ಲೇಖಕ: admin

ಮಡಿಕೇರಿ ಡಿ.19 NEWS DESK : ಆಲ್ ಇಂಡಿಯಾ ಸೂಪರ್ ಫೈವ್ಸ್ “ಕೊಡಗು ವರ್ಲ್ಡ್ ಕಪ್”ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಗೋಣಿಕೊಪ್ಪಲಿನ ಸರ್ವದೈವತಾ ಶಾಲೆಯ ಆವರಣದಲ್ಲಿ ನಡೆಯಿತು. ಮೇ ತಿಂಗಳ ಒಂದರಿಂದ ನಾಲ್ಕರವೆಗೆ ಜಿಲ್ಲೆಯ ಪ್ರತಿಷ್ಠಿತ ಫುಟ್ಬಾಲ್ ಕ್ಲಬ್ ಗಳಲ್ಲಿ ಒಂದಾದ ಆಲ್ ಸ್ಟಾರ್ ಎಫ್.ಸಿ ಗೋಣಿಕೊಪ್ಪ ತಂಡವು ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಫುಟ್ಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಂಡಿದೆ. ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಶಿಕ್ಷಕಿ ಶೀಲಾ ಬೋಪಣ್ಣ, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ವಿಜೇತ ತಂಡಕ್ಕೆ ಎರಡು ಲಕ್ಷದ ನಗದು ಬಹುಮಾನ ನೀಡುವ ಫುಟ್ಬಾಲ್ ಕ್ರೀಡಾಕೂಟವನ್ನು ಆಲ್ ಸ್ಟಾರ್ ಎಫ್.ಸಿ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ. ವಲ್ಡ್ ಕಪ್ ಫುಟ್ಬಾಲ್ ಅಚ್ಚುಕಟ್ಟಾಗಿ ನಡೆಯಲಿ ಎಂದು ಅವರು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲಿನ ಎಒನ್ ಶರತ್, ಬಿಎನ್ಎಸ್ ಟ್ರೇಡರ್ಸ್ ಸುಧಾಕರ್ ರೈ, ಪಿಮ್ ಸ್ಪೋರ್ಟ್ಸ್ ಮಾಲೀಕ ಸಲೀಮ್, ಹಮೀದ್, ಮುಕ್ತಾರ್, ಅಕ್ಷಯ್, ಸುಮನ್, ಲಕ್ಷಣ್, ಆಲ್ ಸ್ಟಾರ್ ಫುಟ್ಬಾಲ್ ಪದಾಧಿಕಾರಿಗಳಾದ ರನೀಸ್,ಶಾನಿಫ್,ಸವಾದ್,ರಾಫಿ,ಅಮೀನ್,ಬೋಪಣ್ಣ, ವಿನ್ಸಿ ಹಾಗೂ…

Read More

ಕುಶಾಲನಗರ, ಡಿ.19 NEWS DESK : ಸ್ವಚ್ಛ ಭಾರತ ಅಭಿಯಾನದ ಯೋಜನೆಯಡಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರಕಾರಿ ಪ್ರೌಢಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆ ಹಾಗೂ ಕೂಡುಮಂಗಳೂರು ಗ್ರಾ.ಪಂ  ಸಹಕಾರದಿಂದ ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ-ಕ್ಲಬ್‌ ಹಾಗೂ  ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಯೋಜನೆಯಡಿ ಹಾಗೂ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳು- ಶಾಂತಿಗಾಗಿ ಒಂದು ಸ್ಥಳ- ಎಂಬ ಧ್ಯೇಯ ವಾಕ್ಯ (ಥೀಮ್) ದೊಂದಿಗೆ ವಿಶ್ವ ಶೌಚಾಲಯ ದಿನ:2024 ರ ಅಂಗವಾಗಿ “ನಮ್ಮ ಶೌಚಾಲಯ ನಮ್ಮ ಗೌರವ”ಎಂಬ ಧ್ಯೇಯದಡಿ ಸ್ವಚ್ಛತಾ ಜಾಗೃತಿ ನಡೆಯಿತು. ಸ್ವಚ್ಛ ಭಾರತ ಮಿಷನ್‌ ಗ್ರಾಮೀಣ, ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹಾಗೂ ಕುಶಾಲನಗರ, ತಾಲೂಕು ಪಂಚಾಯಿತಿಯ ಜನಜಾಗೃತಿ ಕಾರ್ಯಕ್ರಮದಡಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ  ಪ್ರಾತ್ಯಕ್ಷಿಕೆ ಮೂಲಕ ಶೌಚಗೃಹ…

