ಲೇಖಕ: admin

ಬೆಂಗಳೂರು ಜ.3 NEWS DESK : ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ’’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ ಮತ್ತು ನರರೋಗಗಳ ರಾಷ್ಟ್ರೀಯ ಸಂಸ್ಥೆ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ಬಂದಿದ್ದು, ದೇಶದ ಪ್ರಮುಖ ಸಂಸ್ಥೆಯಾಗಿ ತನ್ನ ಛಾಪು ಮೂಡಿಸಿದೆ. ಮೈಸೂರು ಸರ್ಕಾರದ ಮಾನಸಿಕ ಆಸ್ಪತ್ರೆ ಮತ್ತು ಭಾರತೀಯ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಒಗ್ಗೂಡಿಸುವ ಮೂಲಕ ಪ್ರಾರಂಭವಾದ ನಿಮ್ಹಾನ್ಸ್, ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ…

Read More

ಮಡಿಕೇರಿ ಜ.3 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ನಾಟಕ19 ಬೆಟಾಲಿಯನ್ ಆರ್ಮಿ ವಿಂಗ್ ಗೆ ಕೊಡಗಿನ ಎಂ.ಆರ್.ಹೇಮಂತ್ ಆಯ್ಕೆಯಾಗಿದ್ದಾನೆ. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿರುವ ಹೇಮಂತ್ ಕಾಟಕೇರಿ ಗ್ರಾಮದ ಮಜ್ಜೇಗೌಡನ ರಾಜೇಶ್ ಮತ್ತು ಪ್ರಮೀಳಾ ದಂಪತಿಯ ಪುತ್ರ.

Read More

ಬೇಕಾಗುವ ಸಾಮಾಗ್ರಿಗಳು :: ಮೊಟ್ಟೆ- 5, ಬ್ರೆಡ್ ತುಂಡು- 5, ಟೊಮೆಟೊ- 1, ಈರುಳ್ಳಿ- 2, ಹಸಿ ಮೆಣಸಿನಕಾಯಿ- 3,  ಕೊತ್ತಂಬರಿ ಸೊಪ್ಪು- ಸ್ವಲ್ಪ, ಹಾಲು- 3 ಚಮಚ,  ಎಣ್ಣೆ- 3 ಚಮಚ,  ಬೆಣ್ಣೆ- 2 ಚಮಚ,  ಉಪ್ಪು- ರುಚಿಗೆ ತಕ್ಕಷ್ಟು. ಮಾಡುವ ವಿಧಾನ ::  ಮೊಟ್ಟೆಯನ್ನು ಒಡೆದು ಒಂದು ಬಟ್ಟಲಿನಲ್ಲಿ ಹಾಕಿ ಚೆನ್ನಾಗಿ ಕಲಸಬೇಕು. ಅದಕ್ಕೆ ಹಾಲು ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಬೇಕು. ನಂತರ ಸಣ್ಣದಾಗಿ ಕತ್ತರಿಸಿದ ಹಸಿ ಮಣಸಿನಕಾಯಿ, ಟೊಮೆಟೊ ಮತ್ತು ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕ ಉಪ್ಪು ಹಾಕಿ ಮತ್ತೊಮ್ಮೆ ಚೆನ್ನಾಗಿ ಕಲಸಬೇಕು. ಒಂದು ಪ್ಯಾನ್‌ನಲ್ಲಿ ಎಣ್ಣೆ ಹಾಕಿ ಬಿಸಿಯಾದಾಗ ಸಣ್ಣದಾಗಿ ಕತ್ತರಿಸಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಅದಕ್ಕೆ ಮೊಟ್ಟೆಯ ಮಿಶ್ರಣವನ್ನು ಹಾಕಿ ಕಮ್ಮಿ ಉರಿಯಲ್ಲಿ ಫ್ರೈ ಮಾಡಬೇಕು. ಮೊಟ್ಟೆ ಫ್ರೈ ಆದ ನಂತರ ಉರಿಯಿಂದ ತೆಗೆದು ಬದಿಯಲ್ಲಿಡಿ. ಎರಡು ಬ್ರೆಡ್‌ ತುಂಡುಗಳ ಒಂದೊಂದು ಬದಿಯಲ್ಲಿ ಬೆಣ್ಣೆ ಸವರಿ ಅದರ ಮಧ್ಯದಲ್ಲಿ ಮೊಟ್ಟೆ…

