ಶೆಟ್ಟಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋತಾಪುರಿ ಸೋಮಶೇಖರ ಗುರೂಜಿ ಕಲೆಯನ್ನು ಪ್ರೋತ್ಸಾಹಿಸಬೇಕು ಎಂದು ಹಿತನುಡಿಗಳನ್ನಾಡಿದರು. ಮಲ್ಲಿಕಾ ಕೇಶವ್, ವೆಂಕಟರಾಜು ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್‍ನ ಪ್ರೇಮಂಜಲಿ ಇದ್ದರು. ಅನೇಕ ಕಡೆಗಳಿಂದ ನೃತ್ಯ ತಂಡಗಳು ಆಗಮಿಸಿ ಉತ್ತಮ ನೃತ್ಯ ಪ್ರದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 80 ಜನರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More