Read More

ಸಿದ್ದಾಪುರ ಡಿ.19 NEWS DESK : ಭೂಮಿಯ ಮೇಲಿನ ಸಕಲ ಜೀವಿಗಳಿಗೂ ಬದುಕುವ ಸಮಾನ ಹಕ್ಕನ್ನು ಪ್ರತಿಪಾದಿಸಿದ ಶರಣರು ದಯೆಯನ್ನು ಧರ್ಮದ ಮೂಲವಾಗಿಸಿದರು. ಜೊತೆಗೆ ಎಲ್ಲಾ ಧರ್ಮಗಳ ಸಾರವೂ ಇದೇ ಆಗಿದೆ ಎಂದು ಸಾಹಿತಿ ಕಣಿವೆ ಭಾರಧ್ವಜ್ ಆನಂದತೀರ್ಥ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಚನ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಾಣಿ ಪಕ್ಷಿಗಳೊಂದಿಗಿನ ಜೀವರಾಶಿಗಳು ಹಾಗೂ ಮನುಷ್ಯನ ಜೀವ ಒಂದೇ. ಯಾವ ಕಾರಣಕ್ಕೂ ಅನಗತ್ಯವಾಗಿ ಹರಣವಾಗಬಾರದು ಎಂಬ ಸದುದ್ದೇಶದಿಂದ ಬಸವಾದಿ ಶರಣರು, ಕಲಬೇಡ ಕೊಲಬೇಡ ಎಂಬ ವಚನದ ಮೂಲಕ ಮನುಷ್ಯನ ಸುಂದರ ಬದುಕಿಗೆ ಅಗತ್ಯವಿರುವ ದೀವಿಗೆ ಹಚ್ಚಿದ್ದಾರೆ. ಹಾಗೆಯೇ ಇಸ್ಲಾಂ, ಕ್ರೈಸ್ತ , ಬೌದ್ಧ ಮೊದಲಾದ ಎಲ್ಲಾ ಧರ್ಮಗಳು ಕೂಡ ಅದೇ ಸಂದೇಶ ಸಾರಿವೆ. ಆದರೆ ನಾವು ಅವುಗಳನ್ನು ಅರಿಯುವಲ್ಲಿ ಹಾಗೂ ಪಾಲನೆ ಮಾಡುವಲ್ಲಿ ಎಡವಿದ್ದೇವೆ. ಹಾಗಾಗಿ ಸಂಕೋಲೆಗಳಲ್ಲಿ ಸಿಲುಕಿದ್ದೇವೆ ಎಂದು ಭಾರಧ್ವಜ್ ವಿಷಾದಿಸಿದರು. “ಸಾಂಸ್ಕೃತಿಕ ನಾಯಕ ಬಸವಣ್ಣ…

Read More

ಮಡಿಕೇರಿ ಡಿ.19 NEWS DESK : ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಹೋಬಳಿಯ ಈರಳೆವಳಮುಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಅಕ್ರಮ ಸಕ್ರಮದಡಿ ಮಂಜೂರಾಗಿದ್ದ ಊರ್ ಮಂದ್ ನ 98 ಸೆಂಟ್ಸ್ ಜಾಗದ ಮಂಜೂರಾತಿಯನ್ನು ವಜಾಗೊಳಿಸಲಾಗಿದೆ. ನಿಯಮ ಬಾಹಿರ ಎನ್ನುವ ಕಾರಣಕ್ಕಾಗಿ ವಜಾಗೊಳಿಸಿ ಆದೇಶಿಸುವ ಮೂಲಕ, ಊರ್ ಮಂದ್ ನ್ನು ಸಾರ್ವಜನಿಕರ ಉಪಯೋಗಕ್ಕೆ ಸಿಗುವಂತೆ ಮಾಡಿದ ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಕ್ರಮ ಸ್ವಾಗತಾರ್ಹ ಮತ್ತು ತಮ್ಮ 27 ವರ್ಷಗಳ ಸತತ ಹೋರಾಟಕ್ಕೆ ಸಿಕ್ಕ ಜಯ ಎಂದು ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳೆಗಾರರೊಬ್ಬರು ತಮಗೆ ಬೇಕಾದಷ್ಟು ಜಮೀನು ಇದ್ದರೂ ಊರ್ ಮಂದ್ ನ್ನು ಒತ್ತುವರಿ ಮಾಡಿಕೊಂಡು ಮಾಜಿ ಅರಣ್ಯ ಸಚಿವರೊಬ್ಬರ ಪ್ರಭಾವ ಬಳಸಿ ಅಕ್ರಮ ಸಕ್ರಮದಡಿ ಮಂಜೂರಾತಿ ಮಾಡಿಕೊಂಡಿದ್ದರು ಎಂದು ಆರೋಪಿಸಿದರು. 27 ವರ್ಷಗಳ ಹಿಂದೆ ನಡೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತುವರಿ ಕುರಿತು ದೂರಿಕೊಂಡು ಊರ್ ಮಂದ್ ನ…