Read More

ಶ್ರೀ ಕಾಂತೇಶ್ವರ ದೇವಸ್ಠಾನ, ಕಾಂತಾವರ ಶಿಲ್ಪ ಕಲೆಗಳ ಬೀಡಾದ ಕರ್ನಾಟಕವು ಅನೇಕ ಪುಣ್ಯ ಕ್ಷೇತ್ರಗಳಿಗೆ ಸಾಕ್ಷಿಯಾಗಿದೆ. ಅಂತಹವುಗಳಲ್ಲಿ ಕರಾವಳಿಯ ಪಶ್ಚಿಮ ಘಟ್ಟದ ತಪ್ಪಲ್ಲಿನಲ್ಲಿರುವ ಶಿವನ ದೇಗುಲವಾದ ಕಾಂತಾವರದ ಕಾಂತೇಶ್ವರ ದೇವಾಲಯವೂ ಒಂದಾಗಿದೆ. ಕಾಂತೇಶ್ವರ ದೇವಸ್ಥಾನವು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿದೆ. ಇದು ಉಡುಪಿಯಿಂದ ೪೦ ಕಿ.ಮೀ ದೂರದಲ್ಲಿದೆ. ಇದು ಪಡುಬಿದ್ರಿಯಿಂದ ಕಾರ್ಕಳಕ್ಕೆ ಹೋಗುವ ರಸ್ತೆಯಲ್ಲಿನ ಬೆಳವಾಯಿಯಿಂದ ಸ್ವಲ್ಪವೇ ದೂರದಲ್ಲಿದೆ. ಇತಿಹಾಸ ::  ಅತ್ಯಂತ ಹಳೆಯ ದೇವಾಲಯಗಳಲ್ಲಿ ಒಂದಾದ ಈ ದೇವಸ್ಥಾನ 7ನೇ ಶತಮಾನಕ್ಕೆ ಸೇರಿದ್ದು ಎನ್ನಲಾಗುತ್ತದೆ. ಇಲ್ಲಿನ ಮೂಲದೈವ ಕಾಂತೇಶ್ವರ. ಇಲ್ಲಿ ಗಣೇಶ, ಅಣ್ಣಪ್ಪ ಹಾಗೂ ಅರ್ಧನಾರೀಶ್ವರ ಗುಡಿಯೂ ಇದೆ. ಕಾಂತಾರ ಎಂದರೆ ಅರಣ್ಯ. ಈ ಕ್ಷೇತ್ರವು ಹಿಂದೆ ಅರಣ್ಯದಿಂದ ಕೂಡಿತ್ತು ಈ ಕಾರಣದಿಂದಾಗಿ ಈ ಊರಿಗೆ ಕಾಂತವರ ಎಂಬ ಹೆಸರು ಬಂದಿದೆ ಎಂಬ ಪ್ರತೀತಿಯಿದೆ. ಹಾಗೆಯೇ ಜಂಜವಾತ ಎನ್ನುವ ಅಸುರನ ಕುಟುಂಬ ಇಲ್ಲಿ ನೆಲೆಸಿದ್ದರಂತೆ. ಅವರ ಕುಟುಂಬ ಇಲ್ಲಿ ತಪಸ್ಸು ಮಾಡುತ್ತಿದ್ದ ಮುನಿಗಳಿಗೆ ಕಾಟ ನೀಡುತ್ತಿದ್ದರಂತೆ. ಅವರಲ್ಲಿ…

