ಮಡಿಕೇರಿ ಡಿ.19 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕಳೆದ 2022-23, 2023-24ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1. ಕೊಡವ ಭಾಷೆ-ಸಾಹಿತ್ಯ ಕ್ಷೇತ್ರ 2. ಕೊಡವ ಕಲೆ-ಜಾನಪದ ಕ್ಷೇತ್ರ 3. ಕೊಡವ ಸಂಸ್ಕೃತಿ – ಸಮಾಜ ಸೇವಾ ಕ್ಷೇತ್ರ – ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಈ ಎರಡು ವರ್ಷಗಳ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗುವುದು ಪ್ರತಿಯೊಂದು ಕ್ಷೇತ್ರಕ್ಕೆ ತಲಾ ಒಬ್ಬರಂತೆ ಒಟ್ಟು ಆರು ಜನ ಸಾಧಕರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಸ್ವತಃ ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸು ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ತಮ್ಮ ಸೇವಾ ವಿವರ ಮತ್ತು ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಯನ್ನು ಅಧ್ಯಕ್ಷರು / ರಿಜಿಸ್ಟ್ರಾರ್ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಸ್ಕೌಟ್ಸ್ ಭವನ, ಮ್ಯಾನ್ಸ್ ಕಾಂಪೌಂಡ್ ಮಡಿಕೇರಿ-571201, ಈ ವಿಳಾಸಕ್ಕೆ ಅರ್ಜಿಯನ್ನು ಭಾವಚಿತ್ರ ಹಾಗೂ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅಕಾಡೆಮಿಗೆ…
ಲೇಖಕ: admin
ಮಡಿಕೇರಿ ಡಿ.19 NEWS DESK : ರೈತರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.20 ರಂದು ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳು ಮಡಿಕೇರಿಯಲ್ಲಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೃಷಿ ಪ್ರಧಾನ ನಾಡಾಗಿರುವ ಕರ್ನಾಟಕದಲ್ಲಿ ಪ್ರಸ್ತುತ ಇರುವ ಸರಕಾರದಿಂದ ರೈತರಿಗೆ ನ್ಯಾಯ ಸಿಗುತ್ತಿಲ್ಲ. ತಲೆತಲಾಂತರಗಳಿಂದ ಕೃಷಿ ಕಾರ್ಯ ಮಾಡಿಕೊಂಡು ಬರುತ್ತಿರುವ ರೈತಾಪಿ ವರ್ಗ ಕೃಷಿಭೂಮಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದೆ. ಜೆಡಿಎಸ್ ಪಕ್ಷ ರೈತರ ಪರ ಸದಾ ಇದ್ದು, ಶುಕ್ರವಾರದ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ ತಕ್ಷಣ ಎಚ್ಚೆತ್ತುಕೊಂಡು ಸಿ ಮತ್ತು ಡಿ ಭೂಮಿ ಗೊಂದಲ ನಿವಾರಿಸಬೇಕು, ಕೃಷಿಕರ ಭೂಮಿ ಕಸಿದುಕೊಳ್ಳುವ ಪ್ರಯತ್ನ ಮಾಡಬಾರದು, ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ತಪ್ಪಿದಲ್ಲಿ…
ಮಡಿಕೇರಿ ಡಿ.19 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸಂಸತ್ನಲ್ಲಿ ಪ್ರಸ್ತಾಪಿಸಿ ಅಪಹಾಸ್ಯ ಮಾಡಿರುವ ಕೇಂದ್ರ್ರ ಗೃಹ ಸಚಿವ ಅಮಿತ್ ಷಾ ಅವರ ನಿಲುವನ್ನು ಖಂಡಿಸಿ ಡಿ.24 ರಂದು ನಗರದಲ್ಲಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಒಕ್ಕೂಟದ ಪ್ರಮುಖರು, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುವ ಮೂಲಕ ಅಮಿತ್ ಷಾ ಅವರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ತಕ್ಷಣವೆ ಗೃಹ ಸಚಿವರು ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಯಾಚನೆ ಮಾಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಡಿ.24 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆದು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುತ್ತದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ದಸಂಸ ಸಂಚಾಲಕರಾದ ದಿವಾಕರ್, ಒಕ್ಕೂಟದ ಸಂಚಾಲಕ ಮೋಹನ್ ಮೌರ್ಯ, ಕಾರ್ಯದರ್ಶಿ ಗಣೇಶ್, ಪ್ರಮುಖರಾದ ಇಸಾಖಾನ್,…
ಮಡಿಕೇರಿ ಡಿ.19 NEWS DESK : ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸಂಘಟಿಸುವ ಮತ್ತು ಸದಸ್ಯತ್ವ ಅಭಿಯಾನವನ್ನು ಆರಂಭಿಸುವ ಸಲುವಾಗಿ ಡಿ.21 ರಂದು ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯ ಮಂತ್ರಿ ಚಂದ್ರು ಅವರು ಜಿಲ್ಲಾ ಕೇಂದ್ರ್ರ ಮಡಿಕೇರಿಗೆ ಆಗಮಿಸಲಿದ್ದಾರೆಂದು ಪಕ್ಷದ ಜಿಲ್ಲಾ ಅಧ್ಯಕ್ಷ ಮುಕ್ಕಾಟಿರ ಕೆ.ಅಪ್ಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ 2012ರಲ್ಲಿ ಪಕ್ಷ ತನ್ನ ಅಸ್ತಿತ್ವವನ್ನು ಕಂಡು ಕೊಂಡಿದ್ದು, ಪ್ರಸ್ತುತ ಗ್ರಾಮೀಣ ಭಾಗಗಳಿಗೂ ಪಸರಿಸಿದ್ದು, ಸಾಕಷ್ಟು ಸದಸ್ಯರುಗಳನ್ನು ಹೊಂದಿದೆ. ನಮ್ಮೆಲ್ಲ ಪಕ್ಷದ ಸದಸ್ಯರನ್ನು ಅಭಿಮಾನಿಗಳನ್ನು ಸಂಘಟಿಸುವ ಚಿಂತನೆಯಡಿ ಮುಖ್ಯಮಂತ್ರಿ ಚಂದ್ರು ನಗರಕ್ಕೆ ಆಗಮಿಸಿದ್ದು, ಮಧ್ಯಾಹ್ನ 1 ಗಂಟೆಗೆ ಬಾಲಭವನದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆಂದು ಮಾಹಿತಿ ನೀಡಿದರು. ಸಭೆಯ ಸಂದರ್ಭವೇ ಸದಸ್ಯತ್ವ ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದೆಂದು ತಿಳಿಸಿದ ಅಪ್ಪಯ್ಯ, ಮುಖ್ಯ ಮಂತ್ರಿ ಚಂದ್ರು ಅವರು ಅಂದು ಸ್ಥಳೀಯ ನಾಯಕರ ಸೌಹಾರ್ದ ಭೇಟಿ ಕಾರ್ಯಕ್ರಮವನ್ನು ಇಟ್ಟು ಕೊಂಡಿರುವುದಾಗಿ…
ಮಡಿಕೇರಿ ಡಿ.19 NEWS DESK : ರೈತರ ಕೃಷಿಭೂಮಿಯನ್ನು ರೈತರಿಗೆ ಮಂಜೂರು ಮಾಡಬೇಕು, ಸಿ ಮತ್ತು ಡಿ ಭೂಮಿ ಗೊಂದಲ ನಿವಾರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.20 ರಂದು ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳು ಮಡಿಕೇರಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ ಎಂ.ಧನಂಜಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಆಸ್ತಿಯಾಗಿರುವ ಮತ್ತು ಆರ್ಥಿಕ ಕ್ಷೇತ್ರಕ್ಕೆ ಬಲ ತುಂಬುತ್ತಿರುವ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು. ತಲೆತಲಾಂತರಗಳಿಂದ ಕೃಷಿ ಕಾರ್ಯ ಮಾಡಿಕೊಂಡು ಬಂದಿರುವ ರೈತರ ಹಿತ ಕಾಯಬೇಕು. ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ನನ್ನ ಸಹಮತವಿದ್ದು, ಹೋರಾಟದಲ್ಲಿ ಪಾಲ್ಗೊಂಡು ಕೃಷಿಕ ವರ್ಗಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಮಡಿಕೇರಿ ಡಿ.19 NEWS DESK : ಮಡಿಕೇರಿಯ ಭಾರತಿ ರಮೇಶ್ ಗೆ ದೇವಾಂಗ ರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ನೆಲಮಂಗಲದ ಕೆಂಪಲಿಂಗನಹಳ್ಳಿಯ ದೇವಾಂಗ ಶಾಖಾಮಠದಲ್ಲಿ ಶ್ರೀ ಗಾಯತ್ರಿ ಪೀಠ ಮಹಾಸಂಸ್ಥಾನ ಹೇಮಕೂಟ ಹಂಪಿ ಮತ್ತು ಕರ್ನಾಟಕ ರಾಜ್ಯ ದೇವಾಂಗ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಶ್ರೀ ದೇವಲ ಮಹರ್ಷಿ ಜಯಂತ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕುಲಗುರುಗಳಾದ ಶ್ರೀ ದಯಾನಂದ ಪುರಿ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ರಾಜ್ಯಾಧ್ಯಕ್ಷ ರವೀಂದ್ರ ಕಲಬುರ್ಗಿ ಮತ್ತು ರಾಜ್ಯ ಪದಾಧಿಕಾರಿಗಳು ಭಾರತಿ ರಮೇಶ್ಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕ ರಾಜ್ಯದ 24 ಜಿಲ್ಲೆಗಳಿಂದ ಜಿಲ್ಲೆಗೊಬ್ಬರಂತೆ ದೇವಾಂಗ ಸಾಧಕರನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಲಾಗಿದ್ದು, ಮಡಿಕೇರಿ ಅಧ್ಯಕ್ಷ ಕೆ.ಎನ್.ಗಜಾನನ ಹಾಗೂ ಕುಲಬಾಂಧವರ ಒಮ್ಮತದ ನಿರ್ಧಾರದಂತೆ “ದೇವಾಂಗ ರತ್ನ ರಾಜ್ಯಪ್ರಶಸ್ತಿಗೆ ಭಾರತಿ ರಮೇಶ್ ಅವರನ್ನ ಆಯ್ಕೆ ಮಾಡಲಾಗಿದೆ. 24 ಜನ ಮಹನೀಯರ ನಡುವೆ ಒಬ್ಬಳು ಮಹಿಳೆಯನ್ನು ಆಯ್ಕೆ ಮಾಡಿ ಕಳುಹಿಸಿದ್ದು ಕೊಡಗಿನ ದೇವಾಂಗ ಕುಲದವರ ಹೆಗ್ಗಳಿಕೆಯಾಗಿದೆ ಎಂದು…
ವಿರಾಜಪೇಟೆ ಡಿ.19 NEWS DESK : ಪೊಂಬೊಳ್ಚ ಕೂಟದ ಮುಂದಿನ ಮೂರು ವರ್ಷಗಳ ಕಾಲಾವಧಿಯ ಹೊಸ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ಕಾಕೋಟುಪರಂಬುವಿನಲ್ಲಿರುವ ಕಾಲಭೈರವ ದೇವರ ಸನ್ನಿದಿಯ ಸಮುದಾಯ ಭವನದಲ್ಲಿ ನಡೆಯಿತು. ಕೂಟದ ಸ್ಥಾಪಕ ಅಧ್ಯಕ್ಷ ಕೋಟೆರ ಪೂಣಚ್ಚಅವರ ಅಧ್ಯಕ್ಷತೆಯಲ್ಲಿ ಮತ್ತು ಮಾಜಿ ಮಾಳೇಟಿರ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ನಡೆಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಪೊಂಬೊಳ್ಚ ಕೂಟದ ಅಧ್ಯಕ್ಷರನ್ನಾಗಿ ಚಂಗೇಟಿರ ಸೋಮಣ್ಣ, ಉಪಾಧ್ಯಕ್ಷರನ್ನಾಗಿ ಮುಂಡ್ಯೋಳಂಡ ಧರಣಿ ಜಗದೀಶ್, ಕಾರ್ಯದರ್ಶಿಯನ್ನಾಗಿ ಜಮ್ಮಡ ಮೋನ (ಸರಸ್ವತಿ) ಭೀಮಯ್ಯ, ಸಹಕಾರ್ಯದರ್ಶಿಯಾಗಿ ಅಜ್ಜಿಕುಟ್ಟಿರ ಭವ್ಯ ಬೋಪಣ್ಣ, ಖಜಾಂಜಿಯಾಗಿ ಶಿವಚಾಳಿಯಂಡ ರೋಹಿಣಿ ಬೋಪಣ್ಣ, ಸಂಘಟನಾ ಕಾರ್ಯದರ್ಶಿಯಾಗಿ ಮಲ್ಚೀರ ಯಶೋಧ ದೇವಯ್ಯ, ನಿರ್ದೇಶಕರಾಗಿ ಕಾಣತಂಡ ವಿವೇಕ್ ಅಯ್ಯಪ್ಪ, ಚೇನಂಡ ತೇಜ ಬೋಪಣ್ಣ, ಅಪ್ಪನೆರವಂಡ ಮಾದಪ್ಪ, ಕುಂಡ್ಯೋಳಂಡ ಬೋಪಣ್ಣ, ಕಳ್ಳಿಚಂಡ ದೀನಾ ಉತ್ತಪ್ಪ ಹಾಗೂ ಮೊಣ್ಣಂಡ ವಿನು ಕಾರ್ಯಪ್ಪ ಅವರನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಡಿ.19 NEWS DESK : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ಪಕ್ಷದ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹ್ಮದ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂಬೇಡ್ಕರ್ ಅವರ ಹೆಸರನ್ನು ಪದೇಪದೇ ಹೇಳುವುದು ಪ್ಯಾಶನ್ ಆಗಿದೆ. ಅಂಬೇಡ್ಕರ್ ಹೆಸರನ್ನು ಹೇಳಿದಷ್ಟು ಬಾರಿ ದೇವರ ಸ್ಮರಣೆ ಮಾಡಿದರೆ ಏಳು ಜನ್ಮಗಳಿಗೆ ಸ್ವರ್ಗ ದೊರಕುತ್ತಿತ್ತು ಎಂದು ಸಚಿವ ಅಮಿತ್ ಶಾ ಅವರು ಸದನದಲ್ಲಿ ಹೇಳಿಕೆ ನೀಡಿರುವುದು ಖಂಡನೀಯ. ಅಂಬೇಡ್ಕರ್ ಅವರ ಅವಹೇಳನ ದೇಶದ ಸಂವಿಧಾನವನ್ನೇ ಅವಹೇಳನ ಮಾಡಿದ್ದಕ್ಕೆ ಸಮ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶತಮಾನಗಳಿಂದ ಅವಮಾನ, ಶೋಷಣೆ, ದೌರ್ಜನ್ಯಕ್ಕೆ ಒಳಗಾಗಿದ್ದ ಜನರಿಗೆ ಸಂವಿಧಾನದ ಮೂಲಕ ರಕ್ಷಣೆ ನೀಡಿದ ದೇಶದ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ…
ಮಡಿಕೇರಿ ಡಿ.19 NEWS DESK : ಗಾಳಿಬೀಡು ರಸ್ತೆ ಡಾಂಬರೀಕರಣಕ್ಕಾಗಿ ಒತ್ತಾಯಿಸಿ ಗ್ರಾಮಸ್ಥರ ಹೆಸರಿನಲ್ಲಿ ನಡೆಸಿದ ಪ್ರತಿಭಟನೆ ಬಿಜೆಪಿಯ ಕೃಪಾಪೋಷಿತ ಪ್ರತಿಭಟನೆಯಾಗಿದೆ ಎಂದು ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ಸುಭಾಷ್ ಆಳ್ವ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮದ ರಸ್ತೆ ಕಳೆದ 20 ವರ್ಷಗಳಿಂದ ಸಂಪೂರ್ಣ ಡಾಂಬರೀಕರಣಗೊಂಡಿಲ್ಲ, ಅಂದಿನಿಂದ ಇಂದಿನವರೆಗೆ ರಸ್ತೆಗೆ ತೇಪೆ ಹಾಕುವ ಕಾರ್ಯವೇ ಮುಂದುವರಿದುಕೊಂಡು ಬಂದಿದೆ. ಈ ಹಿಂದೆ ನಡೆದ ತೇಪೆ ಕಾರ್ಯವನ್ನು ವಿರೋಧಿಸದೇ ಇದ್ದ ಬಿಜೆಪಿ ಸದಸ್ಯರು ಇಂದು ಆಡಳಿತ ವ್ಯವಸ್ಥೆ ಬದಲಾಗಿರುವುದನ್ನು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಸ್ವಾರ್ಥ ರಾಜಕಾರಣಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರ ಹೆಸರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎನ್ನುವ ಮಾಹಿತಿ ಇದ್ದ ಕಾರಣದಿಂದ ಗ್ರಾಮಸ್ಥರಿಂದ ದೊಡ್ಡ ಬೆಂಬಲ ದೊರೆತ್ತಿಲ್ಲವೆಂದು ತಿಳಿಸಿದ್ದಾರೆ. ಈ ಹಿಂದೆ ಬಿಜೆಪಿ ಶಾಸಕರು ಇದ್ದ ಸಂದರ್ಭದಲ್ಲಿ ಗ್ರಾಮಸ್ಥರು ಪ್ರತಿಭಟನೆಗೆ ಕರೆ ನೀಡಿದಾಗ ಬೆಂಬಲಿಸದೇ ಇದ್ದ ಪ್ರಮುಖರು, ಇಂದು ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸಿದ್ದಾರೆ. 2008ನೇ ಇಸವಿಯಲ್ಲಿ ಬಿಜೆಪಿ ಮಂದಿ…
ಮಡಿಕೇರಿ ಡಿ.19 NEWS DESK : ಇಶಾ ಗ್ರಾಮೋತ್ಸವದ ಪ್ರಯುಕ್ತ ಡಿ.28 ಮತ್ತು 29 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಬ್ಲಾಕ್ ಪ್ಯಾಂಥರ್ಸ್ ಮರಗೋಡು ತಂಡ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದೆ ಎಂದು ಬ್ಲಾಕ್ ಪ್ಯಾಂಥರ್ಸ್ ತಂಡದ ನಾಯಕಿ ಕೆ.ಎಂ.ಚಂದ್ರಕಲಾ ತಿಳಿಸಿದ್ದಾರೆ. ಈ ತಂಡ ಕಳೆದ ವರ್ಷ ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು.