Read More

ಮಡಿಕೇರಿ ಡಿ.19 NEWS DESK :  ಗ್ರಾಮೀಣ ಪ್ರದೇಶದಲ್ಲಿ ನೆಲೆನಿಂತಿರುವ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ಈಗ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು, ಇದೇ 27 ಮತ್ತು 28 ರಂದು ಸಂಸ್ಥೆಯ 60 ನೇ ವಷಾ೯ರಣೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕನ೯ಲ್ ಬಿ.ಜಿ.ವಿ.ಕುಮಾರ್ ತಿಳಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕನ೯ಲ್ ಕುಮಾರ್, ದಾನಿಗಳಾದ ದಿವಂಗತ ಲೆಫ್ಟಿನೆಂಟ್ ಕನ೯ಲ್ ಡಿ.ಸಿ.ಬಸಪ್ಪ ಅವರ ಪ್ರಯತ್ನದಿಂದಾಗಿ ಅವರ ತಾಯಿ ಡಿ ಚೆನ್ನಮ್ಮ ಸ್ಮರಣಾಥ೯ 1960 ರ ಜುಲೈ 22 ರಂದು ಆರಂಭವಾದ ಪ್ರೌಢಶಾಲೆ 6 ದಶಕಗಳಲ್ಲಿ ಈ ವ್ಯಾಪ್ತಿಯ ಗ್ರಾಮೀಣ ವಿದ್ಯಾಥಿ೯ಗಳಿಗೆ ಜ್ಞಾನದೀವಿಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದಿವಂಗತರಾದ ಮಚ್ಚಂಡ ಗಣಪತಿ, ಪುಟ್ಟುಸ್ವಾಮಿ ಮುತ್ತಯ್ಯ ಗುಂಡುಕುಟ್ಟಿ ಮಂಜುನಾಥಯ್ಯ, ಎಂ.ಎ.ಪೊನ್ನಪ್ಪ, ಕೆ.ಡಿ.ಸೋಮಯ್ಯ, ಸಿ.ಎ.ಪೂವಯ್ಯ, ಎಂ.ಜಿ.ಬೋಪಣ್ಣ ಸೇರಿದಂತೆ ಅನೇಕ ಮಹನೀಯರ ಪರಿಶ್ರಮದಿಂದಾಗಿ ಶಿಕ್ಷಣ ಸಂಸ್ಥೆಯು ಸಾಕಷ್ಟು ಅಭಿವೖದ್ದಿ ಹೊಂದಿದೆ ಎಂದು ಸ್ಮರಿಸಿಕೊಂಡರು. 1964ರಲ್ಲಿ ಗರಗಂದೂರಿನ ಈಗಿನ ಸುಂದರ ಕಟ್ಟಡಕ್ಕೆ ಶಾಲೆಯನ್ನು…