Read More

ಮಡಿಕೇರಿ ಜ.3 NEWS DESK : ಸದೃಢ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯವೆಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ ಅಭಿಪ್ರಾಯಟ್ಟರು. ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ರಾಫೆಲ್ಸ್ ಇಂಟರ್ನ್ಯಾಷನಲ್ ಇಂಗ್ಲಿಷ್ ಸ್ಕೂಲ್ ಮತ್ತು ಪಿ.ಯು ಕಾಲೇಜು ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿರು. ಜೀವನದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಮಾರ್ಗದರ್ಶಕರಾಗಿಸಿ, ಇಂದಿನ ವಿದ್ಯಾರ್ಥಿಗಳು ಹಲವು ವಿಷಯವನ್ನು ಕಲಿಯಬೇಕಾಗಿದೆ. ಮೊಬೈಲ್ ನಲ್ಲಿ ರೀಲ್ಸ್ ನೋಡಿ ಸಮಯ ವ್ಯರ್ಥ ಮಾಡದೆ ಉತ್ತಮ ರೀತಿಯಲ್ಲಿ ಸಮಯನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬಹುದು ಎಂಬುವುದನ್ನು ವಿದ್ಯಾರ್ಥಿಗಳು ಮನದಟ್ಟು ಮಾಡಿಕೊಳ್ಳಬೇಕು ಎಂದರು. ಸ್ವಾಮಿ ವಿವೇಕಾನಂದರಿಗಿದ್ದ ಏಕಾಗ್ರತೆ ಇದ್ದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ಮಾದಕ ದ್ರವ್ಯಗಳಿಗೆ ಬಲಿಯಾಗದೆ, ಹೇಗೆ ಜೀವನದಲ್ಲಿ ಗುರಿ ಸಾಧಿಸಬಹುದು ಎಂಬುವುದರ ಬಗ್ಗೆ ಯುವ ಸಮೂಹ ಚಿಂತಿಸಬೇಕಾಗಿದೆ. ತೋರ್ಪಡಿಸುವಿಕೆಯ ಜೀವನ ನಿಲ್ಲಿಸಿ ಸ್ವಪ್ರಯತ್ನದಿಂದ ಹೇಗೆ ಜೀವನದಲ್ಲಿ ಮುಂದೆ ಬರಬಹುದೆಂದು ಯೋಚಿಸಬೇಕೆಂದು ಅವರು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪದ್ಮಶ್ರೀ…

Read More

ಪ್ರತಿಯೊಬ್ಬರೂ ತಮ್ಮ ಚರ್ಮವು ಕಲೆರಹಿತವಾಗಿ ಕಾಂತಿಯುತಾಗಿರಬೇಕೆಂದು ಬಯಸುತ್ತಾರೆ. ತ್ವಚೆಯ ಅಂದವನ್ನು ಹೆಚ್ಚಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ಫೇಶಿಯಲ್, ಸ್ಕಿನ್ ಕೇರ್ ಪ್ಯಾಕ್, ಬ್ಯೂಟಿ ಉತ್ಪನ್ನಗಳನ್ನು ಬಳಸುತ್ತಾರೆ. ಈ ವಸ್ತುಗಳು ಚರ್ಮವನ್ನು ಸುಂದರವಾಗಿಸುತ್ತದೆ, ಆದರೆ ಮೂಗಿನ ಮೇಲಿನ ಕಪ್ಪು ಚುಕ್ಕೆಗಳಂತೆ ಕಾಣುವ ಬ್ಯಾಕ್‌ಹೆಡ್ಸ್‌ಗಳು ನಿಮ್ಮ ಮುಖದ ಅಂದವನ್ನು ಹಾಳುಮಾಡುತ್ತದೆ.  ಮೂಗಿನ ಮೇಲೆ ಕಾಣಿಸಿಕೊಳ್ಳುವ ಈ ಕಪ್ಪು ಚುಕ್ಕೆಗಳ ಸಮಸ್ಯೆಗಳು ಚಳಿಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ನೀವು ಮೂಗಿನ ತುದಿಯಲ್ಲಿ ಬ್ಲ್ಯಾಕ್‌ಹೆಡ್‌ ಸಮಸ್ಯೆಯನ್ನು ಹೊಂದಿದ್ದರೆ ಮೊಟ್ಟೆಗಳನ್ನು ಬಳಸುವ ಮೂಲಕ ಬ್ಲ್ಯಾಕ್‌ಹೆಡ್ಸ್‌ಗಳನ್ನು ನಿವಾರಿಸಬಹುದು. ತಯಾರಿಸುವುದು ಹೇಗೆ? ಅಕ್ಕಿ ಹಿಟ್ಟು – 1/2 ಟೀಸ್ಪೂನ್ ಟಿಶ್ಯೂ ಪೇಪರ್ – 1 ಮೊಟ್ಟೆ – 1 ಮುಲ್ತಾನಿ ಮಿಟ್ಟಿ – 1/2 ಟೀಸ್ಪೂನ್ ಇದನ್ನು ತಯಾರಿಸಲು ಒಂದು ಬಟ್ಟಲಿನಲ್ಲಿ ಮೊಟ್ಟೆಯ ಬಿಳಿಭಾಗ ಮತ್ತು ಹಳದಿ ಭಾಗಗಳನ್ನು ಪ್ರತ್ಯೇಕಿಸಿ. ಈಗ ಇನ್ನೊಂದು ಬಟ್ಟಲಿನಲ್ಲಿ ಮೊಟ್ಟೆಯ ಬಿಳಿಭಾಗವನ್ನು ಹಾಕಿ. ಇದಕ್ಕೆ ಅಕ್ಕಿ ಹಿಟ್ಟು ಮತ್ತು ಮುಲ್ತಾನಿ ಮಿಟ್ಟಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್…