Read More

ಮಡಿಕೇರಿ ಡಿ.19 NEWS DESK : ಸಿ ಮತ್ತು ಡಿ ಭೂಮಿ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.20 ರಂದು ರೈತರು ಮಡಿಕೇರಿಯಲ್ಲಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ವಿರಾಜಪೇಟೆಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನ ಸೋಮವಾರಪೇಟೆ, ಶಾಂತಳ್ಳಿ, ಭಾಗಮಂಡಲ ಮತ್ತಿತರೆಡೆ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ರೈತರ ಭೂಮಿ ಕಸಿದುಕೊಳ್ಳುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ. ರಾಜ್ಯದಲ್ಲಿ ರೈತ ವಿರೋಧಿ ಸರಕಾರ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. ಇತ್ತೀಚೆಗೆ ಅರಣ್ಯ ಸಚಿವರು ಜಿಲ್ಲೆಯ ಕೆಲವು ಪ್ರದೇಶವನ್ನು ಎಲಿಫೆಂಟ್ ಕಾರಿಡಾರ್ ಎಂದು ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದಾರೆ. ಕಳೆದ 30 ವರ್ಷಗಳಿಂದ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆಯೇ ಹೊರತು ಇದು ಆನೆಗಳಿರುವ ಪ್ರದೇಶವಲ್ಲ. ಕಾಡಾನೆಗಳು ನುಸುಳದಂತೆ ಇಲ್ಲಿಯವರೆಗೆ ರೈಲ್ವೆ ಕಂಬಿ ಬೇಲಿ ಅಥವಾ ಸೋಲಾರ್ ಬೇಲಿ ಅಳಿವಡಿಸುವ ಕೆಲಸವನ್ನು ಸರಕಾರ ಮಾಡಿಲ್ಲ. ಇದು ಕೂಡ ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ಆದ್ದರಿಂದ ರೈತರ…

Read More

ಮಡಿಕೇರಿ ಡಿ.19 NEWS DESK : ಕೊಡಗು ಜಿಲ್ಲೆಯಲ್ಲಿ ಗೋಕಳ್ಳತನ, ಗೋವುಗಳ ಅಕ್ರಮ ಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳು ಮಿತಿ ಮೀರಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಹಾಗೂ ವಿರಾಜಪೇಟೆಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ನಿರಂತರವಾಗಿದ್ದು, ಪೊಲೀಸ್ ಇಲಾಖೆ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಜನರು ಸಹನೆ ಕಳೆದುಕೊಳ್ಳುವ ಮೊದಲು ಗೋವುಗಳ ಕಳ್ಳರನ್ನು ನಿಯಂತ್ರಿಸಬೇಕು. ತಪ್ಪಿದಲ್ಲಿ ತೀವ್ರ ರೀತಿಯ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಸರಕಾರವಿದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಕಾವೇರಿ ನದಿ ಉಗಮವಾಗುವ ಕೊಡಗಿನಲ್ಲಿ ಬ್ರಿಟಿಷರ ಕಾಲದಿಂದಲೂ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಗೋವುಗಳ ಕಳ್ಳರು ಮನೆಗಳ ಕೊಟ್ಟಿಗೆಗೇ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ಅವರ ಮನೆಯ ಕೊಟ್ಟಿಗೆಗೆ ಇಂದು ನಸುಕಿನಲ್ಲಿ ಸುಮಾರು…

Read More

ಪೊನ್ನಂಪೇಟೆ ಡಿ.19 NEWS DESK : ಅನಿವಾಸಿ ಕೊಡಗಿನವರ ಸಂಘಟನೆಯಾದ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (ಕೆ.ಎಸ್‌.ಡಬ್ಲ್ಯೂ.ಎ.) ಯು.ಎ.ಇ. ರಾಷ್ಟ್ರೀಯ ಸಮಿತಿ ವತಿಯಿಂದ ಕೊಡವ ಮುಸ್ಲಿಂ ಅಸೋಸಿಯೇಷನ್ ನ (ಕೆ.ಎಂ.ಎ.) ಸ್ಥಾಪಕಾಧ್ಯಕ್ಷ ಮತ್ತು ಕಿತ್ತಳೆನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕ  ಕುವೇಂಡ ವೈ. ಹಂಝತುಲ್ಲಾ ಅವರನ್ನು ದುಬೈನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಂಝತುಲ್ಲಾ ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಇತ್ತೀಚಿಗೆ 2022ನೇ ಸಾಲಿನ ಗೌರವ ಪ್ರಶಸ್ತಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೆ.ಎಸ್‌.ಡಬ್ಲ್ಯೂ.ಎ. (ಯುಎಇ) ವತಿಯಿಂದ ದುಬೈನಲ್ಲಿ ಈ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್‌.ಡಬ್ಲ್ಯೂ.ಎ. ಜಿಸಿಸಿ ಅಧ್ಯಕ್ಷ ಕೊಟ್ಟಮುಡಿಯ ಹೆಚ್.ಎ.ಅಬೂಬಕ್ಕರ್ ಹಾಜಿ, ಕಳೆದ ನಾಲ್ಕು ದಶಕಗಳಿಂದ ಪತ್ರಿಕೋದ್ಯಮ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಂಝತುಲ್ಲಾ ಅವರು ಸಲ್ಲಿಸಿರುವ ಸೇವೆ ಶ್ಲಾಘನೀಯವಾದದ್ದು. ಕನ್ನಡ ನೆಲದ ಪರಿಕಲ್ಪನೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಭಾಷೆ ಎರಡರಲ್ಲಿಯೂ ಇವರು ಅನನ್ಯವಾದ ಕೊಡುಗೆಯನ್ನು ನೀಡುವ ಮೂಲಕ ಕನ್ನಡ ಸಾಹಿತ್ಯದ ಸತ್ವವನ್ನು ಹೆಚ್ಚಿಸಲು ಶ್ರಮಿಸಿದ್ದಾರೆ.…

Read More

ಸೋಮವಾರಪೇಟೆ ಡಿ.19 NEWS DESK : ಮಠ ಮಾನ್ಯಗಳಿಂದ ಮಾತ್ರ ಈ ದೇಶದ ಸಂಸ್ಕೃತಿ, ಆಚಾರ ವಿಚಾರ ಉಳಿಯಲು ಸಾಧ್ಯವೆಂದು ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು. ಆಲೂರು ಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಆಯೋಜಿಸಲಾಗಿದ್ದ ಹದಿಮೂರನೇ ವರ್ಷದ ಸಹಸ್ರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಮಠದ ದಿನದರ್ಶಿ(ಕ್ಯಾಲೆಂಡರ್) ಬಿಡುಗಡೆಗೊಳಿಸಿ ಮಾತನಾಡಿದರು. ಈ ದೇಶಕ್ಕೆ ತನ್ನದೇ ಆದ ಇತಿಹಾಸ ಹಾಗೂ ಸಂಸ್ಕೃತಿ ಇದೆ ಅದನ್ನು ಉಳಿಸಿ, ಬೆಳೆಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಆದರೆ ದುರ್ದೈವ ನಮ್ಮ ಯುವಜನಾಂಗ ಇದರ ಅರಿವಿಲ್ಲದೆ ಹಾದಿ ತಪ್ಪುತ್ತಿದ್ದಾರೆ ಎಂದು ವಿಷಾದಿಸಿದ ಅವರು ಈ ಕಾರ್ಯ ಮಠ ಮ್ಯಾನ್ಯಗಳಿಂದ ಮಾತ್ರ ಸಾಧ್ಯವೆಂದರು. ಊರಿಗೆ ಒಂದು ದೇವಾಲಯ ಹಾಗೂ ಶಾಲೆ ಇರಬೇಕು ಆಗ ಊರು ಶಾಂತಿ ನೆಮ್ಮದಿಯಿಂದ ಇರುತ್ತದೆ ಆದರೆ ಇಂದು ಊರಿಗೆ ಒಂದು ಪೊಲೀಸ್ ಠಾಣೆ ಇರುವಂತಾಗಿದೆ ಎಂದರು. ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅರಮೇರಿ ಕಲಂಚೇರಿ ಮಠದ ಶ್ರೀ…

Read More

ಮಡಿಕೇರಿ ಡಿ.19 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳು ಡಿ.20 ರಂದು ನಡೆಸುತ್ತಿರುವ ಪ್ರತಿಭಟನೆಗೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ ನ ನಗರಾಧ್ಯಕ್ಷ ಸಂತೋಷ್ ಅನ್ವೇಕರ್ ಅವರು, ರೈತರು ದೇಶದ ಬೆನ್ನೆಲುಬಾಗಿದ್ದಾರೆ, ಅಲ್ಲದೆ ವ್ಯಾಪಾರಸ್ಥರ ಬಲವಾಗಿದ್ದಾರೆ. ಆದ್ದರಿಂದ ಶುಕ್ರವಾರ ಮಡಿಕೇರಿಯಲ್ಲಿ ನಡೆಯುವ ರೈತರ ಹೋರಾಟಕ್ಕೆ ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಬೆಂಬಲ ಸೂಚಿಸಿ ಉದ್ಯಮಿಗಳು ಹಾಗೂ ವರ್ತಕರು ಕೈಜೋಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Read More