Read More

ಮಡಿಕೇರಿ ಜ.3 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ವಾರ್ಷಿಕ ದತ್ತಿ ಪ್ರಶಸ್ತಿಗೆ ರಿಪಬ್ಲಿಕ್ ವಾಹಿನಿಯ ಜಿಲ್ಲಾ ವರದಿಗಾರ ಬಾಚರಣಿಯಂಡ ಅನು ಕಾರ್ಯಪ್ಪ ಆಯ್ಕೆಯಾಗಿದ್ದಾರೆ. “6 ವರ್ಷಗಳಿಂದ ಪಿಂಚಣಿ ಬರದೆ ಪರದಾಟ” ಎಂಬ ವರದಿಗೆ ಮೈಸೂರು ದಿಗಂತ ದತ್ತಿ ಪ್ರಶಸ್ತಿ ಲಭಿಸಿದೆ.

Read More

ಬೆಂಗಳೂರು ಜ.3 NEWS DESK : ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

Read More

ಕಡಂಗ ಜ.3 NEWS DESK : ಮಡಿಕೇರಿ ತಾಲ್ಲೂಕಿನ ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಚಂಡಿಕಾ ಹೋಮ, ಸುಹಾಸಿನಿ ಪೂಜೆ, ದ್ವದಶ ಮೂರ್ತಿ ಆರಾಧನೆ ಪೂಜೆಗಳು ನೆರವೇರಿತು. ಅರಪಟ್ಟು ಪೂದವಾಡ ಗ್ರಾಮಸ್ಥರು, ದೇವಸ್ಥಾನದ ತಕ್ಕರು, ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ 2008 ರಿಂದ ಶ್ರೀ ಭಗವತಿ ಶ್ರೀ ಪಟ್ಟೋಟು ಈಶ್ವರ ಶ್ರೀ ಮಂದಣ ಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠ ಜೀರ್ಣೋದ್ಧಾರ ಹಾಗೂ ಇನ್ನಿತರ ಕಾರ್ಯಗಳಲ್ಲಿ ಜ್ಯೋತಿಷ್ಯ ಸಲಹೆ ಸೂಚನೆಗಳನ್ನು ನೀಡುವುದರ ಮುಖಾಂತರ ದೇವಸ್ಥಾನದ ಅಭಿವೃದ್ಧಿಗೆ ಪಾತ್ರರಾದ ಕಕ್ಕಬ್ಬೆ ಅಮ್ಮಂಗೇರಿ ಕಣಿಯರ ಕುಟುಂಬದ ಜ್ಯೋತಿಷಿ ಹಾಗೂ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಜ್ಯೋತಿಷಿಗಳಾದ ಶ್ರೀ ಶಶಿಕುಮಾರ್ ಪಂಡಿತ್ ಅವರಿಗೆ ಊರಿನವರು ಹಾಗೂ ಆಡಳಿತ ಮಂಡಳಿ ಸದಸ್ಯರು ದೇವಸ್ಥಾನದ ಸನ್ನಿಧಿಯಲ್ಲಿ ಸನ್ಮಾನಿಸಿ ಗೌರವಿಸಿದರು. ವರದಿ : ನೌಫಲ್ 

Read More

ಮಡಿಕೇರಿ ಜ.3 NEWS DESK : ಮದೆ-ಬೆಟ್ಟತ್ತೂರು-ಚೇರಂಬಾಣೆ ರಸ್ತೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ  ಅವರ ಆದೇಶದ ಮೇರೆಗೆ ಈ ಕಾಮಗಾರಿ ನಡೆಸಲಾಗುತ್ತಿದ್ದು, ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿಯನ್ನು  ಮುಗಿಸಿಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Read More